Homeಮುಖಪುಟಜಾತಿವಾದಿ ಶಿಕ್ಷಕರ ಗುಂಪಿನ ಮಸಲತ್ತು : ಮಹಿಳಾ ಡಿಡಿಪಿಐ ಎತ್ತಂಗಡಿಗೆ ನಡೆದಿದೆಯಾ ಕಸರತ್ತು!

ಜಾತಿವಾದಿ ಶಿಕ್ಷಕರ ಗುಂಪಿನ ಮಸಲತ್ತು : ಮಹಿಳಾ ಡಿಡಿಪಿಐ ಎತ್ತಂಗಡಿಗೆ ನಡೆದಿದೆಯಾ ಕಸರತ್ತು!

- Advertisement -
- Advertisement -

ತುಮಕೂರು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಡಿಡಿಪಿಐ ಕಾಮಾಕ್ಷಮ್ಮ ಅವರ ಎತ್ತಂಗಡಿಗೆ ಜಾತಿವಾದಿ ‘ರಾಜಕಾರಣಿ ಶಿಕ್ಷಕರ ಗುಂಪು’ ಲಾಬಿ ನಡೆಸಿದೆ. ಡಿಡಿಪಿಐ ತಮ್ಮ ತಾಳಕ್ಕೆ ತಕ್ಕಂತೆ ಕುಣಿಯಬೇಕು. ಹೇಳಿದಂತೆ ಕೇಳಬೇಕು ಎಂಬುದೇ ಈ ಶಿಕ್ಷಕರ ಗುಂಪಿನ ಉದ್ದೇಶ. ಕಾರ್ಯಸಾಧನೆಗೆ ಯಾರ ಕಾಲನ್ನಾದರೂ ಹಿಡಿಯಬಲ್ಲರಾದ ಇವರು ತಮ್ಮ ಉದ್ದೇಶ ಈಡೇರದಿದ್ದರೆ ಯಾರ ಕಾಲೆಳೆಸಲು ಸಹ ಸಿದ್ಧರು.

ಶಿಕ್ಷಣ ಇಲಾಖೆಯಲ್ಲಿ ಶಿಕ್ಷಕರ ವರ್ಗಾವಣೆಯನ್ನು ಕೇಂದ್ರೀಕರಣಗೊಳಿಸಿದೆ. ಕೌನ್ಸಿಲ್ ಮೂಲಕವೇ ಶಿಕ್ಷಕರ ವರ್ಗಾವಣೆ ನಡೆಯುತ್ತದೆ. ವಸ್ತುಸ್ಥಿತಿ ಹೀಗಿದ್ದರೂ ವರ್ಗಾವಣೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಡಿಡಿಪಿಐ ಭ್ರಷ್ಟಾಚಾರ ನಡೆಸುತ್ತಿದ್ದಾರೆ ಎಂಬ ವದಂತಿಯನ್ನು ಹಬ್ಬಿಸಲಾಗಿದೆ.

ಮೇಲಧಿಕಾರಿಗಳು ಅಧಿಕಾರ ನೀಡಿದರೆ ಮಾತ್ರ ಡಿಡಿಪಿಐಗೆ ಶಿಕ್ಷಕರ ವರ್ಗಾವಣೆ ಮಾಡುವ ಅಧಿಕಾರವಿದೆ. ವಿಶೇಷ ಪ್ರಕರಣಗಳಲ್ಲಿಯೂ ಮೇಲಿನ ಆದೇಶವಿಲ್ಲದೆ ಏನೂ ಮಾಡುವ ಹಾಗಿಲ್ಲ. ಆದರೆ ಶಿಕ್ಷಕರ ಡೆಪ್ಯೂಟೇಶನ್ ಮಾಡುವ ಅಧಿಕಾರ ಡಿಡಿಪಿಐಗೆ ಇದೆ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ. ಆದರೆ ಕೆಲವು ಜಾತಿವಾದಿ ಪಟ್ಟಭದ್ರ ಶಿಕ್ಷಕರ ಗುಂಪು ತಾವು ಹೇಳಿದಂತೆ ಕೇಳುತ್ತಿಲ್ಲ ಎಂಬ ಕಾರಣಕ್ಕೆ ಡಿಡಿಪಿಐ ಕಾಮಾಕ್ಷಮ್ಮ ವರ್ಗಾವಣೆಗೆ ಮಸಲತ್ತು ನಡೆಸಿದೆ.

ಕಾಮಾಕ್ಷಮ್ಮ

ಕಾಮಾಕ್ಷಮ್ಮ ಅವರು ಈ ಹಿಂದೆ ಬಾಗಲಕೋಟೆಯಲ್ಲಿ ಕೆಲಸ ಮಾಡಿಬಂದವರು. ಬಾಗಲಕೋಟೆಯಲ್ಲಿ ಉತ್ತಮ ಕೆಲಸ ಮಾಡಿ ಹೆಸರು ಮಾಡಿದ್ದರು. ತುಮಕೂರಿಗೆ ಬಂದ ಮೇಲೆ ಜಾತಿವಾದಿ ರಾಜಕಾರಣಿ ಶಿಕ್ಷಕರ ಗುಂಪು ಡಿಡಿಪಿಐ ವಿರುದ್ಧ ವದಂತಿಗಳನ್ನು ಹಬ್ಬಿಸುತ್ತಲೇ ಇದೆ. ಮಹಿಳಾ ಅಧಿಕಾರಿಯನ್ನು ಎತ್ತಂಗಡಿ ಮಾಡಿಸಿ ತಮ್ಮ ಮಾತು ಕೇಳುವವರನ್ನು ತಂದು ಹಾಕಿಸಿಕೊಳ್ಳುವುದು ಈ ಗುಂಪಿನ ಉದ್ದೇಶವಾಗಿದೆ ಎಂದು ಹೇಳಾಗುತ್ತಿದೆ.

ಇದೀಗ ಮತ್ತೊಂದು ಸುದ್ದಿ ಹಬ್ಬಿದೆ. ತುಮಕೂರಿನ ಡಾ. ರಾಧಾಕೃಷ್ಣನ್ ರಸ್ತೆಯ ಸೋಮೇಶ್ವರ ಮುಖ್ಯರಸ್ತೆಯ ತಿರುವಿನಲ್ಲಿರುವ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಕಚೇರಿ ಆವರಣದಲ್ಲಿ ದೊಡ್ಡದೊಂದು ಗುಂಡಿ ತೆಗೆಯಲಾಗಿದೆ. ಈ ಮಾಹಿತಿ ಜಿಲ್ಲಾ ಪಂಚಾಯಿತಿ ಸಿಇಒ ಶುಭ ಕಲ್ಯಾಣ್ ಅವರಿಗೆ ತಲುಪಿ ರಾತ್ರಿ 9 ಗಂಟೆಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಅಷ್ಟೊತ್ತಿಗೆ ಡಿಡಿಪಿಐ ಕಾಮಾಕ್ಷಮ್ಮ ಅವರ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಹಾಗಾಗಿ ಮಹಿಳಾ ಅಧಿಕಾರಿಯ ಪತಿಗೆ ಕರೆ ಮಾಡಿದ ಸಿಐಒ ಸ್ಥಳಕ್ಕೆ ಕರೆಸಿಕೊಂಡು ವಿವರ ಕೇಳಿದ್ದಾರೆ. ಕಸ ಮುಚ್ಚಲು ಗುಂಡಿ ತೋಡಿ ಎಂದು ನಾನೇ ಹೇಳಿದ್ದ ಎಂದು ಡಿಡಿಪಿಐ ಒಪ್ಪಿಕೊಂಡಿದ್ದಾರೆ. ಹಾಗಾಗಿ ಸಿಇಓ ಶುಭಕಲ್ಯಾಣ್ ಗುಂಡಿಯನ್ನು ಸೋಮವಾರದವರೆಗೆ ಮುಚ್ಚಬಾರದು. ಸ್ಧಳದಲ್ಲಿ ಸಿಸಿ ಕ್ಯಾಮೆರ ಅವಳವಡಿಸಬೇಕೆಂದು ಸೂಚಿಸಿ ಹೋಗಿದ್ದಾರೆ.

ಈ ಸುದ್ದಿಗೆ ಈಗ ರೆಕ್ಕೆಪುಕ್ಕಗಳು ಬಂದಿವೆ. ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ಕೆಲ ಫೈಲ್ ಗಳನ್ನು ಮಣ್ಣಿನಲ್ಲಿ ಮುಚ್ಚಿಹಾಕಲು ಡಿಡಿಪಿಐ ಯತ್ನಿಸಿದ್ದಾರೆ ಎಂಬ ಆರೋಪ ತೇಲಿಬಿಡಲಾಗಿದೆ. ಗುಂಡಿ ತೋಡಿರುವುದು ಅನುಮಾನ ಹುಟ್ಟುಹಾಕುತ್ತದೆ ಸರಿ. ಆದರೆ ಎಂಥಾ ಮೂರ್ಖರು ಕೂಡ ದಾಖಲೆಗಳನ್ನು ಕಣ್ಣಮುಂದೆಯೇ ಹೂತು ಹಾಕುವಷ್ಟು ಅಧಿಕಾರಿಗಳು ದಡ್ಡರಲ್ಲ. ಹಾಗಾಗಿ ಡಿಡಿಪಿಐ ಅವರನ್ನು ವರ್ಗಾವಣೆ ಮಾಡಿಸುವುದೇ ಈ ಕುತಂತ್ರದ ಹಿಂದಿನ ಪ್ರಮುಖ ಉದ್ದೇಶವಾಗಿದೆ ಎಂದು ಹೇಳಲಾಗುತ್ತಿದೆ.

ಗುಬ್ಬಿಯ ತಹಶೀಲ್ದಾರ್ ಮಮತ, ಜಿಲ್ಲೆಯ ಆರೋಗ್ಯಾಧಿಕಾರಿ ಚಂದ್ರಿಕಾ ಎತ್ತಂಗಡಿಯಾದ ಮೇಲೆ ಈಗ ಡಿಡಿಪಿಐ ಕಾಮಾಕ್ಷಮ್ಮ ಅವರನ್ನು ವರ್ಗಾವಣೆ ಮಾಡಿಸಲು ಪಿತೂರು ನಡೆದಿದೆ. ಅತ್ಯಂತ ಹಿಂದುಳಿದ ಸವಿತಾ ಸಮಾಜಕ್ಕೆ ಸೇರಿರುವ ಕಾಮಾಕ್ಷಮ್ಮ ಅವರ ಕೈಕೆಳಗೆ ಕೆಲಸ ಮಾಡಲು ಒಪ್ಪದ ಜಾತಿವಾದಿ ಮನಸ್ಸುಗಳು ಅನಗತ್ಯವಾಗಿ ಹುಯ್ಯಿಲೆಬ್ಬಿಸಿ ಮಹಿಳಾ ಅಧಿಕಾರಿಯ ನೈತಿಕತೆಯನ್ನು ಕುಗ್ಗಿಸುವ ಪ್ರಯತ್ನಗಳು ನಡೆಯುತ್ತಿರುವುದು ಶೋಚನೀಯ ಸಂಗತಿ ಎಂದು ಹೆಸರು ಹೇಳದ ಅಧಿಕಾರಿಯೊಬ್ಬರು ಹೇಳಿದ್ದಾರೆ.


ಮತ್ತಷ್ಟು ಸುದ್ದಿಗಳು

ಬೋಧನಾ ಕೆಲಸದಿಂದ ವಜಾ: ಬದುಕು ಸಾಗಿಸಲು ಬಾಳೆಹಣ್ಣು ಮಾರಾಟ ಆರಂಭಿಸಿದ ಶಿಕ್ಷಕ!

BJP ಮುಖಂಡನ ವಿರುದ್ಧ ಲೈಂಗಿಕ ದೌರ್ಜನ್ಯ ದೂರು; ಮಾರಕಾಸ್ತ್ರಗಳಿಂದ JDS ಕಾರ್ಯಕರ್ತರ ಮೇಲೆ ಹಲ್ಲೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. DDPI ಕಾಮಾಕ್ಷಮ್ಮನವರು ಹೆಣ್ಣು ಎಂಬ ಕಾರಣಕ್ಕೆ, ಕೆಲವು ಪಟ್ಟಭದ್ರ ಹಿತಾಸಕ್ತಿ, ಜಾತಿವಾದಿ ಶಿಕ್ಷಕರ ಮತ್ತು ಕಾಣದ ಕೈಗಳ ಮಸಲತ್ತಿನಿಂದ ವರ್ಗಾವಣೆ ಮಾಡುತ್ತಿರುವುದು ಪ್ರಜಾಪ್ರಭುತ್ವ ತತ್ವ ವಿ ೋಧಿ.

  2. ಇಂತಹ ಮನುವಾದಿ ಶಿಕ್ಷಕರು ಮಕ್ಕಳಿಗೆ ಬೋದಿಸುವುದಾದರೂ ಏನನ್ನು? ವಿದ್ಯೆ ಮನುಷ್ಯನನ್ನು ವಿವೇಕಿಯನ್ನಾಗಿಸಬೇಕು. ಆದರಿಲ್ಲಿ ಶಿಕ್ಷಕರೇ ಜಾತೀವಾದಿಗಳಾಗಿದ್ದಾರೆ. ಇದು ನಮ್ಮ ದುರಂತ. ಜಾತೀಯತೆ ಎಂಬ ರೋಗಾಣು ನಮ್ಮ ದೇಶದಿಂದ ತೊಲಗುವುದೇ ಇಲ್ಲವೇನೋ?

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...