Homeಮುಖಪುಟಚೆಗುವಾರ ನೆನಪು: ಸಂಗಾತಿ 'ಚೆ' ಎಂಬ ವಿಸ್ಮಯಕ್ಕೆ ಸಾವಿಲ್ಲ..

ಚೆಗುವಾರ ನೆನಪು: ಸಂಗಾತಿ ‘ಚೆ’ ಎಂಬ ವಿಸ್ಮಯಕ್ಕೆ ಸಾವಿಲ್ಲ..

ಕ್ಯೂಬಾ ವಿಮೋಚನಾ ಹೋರಾಟದ ಮಹಾದಂಡನಾಯಕನಾಗಿ ಕಾರ್ಯನಿರ್ವಹಿಸಿದ ಚೆ ಕ್ಯೂಬಾ ವಿಮೋಚನೆಯಾದ ಬಳಿಕ ಅಧಿಕಾರದ ಕುರ್ಚಿಯಲ್ಲಿ ಆಸೀನನಾಗಿ ಸುಖಃ ಅನುಭವಿಸಬಹುದಿತ್ತು. ಆತನಿಗೆ ಉನ್ನತೋನ್ನತ ಸ್ಥಾನಗಳು ಒದಗಿಬಂದರೂ ಆತ ಎಂದೂ ‌ಮೈ ಮರೆಯಲಿಲ್ಲ. ಕ್ಯೂಬಾದ ಮಂತ್ರಿಯಾಗಿಯೂ ಕಬ್ಬಿನ ಗದ್ದೆಗಳಲ್ಲಿ ಅತೀ ಸಾಮಾನ್ಯ ರೈತನಂತೆ ದುಡಿದ.

- Advertisement -
- Advertisement -

ಸಂಗಾತಿ ಅರ್ನೆಸ್ಟೋ ಚೆಗುವಾರ ಅವರನ್ನು ಕ್ಯೂಬನ್ ಕ್ರಾಂತಿಕಾರಿಯೆನ್ನುವುದು ಆತನ ವ್ಯಕ್ತಿತ್ವವನ್ನು ಸಂಕುಚಿತಗೊಳಿಸಿದಂತೆ. ಆತ ಅರ್ಜೆಂಟೈನಾದಲ್ಲಿ ಹುಟ್ಟಿದ… ಕ್ಯೂಬಾದಲ್ಲಿ ತನ್ನ ಬದುಕಿನ ಹೆಚ್ಚಿನ ವರ್ಷಗಳನ್ನು ಕಳೆದು ಕ್ರಾಂತಿಯಲ್ಲಿ ಪ್ರಮುಖ ಪಾತ್ರ ವಹಿಸಿದ. ಕೊನೆಗೆ ಬೊಲಿವಿಯಾದಲ್ಲಿ ಕಾಂತ್ರಿ ಸಾಧಿಸಲು ಹೊರಟು ಹುತಾತ್ಮನಾದ.

ಆದರೆ ಆತ ಯಾವುದೇ ಒಂದು ದೇಶಕ್ಕೆ ಮಾತ್ರ ಸೀಮಿತವಾಗಲಿಲ್ಲ… ಆತನ ಪ್ರಭಾವ ಲ್ಯಾಟಿನ್ ಅಮೆರಿಕಾದ ಹೆಚ್ಚು ಕಡಿಮೆ ಎಲ್ಲೆಡೆಯ ವಿಮೋಚನಾ ಹೋರಾಟದಲ್ಲಿತ್ತು. ಆತ ಕ್ರಾಂತಿಯ ಅದೆಂತಹ ಅದಮ್ಯ ಚೇತನವೆಂದರೆ ಜಗತ್ತಿನ ಯಾವುದೇ ಮೂಲೆಯಲ್ಲಿಯಾದರೂ ಅನ್ಯಾಯ, ಶೋಷಣೆ, ದೌರ್ಜನ್ಯದ ವಿರುದ್ಧ ಯಾರು ಹೋರಾಡುತ್ತಾರೋ…. ತಮ್ಮ ನಾಡಿನ ವಿಮೋಚನೆಗಾಗಿ ಯಾರು ಹೋರಾಡುತ್ತಾರೋ… ಅವರೆಲ್ಲರೂ ನನ್ನ ಸಂಗಾತಿಗಳು ಎಂದು ಘೋಷಿಸಿದ್ದ.

ಆತ ಹುತಾತ್ಮನಾಗಿ ಸುಮಾರು ಐವತ್ತೈದು ವರ್ಷಗಳಾದರೂ ಆತ ಇಂದಿಗೂ ಓರ್ವ ಸೆಲೆಬ್ರಿಟಿಯಾಗಿ ಜನಮಾನಸದಲ್ಲಿ ಅಚ್ಚಳಿಯದೇ ಉಳಿದಿದ್ದಾನೆ. ಇನ್ನೂ ವಿಚಿತ್ರವೆಂದರೆ ನಮ್ಮ ದೇಶದಲ್ಲಿ ಆತನ ಸಿದ್ಧಾಂತದ ಕಟುವಿರೋಧಿಗಳಾದ ಬಲಪಂಥೀಯ ಯುವಕರೂ ಆತನ ಭಾವಚಿತ್ರವಿರುವ ಟೀ ಶರ್ಟ್ ಧರಿಸುತ್ತಾರೆ…. ಕ್ಯಾಪ್ ಧರಿಸುತ್ತಾರೆ… ಅವರ್ಯಾರೂ ಆತನನ್ನು ಓದಿರಲು ಸಾಧ್ಯವಿಲ್ಲ… ಮತ್ತು ಜಗತ್ತಿನಾದ್ಯಂತದ ಎಡಪಂಥೀಯ ಚಳವಳಿಗಾರರಿಗೆ ಆತ ಓರ್ವ ರೋಲ್ ಮಾಡೆಲ್‌ ಆಗಿ ಇಂದಿಗೂ ಪ್ರಸ್ತುತ.

ಚೆ ಮೂಲತಃ ಓರ್ವ ಚರ್ಮರೋಗ ಶಾಸ್ತ್ರದಲ್ಲಿ ಪರಿಣತಿ ಪಡೆದ ವೈದ್ಯ. ಒಂದು ಕಾಲಕ್ಕೆ ಆತ ತಾನೋರ್ವ ಮಹಾನ್ ವೈದ್ಯಕೀಯ ಸಂಶೋಧಕನಾಗಬೇಕೆಂಬ ಕನಸು ಕಂಡವನು. ಆತ ತಾನು ಬದಲಾದ ಬಗೆಯನ್ನು ತನ್ನ ದಿನಚರಿಯಲ್ಲಿ ಹೀಗೆ ಬರೆಯುತ್ತಾನೆ

“ಕ್ರಾಂತಿಯ ಹಂಬಲ ಹೋರಾಟಗಳಲ್ಲಿ ನನ್ನನ್ನು ನಾನು ತೊಡಗಿಸಿಕೊಂಡು ಪಡೆದ ಪಕ್ವ ದೃಷ್ಟಿಕೋನ ನನ್ನ ಹಿಂದಿನ ವೈದ್ಯಕೀಯ ವಿದ್ಯಾರ್ಥಿ ದೆಸೆಯಲ್ಲಿ ಇರಲಿಲ್ಲ. ನಾನು ಎಲ್ಲರಂತೆ ಯಶಸ್ಸಿಗೆ ಆಶಿಸಿದೆ. ನಾನೊಬ್ಬ ಪ್ರಸಿದ್ಧ ಸಂಶೋಧಕನಾಗಿ , ಬಿಡುವಿಲ್ಲದೇ ದುಡಿದು, ಮಾನವ ಜೀವಿಗಳೆಲ್ಲರಿಗೂ ಲಾಭವಾಗುವಂತಹ ಏನಾದರೂ ಸಂಶೋಧನೆ ಮಾಡುವ ಕನಸು ಕಾಣುತ್ತಿದ್ದೆ. ಆದರೆ ಇವೆಲ್ಲಾ ವೈಯಕ್ತಿಕ ಯಶಸ್ಸಿಗಾಗಿ ಕಟ್ಟಿದ ಕನಸುಗಳು.ನಮ್ಮೆಲ್ಲರಂತೆ ನಾನೂ ಸಹ ನಮ್ಮ ಪರಿಸರದಿಂದ ರೂಪಿತವಾದ ವ್ಯಕ್ತಿಯಾಗಿದ್ದೆ. ದಾರಿದ್ರ್ಯದಿಂದಾಗಿ, ಹೇಗೆ ತಂದೆ ತಾಯಿಯರು ತಮ್ಮ ಮಕ್ಕಳ ರೋಗಗಳಿಗೆ ಔಷಧಿ ಕೊಡಲಾರದಾಗಿದ್ದರೆಂಬುದನ್ನು ಕಂಡೆ, ಹಸಿವೆ ಮತ್ತು ನರಳಿಕೆಗಳಿಂದ ಪೀಡಿತನಾದ ತಂದೆ ತನ್ನ ಮಗು ಸಾಯುವುದನ್ನು ನಿರ್ವಿಕಾರವಾಗಿ ಸಾಯುವುದನ್ನು ಸಹಿಸಿಕೊಳ್ಳುವಷ್ಟು ಪಶುಪ್ರಾಯನಾಗಿ ಮನುಷ್ಯನು ಅಧಃಪತನಕ್ಕೆ ಜಾರುವುದನ್ನು ಕಂಡೆ. ಪ್ರಸಿದ್ಧ ಸಂಶೋಧಕನಾಗುವುದಕ್ಕಿಂತ ಅಥವಾ ಆರೋಗ್ಯ ಶಾಸ್ತ್ರಕ್ಕೆ ಒಂದು ಅಮೂಲ್ಯ ಕೊಡುಗೆ ಕೊಡುವುದಕ್ಕಿಂತಲೂ ಯಾವ ರೀತಿಯಲ್ಲೂ ಕನಿಷ್ಟವೆಂದು ಹೇಳಲಾಗದ ಜೀವನದ ಧ್ಯೇಯ ಇನ್ನೊಂದು ಇದೆಯೆಂದು ನಾನು ಕಂಡುಕೊಂಡೆ . ಆಗ ಈ ಜನರ ಸಹಾಯಕ್ಕೆ ನಾನು ಒದಗಬೇಕೆಂಬ ಜ್ಞಾನೋದಯವಾಗಿತ್ತು.”

ಚೆ ಒಂದರ್ಥದಲ್ಲಿ ವಿಶ್ವ ಸಂಚಾರಿ. ಆತ ತನ್ನ ಸಂಚಾರದಲ್ಲಿ ಕಂಡುಕೊಂಡ ಮಾನವಕುಲದ ಹಸಿವು-ನೋವು-ಸಂಕಟ-ನರಳಿಕೆಗಳು ಆತನ ಬದುಕಿನ ಪಥವನ್ನು ಬದಲಿಸಿದವು. ಅಪ್ಪಟ ಮಾನವತಾವಾದಿಯಾಗಿದ್ದ, ಸೂಕ್ಷ್ಮ ಸಂವೇದನೆಯ ವ್ಯಕ್ತಿಯಾಗಿದ್ದ ಚೆ ವಿಮೋಚನಾ ಹೋರಾಟಕ್ಕೊಂದು ಪರ್ಯಾಯ ಹೆಸರೇ ಆಗಿ ಪರಿವರ್ತಿತಗೊಂಡಿದ್ದರ ಹಿಂದೆ ಇರುವುದೇ ಆತ ಕಂಡು ಕೊಂಡ ಸತ್ಯಗಳು.

ಕ್ಯೂಬಾ ವಿಮೋಚನಾ ಹೋರಾಟದ ಮಹಾದಂಡನಾಯಕನಾಗಿ ಕಾರ್ಯನಿರ್ವಹಿಸಿದ ಚೆ ಕ್ಯೂಬಾ ವಿಮೋಚನೆಯಾದ ಬಳಿಕ ಅಧಿಕಾರದ ಕುರ್ಚಿಯಲ್ಲಿ ಆಸೀನನಾಗಿ ಸುಖಃ ಅನುಭವಿಸಬಹುದಿತ್ತು. ಆತನಿಗೆ ಉನ್ನತೋನ್ನತ ಸ್ಥಾನಗಳು ಒದಗಿಬಂದರೂ ಆತ ಎಂದೂ ‌ಮೈ ಮರೆಯಲಿಲ್ಲ. ಕ್ಯೂಬಾದ ಮಂತ್ರಿಯಾಗಿಯೂ ಕಬ್ಬಿನ ಗದ್ದೆಗಳಲ್ಲಿ ಅತೀ ಸಾಮಾನ್ಯ ರೈತನಂತೆ ದುಡಿದ.

ಚೆ ಕ್ಯೂಬಾದಲ್ಲಿ ಅಧಿಕಾರದ್ದಲ್ಲಿದ್ದಾಗ ಅನಾರೋಗ್ಯ ಪೀಡಿತನಾದ. ಆತನಿಗೆ ವಿಶ್ರಾಂತಿಗಾಗಿ ಒಳ್ಳೆಯ ವಸತಿಯ ಅಗತ್ಯ ಬಿತ್ತು. ಆದರೆ ಅದಕ್ಕೆ ತಗಲುವ ಆರ್ಥಿಕ ಚೈತನ್ಯ ಆತನಲ್ಲಿರಲಿಲ್ಲ.ಸರಕಾರ‌ ಆತನಿಗೆ ಉತ್ತಮ ವಸತಿಯ ವ್ಯವಸ್ಥೆ ಮಾಡಿತು. ಆಗ ಚೆ ಹೇಳಿದ ಮಾತು ಇದು ಅತ್ಯಂತ ಐಷಾರಾಮಿ ವಿಲ್ಲಾ. ಇದರಲ್ಲಿ ನಾನು ಅತ್ಯಂತ ಸಾಧಾರಣವಾದುದನ್ನೇ ಆಯ್ದುಕೊಂಡಿದ್ದೇನೆ. ಆದರೆ ನಾನು ಇಲ್ಲೇ ಬೀಡು ಬಿಟ್ಟಿರುವ ವಿಚಾರ ಜನರನ್ನು ನೋಯಿಸಬಹುದು. ನಾನು ಚೇತರಿಸುತ್ತಲೇ ಈ ಮನೆಯನ್ನು ಬಿಟ್ಟು ಹೋಗುವೆನೆಂದು ಕ್ಯೂಬಾದ ಜನತೆಗೆ ಮಾತು ಕೊಡುತ್ತೇನೆ. ಸುಮ್ಮನೆ ನಮ್ಮ ಮಂತ್ರಿ ಮಹೋದಯರ ಬದುಕನ್ನೊಮ್ಮೆ ತಾಳೆ ಹಾಕಿ ನೋಡಿ. ಅಧಿಕಾರ ಮುಗಿದರೂ ವರ್ಷಾನುಗಟ್ಟಲೆ ಜನತೆಯ ತೆರಿಗೆಯ ಹಣವನ್ನು ತಮ್ಮ ಐಷಾರಾಮಿ ಬದುಕಿಗಾಗಿ ಯಾವ ರೀತಿ ದುರುಪಯೋಗಪಡಿಸುತ್ತಾರೆ…

ಸಂಗಾತಿ ಚೆಗುವಾರನನ್ನು 1967ರಲ್ಲಿ ಕೊಲ್ಲಲಾಗುತ್ತದೆ. ಆತನನ್ನು ಯಾವ ಸೈನಿಕ ಕೊಂದಿದ್ದನೋ ಆ ಸೈನಿಕನಿಗೆ ಆತನ ವೃದ್ದಾಪ್ಯದಲ್ಲಿ ಅನಾರೋಗ್ಯ ಕಾಡಿದಾಗ ಆತನಿಗೆ ಚಿಕಿತ್ಸೆ ನೀಡಿ ಆತನನ್ನು ಗುಣಮುಖವಾಗಿಸಿದ್ದು ಕ್ಯೂಬಾದಲ್ಲಿ ಚೆಗುವಾರ ನ ಹೆಸರಲ್ಲೇ ನಿರ್ಮಿಸಲಾಗಿದ್ದ ಆಸ್ಪತ್ರೆಯಲ್ಲಿ. ‘ಚೆ’ಯ ಸಂಗಾತಿ ಕ್ಯೂಬಾದ ಅಂದಿನ ಅಧ್ಯಕ್ಷ ಫಿಡೆಲ್ ಕಾಸ್ಟ್ರೋನಿಗೆ ಆತ ತನ್ನ ಸಂಗಾತಿ ಚೆ ಯನ್ನು ಕೊಂದ ಸೈನಿಕ ಎಂಬ ಸತ್ಯ ಗೊತ್ತಿದ್ದರೂ ಆತನಿಗೆ ಅದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು. ಚೆ ಮತ್ತು ಫಿಡೆಲ್ ಯುದ್ಧಗಳು ಯುದ್ಧಭೂಮಿಗೆ ಮಾತ್ರ ಸೀಮಿತ ಎಂದು ಅಚಲವಾಗಿ ನಂಬಿದ್ದರು. ಫಿಡೆಲ್ ಪ್ರಕಾರ ಚೆ ಯನ್ನು ಕೊಂದಿದ್ದ ಆ ಸೈನಿಕ ಅಂದು ತನ್ನ ಸೇನೆಯ ಪರವಾಗಿ ತನ್ನ ಜವಾಬ್ದಾರಿಯನ್ನು ನಿರ್ವಹಿಸಿದ್ದ.

ಚೆ ಎಂದರೆ ಓದಿದಷ್ಟೂ ಮತ್ತೆ ಮತ್ತೆ ಓದಿಸುವ ಒಂದು ವಿಸ್ಮಯ ಗ್ರಂಥ. ಕ್ರಾಂತಿಕಾರಿಗೆ ಸಾವಿಲ್ಲ… ಆತ ಸದಾ ಜನರ ಮನದಲ್ಲಿ ಅಜರಾಮರ… ಎಂಬುವುದಕ್ಕೆ ಆಧುನಿಕ ಜಗತ್ತಿನಲ್ಲಿ ಚೆ ಒಂದು ನಿದರ್ಶನ..
ಕಾಮ್ರೇಡ್…. ಚೆಗುವಾರ… ನಿನಗಿದೋ ಕ್ರಾಂತಿಯ ಕೆಂಪು ಸಲಾಂ.


ಇದನ್ನೂ ಓದಿ: “ಅಪ್ಪನಿಂದ ಒಂದು ದೊಡ್ಡ ಮುತ್ತು!”: ಅಪ್ಪನ ಕುರಿತು ಆಪ್ತವಾಗಿ ಮಾತಾಡಿದ ಚೆಗೆವೆರಾನ ಮಗಳು ಅಲೈದಾ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...