Homeಮುಖಪುಟಒಂದೇ ವೆಂಟಿಲೇಟರ್‌ ಫೋಟೊ ಹಂಚಿಕೊಂಡ ನೂರಾರು ಬಿಜೆಪಿ ಮುಖಂಡರು: ಪಬ್ಲಿಸಿಟಿ ಗಿಮ್ಮಿಕ್ ಎಂದ ನೆಟ್ಟಿಗರು!

ಒಂದೇ ವೆಂಟಿಲೇಟರ್‌ ಫೋಟೊ ಹಂಚಿಕೊಂಡ ನೂರಾರು ಬಿಜೆಪಿ ಮುಖಂಡರು: ಪಬ್ಲಿಸಿಟಿ ಗಿಮ್ಮಿಕ್ ಎಂದ ನೆಟ್ಟಿಗರು!

ಕೆಲವರು ’ಒನ್‌ ನೇಷನ್‌, ಒನ್‌ ವೆಂಟಿಲೇಟರ್‌’ ಎಂದು ಬಿಜೆಪಿ ಮುಖಂಡರನ್ನು ವ್ಯಂಗ್ಯವಾಡಿದ್ದಾರೆ.

- Advertisement -
- Advertisement -

ಇಂದು ಬೆಳಿಗ್ಗೆ ಟ್ವಿಟ್ಟರ್‌ನಲ್ಲಿ ಹಲವಾರು ಬಿಜೆಪಿ ಮುಖಂಡರು ಒಂದು ವೆಂಟಿಲೇಟರ್‌ ಫೋಟೊವನ್ನು ಹಂಚಿಕೊಂಡಿದ್ದರು. ಅದರ ಜೊತೆಗೆ “ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಜಿಯವರನ್ನು ಪಿಎಂ ಕೇರ್ಸ್‌ ಲೆಕ್ಕ ಕೇಳುವವರಿಗೆ ಉತ್ತರ ಇಲ್ಲಿದೆ. ಸ್ವಾತಂತ್ರ್ಯಾ ನಂತರದಲ್ಲಿ ಆಸ್ಪತ್ರೆಗಳಲ್ಲಿ ಇಷ್ಟೊಂದು ಸಂಖ್ಯೆಯ ವೆಂಟಿಲೇಟರ್ ಗಳು ಹೆಚ್ಚಾಗಿರಲಿಲ್ಲ. ನಾವೆಲ್ಲ ಕಷ್ಟಪಟ್ಟು ಸಂಪಾದಿಸಿ ಪಿಎಂ ಕೇರ್ಸ್‌ಗೆ ನೀಡಿದ ಒಂದೊಂದು ರೂಪಾಯಿಯೂ ಜನರ ಸೇವೆಗೆ ಅರ್ಪಿತವಾಗುತ್ತಿದೆ” ಎಂದು ಬರೆಯಲಾಗಿತ್ತು.

ಅದೇ ಇಂಗ್ಲಿಷ್‌ನಲ್ಲಿಯೂ ಸಹ ಅದೇ ಅರ್ಥಬರುವ ವಾಕ್ಯವೊಂದನ್ನು ಬರೆದು ಅದೇ ವೆಂಟಿಲೇಟರ್‌ ಚಿತ್ರವನ್ನು ಪೋಸ್ಟ್‌ ಮಾಡಲಾಗಿತ್ತು. ಕರ್ನಾಟಕದ ಬಿ.ಶ್ರೀರಾಮುಲು, ಸಿ.ಟಿ ರವಿ ಮತ್ತು ಬಿ.ಎಲ್‌ ಸಂತೋಷ್‌ರವರು ಟ್ವೀಟ್‌ ಮಾಡಿದ್ದು, ಒಂದೇ ವೆಂಟಿಲೇಟರ್‌ ಚಿತ್ರವನ್ನು ಬಳಸಿದ್ದಾರೆ.

ಕಳೆದ ಎರಡು ತಿಂಗಳಿನಿಂದ ಈಗಾಗಲೇ ನಿಧಿ ಸಂಗ್ರಹಕ್ಕಾಗಿ ಪ್ರಧಾನ ಮಂತ್ರಿ ಪರಿಹಾರ ನಿಧಿ ಇದ್ದರೂ ಕೂಡ ಇನ್ನೊದು PM CARES ನಿಧಿ ಏಕೆ ಬೇಕಿತ್ತು ಎಂಬ ಪ್ರಶ್ನೆ ದೊಡ್ಡ ಮಟ್ಟದಲ್ಲಿ ಕೇಳಿಬರುತ್ತಿದೆ.

ಇದೇ ಸಂದರ್ಭದಲ್ಲಿ ಈ PM CARES ನಿಧಿಯ ಆಡಿಟ್‌ನ್ನು ದೇಶದ ಪ್ರಖ್ಯಾತ CAG (Comptroller and Auditor General of India) ಮಾಡಲು ಬರುವುದಿಲ್ಲ. ಬದಲಿಗೆ ಪ್ರಧಾನ ಮಂತ್ರಿ ಸೇರಿದಂತೆ ಅದರ ಟ್ರಸ್ಟಿಗಳು ನೇಮಿಸಿದ ಸ್ವತಂತ್ರ ಲೆಕ್ಕಪರಿಶೋಧಕರಿಂದ ಆಡಿಟ್‌ ಮಾಡಲಾಗುವುದು ಎಂಬ ಅಂಶ ಬೆಳಕಿಗೆ ಬಂದಿದ್ದು ದೊಡ್ಡ ವಿವಾದಕ್ಕೆ ಕಾರಣವಾಗಿದೆ.

ಈ ಪಿಎಂ ಕೇರ್ಸ್‌‌ಗೆ ಎಷ್ಟು ಹಣ ಬಂದಿದೆ. ಅದರಲ್ಲಿ ಯಾವುದಕ್ಕೆ ಎಷ್ಟು ಹಣ ಖರ್ಚಾಗಿದೆ, ಎಷ್ಟು ಉಳಿದಿದೆ ಎಂಬ ನಂಬಿಕಾರ್ಹ ಮಾಹಿತಿ ಇದರಿಂದ ದೊರೆಯುವುದಿಲ್ಲ, ಆರ್‌ಟಿಐ ಅಡಿಯಲ್ಲಿಯೂ ಇದು ಬರುವುದಿಲ್ಲ ಎಂಬ ಆರೋಪ ಕೇಳಿಬಂದಿತ್ತು.

ಇಂಡಿಯಾ ಸ್ಪೆಂಡ್‌ನ ಇತ್ತೀಚಿನ ವಿಶ್ಲೇಷಣೆಯ ಪ್ರಕಾರ ಇದುವರೆಗೆ ಪಿಎಂ ಕೇರ್ಸ್ ನಿಧಿಯಲ್ಲಿ ಕನಿಷ್ಠ 9,677.90 ಕೋಟಿ ರೂ ಇದೆ. ಈ ಪೈಕಿ 4,308 ಕೋಟಿ ರೂ.ಗಳನ್ನು ಸರ್ಕಾರಿ ಸಂಸ್ಥೆಗಳು ಮತ್ತು ಸಿಬ್ಬಂದಿ ದೇಣಿಗೆ ನೀಡಿದ್ದಾರೆ. ಇನ್ನೂ, ನಿಧಿಯ ಬಳಕೆಯ ಬಗ್ಗೆ ಇಲ್ಲಿಯವರೆಗೆ ಮಾಡಿದ ಏಕೈಕ ಪ್ರಕಟಣೆ ಮೇ 13 ರಂದು ಮಾಡಲಾಗಿದೆ. ಅದರಲ್ಲಿ 2,000 ಕೋಟಿ ರೂ ವೆಚ್ಚದಲ್ಲಿ ಅಹ್ಮದಾಬಾದ್‌ನ ಅತಿದೊಡ್ಡ COVID-19 ಆಸ್ಪತ್ರೆಗೆ ವೆಂಟಿಲೇಟರ್‌ಗಳನ್ನು ಸರಬರಾಜು ಮಾಡಿದ ರಾಜ್‌ಕೋಟ್ ಮೂಲದ ಸಂಸ್ಥೆಯಿಂದ ಕೇಂದ್ರ ಸರ್ಕಾರವು 5,000 ವೆಂಟಿಲೇಟರ್‌ಗಳನ್ನು ಖರೀದಿಸುತ್ತಿದೆ. ಆದರೆ ಈ ಯಂತ್ರಗಳು ಅಸಮರ್ಪಕವೆಂದು ಈಗಾಗಲೇ ಸಾಬೀತಾಗಿದೆ.


ಇದನ್ನೂ ಓದಿ: ಮೋದಿಗೆ ದುಬಾರಿ ಸೂಟ್‌ ನೀಡಿದ್ದ ಕಂಪನಿಯ ಫೇಕ್‌ ವೆಂಟಿಲೇಟರ್‌ ಹಗರಣ..


ಇಂತಹ ಪರಿಸ್ಥಿತಿಯಲ್ಲಿ ಬಿಜೆಪಿ ಮುಖಂಡರು ಒಂದೇ ವೆಂಟಿಲೇಟರ್‌ ಫೋಟೊ ಹಾಕಿ ಪಿಎಂ ಕೇರ್ಸ್‌ ಹಣ ಪ್ರಾಮಾಣಿಕವಾಗಿ ಬಳಸಿದ್ದೇವೆ ಎಂಬ ಪ್ರಚಾರ ಪಡೆಯಲು ಮುಂದಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವಿವಾದವೆದ್ದಿದೆ.

ಪ್ರಖ್ಯಾತ ಯೂಟ್ಯೂಬರ್‌ ಧೃವ್‌ ರಾಠೀ ಈ ಬಗ್ಗೆ ಪ್ರಶ್ನೆ ಮಾಡಿದ್ದು, ಒಂದು ವೆಂಟಿಲೇಟರ್‌, ನೂರಾರು ಪ್ರಚಾರ ಎಂದು ಟೀಕಿಸಿದ್ದಾರೆ. ಅದರಲ್ಲಿ ಒಂದೇ ವೆಂಟಿಲೇಟರ್ ಅನ್ನು ನೂರಾರು ಬಿಜೆಪಿ ನಾಯಕರು ಹಂಚಿಕೊಂಡಿರುವ ಸ್ಕ್ರೀನ್‌ಶಾಟ್‌ಗಳನ್ನು ಪೋಸ್ಟ್‌ ಮಾಡಲಾಗಿದೆ.

1 Ventilator 100 Publicity

Posted by Dhruv Rathee on Monday, June 15, 2020

ಇನ್ನು ಕೆಲವರು ’ಒನ್‌ ನೇಷನ್‌, ಒನ್‌ ವೆಂಟಿಲೇಟರ್‌’ ಎಂದು ಬಿಜೆಪಿ ಮುಖಂಡರನ್ನು ವ್ಯಂಗ್ಯವಾಡಿದ್ದಾರೆ. ಬಿಜೆಪಿ ಐಟಿ ಸೆಲ್‌ ಹೇಗೆ ಕಾರ್ಯನಿರ್ವಹಿಸುತ್ತದೆ ಎಂದು ಕೆಲವರು ವಿವರಣೆ ನೀಡಿದ್ದು, ಬಿಜೆಪಿ ಸರ್ಕಾರ ಕೆಲಸ ಮಾಡದಿದ್ದರೂ ಸರಿಯೇ ಸಾಮಾಜಿಕ ಮತ್ತು ಮುಖ್ಯವಾಹಿನಿ ಮಾಧ್ಯಮಗಳನ್ನು ಬಳಸಿ ಹೇಗೆ ಪ್ರಚಾರ ಪಡೆಯುತ್ತಿದೆ ನೋಡಿ ಎಂದು ವಿವರಿಸಿದ್ದಾರೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ನಾಳೆಯಿಂದ ಮತ್ತೆ ಲಾಕ್‌ಡೌನ್‌! ಈ ಸುದ್ದಿ ನಿಜವೇ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...