HomeಮುಖಪುಟJNUನಲ್ಲಿ ಸರಸ್ವತಿ ನಾಗರಿಕತೆ ವೆಬಿನಾರ್: ಪ್ರಾಧ್ಯಾಪರು, ವಿದ್ಯಾರ್ಥಿಗಳಿಂದ ತೀವ್ರ ವಿರೋಧ

JNUನಲ್ಲಿ ಸರಸ್ವತಿ ನಾಗರಿಕತೆ ವೆಬಿನಾರ್: ಪ್ರಾಧ್ಯಾಪರು, ವಿದ್ಯಾರ್ಥಿಗಳಿಂದ ತೀವ್ರ ವಿರೋಧ

- Advertisement -
- Advertisement -

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಇತಿಹಾಸ ಅಧ್ಯಯನ ಕೇಂದ್ರದ ಹದಿನಾಲ್ಕು ಅಧ್ಯಾಪಕರು ’ಮೇಜರ್ ಜನರಲ್ (ನಿವೃತ್ತ) ಜಿ.ಡಿ ಬಕ್ಷಿ ಅವರು ನೀಡಲಿರುವ ‘ಸರಸ್ವತಿ ನಾಗರಿಕತೆ’ಯ ವೆಬಿನಾರ್‌ ನಡೆಸುವುದರ ವಿರುದ್ಧ’ ಉಪಕುಲಪತಿಗೆ ಪತ್ರ ಬರೆದಿದ್ದಾರೆ.

ಕೇಂದ್ರದ ವಿದ್ಯಾರ್ಥಿ-ಅಧ್ಯಾಪಕ ಸದಸ್ಯ (ಎಸ್‌ಎಫ್‌ಸಿ) ಕೂಡ ಈ ವೆಬಿನಾರ್ ಅನ್ನು ತೀವ್ರವಾಗಿ ಖಂಡಿಸಿದೆ.

ಜೆಎನ್‌ಯು ಉಪಕುಲಪತಿ ಜೂನ್ 8 ರಂದು ನಿವೃತ್ತ ಮೇಜರ್ ಜನರಲ್ ಜಿ.ಡಿ ಬಕ್ಷಿ ಅವರು ‘ಸರಸ್ವತಿ ನಾಗರೀಕತೆ’ ಕುರಿತು ವೆಬಿನಾರ್ ನಲ್ಲಿ ಮಾತನಾಡಲಿದ್ದಾರೆ ಎಂದು ಬರೆದಿದ್ದರು. ಅಲ್ಲದೆ ಈ ಕಾರ್ಯಕ್ರಮವನ್ನು ಜೆಎನ್‌ಯು ಇತಿಹಾಸ ಅಧ್ಯಯನ ಕೇಂದ್ರ, ಸಮಾಜ ವಿಜ್ಞಾನ ಅಧ್ಯಯನ ಕೇಂದ್ರ ಆಯೋಜಿಸುತ್ತಿದೆ ಎಂದು ಬರೆದಿದ್ದರು.

ವಿವಿಯ ಈ ಕ್ರಮವನ್ನು ಅಧ್ಯಯನ ಕೇಂದ್ರದ 14 ಬೋಧಕ ವರ್ಗದ ಸದಸ್ಯರ ಗುಂಪು ತೀವ್ರವಾಗಿ ವಿರೋಧಿಸಿದೆ. ” ನಿಮ್ಮ ಟ್ವೀಟ್‌ನಲ್ಲಿ ಕಾರ್ಯಕ್ರಮವನ್ನು ಇತಿಹಾಸ ಅಧ್ಯಯನ ಕೇಂದ್ರ ಜೊತೆಗೆ ಪ್ರೊಫೆಸರ್ ಹೀರಾಮನ್ ತಿವಾರಿ, ಪ್ರೊಫೆಸರ್ ಉಮೇಶ್ ಕದಮ್ ಮತ್ತು ಪ್ರೊಫೆಸರ್ ದೀಪೇಂದ್ರ ನಾಥ್ ದಾಸ್ ಸೇರಿ ಆಯೋಜಿಸುತ್ತಾರೆ ಎಂದು ಉಲ್ಲೇಖಿಸಲಾಗಿದೆ. ಆದರೆ ಸೆಮಿನಾರ್‌ಗಳು, ಸಮ್ಮೇಳನಗಳು, ಕಾರ್ಯಾಗಾರಗಳನ್ನು, ವಾಸ್ತವವಾಗಿ ಶೈಕ್ಷಣಿಕ ಕಾರ್ಯಚಟುವಟಿಕೆಯ ವಿಷಯಗಳಲ್ಲಿ ವೃತ್ತಿಪರ ಮತ್ತು ಶ್ರೇಷ್ಠ ವಿದ್ವಾಂಸರನ್ನು ಬೋಧಕವರ್ಗದಿಂದ ಆಹ್ವಾನಿಸಲ್ಪಡುತ್ತಾರೆ. ಇಲ್ಲಿ ನಡೆಯುತ್ತಿರುವ ವೆಬಿನಾರ್‌ ಗೂ ನಮಗೂ ಸಂಬಂಧವಿಲ್ಲ. ಈ ಅತಿಥಿಯನ್ನು ಕರೆದವರು ಯಾರು” ಎಂದು ಪ್ರಶ್ನಿಸಿದ್ದಾರೆ.

“ಈ ವೆಬಿನಾರ್‌ ಅನ್ನು ಸಂಘಟಿಸುವ ಕುರಿತು ಎಲ್ಲಿ ಚರ್ಚಿಸಲಾಯಿತು? ಇದನ್ನು ಯಾರ ಮೂಲಕ ಮಾಡಲಾಗಿದೆ ಎಂದು ತಿಳಿಯಲು ನಾವು ಬಯಸುತ್ತೇವೆ. ಎಲ್ಲಾ ಬೋಧಕವರ್ಗದ ಸದಸ್ಯರು ಇ-ಮೇಲ್ ನಲ್ಲಿ ಸಂಪರ್ಕದಲ್ಲಿರುವುದರಿಂದ ಹಾಗೂ ವಾಟ್ಸಾಪ್ ಗ್ರೂಪ್ ಮತ್ತು ಇತರ ಕಾರ್ಯವಿಧಾನಗಳಲ್ಲಿ ಅನೇಕರು ಸಂವಹನ ನಡೆಸುತ್ತಿರುವುದರಿಂದ, ಅಧ್ಯಾಪಕರಿಗೆ ಈ ಬಗ್ಗೆ ತಿಳಿಸುವುದು ಹಾಗೂ ಶೈಕ್ಷಣಿಕ ವಿಷಯಗಳಲ್ಲಿ ಅದರ ಅನುಮೋದನೆಯನ್ನು ಪಡೆಯುವುದು ಸಾಧ್ಯ, ಅಗತ್ಯ ಹಾಗೂ ಅಪೇಕ್ಷಣೀಯವಾಗಿದೆ”. ನಮ್ಮ ಗಮನಕ್ಕೆ ತಾರದೇ ವೆಬಿನಾರ್‌ ಹೇಗೆ ಆಯೋಜಿಸುತ್ತೀರಿ ಎಂದು ಪ್ರಾಧ್ಯಾಪಕರು ಕಿಡಿಕಾರಿದ್ದಾರೆ.

ಕಾರ್ಯಕ್ರಮ ಆಯೋಜಿಸುತ್ತಿರುವ ಪ್ರೊಫೆಸರ್ ಹೀರಾಮನ್ ತಿವಾರಿ, ಪ್ರೊಫೆಸರ್ ಉಮೇಶ್ ಕದಮ್ ಹೊರತುಪಡಿಸಿ, ಐತಿಹಾಸಿಕ ಅಧ್ಯಯನ ಕೇಂದ್ರದಲ್ಲಿ 19 ಅಧ್ಯಾಪಕ ಸದಸ್ಯರಿದ್ದಾರೆ.

ಕೇಂದ್ರದ ವಿದ್ಯಾರ್ಥಿ-ಅದ್ಯಾಪಕ ಸದಸ್ಯರು ಕೂಡಾ ಕಾರ್ಯಕ್ರಮವನ್ನು ವಿರೋಧಿಸಿದ್ದಾರೆ. “ಭಾಷಣಕಾರರು ತಮ್ಮ ಕ್ಷೇತ್ರದಲ್ಲಿ ವೃತ್ತಿಪರ ಜ್ಞಾನವನ್ನು ಹೊಂದಿದ್ದಾರೆ ಮತ್ತು ಐತಿಹಾಸಿಕವಾಗಿ ನಿಖರವಾದ ಸಂಗತಿಗಳ ಮೇಲೆ ತಮ್ಮ ವಾದಗಳನ್ನು ಆಧರಿಸಿದ್ದಾರೆ ಎಂದು ಖಚಿತಪಡಿಸಿಕೊಳ್ಳಲು ಕೇಂದ್ರವು ಯಾವಾಗಲೂ ಬದ್ಧವಾಗಿದೆ. ಭಾರತದ ಆರಂಭಿಕ ಇತಿಹಾಸದ ವಿದ್ವಾಂಸರು ಹರಪ್ಪನ್ ನಾಗರೀಕತೆಯನ್ನು ಋಗ್ವೇದ ಸಂಸ್ಕೃತಿಯೊಂದಿಗೆ ಸಂಯೋಜಿಸುವ ಪ್ರಯತ್ನವನ್ನು ತಿರಸ್ಕರಿಸಿದ್ದಾರೆ… ತಮ್ಮ ಕೋಮು ಕಾರ್ಯಸೂಚಿಯನ್ನು ಹರಡುವುದನ್ನು ಹೊರತುಪಡಿಸಿ ಪ್ರಸ್ತುತ ಈ ಚರ್ಚೆಗೆ ಯಾವುದೇ ಮಾನ್ಯತೆಯಿಲ್ಲ ಇಲ್ಲ. ಹರಪ್ಪನ್ ಸಂಸ್ಕೃತಿಯ ಮೇಲೆ ಪೌರಾಣಿಕವಾಗಿರುವ ಸರಸ್ವತಿ ನದಿಯನ್ನು ಮೇಲುಗೈ ಸಾಧಿಸುವ ಪ್ರಯತ್ನವಿದು” ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ಈ ಕಾರ್ಯಕ್ರಮವನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ” ಎಂದು ಅವರು ಹೇಳಿದರು.


ಓದಿ: ಸಿಎಎ ವಿರುದ್ಧ ನಿರ್ಣಯವನ್ನು ಅಂಗೀಕರಿಸಿದ ಮೊದಲ ವಿಶ್ವವಿದ್ಯಾಲಯವಿದು.


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...