Homeಕರ್ನಾಟಕಸೋಂಕಿನ ವಿರುದ್ಧ ಹೋರಾಟವನ್ನು ಮುನ್ನಡೆಸಿದ ಅನೀಸ್; ಕೊರೊನಾ ವಿರುದ್ಧ ಗೆದ್ದ ಕೊಡಗು..!!

ಸೋಂಕಿನ ವಿರುದ್ಧ ಹೋರಾಟವನ್ನು ಮುನ್ನಡೆಸಿದ ಅನೀಸ್; ಕೊರೊನಾ ವಿರುದ್ಧ ಗೆದ್ದ ಕೊಡಗು..!!

- Advertisement -
- Advertisement -

ಭಾರತದಾದ್ಯಂತ ಕೊರೊನಾ ವೈರಸ್‌ ಅಪಾಯಕಾರಿಯಾಗಿ ಹರಡುತ್ತಿದೆ. ದೇಶದ ಬೆರಳೆಣಿಕೆಯ ಒಂದೆರಡು ರಾಜ್ಯಗಳನ್ನು ಬಿಟ್ಟರೆ ಎಲ್ಲಾ ರಾಜ್ಯಗಳು ಕೊರೊನಾ ಸೋಂಕನ್ನು ನಿಯಂತ್ರಿಸಲಾಗದೆ ಪರದಾಡುತ್ತಿವೆ.ಇವುಗಳಲ್ಲಿ ಕರ್ನಾಟಕವೂ ಒಂದು. ಆದರೆ, ಕರ್ನಾಕಟದ ಕೊಡಗು ಜಿಲ್ಲೆ ಮಾತ್ರ ಸೋಂಕಿನ ಬಾದೆಯಿಂದ ಮುಕ್ತವಾಗಿ ಸಂತೋ‍ಷದ ನಗೆ ಬೀರುತ್ತಿದೆ.

ರಾಜ್ಯದಲ್ಲಿ ಕೊರೊನಾ ಸೋಂಕು ದಿನೇದಿನೇ ಹೆಚ್ಚುತ್ತಿರುವ ಸಂದರ್ಭದಲ್ಲಿಯೂ ಕೊಡಗಿನಲ್ಲಿ ಕಳೆದ ಐದು ವಾರಗಳಿಂದ ಒಂದೇ ಒಂದು ಹೊಸ ಕೊರೊನಾ ಸೋಂಕಿತ ಪ್ರಕರಣಗಳು ದಾಖಲಾಗಿಲ್ಲ. ಕೊಡಗನ್ನು ಕೊರೊನಾ ಸೋಂಕಿನಿಂದ ದೂರವಿಡಲು ಶ್ರಮಿಸುತ್ತಿರುವವರು ಅಲ್ಲಿನ ಜಿಲ್ಲಾಧಿಕಾರಿಯಾದ ಕೇರಳ ಮೂಲದ ‘ಅನೀಸ್ ಕಣ್ಮಣಿ ಜಾಯ್‌’.

ಕೇರಳದ ಬಡ ರೈತನ ಮಗಳಾಗಿದ್ದ ಅನೀಸ್ ಅವರು ತಮ್ಮ ಶಾಲಾ ದಿನಗಳಲ್ಲಿ ಪುಸ್ತಕಗಳನ್ನೂ ಖರೀದಿಸಲಾಗದಷ್ಟು ಬಡತನದಲ್ಲಿ ಬೆಳೆದವರು. ಆದರೆ, ಅವರು ಈಗ ಕೊಡಗು ಜಿಲ್ಲೆಯ ಜಿಲ್ಲಾಧಿಕಾರಿ. ಕೊರೊನಾ ವೈರಸ್‌ ವಿರುದ್ಧದ ಹೋರಾಟದಲ್ಲಿ ಕೊಡಗು ಜಿಲ್ಲೆಯನ್ನು ಮುನ್ನಡೆಸುತ್ತಿರುವ ಇವರ ಪ್ರಯತ್ನಕ್ಕೆ ಸಾಮಾಜಿಕ ಜಾಲತಾಣಿಗರು ಪ್ರಶಂಸೆಯ ಮಳೆಗರೆಯುತ್ತಿದ್ದಾರೆ.

ಕೊರೊನಾ ನಿಯಂತ್ರಣದಲ್ಲಿ ಕೊಡಗಿನಲ್ಲಿ ಅವರು ಮಾಡುತ್ತಿರುವ ಪ್ರಯತ್ನ ರಾಷ್ಟ್ರಮಟ್ಟದಲ್ಲಿ ಪ್ರಶಂಸೆಗೆ ಪಾತ್ರವಾಗಿದೆ. ಇಡೀ ದೇಶದಲ್ಲಿ ಕೊರೊನಾ ಮುಕ್ತವಾಗಿರುವ ಕೆಲವೇ ಜಿಲ್ಲೆಗಳಲ್ಲಿ ಕೊಡಗು ಕೂಡ ಒಂದು. ಕರ್ನಾಟಕವೂ ಸೇರಿದಂತೆ ಇತರ ರಾಜ್ಯಗಳಲ್ಲಿ ಕೊರೊನಾ ಸೋಂಕಿತರ ಪ್ರಮಾಣ ಗಗನಕ್ಕೇರುತ್ತಿರುವ ಸಂದರ್ಭದಲ್ಲಿ, ಕೊಡಗು ಜಿಲ್ಲೆಯಲ್ಲಿ ಕಳೆದ 28 ದಿನಗಳಿಂದ ಒಂದೂ ಕೊರೊನಾ ಪ್ರಕರಣ ಪತ್ತೆಯಾಗಿಲ್ಲ.

ಸೋಂಕಿನ ವಿರುದ್ಧ ಹೋರಾಟವನ್ನು ಮುನ್ನಡೆಸಿದ ಅನೀಸ್;  ಕೊರೊನಾ ವಿರುದ್ಧ ಗೆದ್ದ ಕೊಡಗು..!!
ಅನೀಸ್ ಕಣ್ಮಣಿ ಜಾಯ್

Covid19india.org ನಲ್ಲಿ ನವೀಕರಿಸಿದ ಸಂಖ್ಯೆಗಳ ಪ್ರಕಾರ, ಇಲ್ಲಿಯವರೆಗೆ ಕೊಡಗಿನಲ್ಲಿ ಮೂರು ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಮೂವರಲ್ಲಿ ಎರಡು ಪ್ರಕರಣಗಳು ಸಕ್ರಿಯವಾಗಿವೆ ಮತ್ತು ಒಬ್ಬರು ಗುಣಮುಖರಾಗಿದ್ದಾರೆ.

ದೇಶಾದ್ಯಂತ ಲಾಕ್‌ಡೌನ್‌ ಸಡಿಲಗೊಳಿಸಿ, ಅನೇಕ ಪ್ರವಾಸಿ ತಾಣಗಳನ್ನು ತೆರೆಯಲಾಗುತ್ತಿದೆ. ಆದರೆ, ಕೊಡಗಿನಲ್ಲಿ ಪ್ರವಾಸಿ ತಾಣಗಳನ್ನು ಇನ್ನೂ ಕೆಲವು ದಿನಗಳ ವರೆಗೆ ತೆರೆಯುವುದಿಲ್ಲ ಎಂದು ಅನ್ನೀಸ್‌ ಘೋಷಿಸಿದ್ದಾರೆ.

ನೊಂದಾಯಿಸಿಕೊಂಡಿರುವ ಹೋಂಸ್ಟೇಗಳನ್ನು ಮಾತ್ರ ತೆರೆಯಲು ಅನುಮತಿ ನೀಡಲಾಗಿದೆ. ಆದರೆ ಹೋಟೆಲ್‌ಗಳು ಮತ್ತು ರೆಸಾರ್ಟ್‌ಗಳಲ್ಲಿ ಬರುವ ಪ್ರವಾಸಗಳ ಪ್ರಯಾಣದ ಇತಿಹಾಸ, ಅವರ ವಿವರಗಳುಳ್ಳ ದಾಖಲೆಗಳನ್ನು ಪಡೆದುಕೊಳ್ಳಬೇಕು ಹಾಗೂ ಕ್ವಾರಂಟೈನ್‌ಗೆ ಒಳಪಟ್ಟಿದ್ದರೆ ಎಂದು ತಿಳಿದುಕೊಳ್ಳುವಂತೆ ಆದೇಶಿಸಲಾಗಿದೆ.

ಕೂರ್ಗ್‌ ಎಂದೇ ಖ್ಯಾತಿ ಪಡೆದಿರುವ ಪ್ರವಾಸಿ ತಾಣವಾದ ಕೊಡಗಿನಲ್ಲಿ ಇದೂವರೆಗೂ 3 ಕೊರೊನಾ ಪ್ರಕರಣಗಳು ಮಾತ್ರ ದಾಖಲಾಗಿದ್ದು, ಸೋಂಕನ್ನು ನಿಯಂತ್ರಸುವಲ್ಲಿ ಅಲ್ಲಿಯ ಜಿಲ್ಲಾಧಿಕಾರಿಯಾಗಿರುವ ಅನೀಸ್ ಪ್ರಯತ್ನ ಯಶಸ್ವಿಯಾಗಿದೆ. ಬಡತನದ ವಿರುದ್ಧ ಹೋರಾಡಿ ಸಾಧನೆ ಮಾಡಿರುವ ಅನ್ನೀಸ್ ಇದೀಗ ಕೊರೊನಾ ವಿರುದ್ಧದ ಹೋರಾಟದಲ್ಲಿಯೂ ಸಾಧನೆ ಮಾಡಿ ಯಶಸ್ವಿಯಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪ್ರಶಂಸೆಗಳು ಕೇಳಿಬರುತ್ತಿವೆ.

Ennis Kanmani Joy of Kerala fought poverty and cracked UPSC Civil Services Exam. She secured 65th rank in her second…

Posted by Sochle on Saturday, June 6, 2020

ಅನೇಕ ಸಾಮಾಜಿಕ ಮಾಧ್ಯಮ ಬಳಕೆದಾರರು ಅನ್ನೀಸ್‌ ಅವರು ಬಡತನದ ವಿರುದ್ಧ ಹೇಗೆ ಹೋರಾಡಿದರು ಮತ್ತು ಹೇಗೆ ಕನಸನ್ನು ಸಾಧಿಸಿದರು ಎಂಬ ಕಥೆಯನ್ನು ಹಂಚಿಕೊಂಡಿದ್ದಾರೆ.


ಓದಿ: ‘ಭರವಸೆಯ ಕಿರಣ’; ಕೊರೊನಾ ಸೋಂಕಿತ 97 ವರ್ಷದ ಹಿರಿಯ ವ್ಯಕ್ತಿ ಗುಣಮುಖ


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...