Homeನಿಜವೋ ಸುಳ್ಳೋದೆವ್ವವಿಲ್ಲ, ಭೂತವಿಲ್ಲ, ಇಲ್ಲಿ ಯಾರಿಲ್ಲ: ಆದರೂ ಜಿಮ್ ಸಾಮಾಗ್ರಿ ತಾನೇ ಕೆಲಸ ಮಾಡುತ್ತದೆ!

ದೆವ್ವವಿಲ್ಲ, ಭೂತವಿಲ್ಲ, ಇಲ್ಲಿ ಯಾರಿಲ್ಲ: ಆದರೂ ಜಿಮ್ ಸಾಮಾಗ್ರಿ ತಾನೇ ಕೆಲಸ ಮಾಡುತ್ತದೆ!

- Advertisement -
- Advertisement -

ಉತ್ತರ ಪ್ರದೇಶದ ಝಾನ್ಸಿಯ ಸಾರ್ವಜನಿಕ ಉದ್ಯಾನವನವೊಂದರಲ್ಲಿ ಜಿಮ್ ಮಾಡಲು ಅಳವಡಿಸಲಾದ ಉಪಕರಣವೊಂದು ಯಾರೂ ಅದನ್ನು ಬಳಸದಿದ್ದರೂ ಸಹ ತನ್ನಿಂದ ತಾನೇ ಕೆಲಸ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಬಹಳಷ್ಟು ಜನರು ಇದು ದೆವ್ವ, ಭೂತ ಎಂದು ಟೈಟಲ್ ಕೊಟ್ಟು ಅದನ್ನು ಫೇಸ್ ಬುಕ್, ವಾಟ್ಸಾಪ್ ಮತ್ತು ಟ್ವಿಟ್ಟರ್ ನಲ್ಲಿ ಷೇರ್ ಮಾಡಿದ್ದಾರೆ. ಸ್ಥಳಕ್ಕೆ ಹೋಗಿ ಪರಿಶೀಲಿಸಿದ ಒಂದಷ್ಟು ಜನರು ಭಯಭೀತರಾಗಿ ಝಾನ್ಸಿ ಪೊಲೀಸರಿಗೆ ಕರೆ ಮಾಡಿ ವಿಷಯ ಮುಟ್ಟಿಸಿದ್ದಾರೆ.

ಅದೇ ಸಮಯಕ್ಕೆ ಹಿಂದಿ ಪತ್ರಿಕೆ ಅಮರ್ ಉಜಾಲ “ಯಾರೋ ಇದನ್ನು ಬಳಸಿದ ನಂತರ ಕಣ್ಣಿಗೆ ಕಾಣದ ಸಣ್ಣ ದಾರವನ್ನು ಕಟ್ಟಿ ಹೋಗಿದ್ದಾರೆ. ಹಾಗಾಗಿ ಅದು ಸ್ವಯಂ ಕೆಲಸ ಮಾಡುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ ಎಂದು ವರದಿ ಮಾಡಿದೆ.

ನಂತರ ಸ್ವತಃ ಪೊಲೀಸರೇ ಆ ಪಾರ್ಕ್ ಗೆ ಭೇಟಿ ನೀಡಿದಾಗ ಅವರಿಗೆ ಆಶ್ಚರ್ಯ ಕಾದಿತ್ತು. ಆಗಲೂ ಆ ಜಿಮ್ ಉಪಕರಣ ಕೆಲಸ ಮಾಡುತ್ತಲೇ ಇತ್ತು. ಪೊಲೀಸರು ಸಹ ಅದರ ವಿಡಿಯೋ ರೆಕಾರ್ಡಿಂಗ್ ಮಾಡಿಕೊಂಡಿದ್ದಾರೆ.

ನಂತರ ಪರಿಶೀಲಿಸಲಾಗಿ ಅಲ್ಲಿ ಯಾವ ದೆವ್ವ, ಭೂತವೂ ಇಲ್ಲ ಮತ್ತು ಸಣ್ಣದಾರವನ್ನು ಸಹ ಕಟ್ಟಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಅಮರ್ ಉಜಾಲ ಪತ್ರಿಕೆಯ ವರದಿಗ ಝಾನ್ಸಿ ಪೊಲೀಸರು ಪ್ರತಿಕ್ರಿಯೆ ನೀಡಿ ಯಾವುದೇ ವದಂತಿಗಳನ್ನು ಹಬ್ಬಿಸಬೇಡಿ ಎಂದು ತಾಕೀತು ಮಾಡಿದ್ದಾರೆ.

ನಂತರ ಪೊಲೀಸರು ಯಾರು ಇಲ್ಲಿದಿದ್ದರ ಆ ಯಂತ್ರ ಕೆಲಸ ಮಾಡಲು ಕಾರಣವೇನು ಎಂಬುದನ್ನು ಕಂಡುಹಿಡಿದಿದ್ದಾರೆ. ಯಾರೋ ಕಿಡಿಗೇಡಿ ಈ ಜಿಮ್ ಯಂತ್ರ ಬಳಸುವಾಗ ಅದಕ್ಕೆ ಹೆಚ್ಚಿನ ಗ್ರೀಸ್ ಬಳಿದಿದ್ದಾರೆ. ಅಲ್ಲದೇ ಅದನ್ನು ಜೋರಾಗಿ ಚಲಸುವಂತೆ ಮಾಡಿ ಅಲ್ಲಿಂದ ಪರಾರಿಯಾಗಿದ್ದಾರೆ. ದೊಡ್ಡ ಪ್ರಮಾಣದಲ್ಲಿ ಗ್ರೀಸ್ ಬಳಸಿದ್ದರಿಂದ ಅದು ಕೆಲಸ ಮಾಡುತ್ತಲೇ ಇದೆ ಎಂಬುದನ್ನು ಪೊಲೀಸರು ಕಂಡುಕೊಂಡಿದ್ದಾರೆ.

ಅಲ್ಲದೇ ಈ ಕಿಡಿಗೇಡಿ ಕೃತ್ಯ ಮಾಡಿದವರು ಖಂಡಿತ ಹಿಡಿದು ಶಿಕ್ಷಿಸುತ್ತೇವೆ ಎಂದು ಝಾನ್ಸಿಯ ಹಿರಿಯ ಪೊಲೀಸ್ ಅಧಿಕಾರಿ ರಾಹುಲ್ ಶ್ರೀವತ್ಸವ್ ಟ್ವೀಟ್ ಮಾಡಿದ್ದಾರೆ. ಅಲ್ಲಿಗೆ ದೆವ್ವ ಭೂತದ ಕತೆ ಕಟ್ಟು ಕತೆ ಎಂಬುದು ಸ್ಪಷ್ಟವಾಗಿದೆ.


ಇದನ್ನೂ ಓದಿ: ಮೌನ ಮೋದಿ ಕಾಣೆಯಾಗಿದ್ದಾರೆ: ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್ 
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...