Homeಮುಖಪುಟದೆಹಲಿಯ ಪರಿಸ್ಥಿತಿ ಭಯಾನಕವಾಗಿದೆ; ರೋಗಿಗಳ ಪರಿಸ್ಥಿತಿ ಪ್ರಾಣಿಗಳಿಗಿಂತ ಕೆಟ್ಟದಾಗಿದೆ: ಸುಪ್ರೀಂ ಕೋರ್ಟ್ ಆತಂಕ

ದೆಹಲಿಯ ಪರಿಸ್ಥಿತಿ ಭಯಾನಕವಾಗಿದೆ; ರೋಗಿಗಳ ಪರಿಸ್ಥಿತಿ ಪ್ರಾಣಿಗಳಿಗಿಂತ ಕೆಟ್ಟದಾಗಿದೆ: ಸುಪ್ರೀಂ ಕೋರ್ಟ್ ಆತಂಕ

ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರ ಹಾಗೂ ವಿವಿಧ ರಾಜ್ಯಗಳಿಂದ ರೋಗಿಗಳಿಗೆ ನೀಡಲಾಗುವ ಚಿಕಿತ್ಸೆ, ಮೃತದೇಹಗಳನ್ನು ನಿರ್ವಹಿಸುವ ಬಗ್ಗೆ ಸ್ವಯಂ ಪ್ರೇರಿತವಾಗಿ ಪ್ರತಿಕ್ರಿಯೆಗಳನ್ನು ಕೋರಿದೆ.

- Advertisement -
- Advertisement -

ದೆಹಲಿಯ ಪರಿಸ್ಥಿತಿಯನ್ನು “ಭಯಾನಕ” ಎಂದು ಹೇಳಿರುವ ಸುಪ್ರೀಂ ಕೋರ್ಟ್, ದೆಹಲಿ ಸರ್ಕಾರವನ್ನು ಮೃತ ದೇಹಗಳ ಕೆಟ್ಟನಿರ್ವಹಣೆಗಾಗೆ ಖಂಡಿಸಿದೆ. ಅಲ್ಲದೆ ಕೊರೊನಾ ರೋಗಿಗಳಿಗೆ ನೀಡಿದ ಚಿಕಿತ್ಸೆಯು “ಪ್ರಾಣಿಗಳಿಗಿಂತ ಕೆಟ್ಟದಾಗಿದೆ” ಎಂದು ಹೇಳಿದೆ.

ದೆಹಲಿ ಸರ್ಕಾರವೂ ಶವಗಳಿಗೆ ನೀಡಿದ ಕಾಳಜಿಯ ಕೊರತೆಯನ್ನು ಎತ್ತಿ ತೋರಿಸುವ ಮಾಧ್ಯಮ ವರದಿಗಳನ್ನು ಗಮನದಲ್ಲಿಟ್ಟುಕೊಂಡು, ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಎಸ್ ಕೆ ಕೌಲ್ ಮತ್ತು ಎಂ ಆರ್ ಷಾ ಅವರನ್ನೊಳಗೊಂಡ ನ್ಯಾಯಪೀಠ, “ದೆಹಲಿಯ ಪರಿಸ್ಥಿತಿ ಭಯಾನಕ ಹಾಗೂ ಕರುಣಾಜನಕವಾಗಿದೆ” ಎಂದು ಹೇಳಿದೆ.

“ದೆಹಲಿ ಮತ್ತು ಅದರ ಆಸ್ಪತ್ರೆಗಳ ಒಳಗೆ ರೋಗಿಗಳಿಗೆ ನೀಡಿದ ಚಿಕಿತ್ಸೆಯನ್ನು ನೋಡಿ. ರೋಗಿಗಳು ಅಳುತ್ತಿದ್ದಾರೆ, ಯಾರೂ ಅವರನ್ನು ನೋಡಿಕೊಳ್ಳುತ್ತಿಲ್ಲ. ಮಾಧ್ಯಮಗಳು ವರದಿ ಮಾಡಿದಂತೆ ರೋಗಿಗಳ ಸಾವಿನ ನಂತರ ಸಂಬಂಧಿಕರಿಗೆ ಸಹ ಮಾಹಿತಿ ನೀಡಲಾಗುವುದಿಲ್ಲ….” ಎಂದು ಸುಪ್ರೀಂ ಕೋರ್ಟ್ ಹೇಳಿದೆ.

“ಮೃತ ದೇಹಗಳನ್ನು ಈ ರೀತಿ ಪರಿಗಣಿಸಲಾಗುತ್ತಿದ್ದರೆ, ಮೃತ ದೇಹಗಳು ಕಸದಲ್ಲಿ ಕಂಡುಬರುತ್ತವೆ! ಮಾಧ್ಯಮಗಳು ಈ ಶೋಚನೀಯ ಪರಿಸ್ಥಿತಿಗಳನ್ನು ಎತ್ತಿ ತೋರಿಸಿದೆ. ಜನರಿಗೆ ಚಿಕಿತ್ಸೆ ನೀಡುತ್ತಿರುವುದು ಪ್ರಾಣಿಗಳಿಗಿಂತ ಕೆಟ್ಟದಾಗಿದೆ ”ಎಂದು ನ್ಯಾಯಮೂರ್ತಿ ಎಂ ಆರ್ ಷಾ ಹೇಳಿದರು.

ರಾಜ್ಯದಲ್ಲಿ ಸಾಂಕ್ರಮಿಕ ರೋಗದ ಪರೀಕ್ಷೆಗಳು ಕಡಿಮೆ ನಡೆಯುತ್ತಿರುವುದಕ್ಕೆ ಅರವಿಂದ್ ಕೇಜ್ರೀವಾಲ್ ಅವರ ಸರ್ಕಾರವನ್ನು ತರಾಟೆಗೆ ಪಡೆದಿರುವ ನ್ಯಾಯಪೀಠ “ದೆಹಲಿಯಲ್ಲಿ ಪರೀಕ್ಷಾ ಸಂಖ್ಯೆ ಯಾಕೆ ಕಡಿಮೆಯಾಗುತ್ತಿದೆ ಎಂದು ನಮಗೆ ತಿಳಿಸಿ” ಎಂದು ನ್ಯಾಯಮೂರ್ತಿ ಎಂ ಆರ್ ಷಾ ಸರ್ಕಾರಕ್ಕೆ ಹಾಜರಾಗುವಂತೆ ಹೇಳಿದರು.

“ಪರೀಕ್ಷೆಯ ಸಂಖ್ಯೆಯನ್ನು ಹೆಚ್ಚಿಸಲು ನಾವು ರಾಜ್ಯವನ್ನು ಕೇಳುತ್ತಿದ್ದೇವೆ, ಅಗತ್ಯವಿರುವವರಿಗೆ ಪರೀಕ್ಷೆಯನ್ನು ನಿರಾಕರಿಸಬಾರದು …” ಎಂದು ನ್ಯಾಯಮೂರ್ತಿ ಕೌಲ್ ಹೇಳಿದರು.

ನ್ಯಾಯಪೀಠವು ಇತರ ವರದಿಗಳನ್ನು ಉಲ್ಲೇಖಿಸಿ “ಕೊರೊನಾ ವೈರಸ್ ನಿಂದ ಬಳಲುತ್ತಿರುವ ರೋಗಿಗಳು ಆಸ್ಪತ್ರೆಯಲ್ಲಿ ಪ್ರವೇಶ ಪಡೆಯಲು ಅಲ್ಲಿಂದಿಲ್ಲಿಗೆ ಓಡಾಡುತ್ತಿದ್ದಾರೆ, ಆದರೆ ಸರ್ಕಾರಿ ಆಸ್ಪತ್ರೆಗಳಲ್ಲಿ ವಿವಿಧ ಹಾಸಿಗೆಗಳು ಖಾಲಿ ಇವೆ …”

“ಮೂಲಸೌಕರ್ಯ ಇರಬೇಕು, ಹಾಸಿಗೆಗಳು ಇರಬೇಕು, ರೋಗಿಗಳನ್ನು ನೋಡಿಕೊಳ್ಳುತ್ತಿಲ್ಲ, ಇದು ಶೋಚನೀಯ ಸ್ಥಿತಿ” ಎಂದು ನ್ಯಾಯಮೂರ್ತಿ ಷಾ ಹೇಳಿದರು.

ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರ ಮತ್ತು ವಿವಿಧ ರಾಜ್ಯಗಳಿಂದ ರೋಗಿಗಳಿಗೆ ನೀಡಲಾಗುವ ಚಿಕಿತ್ಸೆ, ಮೃತದೇಹಗಳನ್ನು ನಿರ್ವಹಿಸುವ ಬಗ್ಗೆ ಸ್ವಯಂ ಪ್ರೇರಿತವಾಗಿ ಪ್ರತಿಕ್ರಿಯೆಗಳನ್ನು ಕೋರಿತು.

ಕೊರೊನಾ ರೋಗಿಗಳು ಮತ್ತು ಸೋಂಕಿತ ವ್ಯಕ್ತಿಗಳ ಮೃತ ದೇಹಗಳ ಬಗ್ಗೆ ಕೈಗೊಂಡ ಕ್ರಮಗಳ ಕುರಿತು ಜೂನ್ 17 ರೊಳಗೆ ಉತ್ತರಿಸುವಂತೆ ಸುಪ್ರೀಂ ಕೋರ್ಟ್  ಕೇಂದ್ರ ಸರ್ಕಾರವನ್ನು ಕೋರಿದೆ.


ಓದಿ: ಜುಲೈ 31 ರೊಳಗೆ ದೆಹಲಿಯಲ್ಲಿ 5.5 ಲಕ್ಷ ಜನರಿಗೆ ಕೊರೊನಾ ಸೋಂಕು!


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...