Homeನಿಜವೋ ಸುಳ್ಳೋಫ್ಯಾಕ್ಟ್‌ಚೆಕ್‌: ದಲಿತ ಮಹಿಳೆ ತಯಾರಿಸಿದ ಆಹಾರ ನಿರಾಕರಿಸಿದ ಯುವಕರು - ವಾಸ್ತವವೇನು?

ಫ್ಯಾಕ್ಟ್‌ಚೆಕ್‌: ದಲಿತ ಮಹಿಳೆ ತಯಾರಿಸಿದ ಆಹಾರ ನಿರಾಕರಿಸಿದ ಯುವಕರು – ವಾಸ್ತವವೇನು?

- Advertisement -
- Advertisement -

ದಲಿತ ಮಹಿಳೆ ತಯಾರಿಸಿದ ಆಹಾರ ನಿರಾಕರಿಸಿದ ಯುವಕರು ಎಂಬ ಟೈಟಲ್‌ನಲ್ಲಿ ಜನರನ್ನು ದಿಕ್ಕುತಪ್ಪಿಸಲು ಸಂಬಂಧವಿಲ್ಲದ 2 ಕ್ವಾರಂಟೈನ್ ಸೆಂಟರ್ ಗಳ ಘಟನೆಗಳನ್ನು ಜೋಡಿಸಿರುವ ಸುದ್ದಿ ಇದಾಗಿದೆ.

ಯುವಕನೊಬ್ಬ ಊಟ ಇಟ್ಟಿರುವ ಟೇಬಲ್ ಒಂದನ್ನು ಕಾಲಿನಿದ್ದು ಒದ್ದು ಬೀಳಿಸುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, “ಉತ್ತರ ಪ್ರದೇಶದ ಕ್ವಾರಂಟೈನ್ ಸೆಂಟರ್ ಒಂದರಲ್ಲಿ ಅಡುಗೆ ಮಾಡಿದ್ದು ದಲಿತ ಮಹಿಳೆ ಎಂಬ ಕಾರಣದಿಂದ ಅನ್ನವನ್ನು ಕಾಲಿನಿಂದ ಒದ್ದ ಸಿರಾಜ್ ಅಹ್ಮದ್ ಮತ್ತು ಬುಜೌಲಿ ಕುರ್ದ್ ಎಂಬ ನಾಲಾಯಕ್ಕುಗಳಿಗೆ ಕಾನೂನು ರೀತ್ಯ ಕ್ರಮ ಜರುಗಿಸಬೇಕು” ಎಂದು ಆಗ್ರಹಿಸಲಾಗಿದೆ.  ಈ ಸಂಗತಿ ನಿಜವೇ ಪರಿಶೀಲಿಸೋಣ ಬನ್ನಿ.

ಈ ಪೋಸ್ಟ್ ನ ಆರ್ಕೈವ್ ಆವೃತ್ತಿ ಇಲ್ಲಿದೆ.

ಈ ಪೋಸ್ಟ್ ನ ಆರ್ಕೈವ್ ಆವೃತ್ತಿ ಇಲ್ಲಿದೆ.

ಮಂಡನೆ: ದಲಿತ ಮಹಿಳೆ ಊಟ ತಯಾರಿಸಿದ ಕಾರಣಕ್ಕೆ ಊಟ ನಿರಾಕರಿಸಿದ ಉತ್ತರ ಪ್ರದೇಶ ಮೇಲ್ಜಾತಿ ಯುವಕರು

ನಿಜಾಂಶ: ಈ ವಿಡಿಯೋವನ್ನು ಬಿಹಾರದಲ್ಲಿ ಸೆರೆಹಿಡಿಯಲಾಗಿದೆ. ವಿಡಿಯೋದಲ್ಲಿ ಕಾಣುವ ಯುವಕರು ಅಡುಗೆ ಮಾಡುವ ಮಹಿಳೆಗೆ ಹತ್ತಿರದಿಂದ ಊಟ ಬಡಿಸುವಂತೆ ತಾಕೀತು ಮಾಡಿದ್ದಾರೆ. ಆದರೆ ಅಡುಗೆ ಮಹಿಳೆಯು ಬೇಡಿಕೆಯನ್ನು ನಿರಾಕರಿಸಿ ಸಾಮಾಜಿಕ ಅಂತರ ಕಾಯ್ದುಕೊಂಡೇ ಊಟ ಬಡಿಸುವುದಾಗಿ ತಿಳಿಸಿದ್ದಾಳೆ. ಆಗ ಯುವಕರು ಊಟದ ಟೇಬಲ್ ಅನ್ನು ಕಾಲಿನಿಂದ ಒದ್ದಿದ್ದಾರೆ. ಇದರಲ್ಲಿ ದಲಿತ ದೃಷ್ಟೀಕೋನವಿಲ್ಲ. ಇದಕ್ಕಾಗಿ ಪಂಕಜ್, ಮನೋಜ್ ಮತ್ತು ಅಶೋಕ್ ಎಂಬ ಮೂವರ ಮೇಲೆ ಎಫ್.ಐ.ಆರ್ ದಾಖಲಾಗಿದೆ.

ಇನ್ನೊಂದು ಪ್ರಕರಣದಲ್ಲಿ ಸಿರಾಜ್ ಅಹ್ಮದ್, ಉತ್ತರ ಪ್ರದೇಶದ ಬುಜೌಲಿ ಗ್ರಾಮದ ನಿವಾಸಿಯಾಗಿದ್ದು ಅಲ್ಲಿನ ಕ್ವಾರಂಟೈನ್ ಸೆಂಟರ್ ನಲ್ಲಿ ದಲಿತ ಮಹಿಳೆ ಅಡುಗೆ ತಯಾರಿಸಿದ ಕಾರಣಕ್ಕೆ ತಿರಸ್ಕರಿಸಿದ್ದನು. ಹಾಗಾಗಿ ಬಿಹಾರದಲ್ಲಿ ನಡೆದ ಘಟನೆಯ ವಿಡಿಯೋವನ್ನು ಉತ್ತರ ಪ್ರದೇಶದಲ್ಲಿ ನಡೆದಿದ್ದು ಎಂದು ಹಂಚಿಕೊಳ್ಳಲಾಗಿದೆ. ಆದರೂ ಮಂಡನೆಯನ್ನು ಜನರನ್ನು ದಾರಿತಪ್ಪಿಸುತ್ತದೆ.

ಘಟನೆ -1

ವಿಡಿಯೋದ ಸ್ಕ್ರೀನ್ ಶಾಟ್ ಅನ್ನು ಗೂಗಲ್ ಇಮೇಜ್ ರಿವರ್ಸ್ ಸರ್ಚ್ ಮಾಡಿದಾಗ ಹಲವು ಪತ್ರಿಕಾ ವರದಿಗಳು ತೆರೆದುಕೊಳ್ಳುತ್ತವೆ. ದೈನಿಕ್ ಭಾಸ್ಕರ್ ವರದಿಯಂತೆ ಈ ವಿಡಿಯೋವು ಬಿಹಾರದಲ್ಲಿ ನಡೆದಿದ್ದು, ಮಹಿಳೆಯು ಊಟ ಬಡಿಸುವಾಗ ದೈಹಿಕ ದೂರ ಕಾಪಾಡಿಕೊಂಡಿದ್ದಾರೆ. ವಲಸೆ ಕಾರ್ಮಿಕನಾದ ಪಂಕಜ್ ಕುಮಾರ್ ರೈ, ಮನೋಜ್ ಕುಮಾರ್ ರೈ ಮತ್ತು ಅಶೋಕ್ ಸಾನೆ ಹತ್ತಿರದಿಂದ ಊಟ ಬಡಿಸಲು ಕೇಳಿದ್ದಾರೆ. ಮಹಿಳೆ ನಿರಾಕರಿಸಿದಾಗ ಕೋಪಗೊಂಡ ಯುವಕರು ಊಟದ ಟೇಬಲ್ ಅನ್ನು ಕಾಲಿನಿಂದ ಒದ್ದು ಬೀಳಿಸಿದ್ದಾರೆ. ಜಾಗರಣ್ ಪತ್ರಿಕೆಯ ಲೇಖನದಲ್ಲಿ ಇದು ವರದಿಯಾಗಿದೆ.

ಮತ್ತೊಂದು ಎಬಿಪಿ ಬಿಹಾರ್ ಪತ್ರಿಕೆಯ ಲೇಖನವು ‘ಕಳಪೆ ಗುಣಮಟ್ಟದ ಆಹಾರ’ ಕೊಡುವುದನ್ನು ವಿರೋಧಿಸಿ ಯುವಕ ಊಟದ ಟೇಬಲ್ ಒದ್ದಿದ್ದಾನೆ ಎಂದು ವರದಿ ಮಾಡಿದೆ. ಒಟ್ಟಿನಲ್ಲಿ ಯಾವ ಪತ್ರಿಕೆಗಳು ಸಹ ದಲಿತ ದೃಷ್ಟಿಕೋನವನ್ನು ಉಲ್ಲೇಖಿಸಿಲ್ಲ.

ಘಟನೆ-2

ದಲಿತ ಮಹಿಳೆ ಹಲ್ಲೆ ಎಂಬ ಕೀವರ್ಡ್ ಗಳನ್ನು ಬಳಸಿ ಹುಡುಕಿದಾಗ ಹಲವು ಪತ್ರಿಕಾ ವರದಿಗಳು ಕಂಡುಬಂದಿವೆ. ಔಟ್ ಲುಕ್ ಲೇಖನದಂತೆ, ಕ್ವಾಂರಟೈನ್ ಸೆಂಟರ್ ನಲ್ಲಿ ದಲಿತ ಮಹಿಳೆ ಆಹಾರದ ತಯಾರಿಸಿದ್ದಾರೆ ಎಂಬ ಕಾರಣಕ್ಕೆ ಊಟ ನಿರಾಕರಿಸಿದ 35 ವರ್ಷ ವಯಸ್ಸಿನ ಸಿರಾಜ್ ಅಹ್ಮದ್ ಎಂಬುವವರ ಮೇಲೆ ಖಾಡ್ಡ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲು ಮಾಡಲಾಗಿದೆ. ಈತ ಉತ್ತರ ಪ್ರದೇಶದ ಖುಷಿ ನಗರ್ ಜಿಲ್ಲೆಯ ಭುಜೌಲಿ ಖುರ್ದ್ ನಿವಾಸಿಯಾಗಿದ್ದು, ದೆಹಲಿಯಿಂದ ಮಾರ್ಚ್ 29 ರಂದು ನಗರಕ್ಕೆ ಹಿಂತಿರುಗಿದ್ದು, ಅಲ್ಲಿನ ಸರ್ಕಾರಿ ಶಾಲೆಯ ಕ್ವಾರಂಟೈನ್ ಸೆಂಟರ್ ನಲ್ಲಿ ನಾಲ್ಕು ಜನರೊಂದಿಗೆ ತಂಗಿದ್ದರು ಎನ್ನಲಾಗಿದೆ.

ಈ ಘಟನೆಗೆ ಸಂಬಂಧಿಸಿದ ಎಫ್.ಐ.ಆರ್ ಪ್ರತಿ ಇಲ್ಲಿದೆ.

ಒಟ್ಟಿನಲ್ಲಿ ಆಹಾರಕ್ಕೆ ಸಂಬಂಧಿಸಿದ ಎರಡು ಪ್ರತ್ಯೇಕ ಕ್ವಾರಂಟೈನ್ ಸೆಂಟರ್ ನ ಘಟನೆಗಳು ಮಿಶ್ರಿತವಾಗಿ ಜನರನ್ನು ದಾರಿ ತಪ್ಪಿಸಿವೆ.

ಕೃಪೆ: ಫ್ಯಾಕ್ಟ್ಲಿ


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಅಸ್ಸಾಂನಲ್ಲಿ ತಾಯಿ ಕಳೆದುಕೊಂಡ ಚಿರತೆ ಮರಿಗೆ ಅಮ್ಮನ ಪ್ರೀತಿ ನೀಡಿದ ಸಾಕಿದ ಹಸು? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...