Homeಕರ್ನಾಟಕರಾಜ್ಯಸಭಾ ಚುನಾವಣೆ: ಕರ್ನಾಟಕದಿಂದ ಖರ್ಗೆ, ದೇವೇಗೌಡರು ಸೇರಿ ನಾಲ್ವರ ಅವಿರೋಧ ಆಯ್ಕೆ

ರಾಜ್ಯಸಭಾ ಚುನಾವಣೆ: ಕರ್ನಾಟಕದಿಂದ ಖರ್ಗೆ, ದೇವೇಗೌಡರು ಸೇರಿ ನಾಲ್ವರ ಅವಿರೋಧ ಆಯ್ಕೆ

- Advertisement -
- Advertisement -

ಜೂನ್‌ 19ರಂದು ನಡೆಯಬೇಕಿದ್ದ ಕರ್ನಾಟಕದ ನಾಲ್ಕು ಸ್ಥಾನಗಳ ರಾಜ್ಯಸಭಾ ಚುನಾಚಣೆಯು ನಾಲ್ಕಕ್ಕಿಂತ ಹೆಚ್ಚು ನಾಮಪತ್ರಗಳು ಸಲ್ಲಿಕೆಯಾಗದ ಹಿನ್ನೆಲೆಯಲ್ಲಿ ನಿರೀಕ್ಷೆಯಿಂತೆ ಎಲ್ಲರೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ವಿಧಾನಸಭೆ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಅಧಿಕೃತವಾಗಿ ಘೋಷಿಸಿದ್ದಾರೆ.

ಈ ನಿಟ್ಟಿನಲ್ಲಿ ಕಾಂಗ್ರೆಸ್‌ನಿಂದ ಮಲ್ಲಿಕಾರ್ಜುನ ಖರ್ಗೆ, ಜೆಡಿಎಸ್‌ನಿಂದ ಹೆಚ್.ಡಿ. ದೇವೇಗೌಡ ಮತ್ತು ಬಿಜೆಪಿಯ ಅಭ್ಯರ್ಥಿಗಳಾದ ಈರಣ್ಣ ಕಡಾಡಿ ಮತ್ತು ಅಶೋಕ ಗಸ್ತಿಯವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

224 ಸದಸ್ಯ ಬಲದ ಕರ್ನಾಟಕ ವಿಧಾನಸಭೆಯಲ್ಲಿ ಸದ್ಯಕ್ಕೆ 222 ಸ್ಥಾನಗಳಿದ್ದು, ಎರಡು ಸ್ಥಾನಗಳು ಖಾಲಿ ಉಳಿದಿವೆ. ಒಬ್ಬ ಅಭ್ಯರ್ಥಿ ಗೆಲ್ಲಲು ಪ್ರಥಮ ಪ್ರಾಸಶ್ತ್ಯದ 48 ಮತಗಳ ಅಗತ್ಯವಿತ್ತು. ಜೆಡಿಎಸ್‌ 34, ಕಾಂಗ್ರೆಸ್‌ 68, ಬಿಜೆಪಿ 117, ಬಿಎಸ್‌ಪಿ 01 ಮತ್ತು 03 ಸ್ವತಂತ್ರ ಶಾಸಕರಿದ್ದಾರೆ. ಕಾಂಗ್ರೆಸ್‌ ಮಲ್ಲಿಕಾರ್ಜುನ ಖರ್ಗೆಯವರ ಜೊತೆಗೆ ಉಳಿದ ಮತಗಳನ್ನು ಜೆಡಿಎಸ್‌ನ ದೇವೇಗೌಡರಿಗೆ ನೀಡುವುದಾಗಿ ಮೊದಲೇ ಘೋಷಿಸಿತ್ತು. ನಾಲ್ಕು ಸ್ಥಾನಗಳಿಗೆ ನಾಲ್ಕು ನಾಮಪತ್ರಗಳು ಮಾತ್ರ ಸಲ್ಲಿಕೆಯಾದ್ದರಿಂದ ಚುನಾವಣೆ ನಡೆಸದೇ ಅವಿರೋಧ ಆಯ್ಕೆ ಮಾಡಲಾಗಿದೆ.

ವಿಧಾನಸಭೆ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಈ ಕುರಿತ ಹೇಳಿಕೆ ನೀಡಿದ್ದು, “ರಾಜ್ಯಸಭಾ ಚುನಾವಣೆ-2020ರಲ್ಲಿ ಕರ್ನಾಟಕದಲ್ಲಿ ನಾಲ್ಕೂ ಜನ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ” ಎಂದು ಸ್ಪಷ್ಟಪಡಿಸಿದ್ದಾರೆ.

ರಾಜ್ಯಸಭೆ ಫಲಿತಾಂಶ ಘೋಷಣೆಯಾದ ನಂತರ ಬಿಜೆಪಿ ಪಕ್ಷದ ಅಭ್ಯರ್ಥಿಗಳಾದ ಈರಣ್ಣ ಕಡಾಡಿ, ಅಶೋಕ ಗಸ್ತಿ ಮತ್ತು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಮಲ್ಲಿಕಾರ್ಜುನ ಖರ್ಗೆ ವಿಧಾನಸಭೆ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಅವರಿಂದ ಅಧಿಕೃತ ಘೋಷಣೆ ಪತ್ರವನ್ನ ಪಡೆದುಕೊಂಡಿದ್ದಾರೆ.

ನಂತರ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆಯವರು, ರಾಜ್ಯದ- ದೇಶದ ಸಮಸ್ಯೆಗಳನ್ನು ಸಮರ್ಥವಾಗಿ ಸಂಸತ್ತಿನಲ್ಲಿ ಪ್ರಸ್ತಾಪಿಸುತ್ತೇನೆ. ಆ ಮೂಲಕ ಜನಪರವಾಗಿ ಕೆಲಸ ಮಾಡುತ್ತೇನೆ ಎಂದಿದಾರೆ.

ಸೋನಿಯಾ ಗಾಂಧಿ ಅವರು ನನ್ನ ಮೇಲೆ ನಂಬಿಕೆ ಇಟ್ಟು ರಾಜ್ಯಸಭೆಗೆ ಕಳುಹಿಸಿದ್ದಾರೆ. ಅವರಿಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತೇನೆ ಎಂದಿದ್ದಾರೆ.

ಇನ್ನು ಬಿಜೆಪಿಯವರು ನನ್ನ ಆಯ್ಕೆಯನ್ನು ಹಿಂಭಾಗಿಲಿನ ಮೂಲಕ ರಾಜ್ಯಸಭೆಗೆ ಪ್ರವೇಶಿಸಿದ್ದಾರೆ ಎಂದು ಆರೋಪಿಸಿದ್ದಾರೆ. ನೇರವಾಗಿ ನನ್ನಷ್ಟು ವರ್ಷ ವಿಧಾನಸಭೆಗೆ ಆಯ್ಕೆಯಾದವರು ಬಿಜೆಪಿಯಲ್ಲಿ ಯಾರಿದ್ದಾರೆ ಎಂದು ಹೇಳಲಿ ಎಂದು ಸವಾಲು ಹಾಕಿದ್ದಾರೆ. ಬಿಜೆಪಿಯವರು ನನ್ನಷ್ಟು ವರ್ಷ ರಾಜಕಾರಣ ಮಾಡಲು ಅವಕಾಶ ಕೊಡುವುದಿಲ್ಲ ಎಂದು ಅವರು ತಿಳಿಸಿದ್ದಾರೆ.


ಇದನ್ನೂ ಓದಿ: ರಾಜಸ್ಥಾನದಲ್ಲಿ ಶಾಸಕರ ಖರೀದಿಗೆ ಮುಂದಾದ ಬಿಜೆಪಿ: ನಿಮ್ಮ ಬಳಿ ಸಂಖ್ಯೆಗಳಿವೆಯೇ ಎಂದ ಕಾಂಗ್ರೆಸ್‌ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...