Homeನಿಜವೋ ಸುಳ್ಳೋಫ್ಯಾಕ್ಟ್‌ಚೆಕ್: ಪ್ರಿಯಾಂಕ ಗಾಂಧಿ ವಾದ್ರಾ ಮದುವೆ ನೆರವೇರಿಸಿದ್ದು ಮುಸ್ಲಿಂ ಮುಲ್ಲಾ? ವಾಸ್ತವವೇನು?

ಫ್ಯಾಕ್ಟ್‌ಚೆಕ್: ಪ್ರಿಯಾಂಕ ಗಾಂಧಿ ವಾದ್ರಾ ಮದುವೆ ನೆರವೇರಿಸಿದ್ದು ಮುಸ್ಲಿಂ ಮುಲ್ಲಾ? ವಾಸ್ತವವೇನು?

- Advertisement -
- Advertisement -

ಕಾಂಗ್ರೆಸ್ ಪಕ್ಷದ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರಾ ಮದುವೆಯನ್ನು ಮುಸ್ಲಿಂ ಸಂಪ್ರದಾಯಗಳ ಪ್ರಕಾರ ನೆರವೇರಿಸಿದ್ದು ಮುಸ್ಲಿಂ ಸಂಸದ ಶಫಿಕೂರ್ ರಹಮಾನ್ ವಿರ್ಕ್ ಎಂದು ಹಲವಾರು ನೆಟ್ಟಿಗರು ದೂರಿದ್ದಾರೆ. ಜೊತೆಗೆ ಗಡ್ಡಧಾರಿ ಪೂಜಾರಿಯ ಚಿತ್ರವೊಂದನ್ನು ಷೇರ್ ಮಾಡಿದ್ದಾರೆ.

ಸ್ವತಂತ್ರ ಠಾಕೂರ್ ಹೆಸರಿನ ಟ್ವಿಟ್ಟರ್ ಖಾತೆಯಲ್ಲಿ “ಪ್ರಿಯಾಂಕಾ ಗಾಂಧಿಯವರ ವಿವಾಹದ ಸಮಯದಲ್ಲಿ ಮೌಲಾನಾ ಮತ್ತು ಸಂಸತ್ ಸದಸ್ಯ ಶಫಿಕುರ್ ರಹಮಾನ್ ವಿರ್ಕ್ ಅವರು ಕೆಲವು ಇಸ್ಲಾಮಿಕ್ ಆಚರಣೆಗಳನ್ನು ಮಾಡಲು ಏಕೆ ಆಹ್ವಾನಿಸಲಾಯಿತು?” ಎಂಬ ಆರೋಪ ಮಾಡಲಾಗಿದೆ. ಸ್ವಂತಂತ್ರ ಠಾಕೂರ್ ಬಿಜೆಪಿ ಬೆಂಬಲಿಗ ಎಂದು ತಮ್ಮ ಬಯೋ ನಲ್ಲಿ ಬರೆದುಕೊಂಡಿದ್ದಾರೆ.

प्रियंका गांधी के विवाह के समय मौलाना और संसद सदस्य शफीकुर्र रहमान विर्क को कुछ इस्लामी रवायत निभाने के लिए क्यों बुलाया गया था ?पूछता है भारत ??

Posted by Hindu Kamal Garg on Thursday, April 23, 2020

ಫ್ಯಾಕ್ಟ್ ಚೆಕ್:

ಛಾಯಾಚಿತ್ರದಲ್ಲಿ ಗಡ್ಡವಿರುವ ವ್ಯಕ್ತಿಯ ಹೆಸರು ಪಂಡಿತ್ ಇಕ್ಬಾಲ್ ಕಿಶೆನ್ ರೆಯು. ಅವರು ಮೊದಲ ಕಾಶ್ಮೀರಿ ಪಂಡಿತ್ ಕ್ರಿಕೆಟ್ ಅಂಪೈರ್ ಮತ್ತು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಪಂಡಿತ್ ಸ್ವರೂಪ್ ಕಿಶೆನ್ ರೆಯು ಅವರ ಸಹೋದರ. ಕಾಶ್ಮೀರ ಸೆಂಟಿನೆಲ್‌ನ 2009 ರ ಲೇಖನವೊಂದರ ಪ್ರಕಾರ, ಪಂಡಿತ್ ಇಕ್ಬಾಲ್ ಕಿಶೆನ್ ರೆಯು “ರೈಲ್ವೆಯಲ್ಲಿ ಉದ್ಯೋಗದಲ್ಲಿದ್ದರು ಮತ್ತು ಕಾಶ್ಮೀರಿ ಸಂಪ್ರದಾಯಗಳ ಬಗ್ಗೆ ಸಂಪೂರ್ಣ ಜ್ಞಾನ ಹೊಂದಿದ್ದರು. ಅವರು ಕುಲ್ ಪುರೋಹಿತ್ ಅಭ್ಯಾಸ ಮಾಡುತ್ತಿದ್ದರು ಮತ್ತು ಅವರ ಜಜ್ಮಾನ್‌ಗಳ ಧಾರ್ಮಿಕ ಆಚರಣೆಗಳನ್ನು ಮಾಡುತ್ತಿದ್ದರು. 1996 ರಲ್ಲಿ ಕೆ.ಪಿ ಅವರ ಸಂಪ್ರದಾಯಗಳ ಪ್ರಕಾರ ರಾಬರ್ಟ್ ವಾದ್ರಾ ಅವರೊಂದಿಗೆ ಪ್ರಿಯಾಂಕಾ ಗಾಂಧಿಯವರ ವಿವಾಹವನ್ನು ಮಾಡಿದ ನಂತರ ಅವರು ಈ ಕೆಲಸವನ್ನು ತೊರೆದರು” ಎಂದು ಪತ್ರಿಕೆ ವರದಿ ಮಾಡಿದೆ. ಕುಲ್ ಪುರೋಹಿತ್ ಎಂದರೆ ಕುಟುಂಬದ ಪೂಜಾರಿ ಎಂದರ್ಥ.

ಕಾಶ್ಮೀರ ಪಂಡಿತ್ ಆದ ಇಕ್ಬಾಲ್ ಕಿಶೆನ್ ಅವರು ಗಾಂಧಿ ಕುಟುಂಬದ ಪೂಜಾರಿಗಳಾಗಿದ್ದು ಹಿಂದೂ ಸಂಪ್ರದಾಯದ ರೀತಿಯಲ್ಲಿಯೇ ವಿವಾಹದ ವಿಧಿ ವಿಧಾನಗಳನ್ನು ನೆರವೇರಿಸಿದ್ದಾರೆ ಎಂದು ಪತ್ರಿಕೆಗಳು ವರದಿ ಮಾಡಿವೆ. ಅಲ್ಲದೇ ಪ್ರಿಯಾಂಕ ಗಾಂಧಿಯವರು ಜೂನ್ 15 ರಂದು ಹಂಚಿಕೊಂಡಿರುವ ಮದುವೆಯ ಫೋಟೊಗಳಲ್ಲಿ ಅವರು ಹಿಂದೂ ಧರ್ಮದ ಸಂಪ್ರದಾಯಗಳನ್ನು ಪಾಲಿಸುತ್ತಿರುವುದು ಸ್ಪಷ್ಟವಾಗಿ ಕಾಣುತ್ತಿದೆ.


ಇದನ್ನು ಓದಿ: ಒಂದೇ ವೆಂಟಿಲೇಟರ್‌ ಫೋಟೊ ಹಂಚಿಕೊಂಡ ನೂರಾರು ಬಿಜೆಪಿ ಮುಖಂಡರು: ಪಬ್ಲಿಸಿಟಿ ಗಿಮ್ಮಿಕ್ ಎಂದ ನೆಟ್ಟಿಗರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...