Homeಮುಖಪುಟಆತ್ಮಹತ್ಯೆಯೊಂದರ ಅನಾಥ ಕಥನ!

ಆತ್ಮಹತ್ಯೆಯೊಂದರ ಅನಾಥ ಕಥನ!

- Advertisement -
- Advertisement -

ಅವತ್ತು ಮಾರ‍್ನಾಮಿ ಹಬ್ಬ. ಹಟ್ಟಿಯೆಲ್ಲಾ ದಸರಾ ನೋಡಲು ಖಾಲಿಯಾಗಿತ್ತು. ಅವ್ವ ಮಾತ್ರ ಮನೆಯಲ್ಲಿದ್ದಳು. ಸೂರ್ಯ ಮುಳುಗಿ ಜೋಪಡಿಯ ಮೋಟು ಗೋಡೆಯ ಮೇಲೆ ಚಿಮಣಿ ಬುಡ್ಡಿ ಈಗಲೂ.. ಆಗಲೂ….. ಎಂಬಂತೆ ಉಸಿರು ಉಯ್ಯುತ್ತಿತ್ತು. ಒಲೆ ಊದುತ್ತಾ ಉಸಿರುಗಟ್ಟಿಕೊಂಡೆ ಮಡಿಕೆಯಲ್ಲಿ ಮುದ್ದೆ ತಿರುವುತ್ತಿದ್ದ ಅವ್ವನ ಮುಖದಲ್ಲಿ ಕಣ್ಣೀರು,ಬೆವರು ಒಂದಾಗಿ ಉಕ್ಕುತ್ತಿದ್ದವು. ಮತ್ತೆ ಮತ್ತೆ ಸೆರಗಿಗೆ ಕಣ್ಣೀರು,ಬೆವರ ಕುಡಿಸುತ್ತಾ ಒಲೆಯ ಉರಿಯಲ್ಲಿ ಬೇಯುತ್ತಿದ್ದಳು.

ತಿನ್ನೋ ..ಉಣ್ಣೊ ಐದು ಮಕ್ಕಳ ಮನೆ ಅದು. ಗಂಡ-ಹೆಂಡ್ತಿ ಇಬ್ರೂ ಕೂಲಿ- ನಾಲಿ ದುಡಿದ್ರೂ ಸಾಲ ತೀರೋದಿರ‍್ಲಿ. ಮಕ್ಕಳಿಗೆ ಮೂರು ಹೊತ್ತು ಮುದ್ದೆ ಉಣ್ಸೋಕೂ ಆಗ್ತಿರ‍್ಲಿಲ್ಲ. ಇನ್ನೂ ಮಕ್ಕಳ ಓದು, ಬಟ್ಟೆ-ಬರೆ ….ಇವೆಕ್ಕೆಲ್ಲಾ …..ಎಲ್ಲಿಂದ ಹೊಂಚೋದೊ. ಮನೆ ಬಾಗಿಲು ತುಳಿದು ತುಳಿದು ಹೋಗಿದ್ದ ಸಾಲಗಾರ ಗಡುವು ಕೊಟ್ಟಿದ್ದ. ದಣಿವರಿಯದೆ ದುಡಿವ ಅಪ್ಪ ಸಾಲಕ್ಕೆ ಕುಗ್ಗಿ ಹೋಗಿದ್ದ.

ಅಲ್ಲೆ ಎಲ್ಲೋ ಓಣಿಯೊಳಗೆ ಮಕ್ಳೆಲ್ಲಾ ಆಡೋಕೋಗಿದ್ದೋ. ಬೆಳಗ್ಗೆ ಎದ್ದು ಹೋದ ಅಪ್ಪನ ದಾರಿಯನ್ನೆ ಅವ್ವ ಕಾಯುತ್ತಿದ್ದಳು. ಕತ್ತಲು ಗಾಢವಾಗಿ ಕವಿಯುತ್ತಲೆ ಇತ್ತು. ನಡುಮನೆಯಲ್ಲಿ ಕುಳಿತರೆ ಅವ್ವನ ಅಡುಗೆ ಮನೆಗೆ ಕಾಲು ಚಾಚುತ್ತವೆ. ಇಂತಹ ನಡುಮನೆಗೆ ಅಪ್ಪ ಬಂದದ್ದು ಅವ್ವನಿಗೆ ಸುಳಿವೆ ಸಿಕ್ಕಲಿಲ್ಲ. ಮೋಟು ಬೀಡಿಯ ನಾತವಾದರೂ ಬರಬೇಕಿತ್ತು. ಅದೂ ಇಲ್ಲ; ಅವಳಿನ್ನೂ ಮುದ್ದೆ ತಿರುವುತ್ತಾ ಒಲೆ ಮುಂದೆ ಬೇಯುತ್ತಲೆ ಇದ್ದಳು. ದಬ್ಬೆ ಗೋಡೆಯ ಮೂಲೆಗೊರಗಿದ್ದ ಅಪ್ಪನ ಕಣ್ಣ ಮುಂದೆ ದಾರಿಗಳೆಲ್ಲಾ ಕತ್ತಲು ಕವಿದು ಕಾಣದಂತಾಗಿದ್ದವು. ಅವನಾಗಲೇ ಹತಾಶೆಗೆ ಜಾರಿಬಿಟ್ಟಿದ್ದ. ಅದೆಲ್ಲಿ ಸಂಪಾದಿಸಿ ತಂದಿದ್ದನೊ..?ಏನೋ…..? ಹತ್ತಿ ಗಿಡಕ್ಕೆ ಹೊಡೆಯೋ ಔಸತಿ. ಸದ್ದಿಲ್ಲದೆ ಕುಡಿದು ಕೆಮ್ಮಿ ಹೊರಳಾಡಿದಾಗಲೆ ಅವ್ವ ಎಚ್ರವಾದ್ಳು.

ಎದೆ ಎದೆ ಬಡಿದುಕೊಂಡು ಬಾರಾಡಿದಳು ಅಪ್ಪನನ್ನು ತಬ್ಬಿಕೊಂಡು. ಮೆಗ್ಗಾನ್ ಆಸ್ಪತ್ರೆಗೆ ಹೊತ್ತೊಯ್ದು ಕೂಡಿದಳು. ಡಾಕ್ಟ್ರು, ನರ್ಸುಗಳಿಗೆಲ್ಲಾ ಕಾಲಿಡಿದು ಕಾಡಾಡಿಬಿಟ್ಟಳು. ಎದೆಮೂಳೆ ಚಕ್ಕಳ ಬಿಟ್ಟುಕೊಂಡು ಒಣಗಿದ ಬಿದಿರು ದಬ್ಬೆಯಂತಿದ್ದ ಅಪ್ಪ ಸಾವಿನ ಜೊತೆ ವೀರಕಲಿಯಂತೆ ರಣಯುದ್ಧವನ್ನೆ ಮಾಡುತ್ತಿದ್ದ. ಏಳೆಂಟು ವರ್ಷದ ನಾನು ಕಿಟಕಿಗೆ ಆತುಕೊಂಡು ನಿಂತು ಅಪ್ಪನ ಪರದಾಟವನ್ನು ದೃಷ್ಟಿ ಕದಲಿಸದಂತೆ ನೋಡುತ್ತಲೆ ಇದ್ದೆ.

ಅಪ್ಪನ ಕೊರಳಿಗೆ ಪಾಶ ಬಿಗಿದಿದ್ದ ಯಮನೊಂದಿಗೆ‌ ನನ್ನವ್ವ ರಣಚಂಡಿಯಂತೆ ಜಗಳಕ್ಕಿಳಿದು ಬಿಟ್ಟಿದ್ದಳು. ಹಗಲೂ ರಾತ್ರಿ …..ಕಾದಾಡಿದಳು. ಕೊನೆಗೂ ಗೆದ್ದಳು. ಯಮನಿಂದ ಸತ್ಯವಾನನ್ನು ಉಳಿಸಿಕೊಂಡ ಸಾವಿತ್ರಿಯಂತೆ. ಅಪ್ಪನಿಗೆ ಇನ್ನೆಂದೂ ಡಿಪ್ರೆಷನ್ ಹತ್ತಿರ ಸುಳಿಯದಂತೆ ಕಾದಳು. ಅಪ್ಪ ಹತ್ತಾರು ವರ್ಷ ಬದುಕಿದ. ಆತ್ಮಹತ್ಯೆ ಯ ಮಾತಾಡುವವರನ್ನು ಗದರಿಸಿ ಧೈರ್ಯ ತುಂಬುತ್ತಿದ್ದ. ದುಡಿದ, ಸಾಲ ತೀರಿಸಿದ. ಮಕ್ಕಳೆಲ್ಲಾ ಕೈಗೆ ಬಂದು ಸುಖ ಕಾಣುವ ಹೊತ್ತಿಗೆ ಚಿರನಿದ್ರೆಗೆ ಜಾರಿಬಿಟ್ಟ.

**********

ಉದಯೋನ್ಮುಖ ನಟ ಸುಶಾಂತ್ ರಜಪೂತ್‌‌ನ ಆತ್ಮಹತ್ಯೆಯೊಂದು sensation issue ಆಗಿ ಎಲ್ಲರೂ ಮಿಡಿಯುವಾಗ 35 ವರ್ಷಗಳ ಹಿಂದೆ ಅಜ್ಞಾತವಾಗಿದ್ದ ನನ್ನಪ್ಪನ ಆತ್ಮಹತ್ಯೆ ಯತ್ನದ ಅನಾಥ ಕತೆಯೊಂದು ನೆನಪಾಯಿತು.

ಈ ದೇಶದಲ್ಲಿ ಪ್ರತಿ 24 ಗಂಟೆಗೆ 28 ಜನ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. 2018 ರ NCR ವರದಿಪ್ರಕಾರ
2018 ರಲ್ಲಿ 1.3 ಲಕ್ಷ ಜನ ಈ ದೇಶದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರತಿ ಗಂಟೆಗೆ ಒಬ್ಬ ನಿರುದ್ಯೋಗಿ ಆತ್ಮಹತ್ಯೆಯ ಹಾದಿ ತುಳಿದು ಹೆತ್ತವರನ್ನು ಕಣ್ಣೀರಲ್ಲಿ ಕೈ ತೊಳೆಸುತ್ತಾನೆ.

ಪ್ರೀತಿ, ಪ್ರೇಮ, ಕೌಟುಂಬಿಕ ಕಲಹದಂತಹ, ಕೇವಲ ವೈಯುಕ್ತಿಕ ಕಾರಣಗಳಷ್ಟೇ ಆತ್ಮಹತ್ಯೆ ಮಾಡಲು ಕಾರಣವಲ್ಲ. ಈ ದೇಶದಲ್ಲಿ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಕಾರಣಗಳೂ ಆತ್ಮಹತ್ಯೆಗೆ ಪ್ರೇರಣೆ ನೀಡುತ್ತಿವೆ. ಇಂತಹ ಕಾರಣಗಳು ಸೃಷ್ಟಿಸುವ Depression ಅಪಾಯಕಾರಿಯಾದದ್ದು.

ವಿಪರ್ಯಾಸವೆಂದರೆ ಇವ್ಯಾವು ಬೆಳಕಿಗೆ, ಚರ್ಚೆಗೆ, ಮರುಕಕ್ಕೆ, ಧಾರುಣ ದುಃಖಕ್ಕೆ ದಕ್ಕುವುದೇ ಇಲ್ಲ…… ಈ ಹೊತ್ತಿನ ಮಾಧ್ಯಮಗಳು ಅಭಿಪ್ರಾಯ ಉತ್ಪಾದಿಸುವಲ್ಲಿ (manufacturing consent) ಸದಾ choice ನ ರೇಸ್‌ನಲ್ಲಿರುತ್ತವೆ.

Any way, ಸುಶಾಂತ್ ನಿನ್ನದು ಸಾಯುವ ವಯಸ್ಸಲ್ಲ. ನಿನ್ನ ಆತ್ಮಕ್ಕೆ ಚಿರಶಾಂತಿಯನ್ನು ಪ್ರಕೃತಿ ಕರುಣಿಸಲಿ.


ಓದಿ: ನಟ ಸುಶಾಂತ್ ಸಿಂಗ್ ರಜಪೂತ್ ಚಿತ್ರವನ್ನು ‘ಡಿಲೀಟ್’ ಮಾಡಿ: ಮಹಾರಾಷ್ಟ್ರ ಪೋಲಿಸರ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...