Homeಚಳವಳಿಭೂಸುಧಾರಣೆ ಕಾಯ್ದೆ ತಿದ್ದುಪಡಿಗೆ ಮಹಿಳಾ ರೈತರ ಹಕ್ಕುಗಳ ವೇದಿಕೆಯ ಖಂಡನೆ

ಭೂಸುಧಾರಣೆ ಕಾಯ್ದೆ ತಿದ್ದುಪಡಿಗೆ ಮಹಿಳಾ ರೈತರ ಹಕ್ಕುಗಳ ವೇದಿಕೆಯ ಖಂಡನೆ

ಜಾಗತಿಕವಾಗಿ ಮಹಿಳೆಯರು 66% ಗ್ರಾಮೀಣ ಕೆಲಸವನ್ನು ಮಾಡುತ್ತಾರೆ. ವಿಶ್ವದ 50% ಆಹಾರ ಪೂರೈಕೆಯನ್ನು ಮಾಡುತ್ತಾರೆ. ಕೃಷಿ ಆದಾಯದ 10% ಗಳಿಸುತ್ತಾರೆ ಮತ್ತು ಕೇವಲ 1% ರಷ್ಟು ಆಸ್ತಿಯನ್ನು ಹೊಂದಿದ್ದಾರೆ.

- Advertisement -
- Advertisement -

ಭೂಸುಧಾರಣೆ ಕಾಯ್ದೆಗೆ ತಿದ್ದುಪಡಿ ತರಲೊರಟಿರುವ ಕರ್ನಾಟಕ ಸರ್ಕಾರದ ಕ್ರಮಕ್ಕೆ ಮಹಿಳಾ ರೈತರ ಹಕ್ಕುಗಳ ವೇದಿಕೆ – ಕರ್ನಾಟಕ (ಮಕಾಮ್-ಮಹಿಳಾ ಕಿಸಾನ್ ಅಧಿಕಾರ್ ಮಂಚ್) ತೀವ್ರ ವಿರೋಧ ವ್ಯಕ್ತಪಡಿಸಿದೆ.

ವೇದಿಕೆಯು ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ‘ಭೂ ಸುಧಾರಣೆ ಕಾನೂನಿನಲ್ಲಿ ಕಠಿಣ ನಿಯಮಗಳು ಇದ್ದರೂ ಕೃಷಿಕರಲ್ಲದವರು ವಾಮಮಾರ್ಗ ಬಳಸಿ ಜಮೀನು ಖರೀದಿಸುತ್ತಿದ್ದಾರೆ’ ಎಂಬ ಕಾರಣಕ್ಕೆ ಕಾನೂನಿಗೆ ತಿದ್ದುಪಡಿ ತರಲಾಗುತ್ತದೆ ಎಂಬ ಕಂದಾಯ ಮಂತ್ರಿಗಳಾದ ಆರ್.ಅಶೋಕ್ ಅವರು ಸಮಜಾಯಿಷಿ ಯಾರಿಗೂ ಒಪ್ಪಿಗೆ ಆಗುವಂಥದ್ದಲ್ಲ. ಕಳ್ಳ ಹಾದಿ ಬಳಸುತ್ತಿದ್ದಾರೆಂಬ ಮಾತ್ರಕ್ಕೆ ಆ ಕಳ್ಳ ಹಾದಿಯನ್ನು ರಾಜಮಾರ್ಗ ಮಾಡವು ಸರ್ಕಾರದ ಕ್ರಮ ಸರಿಯಾದುದ್ದಲ್ಲ ಎಂದು ವಿರೋಧ ವ್ಯಕ್ತಪಡಿಸಿದೆ.

ಮಹಿಳಾ ರೈತರ ಹಕ್ಕುಗಳ ವೇದಿಕೆಯು (ಮಕಾಮ್-ಮಹಿಳಾ ಕಿಸಾನ್ ಅಧಿಕಾರ್ ಮಂಚ್) ರಾಷ್ಟ್ರದ ಅನೌಪಚಾರಿಕ ವೇದಿಕೆಯಾಗಿದ್ದು, ಇದು ಸುಮಾರು 24 ರಾಜ್ಯಗಳ ರೈತ  ಮಹಿಳೆಯರು, ಮಹಿಳಾ ರೈತರ ಸಾಮೂಹಿಕ ಸಂಘಟನೆಗಳು, ನಾಗರಿಕ ಸಮಾಜ ಸಂಸ್ಥೆಗಳು, ಸಂಶೋಧಕರು ಮತ್ತು ಕಾರ್ಯಕರ್ತರನ್ನು ಒಳಗೊಂಡಿದೆ. ಪ್ರಮುಖವಾಗಿ ಭಾರತದಲ್ಲಿನ  ಮಹಿಳಾ ರೈತರ ಗುರುತಿಸುವಿಕೆ, ಸಿಗಬೇಕಾಗಿರುವ ಮಾನ್ಯತೆ  ಮತ್ತು ಹಕ್ಕುಗಳನ್ನು ಪಡೆಯುವುದಕ್ಕೋಸ್ಕರ  ಶ್ರಮಿಸುತ್ತಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಕೃಷಿಕರಲ್ಲದವರು ಯಾವುದೇ ಅಡೆತಡೆಗಳಿಲ್ಲದೆ ಜಮೀನು ಖರೀದಿಸಬಹುದಾದ ಅವಕಾಶ ಕಲ್ಪಿಸಿಲಿಕ್ಕಾಗಿ ಕರ್ನಾಟಕ ಸರ್ಕಾರ ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ತರುತ್ತಿರುವುದು ಕೃಷಿಕರಿಗಷ್ಟೇ ಅಲ್ಲ, ಗ್ರಾಮೀಣ ಭೂಹೀನ ಮತ್ತು ಭೂಮಿ ಉಳ್ಳವರ ಹಿತಾಸಕ್ತಿ ಜನರೆಲ್ಲರಿಗೂ ನಿರಾಶೆ, ಸಿಟ್ಟು ಮೂಡಿಸಿದೆ ಎಂದು ಮಹಿಳಾ ರೈತರ ಹಕ್ಕುಗಳ ವೇದಿಕೆ – ಕರ್ನಾಟಕ ಆರೋಪಿಸಿದೆ.

ಕೋವಿಡ್ -19 ಮಹಾಮಾರಿ ಸಂಕ್ರಮಣದ ಸನ್ನಿವೇಶದಲ್ಲಿ ಆರ್ಥಿಕತೆಯ “ಅಗತ್ಯ ಸೇವೆಗಳ ಮೇಲೆ ಕೇಂದ್ರೀಕೃತವಾಗರಬೇಕು. ಕೃಷಿ ಮತ್ತು ಆಹಾರ ಸುರಕ್ಷತೆಯನ್ನು ಆದ್ಯತೆಯ ವಿಷಯವಾಗಿರಬೇಕು. ಇಂತಹ ಸಂದರ್ಭದಲ್ಲಿ ಕೃಷಿ ಭೂಮಿಯನ್ನು ರೈತರಿಂದ ಕಿತ್ತುಕೊಂಡು ಕೃಷಿಯ ದಿಕ್ಕು ಬದಲಿಸಿ, ಕೃಷಿಯೇತರ ಬಳಕೆ ತಿರುಗಿಸುವುದು ಮತ್ತು ಕೃಷಿಯೇತರರಿಗೆ ಸ್ವತಃ ಸರ್ಕಾರ ಮುಂದೆ ನಿಂತು ದಾರಿ ಮಾಡಿಕೊಡುತ್ತಿರುವುದು ಅತ್ಯಂತ ಅವಿವೇಕದ ಸಂಗತಿಯಾಗಿದೆ ಎಂದು ವೇದಿಕೆ ಆರೋಪಿಸಿದೆ.

‘ಯಾವ ಕೈಗಳು ಭೂಮಿಯಲ್ಲಿ ಉಳುಮೆ ಮಾಡುತ್ತವೆಯೋ ಅ ಕೈಗಳ ಕುಟುಂಬವೇ ರೈತ ಕುಟುಂಬ’ ಎನ್ನುವುದು ನಿಜವಾದರೆ, ಮಹಿಳೆಯರಷ್ಟು ಕೈಯನ್ನು ಮಣ್ಣು ಮಾಡಿಕೊಳ್ಳುವವರು ಇನ್ನಾರು ಇಲ್ಲ. ಆದಾಗ್ಯೂ ಮಹಿಳೆಯರು ಎಂದು ಭೂಹೀನರು. ಜಾಗತಿಕವಾಗಿ ಮಹಿಳೆಯರು 66% ಗ್ರಾಮೀಣ ಕೆಲಸವನ್ನು ಮಾಡುತ್ತಾರೆ. ವಿಶ್ವದ 50% ಆಹಾರ ಪೂರೈಕೆಯನ್ನು ಮಾಡುತ್ತಾರೆ. ಕೃಷಿ ಆದಾಯದ 10% ಗಳಿಸುತ್ತಾರೆ ಮತ್ತು ಕೇವಲ 1% ರಷ್ಟು ಆಸ್ತಿಯನ್ನು ಹೊಂದಿದ್ದಾರೆ. ಅಖಿಲ ಭಾರತ ಮಟ್ಟದಲ್ಲಿ ಶೇಕಡಾ 24% ಪುರುಷರು ಭೂಮಿಯನ್ನು ಹೊಂದಿದ್ದಾರೆ, ಕೇವಲ 4% ಗ್ರಾಮೀಣ ಮಹಿಳೆಯರು ಮಾತ್ರ ಭೂಮಿಯನ್ನು ಹೊಂದಿದ್ದಾರೆ. ಈ ಪರಿಸ್ಥಿತಿ ಬದಲಾಗಬೇಕೇಂದು ವೇದಿಕೆ ಒತ್ತಾಯಿಸಿದೆ.

ಮಹಿಳಾ ರೈತರಿಗೆ, ವಿಶೇಷವಾಗಿ ದಲಿತ ಮತ್ತು ಆದಿವಾಸಿ ಮಹಿಳಾ ರೈತರಿಗೆ ಸರ್ಕಾರ ಎಂದಿಗೂ ಆದ್ಯತೆ ನೀಡಿಲ್ಲ. ಈಗ ಇರುವ ಕಾನೂನನ್ನು ದುರ್ಬಲಗೊಳಿಸುವ ಬದಲು, ಅವರಿಗೆ ಭೂಮಿಯನ್ನು ನೀಡಬೇಕು. ಪಶುಗಳನ್ನು ಮೇಯಿಸಲಿಕ್ಕೆ, ಗುಂಪು ಕೃಷಿ, ಸಣ್ಣ ಅರಣ್ಯ ಉತ್ಪನ್ನಗಳ ಸಂಗ್ರಹ ಮತ್ತು ಕೃತಕ ಮೀನುಗಾರಿಕೆಗೆ ಅನುವು ಮಾಡಿಕೊಡಬೇಕು, ಭೂರಹಿತ ಕುಟುಂಬಗಳಿಗೆ 5 ಎಕರೆ ಜಮೀನನ್ನು ಮಹಿಳೆಯನ್ನು ಸೇರಿದಂತೆ ಜಂಟಿ ಪಟ್ಟ ನೀಡಬೇಕು ಎಂದು ವೇದಿಕೆ ಒತ್ತಾಯಿಸಿದೆ.

ಪತ್ರಿಕಾ  ಹೇಳಿಕೆಗೆ ಕವಿತಾ ಕುರುಗಂಟಿ, ಜ್ಯೋತಿ ರಾಜ್, ಇಂದಿರಾ ಕೃಷ್ಣಪ್ಪ, ಶಾರದಾ ದಾಬಡೆ, ಮಮತಾ ಯಜಮಾನ್, ಮಧು ಭೂಷಣ, ರಾಜೇಶ್ವರಿ ಜೋಶಿ, ಸುವರ್ಣ ಕುಠಾಳೆ, ಮಹಾನಂದ ತಳವಾರ, ಸ್ವಾಮಿ, ನಿಂಗಮ್ಮ ಸವಣೂರ, ಶಶಿರಾಜ್, ಕವಿತಾ ಶ್ರೀನಿವಾಸನ್, ನೀಲಮ್ಮ ಮುಂತಾದವರು ಸಹಿ ಮಾಡಿದ್ದಾರೆ.


ಇದನ್ನೂ ಓದಿ: ಬಿಜೆಪಿ ಸರಕಾರ ಕೃಷಿ ಉತ್ಪನ್ನ ಮಾರಾಟದಲ್ಲಿಯೂ ಮಾಫಿಯ ಸೃಷ್ಠಿ ಮಾಡುತ್ತಿದೆ: ಕರ್ನಾಟಕ ಪ್ರಾಂತ ರೈತ ಸಂಘ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...