Homeಕರ್ನಾಟಕಸೋಂಕಿನ ವಿರುದ್ಧ ಹೋರಾಟವನ್ನು ಮುನ್ನಡೆಸಿದ ಅನೀಸ್; ಕೊರೊನಾ ವಿರುದ್ಧ ಗೆದ್ದ ಕೊಡಗು..!!

ಸೋಂಕಿನ ವಿರುದ್ಧ ಹೋರಾಟವನ್ನು ಮುನ್ನಡೆಸಿದ ಅನೀಸ್; ಕೊರೊನಾ ವಿರುದ್ಧ ಗೆದ್ದ ಕೊಡಗು..!!

- Advertisement -
- Advertisement -

ಭಾರತದಾದ್ಯಂತ ಕೊರೊನಾ ವೈರಸ್‌ ಅಪಾಯಕಾರಿಯಾಗಿ ಹರಡುತ್ತಿದೆ. ದೇಶದ ಬೆರಳೆಣಿಕೆಯ ಒಂದೆರಡು ರಾಜ್ಯಗಳನ್ನು ಬಿಟ್ಟರೆ ಎಲ್ಲಾ ರಾಜ್ಯಗಳು ಕೊರೊನಾ ಸೋಂಕನ್ನು ನಿಯಂತ್ರಿಸಲಾಗದೆ ಪರದಾಡುತ್ತಿವೆ.ಇವುಗಳಲ್ಲಿ ಕರ್ನಾಟಕವೂ ಒಂದು. ಆದರೆ, ಕರ್ನಾಕಟದ ಕೊಡಗು ಜಿಲ್ಲೆ ಮಾತ್ರ ಸೋಂಕಿನ ಬಾದೆಯಿಂದ ಮುಕ್ತವಾಗಿ ಸಂತೋ‍ಷದ ನಗೆ ಬೀರುತ್ತಿದೆ.

ರಾಜ್ಯದಲ್ಲಿ ಕೊರೊನಾ ಸೋಂಕು ದಿನೇದಿನೇ ಹೆಚ್ಚುತ್ತಿರುವ ಸಂದರ್ಭದಲ್ಲಿಯೂ ಕೊಡಗಿನಲ್ಲಿ ಕಳೆದ ಐದು ವಾರಗಳಿಂದ ಒಂದೇ ಒಂದು ಹೊಸ ಕೊರೊನಾ ಸೋಂಕಿತ ಪ್ರಕರಣಗಳು ದಾಖಲಾಗಿಲ್ಲ. ಕೊಡಗನ್ನು ಕೊರೊನಾ ಸೋಂಕಿನಿಂದ ದೂರವಿಡಲು ಶ್ರಮಿಸುತ್ತಿರುವವರು ಅಲ್ಲಿನ ಜಿಲ್ಲಾಧಿಕಾರಿಯಾದ ಕೇರಳ ಮೂಲದ ‘ಅನೀಸ್ ಕಣ್ಮಣಿ ಜಾಯ್‌’.

ಕೇರಳದ ಬಡ ರೈತನ ಮಗಳಾಗಿದ್ದ ಅನೀಸ್ ಅವರು ತಮ್ಮ ಶಾಲಾ ದಿನಗಳಲ್ಲಿ ಪುಸ್ತಕಗಳನ್ನೂ ಖರೀದಿಸಲಾಗದಷ್ಟು ಬಡತನದಲ್ಲಿ ಬೆಳೆದವರು. ಆದರೆ, ಅವರು ಈಗ ಕೊಡಗು ಜಿಲ್ಲೆಯ ಜಿಲ್ಲಾಧಿಕಾರಿ. ಕೊರೊನಾ ವೈರಸ್‌ ವಿರುದ್ಧದ ಹೋರಾಟದಲ್ಲಿ ಕೊಡಗು ಜಿಲ್ಲೆಯನ್ನು ಮುನ್ನಡೆಸುತ್ತಿರುವ ಇವರ ಪ್ರಯತ್ನಕ್ಕೆ ಸಾಮಾಜಿಕ ಜಾಲತಾಣಿಗರು ಪ್ರಶಂಸೆಯ ಮಳೆಗರೆಯುತ್ತಿದ್ದಾರೆ.

ಕೊರೊನಾ ನಿಯಂತ್ರಣದಲ್ಲಿ ಕೊಡಗಿನಲ್ಲಿ ಅವರು ಮಾಡುತ್ತಿರುವ ಪ್ರಯತ್ನ ರಾಷ್ಟ್ರಮಟ್ಟದಲ್ಲಿ ಪ್ರಶಂಸೆಗೆ ಪಾತ್ರವಾಗಿದೆ. ಇಡೀ ದೇಶದಲ್ಲಿ ಕೊರೊನಾ ಮುಕ್ತವಾಗಿರುವ ಕೆಲವೇ ಜಿಲ್ಲೆಗಳಲ್ಲಿ ಕೊಡಗು ಕೂಡ ಒಂದು. ಕರ್ನಾಟಕವೂ ಸೇರಿದಂತೆ ಇತರ ರಾಜ್ಯಗಳಲ್ಲಿ ಕೊರೊನಾ ಸೋಂಕಿತರ ಪ್ರಮಾಣ ಗಗನಕ್ಕೇರುತ್ತಿರುವ ಸಂದರ್ಭದಲ್ಲಿ, ಕೊಡಗು ಜಿಲ್ಲೆಯಲ್ಲಿ ಕಳೆದ 28 ದಿನಗಳಿಂದ ಒಂದೂ ಕೊರೊನಾ ಪ್ರಕರಣ ಪತ್ತೆಯಾಗಿಲ್ಲ.

ಸೋಂಕಿನ ವಿರುದ್ಧ ಹೋರಾಟವನ್ನು ಮುನ್ನಡೆಸಿದ ಅನೀಸ್;  ಕೊರೊನಾ ವಿರುದ್ಧ ಗೆದ್ದ ಕೊಡಗು..!!
ಅನೀಸ್ ಕಣ್ಮಣಿ ಜಾಯ್

Covid19india.org ನಲ್ಲಿ ನವೀಕರಿಸಿದ ಸಂಖ್ಯೆಗಳ ಪ್ರಕಾರ, ಇಲ್ಲಿಯವರೆಗೆ ಕೊಡಗಿನಲ್ಲಿ ಮೂರು ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಮೂವರಲ್ಲಿ ಎರಡು ಪ್ರಕರಣಗಳು ಸಕ್ರಿಯವಾಗಿವೆ ಮತ್ತು ಒಬ್ಬರು ಗುಣಮುಖರಾಗಿದ್ದಾರೆ.

ದೇಶಾದ್ಯಂತ ಲಾಕ್‌ಡೌನ್‌ ಸಡಿಲಗೊಳಿಸಿ, ಅನೇಕ ಪ್ರವಾಸಿ ತಾಣಗಳನ್ನು ತೆರೆಯಲಾಗುತ್ತಿದೆ. ಆದರೆ, ಕೊಡಗಿನಲ್ಲಿ ಪ್ರವಾಸಿ ತಾಣಗಳನ್ನು ಇನ್ನೂ ಕೆಲವು ದಿನಗಳ ವರೆಗೆ ತೆರೆಯುವುದಿಲ್ಲ ಎಂದು ಅನ್ನೀಸ್‌ ಘೋಷಿಸಿದ್ದಾರೆ.

ನೊಂದಾಯಿಸಿಕೊಂಡಿರುವ ಹೋಂಸ್ಟೇಗಳನ್ನು ಮಾತ್ರ ತೆರೆಯಲು ಅನುಮತಿ ನೀಡಲಾಗಿದೆ. ಆದರೆ ಹೋಟೆಲ್‌ಗಳು ಮತ್ತು ರೆಸಾರ್ಟ್‌ಗಳಲ್ಲಿ ಬರುವ ಪ್ರವಾಸಗಳ ಪ್ರಯಾಣದ ಇತಿಹಾಸ, ಅವರ ವಿವರಗಳುಳ್ಳ ದಾಖಲೆಗಳನ್ನು ಪಡೆದುಕೊಳ್ಳಬೇಕು ಹಾಗೂ ಕ್ವಾರಂಟೈನ್‌ಗೆ ಒಳಪಟ್ಟಿದ್ದರೆ ಎಂದು ತಿಳಿದುಕೊಳ್ಳುವಂತೆ ಆದೇಶಿಸಲಾಗಿದೆ.

ಕೂರ್ಗ್‌ ಎಂದೇ ಖ್ಯಾತಿ ಪಡೆದಿರುವ ಪ್ರವಾಸಿ ತಾಣವಾದ ಕೊಡಗಿನಲ್ಲಿ ಇದೂವರೆಗೂ 3 ಕೊರೊನಾ ಪ್ರಕರಣಗಳು ಮಾತ್ರ ದಾಖಲಾಗಿದ್ದು, ಸೋಂಕನ್ನು ನಿಯಂತ್ರಸುವಲ್ಲಿ ಅಲ್ಲಿಯ ಜಿಲ್ಲಾಧಿಕಾರಿಯಾಗಿರುವ ಅನೀಸ್ ಪ್ರಯತ್ನ ಯಶಸ್ವಿಯಾಗಿದೆ. ಬಡತನದ ವಿರುದ್ಧ ಹೋರಾಡಿ ಸಾಧನೆ ಮಾಡಿರುವ ಅನ್ನೀಸ್ ಇದೀಗ ಕೊರೊನಾ ವಿರುದ್ಧದ ಹೋರಾಟದಲ್ಲಿಯೂ ಸಾಧನೆ ಮಾಡಿ ಯಶಸ್ವಿಯಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪ್ರಶಂಸೆಗಳು ಕೇಳಿಬರುತ್ತಿವೆ.

Ennis Kanmani Joy of Kerala fought poverty and cracked UPSC Civil Services Exam. She secured 65th rank in her second…

Posted by Sochle on Saturday, June 6, 2020

ಅನೇಕ ಸಾಮಾಜಿಕ ಮಾಧ್ಯಮ ಬಳಕೆದಾರರು ಅನ್ನೀಸ್‌ ಅವರು ಬಡತನದ ವಿರುದ್ಧ ಹೇಗೆ ಹೋರಾಡಿದರು ಮತ್ತು ಹೇಗೆ ಕನಸನ್ನು ಸಾಧಿಸಿದರು ಎಂಬ ಕಥೆಯನ್ನು ಹಂಚಿಕೊಂಡಿದ್ದಾರೆ.


ಓದಿ: ‘ಭರವಸೆಯ ಕಿರಣ’; ಕೊರೊನಾ ಸೋಂಕಿತ 97 ವರ್ಷದ ಹಿರಿಯ ವ್ಯಕ್ತಿ ಗುಣಮುಖ


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...