Homeಮುಖಪುಟಜಾತಿವಾದಿ ಶಿಕ್ಷಕರ ಗುಂಪಿನ ಮಸಲತ್ತು : ಮಹಿಳಾ ಡಿಡಿಪಿಐ ಎತ್ತಂಗಡಿಗೆ ನಡೆದಿದೆಯಾ ಕಸರತ್ತು!

ಜಾತಿವಾದಿ ಶಿಕ್ಷಕರ ಗುಂಪಿನ ಮಸಲತ್ತು : ಮಹಿಳಾ ಡಿಡಿಪಿಐ ಎತ್ತಂಗಡಿಗೆ ನಡೆದಿದೆಯಾ ಕಸರತ್ತು!

- Advertisement -
- Advertisement -

ತುಮಕೂರು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಡಿಡಿಪಿಐ ಕಾಮಾಕ್ಷಮ್ಮ ಅವರ ಎತ್ತಂಗಡಿಗೆ ಜಾತಿವಾದಿ ‘ರಾಜಕಾರಣಿ ಶಿಕ್ಷಕರ ಗುಂಪು’ ಲಾಬಿ ನಡೆಸಿದೆ. ಡಿಡಿಪಿಐ ತಮ್ಮ ತಾಳಕ್ಕೆ ತಕ್ಕಂತೆ ಕುಣಿಯಬೇಕು. ಹೇಳಿದಂತೆ ಕೇಳಬೇಕು ಎಂಬುದೇ ಈ ಶಿಕ್ಷಕರ ಗುಂಪಿನ ಉದ್ದೇಶ. ಕಾರ್ಯಸಾಧನೆಗೆ ಯಾರ ಕಾಲನ್ನಾದರೂ ಹಿಡಿಯಬಲ್ಲರಾದ ಇವರು ತಮ್ಮ ಉದ್ದೇಶ ಈಡೇರದಿದ್ದರೆ ಯಾರ ಕಾಲೆಳೆಸಲು ಸಹ ಸಿದ್ಧರು.

ಶಿಕ್ಷಣ ಇಲಾಖೆಯಲ್ಲಿ ಶಿಕ್ಷಕರ ವರ್ಗಾವಣೆಯನ್ನು ಕೇಂದ್ರೀಕರಣಗೊಳಿಸಿದೆ. ಕೌನ್ಸಿಲ್ ಮೂಲಕವೇ ಶಿಕ್ಷಕರ ವರ್ಗಾವಣೆ ನಡೆಯುತ್ತದೆ. ವಸ್ತುಸ್ಥಿತಿ ಹೀಗಿದ್ದರೂ ವರ್ಗಾವಣೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಡಿಡಿಪಿಐ ಭ್ರಷ್ಟಾಚಾರ ನಡೆಸುತ್ತಿದ್ದಾರೆ ಎಂಬ ವದಂತಿಯನ್ನು ಹಬ್ಬಿಸಲಾಗಿದೆ.

ಮೇಲಧಿಕಾರಿಗಳು ಅಧಿಕಾರ ನೀಡಿದರೆ ಮಾತ್ರ ಡಿಡಿಪಿಐಗೆ ಶಿಕ್ಷಕರ ವರ್ಗಾವಣೆ ಮಾಡುವ ಅಧಿಕಾರವಿದೆ. ವಿಶೇಷ ಪ್ರಕರಣಗಳಲ್ಲಿಯೂ ಮೇಲಿನ ಆದೇಶವಿಲ್ಲದೆ ಏನೂ ಮಾಡುವ ಹಾಗಿಲ್ಲ. ಆದರೆ ಶಿಕ್ಷಕರ ಡೆಪ್ಯೂಟೇಶನ್ ಮಾಡುವ ಅಧಿಕಾರ ಡಿಡಿಪಿಐಗೆ ಇದೆ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ. ಆದರೆ ಕೆಲವು ಜಾತಿವಾದಿ ಪಟ್ಟಭದ್ರ ಶಿಕ್ಷಕರ ಗುಂಪು ತಾವು ಹೇಳಿದಂತೆ ಕೇಳುತ್ತಿಲ್ಲ ಎಂಬ ಕಾರಣಕ್ಕೆ ಡಿಡಿಪಿಐ ಕಾಮಾಕ್ಷಮ್ಮ ವರ್ಗಾವಣೆಗೆ ಮಸಲತ್ತು ನಡೆಸಿದೆ.

ಕಾಮಾಕ್ಷಮ್ಮ

ಕಾಮಾಕ್ಷಮ್ಮ ಅವರು ಈ ಹಿಂದೆ ಬಾಗಲಕೋಟೆಯಲ್ಲಿ ಕೆಲಸ ಮಾಡಿಬಂದವರು. ಬಾಗಲಕೋಟೆಯಲ್ಲಿ ಉತ್ತಮ ಕೆಲಸ ಮಾಡಿ ಹೆಸರು ಮಾಡಿದ್ದರು. ತುಮಕೂರಿಗೆ ಬಂದ ಮೇಲೆ ಜಾತಿವಾದಿ ರಾಜಕಾರಣಿ ಶಿಕ್ಷಕರ ಗುಂಪು ಡಿಡಿಪಿಐ ವಿರುದ್ಧ ವದಂತಿಗಳನ್ನು ಹಬ್ಬಿಸುತ್ತಲೇ ಇದೆ. ಮಹಿಳಾ ಅಧಿಕಾರಿಯನ್ನು ಎತ್ತಂಗಡಿ ಮಾಡಿಸಿ ತಮ್ಮ ಮಾತು ಕೇಳುವವರನ್ನು ತಂದು ಹಾಕಿಸಿಕೊಳ್ಳುವುದು ಈ ಗುಂಪಿನ ಉದ್ದೇಶವಾಗಿದೆ ಎಂದು ಹೇಳಾಗುತ್ತಿದೆ.

ಇದೀಗ ಮತ್ತೊಂದು ಸುದ್ದಿ ಹಬ್ಬಿದೆ. ತುಮಕೂರಿನ ಡಾ. ರಾಧಾಕೃಷ್ಣನ್ ರಸ್ತೆಯ ಸೋಮೇಶ್ವರ ಮುಖ್ಯರಸ್ತೆಯ ತಿರುವಿನಲ್ಲಿರುವ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಕಚೇರಿ ಆವರಣದಲ್ಲಿ ದೊಡ್ಡದೊಂದು ಗುಂಡಿ ತೆಗೆಯಲಾಗಿದೆ. ಈ ಮಾಹಿತಿ ಜಿಲ್ಲಾ ಪಂಚಾಯಿತಿ ಸಿಇಒ ಶುಭ ಕಲ್ಯಾಣ್ ಅವರಿಗೆ ತಲುಪಿ ರಾತ್ರಿ 9 ಗಂಟೆಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಅಷ್ಟೊತ್ತಿಗೆ ಡಿಡಿಪಿಐ ಕಾಮಾಕ್ಷಮ್ಮ ಅವರ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಹಾಗಾಗಿ ಮಹಿಳಾ ಅಧಿಕಾರಿಯ ಪತಿಗೆ ಕರೆ ಮಾಡಿದ ಸಿಐಒ ಸ್ಥಳಕ್ಕೆ ಕರೆಸಿಕೊಂಡು ವಿವರ ಕೇಳಿದ್ದಾರೆ. ಕಸ ಮುಚ್ಚಲು ಗುಂಡಿ ತೋಡಿ ಎಂದು ನಾನೇ ಹೇಳಿದ್ದ ಎಂದು ಡಿಡಿಪಿಐ ಒಪ್ಪಿಕೊಂಡಿದ್ದಾರೆ. ಹಾಗಾಗಿ ಸಿಇಓ ಶುಭಕಲ್ಯಾಣ್ ಗುಂಡಿಯನ್ನು ಸೋಮವಾರದವರೆಗೆ ಮುಚ್ಚಬಾರದು. ಸ್ಧಳದಲ್ಲಿ ಸಿಸಿ ಕ್ಯಾಮೆರ ಅವಳವಡಿಸಬೇಕೆಂದು ಸೂಚಿಸಿ ಹೋಗಿದ್ದಾರೆ.

ಈ ಸುದ್ದಿಗೆ ಈಗ ರೆಕ್ಕೆಪುಕ್ಕಗಳು ಬಂದಿವೆ. ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ಕೆಲ ಫೈಲ್ ಗಳನ್ನು ಮಣ್ಣಿನಲ್ಲಿ ಮುಚ್ಚಿಹಾಕಲು ಡಿಡಿಪಿಐ ಯತ್ನಿಸಿದ್ದಾರೆ ಎಂಬ ಆರೋಪ ತೇಲಿಬಿಡಲಾಗಿದೆ. ಗುಂಡಿ ತೋಡಿರುವುದು ಅನುಮಾನ ಹುಟ್ಟುಹಾಕುತ್ತದೆ ಸರಿ. ಆದರೆ ಎಂಥಾ ಮೂರ್ಖರು ಕೂಡ ದಾಖಲೆಗಳನ್ನು ಕಣ್ಣಮುಂದೆಯೇ ಹೂತು ಹಾಕುವಷ್ಟು ಅಧಿಕಾರಿಗಳು ದಡ್ಡರಲ್ಲ. ಹಾಗಾಗಿ ಡಿಡಿಪಿಐ ಅವರನ್ನು ವರ್ಗಾವಣೆ ಮಾಡಿಸುವುದೇ ಈ ಕುತಂತ್ರದ ಹಿಂದಿನ ಪ್ರಮುಖ ಉದ್ದೇಶವಾಗಿದೆ ಎಂದು ಹೇಳಲಾಗುತ್ತಿದೆ.

ಗುಬ್ಬಿಯ ತಹಶೀಲ್ದಾರ್ ಮಮತ, ಜಿಲ್ಲೆಯ ಆರೋಗ್ಯಾಧಿಕಾರಿ ಚಂದ್ರಿಕಾ ಎತ್ತಂಗಡಿಯಾದ ಮೇಲೆ ಈಗ ಡಿಡಿಪಿಐ ಕಾಮಾಕ್ಷಮ್ಮ ಅವರನ್ನು ವರ್ಗಾವಣೆ ಮಾಡಿಸಲು ಪಿತೂರು ನಡೆದಿದೆ. ಅತ್ಯಂತ ಹಿಂದುಳಿದ ಸವಿತಾ ಸಮಾಜಕ್ಕೆ ಸೇರಿರುವ ಕಾಮಾಕ್ಷಮ್ಮ ಅವರ ಕೈಕೆಳಗೆ ಕೆಲಸ ಮಾಡಲು ಒಪ್ಪದ ಜಾತಿವಾದಿ ಮನಸ್ಸುಗಳು ಅನಗತ್ಯವಾಗಿ ಹುಯ್ಯಿಲೆಬ್ಬಿಸಿ ಮಹಿಳಾ ಅಧಿಕಾರಿಯ ನೈತಿಕತೆಯನ್ನು ಕುಗ್ಗಿಸುವ ಪ್ರಯತ್ನಗಳು ನಡೆಯುತ್ತಿರುವುದು ಶೋಚನೀಯ ಸಂಗತಿ ಎಂದು ಹೆಸರು ಹೇಳದ ಅಧಿಕಾರಿಯೊಬ್ಬರು ಹೇಳಿದ್ದಾರೆ.


ಮತ್ತಷ್ಟು ಸುದ್ದಿಗಳು

ಬೋಧನಾ ಕೆಲಸದಿಂದ ವಜಾ: ಬದುಕು ಸಾಗಿಸಲು ಬಾಳೆಹಣ್ಣು ಮಾರಾಟ ಆರಂಭಿಸಿದ ಶಿಕ್ಷಕ!

BJP ಮುಖಂಡನ ವಿರುದ್ಧ ಲೈಂಗಿಕ ದೌರ್ಜನ್ಯ ದೂರು; ಮಾರಕಾಸ್ತ್ರಗಳಿಂದ JDS ಕಾರ್ಯಕರ್ತರ ಮೇಲೆ ಹಲ್ಲೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. DDPI ಕಾಮಾಕ್ಷಮ್ಮನವರು ಹೆಣ್ಣು ಎಂಬ ಕಾರಣಕ್ಕೆ, ಕೆಲವು ಪಟ್ಟಭದ್ರ ಹಿತಾಸಕ್ತಿ, ಜಾತಿವಾದಿ ಶಿಕ್ಷಕರ ಮತ್ತು ಕಾಣದ ಕೈಗಳ ಮಸಲತ್ತಿನಿಂದ ವರ್ಗಾವಣೆ ಮಾಡುತ್ತಿರುವುದು ಪ್ರಜಾಪ್ರಭುತ್ವ ತತ್ವ ವಿ ೋಧಿ.

  2. ಇಂತಹ ಮನುವಾದಿ ಶಿಕ್ಷಕರು ಮಕ್ಕಳಿಗೆ ಬೋದಿಸುವುದಾದರೂ ಏನನ್ನು? ವಿದ್ಯೆ ಮನುಷ್ಯನನ್ನು ವಿವೇಕಿಯನ್ನಾಗಿಸಬೇಕು. ಆದರಿಲ್ಲಿ ಶಿಕ್ಷಕರೇ ಜಾತೀವಾದಿಗಳಾಗಿದ್ದಾರೆ. ಇದು ನಮ್ಮ ದುರಂತ. ಜಾತೀಯತೆ ಎಂಬ ರೋಗಾಣು ನಮ್ಮ ದೇಶದಿಂದ ತೊಲಗುವುದೇ ಇಲ್ಲವೇನೋ?

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...