Homeಮುಖಪುಟಎನ್‌ಡಿಟಿವಿ ಪತ್ರಕರ್ತೆ ’ನಿಧಿ ರಾಝ್‌ದನ್’ ಹಾರ್ವರ್ಡ್ ವಿವಿ‍ಯಲ್ಲಿ ಪ್ರೊಫೆಸರ್ !

ಎನ್‌ಡಿಟಿವಿ ಪತ್ರಕರ್ತೆ ’ನಿಧಿ ರಾಝ್‌ದನ್’ ಹಾರ್ವರ್ಡ್ ವಿವಿ‍ಯಲ್ಲಿ ಪ್ರೊಫೆಸರ್ !

- Advertisement -
- Advertisement -

ಪತ್ರಕರ್ತೆ ನಿಧಿ ರಾಝ್‌ದನ್ ಎನ್‌ಡಿಟಿವಿ ತೊರೆಯಲು ನಿರ್ಧರಿಸಿದ್ದು, ಹಾರ್ವರ್ಡ್ ವಿಶ್ವವಿದ್ಯಾಲಯದ ಆಟ್ರ್ಸ್ ಎಂಡ್ ಸಾಯನ್ಸಸ್ ವಿಭಾಗದಲ್ಲಿ ಪತ್ರಿಕೋದ್ಯಮ ಅಸೋಸಿಯೇಟ್ ಫ್ರೊಫೆಸರ್ ಆಗಿ ಮುಂದೆ ಕಾರ್ಯನಿರ್ವಹಿಸುವುದಾಗಿ ನಿಧಿ ಹೇಳಿದ್ದಾರೆ.

‘ಇಂಟರ್ನ್ಯಾಷನಲ್ ಪ್ರೆಸ್ ಇನ್ಸ್ಟಿಟ್ಯೂಟ್ ಪ್ರಶಸ್ತಿ’ ಪಡೆದ ಪತ್ರಕರ್ತೆ ನಿಧಿ ರಾಝ್‌ದನ್ 21 ವರ್ಷಗಳ ಕಾಲ ಎನ್‌ಡಿಟಿವಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅವರು ರಾಜಕೀಯ ಮತ್ತು ರಾಜಕೀಯೇತರ ಜಾಗತಿಕ ಸುದ್ದಿಗಳ ವರದಿಗಾರಿಕೆಯಲ್ಲಿ ಅನುಭವ ಹೊಂದಿದ್ದಾರೆ.

“ನಾನು ಎನ್‌ಡಿಟಿವಿಯಲ್ಲಿ 21 ವರ್ಷಗಳ ಅನುಭವದ ನಂತರ ನನ್ನ ವೃತ್ತಿಯ ದಿಕ್ಕನ್ನು ಬದಲಾಯಿಸಿ ಮುಂದುವರಿಯುತ್ತಿದ್ದೇನೆ. ಈ ವರ್ಷದ ನಂತರ ಹಾರ್ವರ್ಡ್ ವಿಶ್ವವಿದ್ಯಾಲಯದ ಕಲಾ ಮತ್ತು ವಿಜ್ಞಾನ ವಿಭಾಗದಲ್ಲಿ ಪತ್ರಿಕೋದ್ಯಮವನ್ನು ಬೋಧಿಸುವ ಸಹಾಯಕ ಪ್ರಾಧ್ಯಾಪಕಳಾಗಿ ಹೊಸ ವೃತ್ತಿಯನ್ನು ಪ್ರಾರಂಭಿಸುತ್ತೇನೆ” ಎಂದು ನಿಧಿ ರಾಝ್‌ದನ್‌ ಹೇಳಿದ್ದಾರೆ.

“ಎನ್‌ಡಿಟಿವಿ ನನ್ನ ಮನೆಯಾಗಿದೆ. ಅದು ನನಗೆ ಎಲ್ಲವನ್ನೂ ಕಲಿಸಿದೆ. ನಾವು ಮಾಡುವ ಕೆಲಸ, ನಾವು ಒಳಗೊಳ್ಳುವ ಸುದ್ದಿಗಳು, ನಾವು ನಿಂತಿರುವ ಮೌಲ್ಯಗಳು, ಅದರಲ್ಲೂ ಎನ್‌ಡಿಟಿವಿಯ ವಸ್ತುನಿಷ್ಠತೆಯ ಬಗೆಗೆ ನಾನು ಹೆಮ್ಮೆಪಡುತ್ತೇನೆ” ಎಂದಿದ್ದಾರೆ.

ಕಾಶ್ಮೀರಕ್ಕೆ ಸಂಬಂಧಿಸಿದಂತೆ ಎಡ ಬಲ ಮತ್ತು ಮಧ್ಯದ ಆಯಾಮಗಳಲ್ಲಿ ವರದಿಯನ್ನು ಮಾಡಿದ್ದಾರೆ. ಪ್ಯಾನಲ್ ಚರ್ಚೆಗಳನ್ನು ನಡೆಸಿರುವ ಇವರು, ಜಮ್ಮು ಕಾಶ್ಮೀರದಲ್ಲಿನ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಇವರು ಮಾಡಿದ ವರದಿಗಾರಿಕೆಗೆ ಇತ್ತೀಚೆಗೆ ಪ್ರತಿಷ್ಠಿತ ಇಂಟರ್ ನ್ಯಾಷನಲ್ ಪ್ರೆಸ್ ಇನ್‍ಸ್ಟಿಟ್ಯೂಟ್ ಇಂಡಿಯಾ ಪ್ರಶಸ್ತಿ ದಕ್ಕಿತ್ತು.

ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಭಾರತೀಯ ಮಾಧ್ಯಮ ಎದುರಿಸುತ್ತಿರುವ ಬಿಕ್ಕಟ್ಟಿನ ಬಗ್ಗೆ ಮಾತನಾಡುತ್ತಾ “ನಮ್ಮಲ್ಲಿ ಪತ್ರಕರ್ತರಾಗಿ ನಮ್ಮ ಕೆಲಸ ಮಾಡುವವರನ್ನು ರಾಷ್ಟ್ರ ವಿರೋಧಿಗಳು ಎಂದು ಹಣೆಪಟ್ಟಿ ಕಟ್ಟಲಾಗುತ್ತದೆ. ದುಃಖದ ಸಂಗತಿಯೆಂದರೆ, ಕೆಲವೇ ಕೆಲವರು ಸತ್ಯವನ್ನು ಮಾತನಾಡಲು ಸಿದ್ಧರಿದ್ದಾರೆ. ಉಳಿದಂತೆ ಪ್ರಭುತ್ವವನ್ನು ಪ್ರಶ್ನೆ ಮಾಡುವುದನ್ನು ಮಾಧ್ಯಮಗಳು ಮರೆತಿವೆ. ಬದಲಾಗಿ, ಸರ್ಕಾರದ ಕರಪತ್ರಗಳನ್ನು ಪುನರುತ್ಪಾದಿಸಲು ಮತ್ತು ಅದನ್ನು ಸುದ್ದಿಯಾಗಿ ರವಾನಿಸಲು ಆದ್ಯತೆ ನೀಡುತ್ತಿವೆ” ಎಂದು ನಿಧಿ ಹೇಳಿದ್ದರು.

ಎಡ, ಬಲ ಮತ್ತು ಮಧ್ಯಮ ಪಂಥೀಯ ವಾದಕ್ಕೆ ಸಂಬಂಧಿಸಿದ ಜುಲೈ 2017 ರಲ್ಲಿ ಪ್ರಕಟವಾದ ‘ದಿ ಐಡಿಯಾ ಆಫ್ ಇಂಡಿಯಾ’ ಎಂಬ ಶೀರ್ಷಿಕೆಯ ಪುಸ್ತಕವನ್ನು ಸಹ ಇವರು ಬರೆದಿದ್ದಾರೆ. ಈಜಿಪ್ಟಿನ ಕ್ರಾಂತಿ ಮತ್ತು ಇನ್ನೂ ಅನೇಕ ಪ್ರಮುಖ ವರದಿ ಮಾಡಿದವರಲ್ಲಿ ಭಾರತದ ನಿಧಿ ರಾಝ್‌ದನ್‌ ಮುಂಚೂಣಿಯಲ್ಲಿದ್ದರು.


ಓದಿ: ಪ್ರತಿಭಟನೆಗೆ ಕರೆ ನೀಡಿದ ಪತ್ರಕರ್ತ ಆಕಾರ್ ಪಟೇಲ್ ಟ್ವಿಟ್ಟರ್ ಖಾತೆ ಭಾರತದಲ್ಲಿ ನಿರ್ಬಂಧ!


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...