Homeಮುಖಪುಟಮುಂಬೈನ ಧಾರಾವಿ ಸ್ಲಂ ವೈರಸ್‌ ಅನ್ನು ಹಿಮ್ಮೆಟ್ಟಿಸಿದ್ದು ಹೀಗೆ.. : ಇದು ಉಳಿದವರಿಗೂ ಪಾಠ

ಮುಂಬೈನ ಧಾರಾವಿ ಸ್ಲಂ ವೈರಸ್‌ ಅನ್ನು ಹಿಮ್ಮೆಟ್ಟಿಸಿದ್ದು ಹೀಗೆ.. : ಇದು ಉಳಿದವರಿಗೂ ಪಾಠ

- Advertisement -
- Advertisement -

ಭಾರತದ ಧಾರಾವಿ ಸ್ಲಂ ಏಷ್ಯಾ ಖಂಡದ ಅತ್ಯಂತ ಜನದಟ್ಟಣೆಯ ಸ್ಲಂ ಆಗಿದೆ. ಇಲ್ಲಿ ಸುಮಾರು ಎಂಟೂವರೆ ಲಕ್ಷ ಜನ ವಾಸಿಸುತ್ತಿದ್ದಾರೆ. ಇಲ್ಲಿ ಏಪ್ರಿಲ್ 1ರಂದು ಮೊದಲ ಕೊರೊನಾ ವೈರಸ್‌ ಕಾಣಿಸಿಕೊಂಡಾಗ ದೇಶವೇ ಬೆಚ್ಚಿ ಬಿದ್ದಿತ್ತು. ಏಕೆಂದರೆ ಕೊರೊನಾ ಒಂದು ಸಾಂಕ್ರಾಮಿಕ ವೈರಸ್ ಆದ್ದರಿಂದ ಈ ಜನದಟ್ಟಣೆಯ ಸ್ಲಂನಲ್ಲಿ ಕ್ವಾರಂಟೈನ್‌ ಆಗುವುದು, ದೈಹಿಕ ಅಂತರ ಕಾಪಾಡಿಕೊಳ್ಳುವುದು ಕನಸೇ ಸರಿ ಎಂದು ಹಲವರು ಭಯಭೀತರಾಗಿದ್ದರು. ಅಂತೆಯೇ ಮೇ ತಿಂಗಳಿನಲ್ಲಿ ದಿನಕ್ಕೆ ಸುಮಾರು 60 ಪ್ರಕರಣದಲ್ಲಿ ಈ ಸ್ಲಂನೊಂದರಿಂದಲೇ ದಾಖಲಾಗುತ್ತಿದ್ದವು. ಆದರೆ ಕೊರೊನಾ ಎದುರಿಸುವಲ್ಲಿ ಧಾರಾವಿ ಯಶಸ್ವಿಯಾಗಿದೆ. ಈಗ ದಿನಕ್ಕೆ ವರದಿಯಾಗುವ ಪ್ರಕರಣಗಳ ಸಂಖ್ಯೆ 20ಕ್ಕೆ ಇಳಿದಿದೆ. ಅಲ್ಲದೇ ಮುಂಬೈನ ಧಾರಾವಿ ಸ್ಲಂ ಹಾಟ್‌ಸ್ಪಾಟ್‌ನಿಂದ ಹೊರಬಂದಿದ್ದು, ಕೊರೊನಾ ನಿಯಂತ್ರಣದಲ್ಲಿ ಹೆಣಗಾಡುತ್ತಿರುವ ಅಭಿವೃದ್ಧಿಶೀಲ ರಾಷ್ಟ್ರಗಳಿಗೆ ಒಂದು ಮಾದರಿಯಾಗಿದೆ.

ಸದ್ಯದ ಸ್ಥಿತಿ

ಜೂನ್ 12 ರ ಹೊತ್ತಿಗೆ, ಧಾರಾವಿ 2,013 ಕರೋನವೈರಸ್ ಪ್ರಕರಣಗಳನ್ನು ದಾಖಲಿಸಿದೆ, ಆದರೆ ಅದರ ದೈನಂದಿನ ಬೆಳವಣಿಗೆಯ ದರವು ಕೇವಲ 1.57 ಶೇಕಡಾ ಇದೆ. ಅಂದರೆ ಮುಂಬೈ ನಗರದಲ್ಲಿ ದೈನಂದಿನ ದರ 3 ಶೇಕಡಾ ಇದ್ದರೆ, ಪಿ ನಾರ್ತ್, ಆರ್ ಸೌತ್ ಮತ್ತು ಎಸ್ ವಾರ್ಡ್‌ಗಳಂತಹ ಇತರ ವಾರ್ಡ್‌ಗಳಲ್ಲಿ 5 ಪ್ರತಿಶತದಷ್ಟು ಇದೆ.

ಮೇ 30 ಮತ್ತು ಜೂನ್ 8 ರ ನಡುವೆ ಯಾವುದೇ ಸಾವುಗಳು ದಾಖಲಾಗಿಲ್ಲ. ಆದರೆ ಕಳೆದ ನಾಲ್ಕು ದಿನಗಳಲ್ಲಿ ಆರು ಸಾವುಗಳು ವರದಿಯಾಗಿದ್ದು ಈ ಸಂಖ್ಯೆ 77 ಕ್ಕೆ ತಲುಪಿದೆ.

ಸಾಧ್ಯವಾದುದ್ದಾದರೂ ಹೇಗೆ?

ನವೀನ ಸರಣಿ ಪ್ರಯೋಗಗಳನ್ನು ನಡೆಸಿದ್ದು, ಖಾಸಗಿ ವೈದ್ಯರನ್ನು ಕರೆತರುವುದು, ದುರ್ಬಲ ಜನರನ್ನು ಪ್ರತ್ಯೇಕಿಸುವುದು, ದೊಡ್ಡ ಕ್ವಾರಂಟೈನ್‌ ಸೌಲಭ್ಯಗಳನ್ನು ಪಡೆಯುವುದು ಮತ್ತು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗಳನ್ನು ಸ್ವಾಧೀನಪಡಿಸಿಕೊಳ್ಳುವುದು – ಈ ತಂತ್ರವನ್ನು ಇಲ್ಲಿ ಯಶಸ್ವಿಯಾದಂತೆ ಕಾಣುತ್ತದೆ.

ಅಲ್ಲಿನ ಜನರ ತಾಪಮಾನವನ್ನು ಅಳೆಯಲು ಅಧಿಕಾರಿಗಳು ಏಪ್ರಿಲ್‌ನಿಂದ ಇದುವರೆಗೆ 47,500 ಕುಟುಂಬಗಳ ಬಾಗಿಲು ಬಡಿದಿದ್ದಾರೆ. ಈ ಕೊಳೆಗೇರಿ ಕ್ಲಸ್ಟರ್‌ನಲ್ಲಿ ಸುಮಾರು 7,00,000 ಜನರನ್ನು ಸ್ಕ್ರೀನಿಂಗ್‌ಗೆ ಒಳಪಡಿಸಲಾಗಿದೆ. 9000 ಜನರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಅಲ್ಲದೇ  ಜ್ವರ ಚಿಕಿತ್ಸಾಲಯಗಳನ್ನು ಸ್ಥಾಪಿಸಿದ್ದಾರೆ.  ಇಲ್ಲಿ ರೋಗಲಕ್ಷಣಗಳನ್ನು ತೋರಿಸುವವರನ್ನು ಹತ್ತಿರದ ಶಾಲೆಗಳಿಗೆ ಸ್ಥಳಾಂತರಿಸಲಾಯಿತು ಮತ್ತು ಕ್ರೀಡಾ ಕ್ಲಬ್‌ಗಳನ್ನು ಕ್ವಾರಂಟೈನ್ ಕೇಂದ್ರಗಳಾಗಿ ಪರಿವರ್ತಿಸಲಾಯಿತು. ಮೇ ಆರಂಭಕ್ಕೆ ಹೋಲಿಸಿದರೆ ತಾಜಾ ದೈನಂದಿನ ಸೋಂಕುಗಳು ಈಗ ಮೂರನೇ ಒಂದು ಭಾಗಕ್ಕೆ ಇಳಿದಿವೆ, ಅರ್ಧಕ್ಕಿಂತ ಹೆಚ್ಚು ರೋಗಿಗಳು ಚೇತರಿಸಿಕೊಳ್ಳುತ್ತಿದ್ದಾರೆ, ಮತ್ತು ಈ ತಿಂಗಳ ಸಾವಿನ ಸಂಖ್ಯೆಯು ಕುಸಿದಿದೆ.

ಈ ಸಂಖ್ಯೆಗಳು ಭಾರತದ ಉಳಿದ ಭಾಗಗಳಿಗೆ ತದ್ವಿರುದ್ಧವಾಗಿವೆ. ಏಕೆಂದರೆ ಮೇ ನಂತರ ಪ್ರಕರಣು ಕಂಡುಬಂದಲೆಲ್ಲಾ ನಿಯಂತ್ರಣಕ್ಕೆ ಸಿಗದೇ ಓಡುತ್ತಿವೆ. ಆದರೆ ಧಾರಾವಿ ಸಂಪೂರ್ಣ ನಿಯಂತ್ರನದಲ್ಲಿದೆ.

“ದೈಹಿಕ ದೂರವನ್ನು ಅನುಸರಿಸುವುದು ಅಸಾಧ್ಯವಾದದ್ದು” ಎಂದು ಧಾರಾವಿ ಯಲ್ಲಿ ಹೋರಾಟವನ್ನು ಮುನ್ನಡೆಸುವ ಉಸ್ತುವಾರಿ ವಹಿಸಿರುವ ಮುಂಬೈ ಪುರಸಭೆಯ ಸಹಾಯಕ ಆಯುಕ್ತ ಕಿರಣ್ ದಿಘವ್ಕರ್ ಹೇಳುತ್ತಾರೆ. “ಪ್ರಕರಣಗಳು ದಾಖಲಾಗುವವರೆಗೆ ಕಾಯುವ ಬದಲು ವೈರಸ್ ಅನ್ನು ಬೆನ್ನಟ್ಟುವುದು ಒಂದೇ ಆಯ್ಕೆಯಾಗಿದೆ. ಬನ್ನಿ ಪ್ರತಿಕ್ರಿಯೆಗೆ ಬದಲಾಗಿ ಪೂರ್ವಭಾವಿಯಾಗಿ ಕೆಲಸ ಮಾಡೋಣ ಎಂಬುದು ಅವರ ಧ್ಯೇಯವಾಕ್ಯವಾಗಿದೆ.”

“ನಾವು ಆರಂಭಿಕ ಹಂತಗಳಲ್ಲಿಯೇ ಜನರನ್ನು ಪ್ರತ್ಯೇಕಿಸಲು ಸಾಧ್ಯವಾಗುತ್ತಿದೆ ಮತ್ತು ಅಗತ್ಯವಿದ್ದವರಿಗೆ ತುರ್ತು ಚಿಕಿತ್ಸೆ ನೀಡುತ್ತಿದ್ದೆವೆ. ಅಂದರೆ ಮುಂಬಯಿಯ ಉಳಿದ ಭಾಗಗಳಲ್ಲಿ ಹೆಚ್ಚಿನ ರೋಗಿಗಳು ತಡವಾಗಿ ಆಸ್ಪತ್ರೆಗಳನ್ನು ತಲುಪುತ್ತಿದ್ದಾರೆ, ಆದರೆ ನಾವು ಅದಕ್ಕೆ ವಿರುದ್ಧವಾಗಿ ಕೂಡಲೇ ಚಿಕಿತ್ಸೆ ಆರಂಭಿಸುತ್ತಿರುವುದು ಫಲ ಕೊಟ್ಟಿದೆ. ಇದು ಮರಣ ಪ್ರಮಾಣವನ್ನು ಕುಗ್ಗಿಸಿದೆ ಎನ್ನುತ್ತಾರೆ.

ಉಚಿತ ಸೇವೆಗಳು

ಐಸೋಲೇಶನ್‌ ಕೇಂದ್ರಗಳಲ್ಲಿರುವ ಪ್ರತಿಯೊಬ್ಬರೂ ಉಚಿತವಾಗಿ ದಿನದ 24 ಗಂಟೆಯೂ ಸಹ ವೈದ್ಯಕೀಯ ಚಿಕಿತ್ಸೆ ಮತ್ತು ಮೇಲ್ವೀಚಾರಣೆ ಪಡೆಯುತ್ತಿದ್ದಾರೆ. ರೋಗಲಕ್ಷಣಗಳು ಕಾಣಿಸಿಕೊಂಡ ತಕ್ಷಣ ಜನರು ತಮ್ಮನ್ನು ತಾವು ಕ್ವಾರಂಟೈನ್‌ಗೆ ಒಳಗಾಗಲು ಸ್ವಯಂಪ್ರೇರಿತರಾಗುತ್ತಾರೆ ಎಂದು ದಿಘವ್ಕರ್ ಹೇಳುತ್ತಾರೆ.

ಪ್ರಕರಣಗಳ ಸಂಖ್ಯೆಯನ್ನು ಕಡಿಮೆ ಮಾಡಲು ಯಾವುದೇ ಒತ್ತಡ ಮಾಡಬಾರದು ಎನ್ನುವ ಅವರು ಬದಲಿಗೆ ಸ್ಕ್ರೀನಿಂಗ್ ಮತ್ತು ಸಮಯೋಚಿತ ಚಿಕಿತ್ಸೆಯತ್ತ ಗಮನ ಹರಿಸಬೇಕಾಗಿದೆ. ಏಕೆಂದರೆ ನಮ್ಮ ಅಂತಿಮ ಗುರಿ ಜೀವಗಳನ್ನು ಉಳಿಸುವುದು ಎನ್ನುತ್ತಾರೆ.

ಇನ್ನು ಮುಗಿದಿಲ್ಲ ಯುದ್ಧ!

ಆದರೂ, ವೈರಸ್ ವಿರುದ್ಧದ ಧಾರಾವಿ ಯುದ್ಧ ಮುಗಿದಿಲ್ಲ. ಲಾಕ್ ಡೌನ್ ಸಮಯದಲ್ಲಿ ಪುರಸಭೆ ಇಲ್ಲಿನ 24,000 ಕುಟುಂಬಗಳಿಗೆ ಪಡಿತರವನ್ನು ನೀಡಿದೆ. 11,000 ಇಫ್ತಾರ್ ಊಟ ಸೇರಿದಂತೆ 19,000 ಜನರಿಗೆ ಆಹಾರವನ್ನು ನೀಡಿತು. ಆದರೂ ಇಲ್ಲಿನ ಜನಸಂಖ್ಯೆಗೆ ಹೋಲಿಸಿದರೆ ಇದು ಏನೇನೂ ಅಲ್ಲ. ಲಾಕ್ ಡೌನ್ ನಂತರ ಹೆಚ್ಚಿನ ನಿವಾಸಿಗಳು ಈಗ ನಿರುದ್ಯೋಗಿಗಳಾಗಿದ್ದಾರೆ ಮತ್ತು ಪಡಿತರ ಅಂಗಡಿಗಳು ಅಕ್ಕಿ ಮತ್ತು ಗೋಧಿಯನ್ನು ಮಾತ್ರ ನೀಡುತ್ತಿವೆ. ಇದು ಧಾರಾವಿಯನ್ನು ಚಿಂತೆಗೀಡು ಮಾಡಿದೆ.

ಮುಂದೆ ಲಾಕ್‌ಡೌನ್‌ ನಿರ್ಬಂಧಗಳನ್ನು ಸಂಪೂರ್ಣವಾಗಿ ತೆಗೆದುಹಾಕಿದ ನಂತರ ಮತ್ತು ಜನರು ತಮ್ಮ ಕೆಲಸಕ್ಕೆ ತೆರಳಿದಾಗ ಎರಡನೇ ಹಂತದಲ್ಲಿ ಸೋಂಕು ಹರಡುವ ಅಪಾಯವಿದೆ. ಹಾಗಾಗಿ ವೈರಸ್ ಇಡೀ ನಗರ, ರಾಜ್ಯ, ಮತ್ತು ದೇಶದಿಂದ ಹೋಗುವವರೆಗೆ ಯುದ್ಧವು ಮುಗಿಯುವುದಿಲ್ಲ ಎಂದು ದಿಘವ್ಕರ್ ಹೇಳುತ್ತಾರೆ”. ಜನರು ಹೇಗೆ ಸುರಕ್ಷಿತವಾಗಿರಬೇಕು ಎಂಬುದರ ಬಗ್ಗೆ ಈಗ ಸಾಕಷ್ಟು ತಿಳಿದಿದ್ದಾರೆ ಮತ್ತು ಲಾಕ್‌ಡೌನ್ ಮುಗಿಯುವ ಹೊತ್ತಿಗೆ, ನಮ್ಮಲ್ಲಿ ಹೆಚ್ಚಿನವರು ಹರ್ಡ್ ಇಮ್ಯುನಿಟಿ (ಹಿಂಡಿನ ಪ್ರತಿರಕ್ಷೆ) ಯನ್ನು ಪಡೆದಿರಬಹುದು ಎಂದು ನಾನು ಭಾವಿಸುತ್ತೇನೆ ಎನ್ನುತ್ತಾರೆ.


ಇದನ್ನೂ ಓದಿ: ಬೋಧನಾ ಕೆಲಸದಿಂದ ವಜಾ: ಬದುಕು ಸಾಗಿಸಲು ಬಾಳೆಹಣ್ಣು ಮಾರಾಟ ಆರಂಭಿಸಿದ ಶಿಕ್ಷಕ! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...