Homeಮುಖಪುಟನಾಪತ್ತೆಯಾಗಿದ್ದ ಕೊರೊನಾ ರೋಗಿ 8 ದಿನಗಳ ನಂತರ ಆಸ್ಪತ್ರೆ ಶೌಚಾಲಯದಲ್ಲಿ ಶವವಾಗಿ ಪತ್ತೆ!

ನಾಪತ್ತೆಯಾಗಿದ್ದ ಕೊರೊನಾ ರೋಗಿ 8 ದಿನಗಳ ನಂತರ ಆಸ್ಪತ್ರೆ ಶೌಚಾಲಯದಲ್ಲಿ ಶವವಾಗಿ ಪತ್ತೆ!

- Advertisement -
- Advertisement -

ಮುಂಬೈಯ ಜಲ್ಗಾಂವ್ ಆಸ್ಪತ್ರೆಯಲ್ಲಿ ಕಾಣೆಯಾಗಿದ್ದ ಕೊರೊನಾ ರೋಗಿಯೊಬ್ಬರು ಆಸ್ಪತ್ರೆಯ ಶೌಚಾಲಯದಲ್ಲಿ 8 ದಿನಗಳ ನಂತರ ಶವವಾಗಿ ಪತ್ತೆಯಾಗಿದ್ದಾರೆ. ಪೊಲೀಸರು ಸಂಬಂಧಪಟ್ಟ ಸಿಬ್ಬಂದಿಗಳ ವಿರುದ್ಧ ‘ನಿರ್ಲಕ್ಷ್ಯ’ಕ್ಕಾಗಿ ಪ್ರಕರಣ ದಾಖಲಿಸಿದ್ದಾರೆ. ಘಟನೆಯು ಸರ್ಕಾರಿ ಆಸ್ಪತ್ರೆಗಳಲ್ಲಿರುವ ಅವ್ಯವಸ್ಥೆಯ ಬಗ್ಗೆ ಬೆಳಕು ಚೆಲ್ಲಿದೆ.

ಮೃತಪಟ್ಟ 82 ವರ್ಷದ ಮಹಿಳೆ ಹಾಗೂ ಅವರ ಸೊಸೆಗೆ ಕೊರೊನಾ ಸೋಂಕು ತಗುಲಿದ್ದರಿಂದ ಜಲ್ಗಾಂವ್ ಜಿಲ್ಲಾ ಸಿವಿಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಯು ಮಹಿಳೆ ನಾಪತ್ತೆಯಾಗಿದ್ದಾರೆ ಎಂದು ಪ್ರಕಟಿಸಿದ ಎಂಟು ದಿನಗಳ ನಂತರ ಶವ ಶೌಚಾಲಯದೊಳಗೆ ಪತ್ತೆಯಾಗಿದೆ.

ಭೂಸಾವಲ್‌ನಲ್ಲಿ ವಾಸಿಸುತ್ತಿದ್ದ ಮಹಿಳೆ, ಅವರ ಮಗ ಹಾಗೂ ಸೊಸೆಗೆ ಮೇ ಕೊನೆಯ ವಾರದಲ್ಲಿ ವೈರಸ್ ಇರುವುದು ಪತ್ತಯಾಗಿತ್ತು. ಮಹಿಳೆ ಮತ್ತು ಸೊಸೆ ಜಲ್ಗಾಂವ್ ಸಿವಿಲ್ ಆಸ್ಪತ್ರೆಗೆ ಹೋಗಿದ್ದರೂ, ಐಸಿಯು ಹಾಸಿಗೆಗೆ ಕಾಯುತ್ತಾ ಮೇ 31 ರಂದು ಉಸಿರಾಟದ ಸಮಸ್ಯೆಯಾಗಿ ಸೊಸೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.

ಮಹಿಳೆಯ ಮೊಮ್ಮಗ, ಐಸಿಯು ಹಾಸಿಗೆ ಲಭ್ಯವಿಲ್ಲದ ಕಾರಣ ಅವರು ಆಸ್ಪತ್ರೆಯ ರಿಸೆಪ್ಷನ್ ನಲ್ಲಿ ಆರು ಗಂಟೆಗಳ ಕಾಲ ಕಾಯಬೇಕಾಗಿ ಬಂದಿತ್ತು ಎಂದು ಆರೋಪಿಸಿದ್ದಾರೆ.

ಇದಕ್ಕಿಂತಲೂ ಅಘಾತಕಾರಿಯಾದುದ್ದು ಎಂದರೆ ಮಯಸ್ಸಾದ ಮಹಿಳೆಯೂ ಶೌಚಾಲಯದಲ್ಲಿ ಮೃತಪಟ್ಟಿದ್ದರೂ ಸಹ ಎಂದು ಜೂನ್ 10 ರವರೆಗೆ ಆಸ್ಪತ್ರೆಯ ಸಿಬ್ಬಂದಿ ತಿಳಿದಿರಲೇ ಇಲ್ಲ ಎಂಬುದಾಗಿದೆ.

ಸಿವಿಲ್ ಆಸ್ಪತ್ರೆಯ ಹಿರಿಯ ಅಧಿಕಾರಿಯೊಬ್ಬರು, ಕೊರೊನಾ ರೋಗಿಗಳೊಂದಿಗೆ ವ್ಯವಹರಿಸಲು ಅರೆವೈದ್ಯಕೀಯ ಸಿಬ್ಬಂದಿ ಹೆದರುತ್ತಾರೆ. “ಕೊರೊನಾ ರೋಗಿಗಳಿಗೆ ಸೇವೆ ಸಲ್ಲಿಸಲು ಹಿಂಜರಿಯುತ್ತಿರುವುದರಿಂದ ವೈದ್ಯಕೀಯ ಸಿಬ್ಬಂದಿಯೊಂದಿಗೆ ವಾಗ್ವಾದಗಳು ನಡೆದಿವೆ” ಎಂದು ಹೇಳಿದ್ದಾರೆ.

ಕೆಳಮಹಡಿಯಲ್ಲಿ ಕೇವಲ ಐದು ಶೌಚಾಲಯಗಳಿವೆ ಎಂದಿರುವ ಜಿಲ್ಲಾಧಿಕಾರಿ ಧಾಕಾನೆ, “ಇದರರ್ಥ ಆಸ್ಪತ್ರೆಯಿಂದ ಯಾರೂ ಎಂಟು ದಿನಗಳವರೆಗೆ ಶೌಚಾಲಯವನ್ನು ಸ್ವಚ್ಛಗೊಳಿಸಲು ಹೋಗಲಿಲ್ಲ. ಒಳಗಿನಿಂದ ಬರುವ ದುರ್ವಾಸನೆ ಬರುತ್ತಿರುವುದರಿಂದ ಇತರ ರೋಗಿಗಳು ಅಧಿಕಾರಿಗಳನ್ನು ಕರೆಸಿದರು” ಎಂದು ಅವರು ಹೇಳಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಆಸ್ಪತ್ರೆಯ ಡೀನ್ ಡಾ ಬಿ ಎಸ್ ಖೈರ್ ಅವರನ್ನು ಬುಧವಾರ ತಡರಾತ್ರಿ ಅಮಾನತುಗೊಳಿಸಲಾಗಿದೆ.

ಗುರುವಾರ, ಐಪಿಸಿಯ ಸೆಕ್ಷನ್ 304 (ಎ) ಮತ್ತು 188 ಅಡಿಯಲ್ಲಿ ಸಂಬಂಧಪಟ್ಟ ವೈದ್ಯರು, ದಾದಿಯರು, ವಾರ್ಡ್ ಬಾಯ್ಸ್, ಸ್ವೀಪರ್ಗಳು ಮತ್ತು ಇತರ ಸಿಬ್ಬಂದಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

“ಜೂನ್ 1 ರಿಂದ 10 ರವರೆಗೆ ವಾರ್ಡ್ 7 ರಲ್ಲಿ ನಿಯೋಜಿಸಲ್ಪಟ್ಟ ವೈದ್ಯರು, ದಾದಿಯರು ಮತ್ತು ಇತರ ಸಿಬ್ಬಂದಿಯ ಪಾತ್ರವನ್ನು ನಾವು ಖಚಿತಪಡಿಸಿಕೊಳ್ಳುತ್ತೇವೆ” ಎಂದು ಸ್ಥಳೀಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮುಂಬೈನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್, 82 ವರ್ಷದ ಮಹಿಳೆಯ ಸಾವಿಗೆ ಕಾರಣರಾದ ಜನರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

“ನಾವು ಈ ಘಟನೆಯ ಬಗ್ಗೆ ಗಂಭೀರವಾದ ಕ್ರಮ ತೆಗೆದುಕೊಳ್ಳುತ್ತೇವೆ. ಈ ಕ್ರಿಮಿನಲ್ ಅಪರಾಧಕ್ಕಾಗಿ ಈಗಾಗಲೇ ಕೆಲವು ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ” ಎಂದು ಸಚಿವರು ಹೇಳಿದ್ದಾರೆ.


ಓದಿ: ಮುಗಿಬಿದ್ದು ಬಸ್‌ ಹತ್ತುವ ಜನರ ಈ ವಿಡಿಯೋ ಮುಂಬೈದಲ್ಲ, ಪಶ್ಚಿಮ ಬಂಗಾಳದ್ದು: ಫ್ಯಾಕ್ಟ್‌ಚೆಕ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...