Homeನಿಜವೋ ಸುಳ್ಳೋಫ್ಯಾಕ್ಟ್‌ಚೆಕ್‌: ದಲಿತ ಮಹಿಳೆ ತಯಾರಿಸಿದ ಆಹಾರ ನಿರಾಕರಿಸಿದ ಯುವಕರು - ವಾಸ್ತವವೇನು?

ಫ್ಯಾಕ್ಟ್‌ಚೆಕ್‌: ದಲಿತ ಮಹಿಳೆ ತಯಾರಿಸಿದ ಆಹಾರ ನಿರಾಕರಿಸಿದ ಯುವಕರು – ವಾಸ್ತವವೇನು?

- Advertisement -
- Advertisement -

ದಲಿತ ಮಹಿಳೆ ತಯಾರಿಸಿದ ಆಹಾರ ನಿರಾಕರಿಸಿದ ಯುವಕರು ಎಂಬ ಟೈಟಲ್‌ನಲ್ಲಿ ಜನರನ್ನು ದಿಕ್ಕುತಪ್ಪಿಸಲು ಸಂಬಂಧವಿಲ್ಲದ 2 ಕ್ವಾರಂಟೈನ್ ಸೆಂಟರ್ ಗಳ ಘಟನೆಗಳನ್ನು ಜೋಡಿಸಿರುವ ಸುದ್ದಿ ಇದಾಗಿದೆ.

ಯುವಕನೊಬ್ಬ ಊಟ ಇಟ್ಟಿರುವ ಟೇಬಲ್ ಒಂದನ್ನು ಕಾಲಿನಿದ್ದು ಒದ್ದು ಬೀಳಿಸುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, “ಉತ್ತರ ಪ್ರದೇಶದ ಕ್ವಾರಂಟೈನ್ ಸೆಂಟರ್ ಒಂದರಲ್ಲಿ ಅಡುಗೆ ಮಾಡಿದ್ದು ದಲಿತ ಮಹಿಳೆ ಎಂಬ ಕಾರಣದಿಂದ ಅನ್ನವನ್ನು ಕಾಲಿನಿಂದ ಒದ್ದ ಸಿರಾಜ್ ಅಹ್ಮದ್ ಮತ್ತು ಬುಜೌಲಿ ಕುರ್ದ್ ಎಂಬ ನಾಲಾಯಕ್ಕುಗಳಿಗೆ ಕಾನೂನು ರೀತ್ಯ ಕ್ರಮ ಜರುಗಿಸಬೇಕು” ಎಂದು ಆಗ್ರಹಿಸಲಾಗಿದೆ.  ಈ ಸಂಗತಿ ನಿಜವೇ ಪರಿಶೀಲಿಸೋಣ ಬನ್ನಿ.

ಈ ಪೋಸ್ಟ್ ನ ಆರ್ಕೈವ್ ಆವೃತ್ತಿ ಇಲ್ಲಿದೆ.

ಈ ಪೋಸ್ಟ್ ನ ಆರ್ಕೈವ್ ಆವೃತ್ತಿ ಇಲ್ಲಿದೆ.

ಮಂಡನೆ: ದಲಿತ ಮಹಿಳೆ ಊಟ ತಯಾರಿಸಿದ ಕಾರಣಕ್ಕೆ ಊಟ ನಿರಾಕರಿಸಿದ ಉತ್ತರ ಪ್ರದೇಶ ಮೇಲ್ಜಾತಿ ಯುವಕರು

ನಿಜಾಂಶ: ಈ ವಿಡಿಯೋವನ್ನು ಬಿಹಾರದಲ್ಲಿ ಸೆರೆಹಿಡಿಯಲಾಗಿದೆ. ವಿಡಿಯೋದಲ್ಲಿ ಕಾಣುವ ಯುವಕರು ಅಡುಗೆ ಮಾಡುವ ಮಹಿಳೆಗೆ ಹತ್ತಿರದಿಂದ ಊಟ ಬಡಿಸುವಂತೆ ತಾಕೀತು ಮಾಡಿದ್ದಾರೆ. ಆದರೆ ಅಡುಗೆ ಮಹಿಳೆಯು ಬೇಡಿಕೆಯನ್ನು ನಿರಾಕರಿಸಿ ಸಾಮಾಜಿಕ ಅಂತರ ಕಾಯ್ದುಕೊಂಡೇ ಊಟ ಬಡಿಸುವುದಾಗಿ ತಿಳಿಸಿದ್ದಾಳೆ. ಆಗ ಯುವಕರು ಊಟದ ಟೇಬಲ್ ಅನ್ನು ಕಾಲಿನಿಂದ ಒದ್ದಿದ್ದಾರೆ. ಇದರಲ್ಲಿ ದಲಿತ ದೃಷ್ಟೀಕೋನವಿಲ್ಲ. ಇದಕ್ಕಾಗಿ ಪಂಕಜ್, ಮನೋಜ್ ಮತ್ತು ಅಶೋಕ್ ಎಂಬ ಮೂವರ ಮೇಲೆ ಎಫ್.ಐ.ಆರ್ ದಾಖಲಾಗಿದೆ.

ಇನ್ನೊಂದು ಪ್ರಕರಣದಲ್ಲಿ ಸಿರಾಜ್ ಅಹ್ಮದ್, ಉತ್ತರ ಪ್ರದೇಶದ ಬುಜೌಲಿ ಗ್ರಾಮದ ನಿವಾಸಿಯಾಗಿದ್ದು ಅಲ್ಲಿನ ಕ್ವಾರಂಟೈನ್ ಸೆಂಟರ್ ನಲ್ಲಿ ದಲಿತ ಮಹಿಳೆ ಅಡುಗೆ ತಯಾರಿಸಿದ ಕಾರಣಕ್ಕೆ ತಿರಸ್ಕರಿಸಿದ್ದನು. ಹಾಗಾಗಿ ಬಿಹಾರದಲ್ಲಿ ನಡೆದ ಘಟನೆಯ ವಿಡಿಯೋವನ್ನು ಉತ್ತರ ಪ್ರದೇಶದಲ್ಲಿ ನಡೆದಿದ್ದು ಎಂದು ಹಂಚಿಕೊಳ್ಳಲಾಗಿದೆ. ಆದರೂ ಮಂಡನೆಯನ್ನು ಜನರನ್ನು ದಾರಿತಪ್ಪಿಸುತ್ತದೆ.

ಘಟನೆ -1

ವಿಡಿಯೋದ ಸ್ಕ್ರೀನ್ ಶಾಟ್ ಅನ್ನು ಗೂಗಲ್ ಇಮೇಜ್ ರಿವರ್ಸ್ ಸರ್ಚ್ ಮಾಡಿದಾಗ ಹಲವು ಪತ್ರಿಕಾ ವರದಿಗಳು ತೆರೆದುಕೊಳ್ಳುತ್ತವೆ. ದೈನಿಕ್ ಭಾಸ್ಕರ್ ವರದಿಯಂತೆ ಈ ವಿಡಿಯೋವು ಬಿಹಾರದಲ್ಲಿ ನಡೆದಿದ್ದು, ಮಹಿಳೆಯು ಊಟ ಬಡಿಸುವಾಗ ದೈಹಿಕ ದೂರ ಕಾಪಾಡಿಕೊಂಡಿದ್ದಾರೆ. ವಲಸೆ ಕಾರ್ಮಿಕನಾದ ಪಂಕಜ್ ಕುಮಾರ್ ರೈ, ಮನೋಜ್ ಕುಮಾರ್ ರೈ ಮತ್ತು ಅಶೋಕ್ ಸಾನೆ ಹತ್ತಿರದಿಂದ ಊಟ ಬಡಿಸಲು ಕೇಳಿದ್ದಾರೆ. ಮಹಿಳೆ ನಿರಾಕರಿಸಿದಾಗ ಕೋಪಗೊಂಡ ಯುವಕರು ಊಟದ ಟೇಬಲ್ ಅನ್ನು ಕಾಲಿನಿಂದ ಒದ್ದು ಬೀಳಿಸಿದ್ದಾರೆ. ಜಾಗರಣ್ ಪತ್ರಿಕೆಯ ಲೇಖನದಲ್ಲಿ ಇದು ವರದಿಯಾಗಿದೆ.

ಮತ್ತೊಂದು ಎಬಿಪಿ ಬಿಹಾರ್ ಪತ್ರಿಕೆಯ ಲೇಖನವು ‘ಕಳಪೆ ಗುಣಮಟ್ಟದ ಆಹಾರ’ ಕೊಡುವುದನ್ನು ವಿರೋಧಿಸಿ ಯುವಕ ಊಟದ ಟೇಬಲ್ ಒದ್ದಿದ್ದಾನೆ ಎಂದು ವರದಿ ಮಾಡಿದೆ. ಒಟ್ಟಿನಲ್ಲಿ ಯಾವ ಪತ್ರಿಕೆಗಳು ಸಹ ದಲಿತ ದೃಷ್ಟಿಕೋನವನ್ನು ಉಲ್ಲೇಖಿಸಿಲ್ಲ.

ಘಟನೆ-2

ದಲಿತ ಮಹಿಳೆ ಹಲ್ಲೆ ಎಂಬ ಕೀವರ್ಡ್ ಗಳನ್ನು ಬಳಸಿ ಹುಡುಕಿದಾಗ ಹಲವು ಪತ್ರಿಕಾ ವರದಿಗಳು ಕಂಡುಬಂದಿವೆ. ಔಟ್ ಲುಕ್ ಲೇಖನದಂತೆ, ಕ್ವಾಂರಟೈನ್ ಸೆಂಟರ್ ನಲ್ಲಿ ದಲಿತ ಮಹಿಳೆ ಆಹಾರದ ತಯಾರಿಸಿದ್ದಾರೆ ಎಂಬ ಕಾರಣಕ್ಕೆ ಊಟ ನಿರಾಕರಿಸಿದ 35 ವರ್ಷ ವಯಸ್ಸಿನ ಸಿರಾಜ್ ಅಹ್ಮದ್ ಎಂಬುವವರ ಮೇಲೆ ಖಾಡ್ಡ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲು ಮಾಡಲಾಗಿದೆ. ಈತ ಉತ್ತರ ಪ್ರದೇಶದ ಖುಷಿ ನಗರ್ ಜಿಲ್ಲೆಯ ಭುಜೌಲಿ ಖುರ್ದ್ ನಿವಾಸಿಯಾಗಿದ್ದು, ದೆಹಲಿಯಿಂದ ಮಾರ್ಚ್ 29 ರಂದು ನಗರಕ್ಕೆ ಹಿಂತಿರುಗಿದ್ದು, ಅಲ್ಲಿನ ಸರ್ಕಾರಿ ಶಾಲೆಯ ಕ್ವಾರಂಟೈನ್ ಸೆಂಟರ್ ನಲ್ಲಿ ನಾಲ್ಕು ಜನರೊಂದಿಗೆ ತಂಗಿದ್ದರು ಎನ್ನಲಾಗಿದೆ.

ಈ ಘಟನೆಗೆ ಸಂಬಂಧಿಸಿದ ಎಫ್.ಐ.ಆರ್ ಪ್ರತಿ ಇಲ್ಲಿದೆ.

ಒಟ್ಟಿನಲ್ಲಿ ಆಹಾರಕ್ಕೆ ಸಂಬಂಧಿಸಿದ ಎರಡು ಪ್ರತ್ಯೇಕ ಕ್ವಾರಂಟೈನ್ ಸೆಂಟರ್ ನ ಘಟನೆಗಳು ಮಿಶ್ರಿತವಾಗಿ ಜನರನ್ನು ದಾರಿ ತಪ್ಪಿಸಿವೆ.

ಕೃಪೆ: ಫ್ಯಾಕ್ಟ್ಲಿ


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಅಸ್ಸಾಂನಲ್ಲಿ ತಾಯಿ ಕಳೆದುಕೊಂಡ ಚಿರತೆ ಮರಿಗೆ ಅಮ್ಮನ ಪ್ರೀತಿ ನೀಡಿದ ಸಾಕಿದ ಹಸು? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘168 ಮಕ್ಕಳನ್ನು ಕೊಂದವರ ನೆನಪಿಡಿ’ : ಇರಾನ್‌ನಿಂದ ಅಮೆರಿಕ ಅಧಿಕಾರಿಗಳ ಫೋಟೋ ಬಿಡುಗಡೆ

ಬರೋಬ್ಬರಿ 168 ಕಂದಮ್ಮಗಳ ಸಾವಿಗೆ ಕಾರಣವಾದ, ಮಿನಾಬ್‌ನ ಶಾಲೆ ಮೇಲಿನ ಕ್ಷಿಪಣಿ ದಾಳಿಗೆ ಅಮೆರಿಕದ ನೌಕಾಪಡೆಯ ಅಧಿಕಾರಿಗಳಾದ ಕಮಾಂಡರ್ ಲೀ ಆರ್. ಟೇಟ್ ಮತ್ತು ಯುಎಸ್ಎಸ್ ಸ್ಪ್ರೂಯನ್ಸ್‌ನ ಎಕ್ಸಿಕ್ಯೂಟಿವ್ ಆಫೀಸರ್ ಜೆಫ್ರಿ ಇ....

ಕೇರಳ ವಿಧಾನಸಭಾ ಚುನಾವಣೆ 2026 | ‘ಎಲ್‌ಡಿಎಫ್, ಯುಡಿಎಫ್ ದಶಕಗಳಿಂದ ರಾಜ್ಯವನ್ನು ಲೂಟಿ ಮಾಡಿವೆ’: ಪ್ರಧಾನಿ ಮೋದಿ

ಕೇರಳ ವಿಧಾನಸಭಾ ಚುನಾವಣೆ 2026 ರ ಹಿನ್ನೆಲೆಯಲ್ಲಿ ಪಾಲಕ್ಕಾಡ್‌ನಲ್ಲಿ ಭಾನುವಾರ ಬೃಹತ್ ಚುನಾವಣಾ ರ್ಯಾಲಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಯುಡಿಎಫ್ ಮತ್ತು ಎಲ್‌ಡಿಎಫ್ ಎರಡರ ಮೇಲೂ ತೀವ್ರ ದಾಳಿ ನಡೆಸಿದ್ದಾರೆ. ಈ...

ದಕ್ಷಿಣ ಲೆಬನಾನ್‌ನಲ್ಲಿ ಇಸ್ರೇಲ್ ವೈಮಾನಿಕ ದಾಳಿ : ಮೂವರು ಪತ್ರಕರ್ತರು, 9 ಪ್ಯಾರಾಮೆಡಿಕಲ್ ಸಿಬ್ಬಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿ ಶನಿವಾರ (ಮಾ.28) ಇಸ್ರೇಲ್ ನಡೆಸಿದ ವೈಮಾನಿಕ ದಾಳಿಗಳಲ್ಲಿ ಮೂವರು ಪತ್ರಕರ್ತರು ಮತ್ತು ಒಂಬತ್ತು ಅರೆವೈದ್ಯಕೀಯ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆ ಅಲ್‌-ಜಝೀರಾ ವರದಿ ಮಾಡಿದೆ. ಜೆಝೈನ್ ರಸ್ತೆಯಲ್ಲಿ ಪತ್ರಕರ್ತರ...

ಉತ್ತರ ಪ್ರದೇಶ: 25 ವರ್ಷದ ಐಸ್ ಕ್ರೀಮ್ ಮಾರಾಟಗಾರನ ತಲೆ ಕತ್ತರಿಸಿ, ಮನೆಗೆ ತೆಗೆದುಕೊಂಡು ಹೋಗಿದ್ದ ವ್ಯಕ್ತಿ ಬಂಧನ 

ಬಾರಾಬಂಕಿ: ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಶನಿವಾರ 25 ವರ್ಷದ ಐಸ್ ಕ್ರೀಮ್ ಮಾರಾಟಗಾರನ ಶಿರಚ್ಛೇದ ಮಾಡಲಾಗಿತ್ತು. 50 ವರ್ಷದ ಕೊಲೆಗಾರ, ಆ ವ್ಯಕ್ತಿಯ ಗಂಟಲು ಕತ್ತರಿಸಿ, ತಲೆ ಕತ್ತರಿಸಿ, ನಂತರ ಅದನ್ನು ತನ್ನ...

ಗ್ಯಾಸ್‌ ಸಿಲಿಂಡರ್‌ಗಾಗಿ ಸುಡು ಬಿಸಿಲಿನಲ್ಲಿ 4 ಗಂಟೆ ಕಾದ ವ್ಯಕ್ತಿ : ಕುಸಿದು ಬಿದ್ದು ಸ್ಥಳದಲ್ಲೇ ಸಾವು!

ಎಲ್‌ಪಿಜಿ ಸಿಲಿಂಡರ್ ಪಡೆಯಲು 41.2 ಡಿಗ್ರಿ ಸೆಲ್ಸಿಯಸ್ ಸುಡು ಬಿಸಿಲಿನಲ್ಲಿ 4 ಗಂಟೆ ಕಾದ 55 ವರ್ಷದ ವ್ಯಕ್ತಿ, ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ ಅಕೋಲಾ ಬಳಿ ನಡೆದಿದೆ. ಅಕೋಲಾದಿಂದ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ: ಆರ್‌ಎಸ್‌ಎಸ್ ನಾಯಕ ಸೇರಿ 30 ಮಂದಿ ಬಂಧನ, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದ ಪೊಲೀಸರು

ಶುಕ್ರವಾರ ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ಹಿಂದೂತ್ವ ಗುಂಪುಗಳು ನಡೆಸಿದ ರಾಮನವಮಿ ಮೆರವಣಿಗೆಯಲ್ಲಿ ಮುಸ್ಲಿಂ ಅಂಗಡಿಗಳು ಮತ್ತು ಆಸ್ತಿಗಳನ್ನು ಗುರಿಯಾಗಿಸಿಕೊಂಡು ನಡೆದ ದಾಳಿಯಲ್ಲಿ ಸುಮಾರು 30 ಜನರು ಗಾಯಗೊಂಡು, ಆ ಪ್ರದೇಶದಲ್ಲಿ...

ಅತ್ಯಾಚಾರ ಪ್ರಕರಣ: ಸ್ವಘೋಷಿತ ‘ದೇವಮಾನವ’ ಅಶೋಕ್ ಖರತ್ ಪೊಲೀಸ್ ಕಸ್ಟಡಿಯನ್ನು ಏಪ್ರಿಲ್ 1 ರವರೆಗೆ ವಿಸ್ತರಿಸಿದ ನಾಸಿಕ್ ಕೋರ್ಟ್

ನಾಸಿಕ್: ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾಗಿರುವ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಪೊಲೀಸ್ ಕಸ್ಟಡಿಯನ್ನು ನಾಸಿಕ್ ನ್ಯಾಯಾಲಯವು ಭಾನುವಾರ ಏಪ್ರಿಲ್ 1 ರವರೆಗೆ ವಿಸ್ತರಿಸಿ ಆದೇಶ ನೀಡಿದೆ. ನಾಶಿಕ್ ಜಿಲ್ಲೆಯ ಮಿರ್ಗಾಂವ್‌ನಲ್ಲಿರುವ ದೇವಾಲಯ...

ಚೊಚ್ಚಲ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಟಿವಿಕೆ : ಎರಡು ಕ್ಷೇತ್ರಗಳಿಂದ ನಟ ವಿಜಯ್ ಸ್ಪರ್ಧೆ

ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡಲಿದ್ದಾರೆ. ಚೆನ್ನೈ ಜಿಲ್ಲೆಯ ಪೆರಂಬೂರು ಮತ್ತು ತಿರುಚಿರಾಪಳ್ಳಿ...

ಲೈಂಗಿಕ ಪ್ರಕರಣದ ಆರೋಪಿ ಅಶೋಕ್ ಖರತ್ ಅವರನ್ನು ರಕ್ಷಣೆಯಲ್ಲಿ ಇಡಬೇಕು; ಕಸ್ಟಡಿಯಲ್ಲಿ ಕೊಲೆಯಾಗುವ ಸಾಧ್ಯತೆ ಹೆಚ್ಚಿದೆ: ಪ್ರಕಾಶ್ ಅಂಬೇಡ್ಕರ್

ಮುಂಬೈ: ಕಾಂಗ್ರೆಸ್ ನಂತರ, ವಂಚಿತ್ ಬಹುಜನ ಅಘಾಡಿ ಸ್ಥಾಪಕ-ಅಧ್ಯಕ್ಷ ಪ್ರಕಾಶ್ ಅಂಬೇಡ್ಕರ್ ಅವರು, ಲೈಂಗಿಕ ದೌರ್ಜನ್ಯ ಪ್ರಕರಣಗಳ ಸರಣಿಯಲ್ಲಿ ಬಂಧಿಸಲ್ಪಟ್ಟಿರುವ ಸ್ವಯಂ ಘೋಷಿತ ದೇವಮಾನವ 'ಕ್ಯಾಪ್ಟನ್' ಅಶೋಕ್ ಖರತ್ ಅವರನ್ನು ಪೊಲೀಸ್ ಮತ್ತು...

ಇಸ್ರೇಲ್‌ನ ಹಲವೆಡೆ ಯುದ್ಧ ವಿರೋಧಿ ಪ್ರತಿಭಟನೆ : ನೆತನ್ಯಾಹು ಆಡಳಿತದ ವಿರುದ್ಧ ಭುಗಿಲೆದ್ದ ಜನಾಕ್ರೋಶ

ಪಶ್ಚಿಮ ಏಷ್ಯಾ ಸಂಘರ್ಷವು ಎರಡನೇ ತಿಂಗಳಿಗೆ ಕಾಲಿಡುತ್ತಿದ್ದಂತೆ, ಇಸ್ರೇಲ್‌ನಲ್ಲಿ ನೆತನ್ಯಾಹು ಆಡಳಿತದ ವಿರುದ್ದ ಜನಾಕ್ರೋಶ ಭುಗಿಲೆದ್ದಿದೆ. ಪ್ರಮುಖ ನಗರಗಳಾದ ಟೆಲ್ ಅವಿವ್, ಜೆರುಸಲೇಂ ಮತ್ತು ಹೈಫಾದಲ್ಲಿ ಸಾವಿರಾರು ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ....