Homeಮುಖಪುಟಒಂದೇ ವೆಂಟಿಲೇಟರ್‌ ಫೋಟೊ ಹಂಚಿಕೊಂಡ ನೂರಾರು ಬಿಜೆಪಿ ಮುಖಂಡರು: ಪಬ್ಲಿಸಿಟಿ ಗಿಮ್ಮಿಕ್ ಎಂದ ನೆಟ್ಟಿಗರು!

ಒಂದೇ ವೆಂಟಿಲೇಟರ್‌ ಫೋಟೊ ಹಂಚಿಕೊಂಡ ನೂರಾರು ಬಿಜೆಪಿ ಮುಖಂಡರು: ಪಬ್ಲಿಸಿಟಿ ಗಿಮ್ಮಿಕ್ ಎಂದ ನೆಟ್ಟಿಗರು!

ಕೆಲವರು ’ಒನ್‌ ನೇಷನ್‌, ಒನ್‌ ವೆಂಟಿಲೇಟರ್‌’ ಎಂದು ಬಿಜೆಪಿ ಮುಖಂಡರನ್ನು ವ್ಯಂಗ್ಯವಾಡಿದ್ದಾರೆ.

- Advertisement -
- Advertisement -

ಇಂದು ಬೆಳಿಗ್ಗೆ ಟ್ವಿಟ್ಟರ್‌ನಲ್ಲಿ ಹಲವಾರು ಬಿಜೆಪಿ ಮುಖಂಡರು ಒಂದು ವೆಂಟಿಲೇಟರ್‌ ಫೋಟೊವನ್ನು ಹಂಚಿಕೊಂಡಿದ್ದರು. ಅದರ ಜೊತೆಗೆ “ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಜಿಯವರನ್ನು ಪಿಎಂ ಕೇರ್ಸ್‌ ಲೆಕ್ಕ ಕೇಳುವವರಿಗೆ ಉತ್ತರ ಇಲ್ಲಿದೆ. ಸ್ವಾತಂತ್ರ್ಯಾ ನಂತರದಲ್ಲಿ ಆಸ್ಪತ್ರೆಗಳಲ್ಲಿ ಇಷ್ಟೊಂದು ಸಂಖ್ಯೆಯ ವೆಂಟಿಲೇಟರ್ ಗಳು ಹೆಚ್ಚಾಗಿರಲಿಲ್ಲ. ನಾವೆಲ್ಲ ಕಷ್ಟಪಟ್ಟು ಸಂಪಾದಿಸಿ ಪಿಎಂ ಕೇರ್ಸ್‌ಗೆ ನೀಡಿದ ಒಂದೊಂದು ರೂಪಾಯಿಯೂ ಜನರ ಸೇವೆಗೆ ಅರ್ಪಿತವಾಗುತ್ತಿದೆ” ಎಂದು ಬರೆಯಲಾಗಿತ್ತು.

ಅದೇ ಇಂಗ್ಲಿಷ್‌ನಲ್ಲಿಯೂ ಸಹ ಅದೇ ಅರ್ಥಬರುವ ವಾಕ್ಯವೊಂದನ್ನು ಬರೆದು ಅದೇ ವೆಂಟಿಲೇಟರ್‌ ಚಿತ್ರವನ್ನು ಪೋಸ್ಟ್‌ ಮಾಡಲಾಗಿತ್ತು. ಕರ್ನಾಟಕದ ಬಿ.ಶ್ರೀರಾಮುಲು, ಸಿ.ಟಿ ರವಿ ಮತ್ತು ಬಿ.ಎಲ್‌ ಸಂತೋಷ್‌ರವರು ಟ್ವೀಟ್‌ ಮಾಡಿದ್ದು, ಒಂದೇ ವೆಂಟಿಲೇಟರ್‌ ಚಿತ್ರವನ್ನು ಬಳಸಿದ್ದಾರೆ.

ಕಳೆದ ಎರಡು ತಿಂಗಳಿನಿಂದ ಈಗಾಗಲೇ ನಿಧಿ ಸಂಗ್ರಹಕ್ಕಾಗಿ ಪ್ರಧಾನ ಮಂತ್ರಿ ಪರಿಹಾರ ನಿಧಿ ಇದ್ದರೂ ಕೂಡ ಇನ್ನೊದು PM CARES ನಿಧಿ ಏಕೆ ಬೇಕಿತ್ತು ಎಂಬ ಪ್ರಶ್ನೆ ದೊಡ್ಡ ಮಟ್ಟದಲ್ಲಿ ಕೇಳಿಬರುತ್ತಿದೆ.

ಇದೇ ಸಂದರ್ಭದಲ್ಲಿ ಈ PM CARES ನಿಧಿಯ ಆಡಿಟ್‌ನ್ನು ದೇಶದ ಪ್ರಖ್ಯಾತ CAG (Comptroller and Auditor General of India) ಮಾಡಲು ಬರುವುದಿಲ್ಲ. ಬದಲಿಗೆ ಪ್ರಧಾನ ಮಂತ್ರಿ ಸೇರಿದಂತೆ ಅದರ ಟ್ರಸ್ಟಿಗಳು ನೇಮಿಸಿದ ಸ್ವತಂತ್ರ ಲೆಕ್ಕಪರಿಶೋಧಕರಿಂದ ಆಡಿಟ್‌ ಮಾಡಲಾಗುವುದು ಎಂಬ ಅಂಶ ಬೆಳಕಿಗೆ ಬಂದಿದ್ದು ದೊಡ್ಡ ವಿವಾದಕ್ಕೆ ಕಾರಣವಾಗಿದೆ.

ಈ ಪಿಎಂ ಕೇರ್ಸ್‌‌ಗೆ ಎಷ್ಟು ಹಣ ಬಂದಿದೆ. ಅದರಲ್ಲಿ ಯಾವುದಕ್ಕೆ ಎಷ್ಟು ಹಣ ಖರ್ಚಾಗಿದೆ, ಎಷ್ಟು ಉಳಿದಿದೆ ಎಂಬ ನಂಬಿಕಾರ್ಹ ಮಾಹಿತಿ ಇದರಿಂದ ದೊರೆಯುವುದಿಲ್ಲ, ಆರ್‌ಟಿಐ ಅಡಿಯಲ್ಲಿಯೂ ಇದು ಬರುವುದಿಲ್ಲ ಎಂಬ ಆರೋಪ ಕೇಳಿಬಂದಿತ್ತು.

ಇಂಡಿಯಾ ಸ್ಪೆಂಡ್‌ನ ಇತ್ತೀಚಿನ ವಿಶ್ಲೇಷಣೆಯ ಪ್ರಕಾರ ಇದುವರೆಗೆ ಪಿಎಂ ಕೇರ್ಸ್ ನಿಧಿಯಲ್ಲಿ ಕನಿಷ್ಠ 9,677.90 ಕೋಟಿ ರೂ ಇದೆ. ಈ ಪೈಕಿ 4,308 ಕೋಟಿ ರೂ.ಗಳನ್ನು ಸರ್ಕಾರಿ ಸಂಸ್ಥೆಗಳು ಮತ್ತು ಸಿಬ್ಬಂದಿ ದೇಣಿಗೆ ನೀಡಿದ್ದಾರೆ. ಇನ್ನೂ, ನಿಧಿಯ ಬಳಕೆಯ ಬಗ್ಗೆ ಇಲ್ಲಿಯವರೆಗೆ ಮಾಡಿದ ಏಕೈಕ ಪ್ರಕಟಣೆ ಮೇ 13 ರಂದು ಮಾಡಲಾಗಿದೆ. ಅದರಲ್ಲಿ 2,000 ಕೋಟಿ ರೂ ವೆಚ್ಚದಲ್ಲಿ ಅಹ್ಮದಾಬಾದ್‌ನ ಅತಿದೊಡ್ಡ COVID-19 ಆಸ್ಪತ್ರೆಗೆ ವೆಂಟಿಲೇಟರ್‌ಗಳನ್ನು ಸರಬರಾಜು ಮಾಡಿದ ರಾಜ್‌ಕೋಟ್ ಮೂಲದ ಸಂಸ್ಥೆಯಿಂದ ಕೇಂದ್ರ ಸರ್ಕಾರವು 5,000 ವೆಂಟಿಲೇಟರ್‌ಗಳನ್ನು ಖರೀದಿಸುತ್ತಿದೆ. ಆದರೆ ಈ ಯಂತ್ರಗಳು ಅಸಮರ್ಪಕವೆಂದು ಈಗಾಗಲೇ ಸಾಬೀತಾಗಿದೆ.


ಇದನ್ನೂ ಓದಿ: ಮೋದಿಗೆ ದುಬಾರಿ ಸೂಟ್‌ ನೀಡಿದ್ದ ಕಂಪನಿಯ ಫೇಕ್‌ ವೆಂಟಿಲೇಟರ್‌ ಹಗರಣ..


ಇಂತಹ ಪರಿಸ್ಥಿತಿಯಲ್ಲಿ ಬಿಜೆಪಿ ಮುಖಂಡರು ಒಂದೇ ವೆಂಟಿಲೇಟರ್‌ ಫೋಟೊ ಹಾಕಿ ಪಿಎಂ ಕೇರ್ಸ್‌ ಹಣ ಪ್ರಾಮಾಣಿಕವಾಗಿ ಬಳಸಿದ್ದೇವೆ ಎಂಬ ಪ್ರಚಾರ ಪಡೆಯಲು ಮುಂದಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವಿವಾದವೆದ್ದಿದೆ.

ಪ್ರಖ್ಯಾತ ಯೂಟ್ಯೂಬರ್‌ ಧೃವ್‌ ರಾಠೀ ಈ ಬಗ್ಗೆ ಪ್ರಶ್ನೆ ಮಾಡಿದ್ದು, ಒಂದು ವೆಂಟಿಲೇಟರ್‌, ನೂರಾರು ಪ್ರಚಾರ ಎಂದು ಟೀಕಿಸಿದ್ದಾರೆ. ಅದರಲ್ಲಿ ಒಂದೇ ವೆಂಟಿಲೇಟರ್ ಅನ್ನು ನೂರಾರು ಬಿಜೆಪಿ ನಾಯಕರು ಹಂಚಿಕೊಂಡಿರುವ ಸ್ಕ್ರೀನ್‌ಶಾಟ್‌ಗಳನ್ನು ಪೋಸ್ಟ್‌ ಮಾಡಲಾಗಿದೆ.

1 Ventilator 100 Publicity

Posted by Dhruv Rathee on Monday, June 15, 2020

ಇನ್ನು ಕೆಲವರು ’ಒನ್‌ ನೇಷನ್‌, ಒನ್‌ ವೆಂಟಿಲೇಟರ್‌’ ಎಂದು ಬಿಜೆಪಿ ಮುಖಂಡರನ್ನು ವ್ಯಂಗ್ಯವಾಡಿದ್ದಾರೆ. ಬಿಜೆಪಿ ಐಟಿ ಸೆಲ್‌ ಹೇಗೆ ಕಾರ್ಯನಿರ್ವಹಿಸುತ್ತದೆ ಎಂದು ಕೆಲವರು ವಿವರಣೆ ನೀಡಿದ್ದು, ಬಿಜೆಪಿ ಸರ್ಕಾರ ಕೆಲಸ ಮಾಡದಿದ್ದರೂ ಸರಿಯೇ ಸಾಮಾಜಿಕ ಮತ್ತು ಮುಖ್ಯವಾಹಿನಿ ಮಾಧ್ಯಮಗಳನ್ನು ಬಳಸಿ ಹೇಗೆ ಪ್ರಚಾರ ಪಡೆಯುತ್ತಿದೆ ನೋಡಿ ಎಂದು ವಿವರಿಸಿದ್ದಾರೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ನಾಳೆಯಿಂದ ಮತ್ತೆ ಲಾಕ್‌ಡೌನ್‌! ಈ ಸುದ್ದಿ ನಿಜವೇ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...