Homeನಿಜವೋ ಸುಳ್ಳೋಫ್ಯಾಕ್ಟ್‌ಚೆಕ್‌: ದಲಿತ ಮಹಿಳೆ ತಯಾರಿಸಿದ ಆಹಾರ ನಿರಾಕರಿಸಿದ ಯುವಕರು - ವಾಸ್ತವವೇನು?

ಫ್ಯಾಕ್ಟ್‌ಚೆಕ್‌: ದಲಿತ ಮಹಿಳೆ ತಯಾರಿಸಿದ ಆಹಾರ ನಿರಾಕರಿಸಿದ ಯುವಕರು – ವಾಸ್ತವವೇನು?

- Advertisement -
- Advertisement -

ದಲಿತ ಮಹಿಳೆ ತಯಾರಿಸಿದ ಆಹಾರ ನಿರಾಕರಿಸಿದ ಯುವಕರು ಎಂಬ ಟೈಟಲ್‌ನಲ್ಲಿ ಜನರನ್ನು ದಿಕ್ಕುತಪ್ಪಿಸಲು ಸಂಬಂಧವಿಲ್ಲದ 2 ಕ್ವಾರಂಟೈನ್ ಸೆಂಟರ್ ಗಳ ಘಟನೆಗಳನ್ನು ಜೋಡಿಸಿರುವ ಸುದ್ದಿ ಇದಾಗಿದೆ.

ಯುವಕನೊಬ್ಬ ಊಟ ಇಟ್ಟಿರುವ ಟೇಬಲ್ ಒಂದನ್ನು ಕಾಲಿನಿದ್ದು ಒದ್ದು ಬೀಳಿಸುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, “ಉತ್ತರ ಪ್ರದೇಶದ ಕ್ವಾರಂಟೈನ್ ಸೆಂಟರ್ ಒಂದರಲ್ಲಿ ಅಡುಗೆ ಮಾಡಿದ್ದು ದಲಿತ ಮಹಿಳೆ ಎಂಬ ಕಾರಣದಿಂದ ಅನ್ನವನ್ನು ಕಾಲಿನಿಂದ ಒದ್ದ ಸಿರಾಜ್ ಅಹ್ಮದ್ ಮತ್ತು ಬುಜೌಲಿ ಕುರ್ದ್ ಎಂಬ ನಾಲಾಯಕ್ಕುಗಳಿಗೆ ಕಾನೂನು ರೀತ್ಯ ಕ್ರಮ ಜರುಗಿಸಬೇಕು” ಎಂದು ಆಗ್ರಹಿಸಲಾಗಿದೆ.  ಈ ಸಂಗತಿ ನಿಜವೇ ಪರಿಶೀಲಿಸೋಣ ಬನ್ನಿ.

ಈ ಪೋಸ್ಟ್ ನ ಆರ್ಕೈವ್ ಆವೃತ್ತಿ ಇಲ್ಲಿದೆ.

ಈ ಪೋಸ್ಟ್ ನ ಆರ್ಕೈವ್ ಆವೃತ್ತಿ ಇಲ್ಲಿದೆ.

ಮಂಡನೆ: ದಲಿತ ಮಹಿಳೆ ಊಟ ತಯಾರಿಸಿದ ಕಾರಣಕ್ಕೆ ಊಟ ನಿರಾಕರಿಸಿದ ಉತ್ತರ ಪ್ರದೇಶ ಮೇಲ್ಜಾತಿ ಯುವಕರು

ನಿಜಾಂಶ: ಈ ವಿಡಿಯೋವನ್ನು ಬಿಹಾರದಲ್ಲಿ ಸೆರೆಹಿಡಿಯಲಾಗಿದೆ. ವಿಡಿಯೋದಲ್ಲಿ ಕಾಣುವ ಯುವಕರು ಅಡುಗೆ ಮಾಡುವ ಮಹಿಳೆಗೆ ಹತ್ತಿರದಿಂದ ಊಟ ಬಡಿಸುವಂತೆ ತಾಕೀತು ಮಾಡಿದ್ದಾರೆ. ಆದರೆ ಅಡುಗೆ ಮಹಿಳೆಯು ಬೇಡಿಕೆಯನ್ನು ನಿರಾಕರಿಸಿ ಸಾಮಾಜಿಕ ಅಂತರ ಕಾಯ್ದುಕೊಂಡೇ ಊಟ ಬಡಿಸುವುದಾಗಿ ತಿಳಿಸಿದ್ದಾಳೆ. ಆಗ ಯುವಕರು ಊಟದ ಟೇಬಲ್ ಅನ್ನು ಕಾಲಿನಿಂದ ಒದ್ದಿದ್ದಾರೆ. ಇದರಲ್ಲಿ ದಲಿತ ದೃಷ್ಟೀಕೋನವಿಲ್ಲ. ಇದಕ್ಕಾಗಿ ಪಂಕಜ್, ಮನೋಜ್ ಮತ್ತು ಅಶೋಕ್ ಎಂಬ ಮೂವರ ಮೇಲೆ ಎಫ್.ಐ.ಆರ್ ದಾಖಲಾಗಿದೆ.

ಇನ್ನೊಂದು ಪ್ರಕರಣದಲ್ಲಿ ಸಿರಾಜ್ ಅಹ್ಮದ್, ಉತ್ತರ ಪ್ರದೇಶದ ಬುಜೌಲಿ ಗ್ರಾಮದ ನಿವಾಸಿಯಾಗಿದ್ದು ಅಲ್ಲಿನ ಕ್ವಾರಂಟೈನ್ ಸೆಂಟರ್ ನಲ್ಲಿ ದಲಿತ ಮಹಿಳೆ ಅಡುಗೆ ತಯಾರಿಸಿದ ಕಾರಣಕ್ಕೆ ತಿರಸ್ಕರಿಸಿದ್ದನು. ಹಾಗಾಗಿ ಬಿಹಾರದಲ್ಲಿ ನಡೆದ ಘಟನೆಯ ವಿಡಿಯೋವನ್ನು ಉತ್ತರ ಪ್ರದೇಶದಲ್ಲಿ ನಡೆದಿದ್ದು ಎಂದು ಹಂಚಿಕೊಳ್ಳಲಾಗಿದೆ. ಆದರೂ ಮಂಡನೆಯನ್ನು ಜನರನ್ನು ದಾರಿತಪ್ಪಿಸುತ್ತದೆ.

ಘಟನೆ -1

ವಿಡಿಯೋದ ಸ್ಕ್ರೀನ್ ಶಾಟ್ ಅನ್ನು ಗೂಗಲ್ ಇಮೇಜ್ ರಿವರ್ಸ್ ಸರ್ಚ್ ಮಾಡಿದಾಗ ಹಲವು ಪತ್ರಿಕಾ ವರದಿಗಳು ತೆರೆದುಕೊಳ್ಳುತ್ತವೆ. ದೈನಿಕ್ ಭಾಸ್ಕರ್ ವರದಿಯಂತೆ ಈ ವಿಡಿಯೋವು ಬಿಹಾರದಲ್ಲಿ ನಡೆದಿದ್ದು, ಮಹಿಳೆಯು ಊಟ ಬಡಿಸುವಾಗ ದೈಹಿಕ ದೂರ ಕಾಪಾಡಿಕೊಂಡಿದ್ದಾರೆ. ವಲಸೆ ಕಾರ್ಮಿಕನಾದ ಪಂಕಜ್ ಕುಮಾರ್ ರೈ, ಮನೋಜ್ ಕುಮಾರ್ ರೈ ಮತ್ತು ಅಶೋಕ್ ಸಾನೆ ಹತ್ತಿರದಿಂದ ಊಟ ಬಡಿಸಲು ಕೇಳಿದ್ದಾರೆ. ಮಹಿಳೆ ನಿರಾಕರಿಸಿದಾಗ ಕೋಪಗೊಂಡ ಯುವಕರು ಊಟದ ಟೇಬಲ್ ಅನ್ನು ಕಾಲಿನಿಂದ ಒದ್ದು ಬೀಳಿಸಿದ್ದಾರೆ. ಜಾಗರಣ್ ಪತ್ರಿಕೆಯ ಲೇಖನದಲ್ಲಿ ಇದು ವರದಿಯಾಗಿದೆ.

ಮತ್ತೊಂದು ಎಬಿಪಿ ಬಿಹಾರ್ ಪತ್ರಿಕೆಯ ಲೇಖನವು ‘ಕಳಪೆ ಗುಣಮಟ್ಟದ ಆಹಾರ’ ಕೊಡುವುದನ್ನು ವಿರೋಧಿಸಿ ಯುವಕ ಊಟದ ಟೇಬಲ್ ಒದ್ದಿದ್ದಾನೆ ಎಂದು ವರದಿ ಮಾಡಿದೆ. ಒಟ್ಟಿನಲ್ಲಿ ಯಾವ ಪತ್ರಿಕೆಗಳು ಸಹ ದಲಿತ ದೃಷ್ಟಿಕೋನವನ್ನು ಉಲ್ಲೇಖಿಸಿಲ್ಲ.

ಘಟನೆ-2

ದಲಿತ ಮಹಿಳೆ ಹಲ್ಲೆ ಎಂಬ ಕೀವರ್ಡ್ ಗಳನ್ನು ಬಳಸಿ ಹುಡುಕಿದಾಗ ಹಲವು ಪತ್ರಿಕಾ ವರದಿಗಳು ಕಂಡುಬಂದಿವೆ. ಔಟ್ ಲುಕ್ ಲೇಖನದಂತೆ, ಕ್ವಾಂರಟೈನ್ ಸೆಂಟರ್ ನಲ್ಲಿ ದಲಿತ ಮಹಿಳೆ ಆಹಾರದ ತಯಾರಿಸಿದ್ದಾರೆ ಎಂಬ ಕಾರಣಕ್ಕೆ ಊಟ ನಿರಾಕರಿಸಿದ 35 ವರ್ಷ ವಯಸ್ಸಿನ ಸಿರಾಜ್ ಅಹ್ಮದ್ ಎಂಬುವವರ ಮೇಲೆ ಖಾಡ್ಡ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲು ಮಾಡಲಾಗಿದೆ. ಈತ ಉತ್ತರ ಪ್ರದೇಶದ ಖುಷಿ ನಗರ್ ಜಿಲ್ಲೆಯ ಭುಜೌಲಿ ಖುರ್ದ್ ನಿವಾಸಿಯಾಗಿದ್ದು, ದೆಹಲಿಯಿಂದ ಮಾರ್ಚ್ 29 ರಂದು ನಗರಕ್ಕೆ ಹಿಂತಿರುಗಿದ್ದು, ಅಲ್ಲಿನ ಸರ್ಕಾರಿ ಶಾಲೆಯ ಕ್ವಾರಂಟೈನ್ ಸೆಂಟರ್ ನಲ್ಲಿ ನಾಲ್ಕು ಜನರೊಂದಿಗೆ ತಂಗಿದ್ದರು ಎನ್ನಲಾಗಿದೆ.

ಈ ಘಟನೆಗೆ ಸಂಬಂಧಿಸಿದ ಎಫ್.ಐ.ಆರ್ ಪ್ರತಿ ಇಲ್ಲಿದೆ.

ಒಟ್ಟಿನಲ್ಲಿ ಆಹಾರಕ್ಕೆ ಸಂಬಂಧಿಸಿದ ಎರಡು ಪ್ರತ್ಯೇಕ ಕ್ವಾರಂಟೈನ್ ಸೆಂಟರ್ ನ ಘಟನೆಗಳು ಮಿಶ್ರಿತವಾಗಿ ಜನರನ್ನು ದಾರಿ ತಪ್ಪಿಸಿವೆ.

ಕೃಪೆ: ಫ್ಯಾಕ್ಟ್ಲಿ


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಅಸ್ಸಾಂನಲ್ಲಿ ತಾಯಿ ಕಳೆದುಕೊಂಡ ಚಿರತೆ ಮರಿಗೆ ಅಮ್ಮನ ಪ್ರೀತಿ ನೀಡಿದ ಸಾಕಿದ ಹಸು? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...