Homeಅಂತರಾಷ್ಟ್ರೀಯಏಕಪಕ್ಷೀಯ ಕ್ರಮ ಬೇಡ, ತೊಂದರೆ ಉಂಟು ಮಾಡಬೇಡಿ: ಚೀನಾ

ಏಕಪಕ್ಷೀಯ ಕ್ರಮ ಬೇಡ, ತೊಂದರೆ ಉಂಟು ಮಾಡಬೇಡಿ: ಚೀನಾ

- Advertisement -
- Advertisement -

ಚೀನಾ ಜೊತೆಗಿನ ಘರ್ಷಣೆಯಲ್ಲಿ ಭಾರತೀಯ ಸೇನೆಯು ಮೂವರು ಸೈನಿಕರು ಸಾವನಪ್ಪಿದ ನಂತರ ಏಕಪಕ್ಷೀಯ ಕ್ರಮಗಳನ್ನು ತೆಗೆದುಕೊಳ್ಳಬಾರದು, ತೊಂದರೆ ಉಂಟುಮಾಡಬಾರದು ಎಂದು ಭಾರತಕ್ಕೆ ಚೀನಾ ವಿದೇಶಾಂಗ ಸಚಿವಾಲಯ ಕರೆ ನೀಡಿದೆ.

ಭಾರತವು ತನ್ನ ಭೂಪ್ರದೇಶದ ಮೇಲೆ ಅತಿಕ್ರಮಣ ಮಾಡಿದೆ ಎಂದು ಚೀನಾದ ಅಧಿಕಾರಿಗಳು ಆರೋಪಿಸಿದ್ದಾರೆ.

ಪೂರ್ವ ಲಡಾಕ್ ಸೆಕ್ಟರ್‌ನ ನಾಲ್ಕು ಸ್ಟ್ಯಾಂಡ್‌ಆಫ್ ಪಾಯಿಂಟ್‌ಗಳಲ್ಲಿ ಒಂದಾದ ಗಾಲ್ವಾನ್ ಕಣಿವೆಯಲ್ಲಿ ಭಾರತೀಯ ಮತ್ತು ಚೀನಾದ ಸೈನಿಕರ ನಡುವೆ ನಡೆದ ಹಿಂಸಾತ್ಮಕ ಮುಖಾಮುಖಿಯಲ್ಲಿ ಭಾರತದ ಸೇನಾಧಿಕಾರಿ ಮತ್ತು ಇಬ್ಬರು ಸೈನಿಕರು ಸಾವನ್ನಪ್ಪಿದ್ದಾರೆ.

ಈ ಬಗ್ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ರಕ್ಷಣಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ಮೂವರು ಸೇವಾ ಮುಖ್ಯಸ್ಥರು ಮತ್ತು ವಿದೇಶಾಂಗ ಸಚಿವ ಡಾ.ಎಸ್.ಜೈಶಂಕರ್ ಅವರೊಂದಿಗೆ ಸಭೆ ನಡೆಸುತ್ತಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

ಸ್ವಲ್ಪ ಸಮಯದ ಹಿಂದೆ ಸೇನೆಯು ಹೇಳಿಕೆಯಲ್ಲಿ ಭಾರತೀಯ ಸೇನಾ ಸಿಬ್ಬಂದಿಯನ್ನು “ಹಿಂಸಾತ್ಮಕ ಮುಖಾಮುಖಿ” ಯಲ್ಲಿ ಕೊಲ್ಲಲಾಯಿತು ಮತ್ತು ಉದ್ವಿಗ್ನತೆಯನ್ನು ತಗ್ಗಿಸಲು ಎರಡೂ ದೇಶಗಳ ಮಿಲಿಟರಿ ಪ್ರತಿನಿಧಿಗಳು ಈಗ ಸ್ಥಳದಲ್ಲಿ ಭೇಟಿಯಾಗುತ್ತಿದ್ದಾರೆ ಎಂದು ಹೇಳಿದೆ.

ಚೀನಾದ ಕಡೆಯಿಂದ ಯಾವುದೇ ಸಾವುನೋವುಗಳಿವೆಯೇ ಎಂಬುದು ಇನ್ನು ಸ್ಪಷ್ಟವಾಗಿಲ್ಲ. ಸೇನೆ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಚೀನಾ ಭಾರತದ ಪರವಾಗಿ ಗಂಭೀರ ಪ್ರಾತಿನಿಧ್ಯವನ್ನು ನೀಡಿದೆ ಮತ್ತು ಗಡಿಯನ್ನು ದಾಟದಂತೆ ಅಥವಾ ಗಡಿ ಪರಿಸ್ಥಿತಿಯನ್ನು ಸಂಕೀರ್ಣಗೊಳಿಸುವ ಯಾವುದೇ ಏಕಪಕ್ಷೀಯ ಕ್ರಮಗಳನ್ನು ತೆಗೆದುಕೊಳ್ಳದಂತೆ ತನ್ನ ಮುಂಚೂಣಿ ಸೈನಿಕರನ್ನು ಕಟ್ಟುನಿಟ್ಟಾಗಿ ತಡೆಯುವಂತೆ ಒತ್ತಾಯಿಸಿದೆ ಎಂದು ಚೀನಾ ವಿದೇಶಾಂಗ ಸಚಿವರು ಹೇಳಿರುವುದಾಗಿ ಚೀನಾದ ಗ್ಲೋಬಲ್ ಟೈಮ್ಸ್ ವರದಿ ಮಾಡಿದೆ.

ಗಡಿ ಪರಿಸ್ಥಿತಿಯನ್ನು ಸರಾಗಗೊಳಿಸುವ ಮತ್ತು ಗಡಿ ಪ್ರದೇಶಗಳಲ್ಲಿ ಶಾಂತಿಯನ್ನು ಕಾಪಾಡಿಕೊಳ್ಳಲು ಸಂವಾದದ ಮೂಲಕ ದ್ವಿಪಕ್ಷೀಯ ಸಮಸ್ಯೆಗಳನ್ನು ಬಗೆಹರಿಸಲು ಚೀನಾ ಮತ್ತು ಭಾರತದ ಕಡೆಯವರು ಸಮ್ಮತಿಸಿದ್ದಾರೆ ಎಂದು ಚೀನಾ ವಿದೇಶಾಂಗ ಸಚಿವರು ಹೇಳಿದ್ದಾರೆ.

ಸೋಮವಾರ  ಅಕ್ರಮವಾಗಿ ಎರಡು ಬಾರಿ ಗಡಿ ದಾಟಿ ಚೀನಾದ ಸೈನಿಕರ ಮೇಲೆ ಪ್ರಚೋದನಕಾರಿ ದಾಳಿ ನಡೆಸುವ ಮೂಲಕ ಗಂಭೀರ ದೈಹಿಕ ಘರ್ಷಣೆಗಳಿಗೆ ಕಾರಣವಾದ ಭಾರತದ ಪಡೆಗಳು ಎರಡು ಕಡೆಯ ಒಮ್ಮತವನ್ನು ಗಂಭೀರವಾಗಿ ಉಲ್ಲಂಘಿಸಿವೆ ಎಂದು ಚೀನಾ ವಿದೇಶಾಂಗ ಸಚಿವರು ಆರೋಪಿಸಿದ್ದಾರೆ.

ಭಾರತದ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವನೆ ಅವರು ಮಂಗಳವಾರ ಪಠಾಣ್‌ಕೋಟ್‌ಗೆ ನೀಡಬೇಕಿದ್ದ ನಿಗದಿತ ಭೇಟಿಯನ್ನು ರದ್ದುಗೊಳಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉಭಯ ಸೇನೆಗಳ ಪ್ರಮುಖ ಸಾಮಾನ್ಯ ಶ್ರೇಣಿಯ ಅಧಿಕಾರಿಗಳ ನೇತೃತ್ವದಲ್ಲಿ ಸೇನಾ ನಿಯೋಗಗಳು ಕಳೆದ ವಾರ ಪೂರ್ವ ಲಡಾಖ್‌ನಲ್ಲಿ ತಮ್ಮ ಐದನೇ ಸಭೆಯಲ್ಲಿನ ವಿವಾದವನ್ನು ಪರಿಹರಿಸಲು ಚರ್ಚೆ ನಡೆಸಿದ್ದವು.


ಇದನ್ನೂ ಓದಿ: ಗಾಲ್ವಾನ್ ಕಣಿವೆಯಲ್ಲಿ ಭಾರತ, ಚೀನಾ ಪಡೆಗಳು ಮುಖಾಮುಖಿ; ಸೇನಾಧಿಕಾರಿ ಸೇರಿ ಇಬ್ಬರು ಸೈನಿಕರ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...