Homeಸಿನಿಮಾಸಿನಿ ಸುದ್ದಿಬಾಲ್ಯದ ಕನಸು ಹೊತ್ತ ಜೀರ್ಜಿಂಬೆ

ಬಾಲ್ಯದ ಕನಸು ಹೊತ್ತ ಜೀರ್ಜಿಂಬೆ

- Advertisement -
- Advertisement -

ಸೋಮಶೇಖರ್ ಚಲ್ಯ |
ಇತ್ತೀಚಿನ ದಿನಗಳಲ್ಲಿ ಕನ್ನಡ ಚಿತ್ರರಂಗದಲ್ಲಿ ಬಾಲ್ಯದ ಕಥೆಯನ್ನಾಧರಿಸಿದ ಚಿತ್ರಗಳು ಕಣ್ಮರೆಯಾಗಿ, ಪ್ರೀತಿ-ಪ್ರೇಮದ ಸುತ್ತಾ ಚಿತ್ರರಂಗ ಗಿರಕಿಹೊಡೆಯುತ್ತದೆ. ಮೊದಲೆಲ್ಲ ಮಕ್ಕಳನ್ನಾಧರಿಸಿದ ಚಿತ್ರಗಳದ್ದೇ ಸದ್ದು-ಗದ್ದಲವಿರುತ್ತಿತ್ತು. ಸಿಂಹದಮರಿ ಸೈನ್ಯ, ಪುಟಾಣಿ ಏಜೆಂಟ್‌ನಂತಹ ಸಿನಿಮಾಗಳಲ್ಲಿ ಅಭಿನಯಿಸಿದ್ದ ಕಲ್ಪನಾ, ಬೇಬಿ ಶಾಂಭವಿ, ಅರ್ಜುನ್ ಸರ್ಜಾ ಮೊದಲಾದವರು ಸ್ಟಾರ್‌ಗಳ ರೇಂಜಿಗೆ ಹೆಸರು ಮಾಡಿದ್ದು ಕೂಡ ಬಾಲ ನಟನೆಯಿಂದಲೇ. ಆದರೆ ಈಗ ಆ ಟ್ರೆಂಡ್ ಮಾಯವಾಗಿದೆ. ಅಂಥಾ ಕಾಲವನ್ನು ಇತ್ತೀಚೆಗೆ ಮತ್ತೊಮ್ಮೆ ಬಾಲ್ಯವನ್ನು ನೆನೆಸಿದ್ದು ಸರ್ಕಾರಿ ಪ್ರಾಥಮಿಕ ಶಾಲೆ ಕಾಸರಗೋಡು ಚಿತ್ರ. ಈಗ ಇಂಥದ್ದೇ ಮತ್ತೊಂದು ಚಿತ್ರ ಬಾಲ್ಯದ ಕಥೆಯೊಂದಿಗೆ ಸಿನಿ ಫ್ಯಾನ್‌ಗಳ ಬಾಲ್ಯದ ಕನಸುಗಳನ್ನು ನೆನಪಿಸಲು ಮುಂದಾಗಿದೆ. 2016ರಲ್ಲಿಯೇ ನಿರ್ಮಾಣಗೊಂಡಿರುವ ಕಾರ್ತಿಕ್ ಸರಗೂರು ನಿರ್ದೇಶನದ ಚೊಚ್ಚಲ ಚಿತ್ರ ಜೀರ್ಜಿಂಬೆ ಇನ್ನೂ ತೆರೆಕಾರಣದಿರುವುದು ಅಚ್ಚರಿ ಮೂಡಿಸಿದರೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದು ಬೆಳ್ಳಿತೆರೆಯಲ್ಲಿ ಕಾಣಿಸಿಕೊಳ್ಳುತ್ತಿದೆ.

ಕರ್ನಾಟಕದ ಗ್ರಾಮೀಣ ಪ್ರದೇಶದ ಬಾಲಕಿಯೊಬ್ಬಳ ಜೀವನಾಧಾರಿತ ಕಥೆಯನ್ನು ಚಿತ್ರಿಸಿರುವ ಜೀರ್ಜಿಂಬೆ, ಹಳ್ಳಿ ಪ್ರದೇಶದಲ್ಲಿ ಬೆಳೆಯುವ ಎಲ್ಲಾ ಹೆಣ್ಣುಮಕ್ಕಳ ಕನಸನ್ನು ಪ್ರತಿನಿಧಿಸುವ ಭರವಸೆ ಹುಟ್ಟುಹಾಕಿದೆ. ಹೆನ್ರಿ ಡೇವಿಡ್ ಥೋರೇನ್‌ರವರ ‘ಪ್ರಕೃತಿ ಮತ್ತು ಮಹಿಳೆ ಮಾತ್ರವೇ ಎಂಥಹ ಪರಿಸ್ಥಿತಿಯನ್ನು ಎದುರಿಸಿ ಬದುಕಬಲ್ಲವು, ಏಕೆಂದರೆ ಆ ಇಬ್ಬರಲ್ಲಿ ಮಾತ್ರ ಆತ್ಮವಿಶ್ವಾಸ ಹೊಂದಿರುತ್ತಾರೆ’ ಎಂಬ ಮಾತಿನ ಸ್ಫೂರ್ತಿಯಲ್ಲಿ ಬಾಲಕಿ ಬದುಕಿನ ಚಿತ್ರವನ್ನು ನಿರ್ಮಿಸಿದ್ದಾರೆ. ಇಂದಿನ ಸಮಾಜದಲ್ಲಿ ಪೋಷಕರು ತಮ್ಮ ಮಕ್ಕಳ ಬಗೆಗಿನ ನಿರ್ದಿಷ್ಟ ಬದುಕನ್ನು ಗುರುತಿಸುತ್ತಾ ಮಕ್ಕಳ ಬದುಕಿನ ಆಯ್ಕೆಯ ಸ್ವಾತಂತ್ರ್ಯವನ್ನು ಕಸಿದುಕೊಳ್ಳುತ್ತಿದ್ದಾರೆ. ಅದರಲ್ಲೂ ಹೆಣ್ಣುಮಕ್ಕಳ ವಿಚಾರದಲ್ಲಂತೂ ಅದು ದುಪ್ಪಟ್ಟು. ಮಕ್ಕಳ ಕನಸು ನನಸಾಗಿಸಲು ಪೋಷಕರು ಬಿಡುತ್ತಿಲ್ಲ. ಆದರೆ ಜೀರ್ಜಿಂಬೆ ಹೇಗೆ ತನ್ನ ಪುಟ್ಟ ಬಣ್ಣದ ರೆಕ್ಕೆಗಳಿಂದ ಸ್ವತಂತ್ರವಾಗಿ ಹಾರಾಡುತ್ತೋ ಹಾಗೇ ಪುಟ್ಟ ಬಾಲಕಿಯೊಬ್ಬಳು ತನ್ನ ಚಿಗುರು ಮನಸ್ಸಿನಲ್ಲಿ ಕನಸು ಕಾಣುವ ಸ್ವಾತಂತ್ರ್ಯ ಪಡೆದಿರುತ್ತಾಳೆ. ಅವರ ಗುರಿಯನ್ನು ಅವರೇ ಆಯ್ಕೆ ಮಾಡಿಕೊಳ್ಳಬೇಕು, ಆ ಗುರಿಯನ್ನು ಸಾಧಿಸಲು ಯಶಸ್ವಿಯಾಗಬೇಕು, ಅಂತಹ ವಾತಾವರಣವನ್ನು ನಿರ್ಮಾಣ ಮಾಡಬೇಕೆಂಬ ಎಚ್ಚರಿಕೆಯನ್ನು ಈ ಚಿತ್ರ ಪೋಷಕರಿಗೆ ರವಾನಿಸಲಿದೆ. ಈಗಾಗಲೇ 23 ಅಂತಾರಾಷ್ಟ್ರೀಯ ಉತ್ಸವಗಳಲ್ಲಿ ಪ್ರದರ್ಶನಗೊಂಡು 2017ರಲ್ಲಿ ರಾಜ್ಯ ಪ್ರಶಸ್ತಿಯನ್ನೂ ಪಡೆದುಕೊಂಡಿರುವ ಜೀರ್ಜಿಂಬೆ ಸಧ್ಯದಲ್ಲೆ ಚಿತ್ರಮಂದಿರಗಳಲ್ಲಿ ಗುಯ್‌ಗುಟ್ಟಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ....

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...

ಜನಸೇನಾ ಶಾಸಕನಿಂದ ಅತ್ಯಾಚಾರ, ಬಲವಂತದ ಗರ್ಭಪಾತ : ಮಹಿಳೆ ಆರೋಪ

ಆಂಧ್ರ ಪ್ರದೇಶದ ರೈಲ್ವೆ ಕೊಡೂರು ವಿಧಾನಸಭಾ ಕ್ಷೇತ್ರದ ಜನ ಸೇನಾ ಶಾಸಕ ಮತ್ತು ಸರ್ಕಾರಿ ಸಚೇತಕ ಅರವ ಶ್ರೀಧರ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ಬಲವಂತದ ಗರ್ಭಪಾತ ಆರೋಪ ಮಾಡಿದ್ದಾರೆ. ಈ ಕುರಿತು ವಿಡಿಯೋ...

ಬಾರಾಮತಿ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ; ಸಂತಾಪ ಸೂಚಿಸಿದ ಪ್ರಮುಖರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ಐವರು ಜನರು ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಪುಣೆ ಜಿಲ್ಲೆಯಲ್ಲಿ ಪತನಗೊಂಡು ಸಾವನ್ನಪ್ಪಿದ್ದಾರೆ. ಎನ್‌ಸಿಪಿ ನಾಯಕರಾದ ಅಜಿತ್ ಪವಾರ್ (66) ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ...