Homeಮುಖಪುಟರಾಜಸ್ಥಾನದಲ್ಲಿ ಶಾಸಕರ ಖರೀದಿಗೆ ಮುಂದಾದ ಬಿಜೆಪಿ: ನಿಮ್ಮ ಬಳಿ ಸಂಖ್ಯೆಗಳಿವೆಯೇ ಎಂದ ಕಾಂಗ್ರೆಸ್‌

ರಾಜಸ್ಥಾನದಲ್ಲಿ ಶಾಸಕರ ಖರೀದಿಗೆ ಮುಂದಾದ ಬಿಜೆಪಿ: ನಿಮ್ಮ ಬಳಿ ಸಂಖ್ಯೆಗಳಿವೆಯೇ ಎಂದ ಕಾಂಗ್ರೆಸ್‌

ಕಾಂಗ್ರೆಸ್ ಎರಡು ರಾಜ್ಯಸಭಾ ಸ್ಥಾನಗಳನ್ನು ಗೆಲ್ಲುವಷ್ಟು ಶಾಸಕರನ್ನು ಹೊಂದಿದೆ. ಆದಾಗ್ಯೂ, ಬಿಜೆಪಿ ಸಾಕಷ್ಟು ಸಂಖ್ಯೆಗಳನ್ನು ಹೊಂದಿಲ್ಲದಿದ್ದರೂ ಸಹ ಒಬ್ಬರ ಬದಲು ಇಬ್ಬರು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಇದು ಪ್ರಸ್ತುತ ಉಂಟಾಗಿರುವ ಬಿಕ್ಕಟ್ಟಿಗೆ ನಾಂದಿ ಹಾಡಿದೆ.

- Advertisement -
- Advertisement -

ದೇಶವು ಕೊರೊನಾ ವೈರಸ್ ವಿರುದ್ಧ ಹೋರಾಡುತ್ತಿರುವ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಷಾ ಅವರು ಪ್ರಜಾಪ್ರಭುತ್ವವನ್ನು ನಾಶಪಡಿಡುತ್ತಿದ್ದಾರೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.

ರಾಜ್ಯಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಶಾಸಕರ ಖರೀದಿಗೆ ಬಿಜೆಪಿ ಮುಂದಾಗಿರುವ ಹಿನ್ನೆಲೆಯಲ್ಲಿ, ನಿಮ್ಮ ಎರಡನೇ ಅಭ್ಯರ್ಥಿಯನ್ನು ಗೆಲ್ಲಿಸಲು ನಿಮ್ಮ ಬಳಿ ಸಾಕಷ್ಟು ಸಂಖ್ಯೆಗಳಿವೆಯೇ ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ.

“ವಿಶ್ವವು ವೈರಸ್ ಬಿಕ್ಕಟ್ಟಿನೊಂದಿಗೆ ಹೋರಾಡುತ್ತಿರುವಾಗಲೂ, ಮಧ್ಯಪ್ರದೇಶದ ಕಾಂಗ್ರೆಸ್ ಸರ್ಕಾರವನ್ನು  ಬಿಜೆಪಿ ಉರುಳಿಸಿದೆ. ಈ ಸಮಯದಲ್ಲಿ ಯಾರು ನೋವು ಕೊಡುತ್ತಿದ್ದಾರೆ ಮತ್ತು ಯಾರು ಔಷಧಿ ವಿತರಿಸುತ್ತಿದ್ದಾರೆ ಎಂಬುದನ್ನು ನಾವು ನಿರ್ಧರಿಸಬೇಕಾಗಿದೆ” ಎಂದು ಗೆಹ್ಲೋಟ್ ಹೇಳಿದ್ದಾರೆ.

ರಾಜಸ್ಥಾನದ ಕಾಂಗ್ರೆಸ್ ಪಕ್ಷವು “ಸರ್ಕಾರವನ್ನು ಅಸ್ಥಿರಗೊಳಿಸುವ ಬಿಜೆಪಿ ಪ್ರಯತ್ನಗಳ” ವಿರುದ್ಧ ದೂರು ನೀಡಿದೆ. ಕಾಂಗ್ರೆಸ್‌ ಮತ್ತು ಅದನ್ನು ಬೆಂಬಲಿಸುವ ಶಾಸಕರನ್ನು ಖರೀದಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು  ಆರೋಪಿಸಿದ್ದಾರೆ. ಕಳೆದ ಒಂದು ವರ್ಷದಲ್ಲಿ ಕಾಂಗ್ರೆಸ್ ಆಳುತ್ತಿದ್ದ ಎರಡು ದೊಡ್ಡ ರಾಜ್ಯಗಳಾದ ಕರ್ನಾಟಕ ಮತ್ತು ಮಧ್ಯಪ್ರದೇಶಗಳಲ್ಲಿ ಬಿಜೆಪಿ ಆಪರೇಷನ್‌ ಕಮಲ ನಡೆಸಿ, ಶಾಸಕರನ್ನು ಕೊಂಡುಕೊಂಡು ಸರ್ಕಾರಗಳನ್ನು ಉರುಳಿಸಿದೆ ಎಂದು ಕಾಂಗ್ರೆಸ್‌ ಆರೋಪಿಸಿದೆ.

ಈ ನಡುವೆ ಜೂನ್ 19 ರಂದು ನಡೆಯುವ ಮೂರು ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆಯ ಬಗ್ಗೆ ರಾಜಸ್ಥಾನದಲ್ಲಿ ಕೋಲಾಹಲ ಉತ್ತುಂಗಕ್ಕೇರಿದೆ. ಎರಡು ಸ್ಥಾನಗಳನ್ನು ಗೆಲ್ಲಲು ಪಕ್ಷಕ್ಕೆ ಸಾಕಷ್ಟು ಸಂಖ್ಯೆಯಿದೆ ಮತ್ತು ಯಾರೂ ಪಕ್ಷವನ್ನು ತೊರೆಯುತ್ತಿಲ್ಲ ಎಂದು ಉಪಮುಖ್ಯಮಂತ್ರಿ ಮತ್ತು ರಾಜಸ್ಥಾನ್ ಕಾಂಗ್ರೆಸ್ ಮುಖ್ಯಸ್ಥ ಸಚಿನ್ ಪೈಲಟ್ ಹೇಳಿದ್ದಾರೆ.

“ರಾಜ್ಯಸಭೆಯ ಎರಡೂ ಸ್ಥಾನಗಳನ್ನು ಗೆಲ್ಲಲು ನಮ್ಮಲ್ಲಿ ಸಂಖ್ಯೆಗಳಿವೆ. ನಮಗೆ ಸ್ವತಂತ್ರ ಶಾಸಕರ ಬೆಂಬಲವಿದೆ. ಊಹಾಪೋಹಗಳು ಹರಡಿ ಜನರನ್ನು ದಾರಿ ತಪ್ಪಿಸಬೇಡಿ. ಎಲ್ಲಾ ಶಾಸಕರು ನಮ್ಮೊಂದಿಗಿದ್ದಾರೆ” ಎಂದು ಸಚಿನ್‌ ಪೈಲಟ್ ತಮ್ಮ ಪಕ್ಷವು ಬಿಕ್ಕಟ್ಟಿನಲ್ಲಿದೆ ಎಂಬುದನ್ನು ನಿರಾಕರಿಸಿದ್ದಾರೆ.

ಕಾಂಗ್ರೆಸ್ ಶಾಸಕರನ್ನು ರೆಸಾರ್ಟ್‌ಗಳಲ್ಲಿ ಇರಿಸಲಾಗುತ್ತಿದೆ ಏಕೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು “ನಾವು ಕಳೆದ ಮೂರು ತಿಂಗಳುಗಳಿಂದ ಭೇಟಿಯಾಗದ ಕಾರಣ ಈಗ ಹೋಟೆಲ್‌ಗಳಲ್ಲಿ ಒಟ್ಟಿಗೆ ಸೇರಿದ್ದೇವೆ” ಎಂದಿದ್ದಾರೆ.

200 ಸದಸ್ಯರ ರಾಜಸ್ಥಾನ ವಿಧಾನಸಭೆಯಲ್ಲಿ ಕಾಂಗ್ರೆಸ್‌ ಪಕ್ಷವು 107 ಶಾಸಕರನ್ನು ಹೊಂದಿದೆ. ಅದರಲ್ಲಿ ಆರು ಜನ ಕಳೆದ ವರ್ಷ ಬಿಎಸ್‌ಪಿ ತ್ಯಜಿಸಿ ಕಾಂಗ್ರೆಸ್‌ ಸೇರಿದ್ದಾರೆ. 13 ಸ್ವತಂತ್ರ ಶಾಸಕರಲ್ಲಿ 12 ಜನರ ಬೆಂಬಲವೂ ಪಕ್ಷಕ್ಕೆ ಇದೆ ಎಂದು ಕಾಂಗ್ರೆಸ್‌ ಹೇಳಿಕೊಂಡಿದೆ. ಬಿಜೆಪಿಯು 72 ಶಾಸಕರು ಮತ್ತು ಸ್ವಂತತ್ರ ಶಾಸಕರು ಮತ್ತು ಪಾಲುದಾರ ಪಕ್ಷಗಳಿಂದ ನಾಲ್ವರ ಬೆಂಬಲ ಪಡೆದಿದೆ. ರಾಜ್ಯಸಭಾ ಸ್ಥಾನವನ್ನು ಗೆಲ್ಲಲು, ಪ್ರತಿ ಅಭ್ಯರ್ಥಿಗೆ 51 ಮೊದಲ ಆದ್ಯತೆಯ ಮತಗಳು ಬೇಕಾಗುತ್ತವೆ.

ಕಾಂಗ್ರೆಸ್ ಎರಡು ರಾಜ್ಯಸಭಾ ಸ್ಥಾನಗಳನ್ನು ಗೆಲ್ಲುವಷ್ಟು ಶಾಸಕರನ್ನು ಹೊಂದಿದೆ. ಆದಾಗ್ಯೂ, ಬಿಜೆಪಿ ಸಾಕಷ್ಟು ಸಂಖ್ಯೆಗಳನ್ನು ಹೊಂದಿಲ್ಲದಿದ್ದರೂ ಸಹ ಒಬ್ಬರ ಬದಲು ಇಬ್ಬರು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಇದು ಪ್ರಸ್ತುತ ಉಂಟಾಗಿರುವ ಬಿಕ್ಕಟ್ಟಿಗೆ ನಾಂದಿ ಹಾಡಿದೆ. ಹಾಗಾಗಿ “ನೀವು ಎರಡನೇ ಅಭ್ಯರ್ಥಿಗೆ ಸಂಖ್ಯೆಗಳನ್ನು ಹೊಂದಿದ್ದೀರಾ? ಇದು ನಿಮ್ಮ ದುಷ್ಟ ವಿನ್ಯಾಸಗಳನ್ನು ಬಹಿರಂಗಪಡಿಸುತ್ತದೆ” ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೆವಾಲಾ ಬಿಜೆಪಿ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...