Homeನಿಜವೋ ಸುಳ್ಳೋಫ್ಯಾಕ್ಟ್‌ಚೆಕ್‌: ದಲಿತ ಮಹಿಳೆ ತಯಾರಿಸಿದ ಆಹಾರ ನಿರಾಕರಿಸಿದ ಯುವಕರು - ವಾಸ್ತವವೇನು?

ಫ್ಯಾಕ್ಟ್‌ಚೆಕ್‌: ದಲಿತ ಮಹಿಳೆ ತಯಾರಿಸಿದ ಆಹಾರ ನಿರಾಕರಿಸಿದ ಯುವಕರು – ವಾಸ್ತವವೇನು?

- Advertisement -
- Advertisement -

ದಲಿತ ಮಹಿಳೆ ತಯಾರಿಸಿದ ಆಹಾರ ನಿರಾಕರಿಸಿದ ಯುವಕರು ಎಂಬ ಟೈಟಲ್‌ನಲ್ಲಿ ಜನರನ್ನು ದಿಕ್ಕುತಪ್ಪಿಸಲು ಸಂಬಂಧವಿಲ್ಲದ 2 ಕ್ವಾರಂಟೈನ್ ಸೆಂಟರ್ ಗಳ ಘಟನೆಗಳನ್ನು ಜೋಡಿಸಿರುವ ಸುದ್ದಿ ಇದಾಗಿದೆ.

ಯುವಕನೊಬ್ಬ ಊಟ ಇಟ್ಟಿರುವ ಟೇಬಲ್ ಒಂದನ್ನು ಕಾಲಿನಿದ್ದು ಒದ್ದು ಬೀಳಿಸುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, “ಉತ್ತರ ಪ್ರದೇಶದ ಕ್ವಾರಂಟೈನ್ ಸೆಂಟರ್ ಒಂದರಲ್ಲಿ ಅಡುಗೆ ಮಾಡಿದ್ದು ದಲಿತ ಮಹಿಳೆ ಎಂಬ ಕಾರಣದಿಂದ ಅನ್ನವನ್ನು ಕಾಲಿನಿಂದ ಒದ್ದ ಸಿರಾಜ್ ಅಹ್ಮದ್ ಮತ್ತು ಬುಜೌಲಿ ಕುರ್ದ್ ಎಂಬ ನಾಲಾಯಕ್ಕುಗಳಿಗೆ ಕಾನೂನು ರೀತ್ಯ ಕ್ರಮ ಜರುಗಿಸಬೇಕು” ಎಂದು ಆಗ್ರಹಿಸಲಾಗಿದೆ.  ಈ ಸಂಗತಿ ನಿಜವೇ ಪರಿಶೀಲಿಸೋಣ ಬನ್ನಿ.

ಈ ಪೋಸ್ಟ್ ನ ಆರ್ಕೈವ್ ಆವೃತ್ತಿ ಇಲ್ಲಿದೆ.

ಈ ಪೋಸ್ಟ್ ನ ಆರ್ಕೈವ್ ಆವೃತ್ತಿ ಇಲ್ಲಿದೆ.

ಮಂಡನೆ: ದಲಿತ ಮಹಿಳೆ ಊಟ ತಯಾರಿಸಿದ ಕಾರಣಕ್ಕೆ ಊಟ ನಿರಾಕರಿಸಿದ ಉತ್ತರ ಪ್ರದೇಶ ಮೇಲ್ಜಾತಿ ಯುವಕರು

ನಿಜಾಂಶ: ಈ ವಿಡಿಯೋವನ್ನು ಬಿಹಾರದಲ್ಲಿ ಸೆರೆಹಿಡಿಯಲಾಗಿದೆ. ವಿಡಿಯೋದಲ್ಲಿ ಕಾಣುವ ಯುವಕರು ಅಡುಗೆ ಮಾಡುವ ಮಹಿಳೆಗೆ ಹತ್ತಿರದಿಂದ ಊಟ ಬಡಿಸುವಂತೆ ತಾಕೀತು ಮಾಡಿದ್ದಾರೆ. ಆದರೆ ಅಡುಗೆ ಮಹಿಳೆಯು ಬೇಡಿಕೆಯನ್ನು ನಿರಾಕರಿಸಿ ಸಾಮಾಜಿಕ ಅಂತರ ಕಾಯ್ದುಕೊಂಡೇ ಊಟ ಬಡಿಸುವುದಾಗಿ ತಿಳಿಸಿದ್ದಾಳೆ. ಆಗ ಯುವಕರು ಊಟದ ಟೇಬಲ್ ಅನ್ನು ಕಾಲಿನಿಂದ ಒದ್ದಿದ್ದಾರೆ. ಇದರಲ್ಲಿ ದಲಿತ ದೃಷ್ಟೀಕೋನವಿಲ್ಲ. ಇದಕ್ಕಾಗಿ ಪಂಕಜ್, ಮನೋಜ್ ಮತ್ತು ಅಶೋಕ್ ಎಂಬ ಮೂವರ ಮೇಲೆ ಎಫ್.ಐ.ಆರ್ ದಾಖಲಾಗಿದೆ.

ಇನ್ನೊಂದು ಪ್ರಕರಣದಲ್ಲಿ ಸಿರಾಜ್ ಅಹ್ಮದ್, ಉತ್ತರ ಪ್ರದೇಶದ ಬುಜೌಲಿ ಗ್ರಾಮದ ನಿವಾಸಿಯಾಗಿದ್ದು ಅಲ್ಲಿನ ಕ್ವಾರಂಟೈನ್ ಸೆಂಟರ್ ನಲ್ಲಿ ದಲಿತ ಮಹಿಳೆ ಅಡುಗೆ ತಯಾರಿಸಿದ ಕಾರಣಕ್ಕೆ ತಿರಸ್ಕರಿಸಿದ್ದನು. ಹಾಗಾಗಿ ಬಿಹಾರದಲ್ಲಿ ನಡೆದ ಘಟನೆಯ ವಿಡಿಯೋವನ್ನು ಉತ್ತರ ಪ್ರದೇಶದಲ್ಲಿ ನಡೆದಿದ್ದು ಎಂದು ಹಂಚಿಕೊಳ್ಳಲಾಗಿದೆ. ಆದರೂ ಮಂಡನೆಯನ್ನು ಜನರನ್ನು ದಾರಿತಪ್ಪಿಸುತ್ತದೆ.

ಘಟನೆ -1

ವಿಡಿಯೋದ ಸ್ಕ್ರೀನ್ ಶಾಟ್ ಅನ್ನು ಗೂಗಲ್ ಇಮೇಜ್ ರಿವರ್ಸ್ ಸರ್ಚ್ ಮಾಡಿದಾಗ ಹಲವು ಪತ್ರಿಕಾ ವರದಿಗಳು ತೆರೆದುಕೊಳ್ಳುತ್ತವೆ. ದೈನಿಕ್ ಭಾಸ್ಕರ್ ವರದಿಯಂತೆ ಈ ವಿಡಿಯೋವು ಬಿಹಾರದಲ್ಲಿ ನಡೆದಿದ್ದು, ಮಹಿಳೆಯು ಊಟ ಬಡಿಸುವಾಗ ದೈಹಿಕ ದೂರ ಕಾಪಾಡಿಕೊಂಡಿದ್ದಾರೆ. ವಲಸೆ ಕಾರ್ಮಿಕನಾದ ಪಂಕಜ್ ಕುಮಾರ್ ರೈ, ಮನೋಜ್ ಕುಮಾರ್ ರೈ ಮತ್ತು ಅಶೋಕ್ ಸಾನೆ ಹತ್ತಿರದಿಂದ ಊಟ ಬಡಿಸಲು ಕೇಳಿದ್ದಾರೆ. ಮಹಿಳೆ ನಿರಾಕರಿಸಿದಾಗ ಕೋಪಗೊಂಡ ಯುವಕರು ಊಟದ ಟೇಬಲ್ ಅನ್ನು ಕಾಲಿನಿಂದ ಒದ್ದು ಬೀಳಿಸಿದ್ದಾರೆ. ಜಾಗರಣ್ ಪತ್ರಿಕೆಯ ಲೇಖನದಲ್ಲಿ ಇದು ವರದಿಯಾಗಿದೆ.

ಮತ್ತೊಂದು ಎಬಿಪಿ ಬಿಹಾರ್ ಪತ್ರಿಕೆಯ ಲೇಖನವು ‘ಕಳಪೆ ಗುಣಮಟ್ಟದ ಆಹಾರ’ ಕೊಡುವುದನ್ನು ವಿರೋಧಿಸಿ ಯುವಕ ಊಟದ ಟೇಬಲ್ ಒದ್ದಿದ್ದಾನೆ ಎಂದು ವರದಿ ಮಾಡಿದೆ. ಒಟ್ಟಿನಲ್ಲಿ ಯಾವ ಪತ್ರಿಕೆಗಳು ಸಹ ದಲಿತ ದೃಷ್ಟಿಕೋನವನ್ನು ಉಲ್ಲೇಖಿಸಿಲ್ಲ.

ಘಟನೆ-2

ದಲಿತ ಮಹಿಳೆ ಹಲ್ಲೆ ಎಂಬ ಕೀವರ್ಡ್ ಗಳನ್ನು ಬಳಸಿ ಹುಡುಕಿದಾಗ ಹಲವು ಪತ್ರಿಕಾ ವರದಿಗಳು ಕಂಡುಬಂದಿವೆ. ಔಟ್ ಲುಕ್ ಲೇಖನದಂತೆ, ಕ್ವಾಂರಟೈನ್ ಸೆಂಟರ್ ನಲ್ಲಿ ದಲಿತ ಮಹಿಳೆ ಆಹಾರದ ತಯಾರಿಸಿದ್ದಾರೆ ಎಂಬ ಕಾರಣಕ್ಕೆ ಊಟ ನಿರಾಕರಿಸಿದ 35 ವರ್ಷ ವಯಸ್ಸಿನ ಸಿರಾಜ್ ಅಹ್ಮದ್ ಎಂಬುವವರ ಮೇಲೆ ಖಾಡ್ಡ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲು ಮಾಡಲಾಗಿದೆ. ಈತ ಉತ್ತರ ಪ್ರದೇಶದ ಖುಷಿ ನಗರ್ ಜಿಲ್ಲೆಯ ಭುಜೌಲಿ ಖುರ್ದ್ ನಿವಾಸಿಯಾಗಿದ್ದು, ದೆಹಲಿಯಿಂದ ಮಾರ್ಚ್ 29 ರಂದು ನಗರಕ್ಕೆ ಹಿಂತಿರುಗಿದ್ದು, ಅಲ್ಲಿನ ಸರ್ಕಾರಿ ಶಾಲೆಯ ಕ್ವಾರಂಟೈನ್ ಸೆಂಟರ್ ನಲ್ಲಿ ನಾಲ್ಕು ಜನರೊಂದಿಗೆ ತಂಗಿದ್ದರು ಎನ್ನಲಾಗಿದೆ.

ಈ ಘಟನೆಗೆ ಸಂಬಂಧಿಸಿದ ಎಫ್.ಐ.ಆರ್ ಪ್ರತಿ ಇಲ್ಲಿದೆ.

ಒಟ್ಟಿನಲ್ಲಿ ಆಹಾರಕ್ಕೆ ಸಂಬಂಧಿಸಿದ ಎರಡು ಪ್ರತ್ಯೇಕ ಕ್ವಾರಂಟೈನ್ ಸೆಂಟರ್ ನ ಘಟನೆಗಳು ಮಿಶ್ರಿತವಾಗಿ ಜನರನ್ನು ದಾರಿ ತಪ್ಪಿಸಿವೆ.

ಕೃಪೆ: ಫ್ಯಾಕ್ಟ್ಲಿ


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಅಸ್ಸಾಂನಲ್ಲಿ ತಾಯಿ ಕಳೆದುಕೊಂಡ ಚಿರತೆ ಮರಿಗೆ ಅಮ್ಮನ ಪ್ರೀತಿ ನೀಡಿದ ಸಾಕಿದ ಹಸು? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...