HomeಮುಖಪುಟJNUನಲ್ಲಿ ಸರಸ್ವತಿ ನಾಗರಿಕತೆ ವೆಬಿನಾರ್: ಪ್ರಾಧ್ಯಾಪರು, ವಿದ್ಯಾರ್ಥಿಗಳಿಂದ ತೀವ್ರ ವಿರೋಧ

JNUನಲ್ಲಿ ಸರಸ್ವತಿ ನಾಗರಿಕತೆ ವೆಬಿನಾರ್: ಪ್ರಾಧ್ಯಾಪರು, ವಿದ್ಯಾರ್ಥಿಗಳಿಂದ ತೀವ್ರ ವಿರೋಧ

- Advertisement -
- Advertisement -

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಇತಿಹಾಸ ಅಧ್ಯಯನ ಕೇಂದ್ರದ ಹದಿನಾಲ್ಕು ಅಧ್ಯಾಪಕರು ’ಮೇಜರ್ ಜನರಲ್ (ನಿವೃತ್ತ) ಜಿ.ಡಿ ಬಕ್ಷಿ ಅವರು ನೀಡಲಿರುವ ‘ಸರಸ್ವತಿ ನಾಗರಿಕತೆ’ಯ ವೆಬಿನಾರ್‌ ನಡೆಸುವುದರ ವಿರುದ್ಧ’ ಉಪಕುಲಪತಿಗೆ ಪತ್ರ ಬರೆದಿದ್ದಾರೆ.

ಕೇಂದ್ರದ ವಿದ್ಯಾರ್ಥಿ-ಅಧ್ಯಾಪಕ ಸದಸ್ಯ (ಎಸ್‌ಎಫ್‌ಸಿ) ಕೂಡ ಈ ವೆಬಿನಾರ್ ಅನ್ನು ತೀವ್ರವಾಗಿ ಖಂಡಿಸಿದೆ.

ಜೆಎನ್‌ಯು ಉಪಕುಲಪತಿ ಜೂನ್ 8 ರಂದು ನಿವೃತ್ತ ಮೇಜರ್ ಜನರಲ್ ಜಿ.ಡಿ ಬಕ್ಷಿ ಅವರು ‘ಸರಸ್ವತಿ ನಾಗರೀಕತೆ’ ಕುರಿತು ವೆಬಿನಾರ್ ನಲ್ಲಿ ಮಾತನಾಡಲಿದ್ದಾರೆ ಎಂದು ಬರೆದಿದ್ದರು. ಅಲ್ಲದೆ ಈ ಕಾರ್ಯಕ್ರಮವನ್ನು ಜೆಎನ್‌ಯು ಇತಿಹಾಸ ಅಧ್ಯಯನ ಕೇಂದ್ರ, ಸಮಾಜ ವಿಜ್ಞಾನ ಅಧ್ಯಯನ ಕೇಂದ್ರ ಆಯೋಜಿಸುತ್ತಿದೆ ಎಂದು ಬರೆದಿದ್ದರು.

ವಿವಿಯ ಈ ಕ್ರಮವನ್ನು ಅಧ್ಯಯನ ಕೇಂದ್ರದ 14 ಬೋಧಕ ವರ್ಗದ ಸದಸ್ಯರ ಗುಂಪು ತೀವ್ರವಾಗಿ ವಿರೋಧಿಸಿದೆ. ” ನಿಮ್ಮ ಟ್ವೀಟ್‌ನಲ್ಲಿ ಕಾರ್ಯಕ್ರಮವನ್ನು ಇತಿಹಾಸ ಅಧ್ಯಯನ ಕೇಂದ್ರ ಜೊತೆಗೆ ಪ್ರೊಫೆಸರ್ ಹೀರಾಮನ್ ತಿವಾರಿ, ಪ್ರೊಫೆಸರ್ ಉಮೇಶ್ ಕದಮ್ ಮತ್ತು ಪ್ರೊಫೆಸರ್ ದೀಪೇಂದ್ರ ನಾಥ್ ದಾಸ್ ಸೇರಿ ಆಯೋಜಿಸುತ್ತಾರೆ ಎಂದು ಉಲ್ಲೇಖಿಸಲಾಗಿದೆ. ಆದರೆ ಸೆಮಿನಾರ್‌ಗಳು, ಸಮ್ಮೇಳನಗಳು, ಕಾರ್ಯಾಗಾರಗಳನ್ನು, ವಾಸ್ತವವಾಗಿ ಶೈಕ್ಷಣಿಕ ಕಾರ್ಯಚಟುವಟಿಕೆಯ ವಿಷಯಗಳಲ್ಲಿ ವೃತ್ತಿಪರ ಮತ್ತು ಶ್ರೇಷ್ಠ ವಿದ್ವಾಂಸರನ್ನು ಬೋಧಕವರ್ಗದಿಂದ ಆಹ್ವಾನಿಸಲ್ಪಡುತ್ತಾರೆ. ಇಲ್ಲಿ ನಡೆಯುತ್ತಿರುವ ವೆಬಿನಾರ್‌ ಗೂ ನಮಗೂ ಸಂಬಂಧವಿಲ್ಲ. ಈ ಅತಿಥಿಯನ್ನು ಕರೆದವರು ಯಾರು” ಎಂದು ಪ್ರಶ್ನಿಸಿದ್ದಾರೆ.

“ಈ ವೆಬಿನಾರ್‌ ಅನ್ನು ಸಂಘಟಿಸುವ ಕುರಿತು ಎಲ್ಲಿ ಚರ್ಚಿಸಲಾಯಿತು? ಇದನ್ನು ಯಾರ ಮೂಲಕ ಮಾಡಲಾಗಿದೆ ಎಂದು ತಿಳಿಯಲು ನಾವು ಬಯಸುತ್ತೇವೆ. ಎಲ್ಲಾ ಬೋಧಕವರ್ಗದ ಸದಸ್ಯರು ಇ-ಮೇಲ್ ನಲ್ಲಿ ಸಂಪರ್ಕದಲ್ಲಿರುವುದರಿಂದ ಹಾಗೂ ವಾಟ್ಸಾಪ್ ಗ್ರೂಪ್ ಮತ್ತು ಇತರ ಕಾರ್ಯವಿಧಾನಗಳಲ್ಲಿ ಅನೇಕರು ಸಂವಹನ ನಡೆಸುತ್ತಿರುವುದರಿಂದ, ಅಧ್ಯಾಪಕರಿಗೆ ಈ ಬಗ್ಗೆ ತಿಳಿಸುವುದು ಹಾಗೂ ಶೈಕ್ಷಣಿಕ ವಿಷಯಗಳಲ್ಲಿ ಅದರ ಅನುಮೋದನೆಯನ್ನು ಪಡೆಯುವುದು ಸಾಧ್ಯ, ಅಗತ್ಯ ಹಾಗೂ ಅಪೇಕ್ಷಣೀಯವಾಗಿದೆ”. ನಮ್ಮ ಗಮನಕ್ಕೆ ತಾರದೇ ವೆಬಿನಾರ್‌ ಹೇಗೆ ಆಯೋಜಿಸುತ್ತೀರಿ ಎಂದು ಪ್ರಾಧ್ಯಾಪಕರು ಕಿಡಿಕಾರಿದ್ದಾರೆ.

ಕಾರ್ಯಕ್ರಮ ಆಯೋಜಿಸುತ್ತಿರುವ ಪ್ರೊಫೆಸರ್ ಹೀರಾಮನ್ ತಿವಾರಿ, ಪ್ರೊಫೆಸರ್ ಉಮೇಶ್ ಕದಮ್ ಹೊರತುಪಡಿಸಿ, ಐತಿಹಾಸಿಕ ಅಧ್ಯಯನ ಕೇಂದ್ರದಲ್ಲಿ 19 ಅಧ್ಯಾಪಕ ಸದಸ್ಯರಿದ್ದಾರೆ.

ಕೇಂದ್ರದ ವಿದ್ಯಾರ್ಥಿ-ಅದ್ಯಾಪಕ ಸದಸ್ಯರು ಕೂಡಾ ಕಾರ್ಯಕ್ರಮವನ್ನು ವಿರೋಧಿಸಿದ್ದಾರೆ. “ಭಾಷಣಕಾರರು ತಮ್ಮ ಕ್ಷೇತ್ರದಲ್ಲಿ ವೃತ್ತಿಪರ ಜ್ಞಾನವನ್ನು ಹೊಂದಿದ್ದಾರೆ ಮತ್ತು ಐತಿಹಾಸಿಕವಾಗಿ ನಿಖರವಾದ ಸಂಗತಿಗಳ ಮೇಲೆ ತಮ್ಮ ವಾದಗಳನ್ನು ಆಧರಿಸಿದ್ದಾರೆ ಎಂದು ಖಚಿತಪಡಿಸಿಕೊಳ್ಳಲು ಕೇಂದ್ರವು ಯಾವಾಗಲೂ ಬದ್ಧವಾಗಿದೆ. ಭಾರತದ ಆರಂಭಿಕ ಇತಿಹಾಸದ ವಿದ್ವಾಂಸರು ಹರಪ್ಪನ್ ನಾಗರೀಕತೆಯನ್ನು ಋಗ್ವೇದ ಸಂಸ್ಕೃತಿಯೊಂದಿಗೆ ಸಂಯೋಜಿಸುವ ಪ್ರಯತ್ನವನ್ನು ತಿರಸ್ಕರಿಸಿದ್ದಾರೆ… ತಮ್ಮ ಕೋಮು ಕಾರ್ಯಸೂಚಿಯನ್ನು ಹರಡುವುದನ್ನು ಹೊರತುಪಡಿಸಿ ಪ್ರಸ್ತುತ ಈ ಚರ್ಚೆಗೆ ಯಾವುದೇ ಮಾನ್ಯತೆಯಿಲ್ಲ ಇಲ್ಲ. ಹರಪ್ಪನ್ ಸಂಸ್ಕೃತಿಯ ಮೇಲೆ ಪೌರಾಣಿಕವಾಗಿರುವ ಸರಸ್ವತಿ ನದಿಯನ್ನು ಮೇಲುಗೈ ಸಾಧಿಸುವ ಪ್ರಯತ್ನವಿದು” ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ಈ ಕಾರ್ಯಕ್ರಮವನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ” ಎಂದು ಅವರು ಹೇಳಿದರು.


ಓದಿ: ಸಿಎಎ ವಿರುದ್ಧ ನಿರ್ಣಯವನ್ನು ಅಂಗೀಕರಿಸಿದ ಮೊದಲ ವಿಶ್ವವಿದ್ಯಾಲಯವಿದು.


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...