Homeಅಂತರಾಷ್ಟ್ರೀಯಭಾರತ-ಚೀನಾ ಗಡಿ ಬಿಕ್ಕಟ್ಟಿಗೆ ಕಾರಣಗಳೇನು? ಈಗಲಾದರೂ ಮೌನ ಮುರಿಯುವರೆ ಮೋದಿ?

ಭಾರತ-ಚೀನಾ ಗಡಿ ಬಿಕ್ಕಟ್ಟಿಗೆ ಕಾರಣಗಳೇನು? ಈಗಲಾದರೂ ಮೌನ ಮುರಿಯುವರೆ ಮೋದಿ?

- Advertisement -
- Advertisement -

ಚೀನಾ ಕಳೆದ ಮೇ ತಿಂಗಳಿನಿಂದ ಲಡಾಕ್‌ನ ಗಾಲ್ವನ್ ಕಣಿವೆ ಮತ್ತು ಪೋಂಗೊಂಗ್ ತ್ಸೋ ಕೆರೆಯ ಪ್ರದೇಶವನ್ನು ಒತ್ತುವರಿ ಮಾಡಿ ವಾಸ್ತವ್ಯ ಹೂಡಿದೆ ಎಂಬ ವರದಿಗಳು ಕೇಳುತ್ತಾ ಬಂದಿದ್ದೇವೆ. ಈಗ ಭಾರತ ತನ್ನ ಸೇನಾಧಿಕಾರಿಯನ್ನು ಸೇರಿದಂತೆ 20 ಯೋಧರನ್ನು ಈ ಗಡಿ ಸಂಘರ್ಷದಲ್ಲಿ ಕಳೆದುಕೊಂಡಿದೆ. ಚೀನಾ ಸೈನ್ಯದ ಸಾವು ನಷ್ಟ ಇನ್ನೂ ವರದಿಯಾಗಿಲ್ಲ. ಈ ಸಂಘರ್ಷದ ಸಾವುಗಳಿಗೆ ಮುಖ್ಯ ಕಾರಣ ತಿಳಿದು ಬಂದಿಲ್ಲವಾದರೂ, 70ರ ದಶಕದ ನಂತರ ಇದೇ ಮೊದಲ ಬಾರಿ 3488 ಕಿ.ಮೀ ಉದ್ದಗಲ ಇರುವ ಚೀನಾ ಗಡಿ ರೇಖೆಯಲ್ಲಿ ಪರಿಸ್ಥಿತಿ ಬಿಗಡಾಯಿಸಿದೆ.

ನಮ್ಮ ಮಾಧ್ಯಮಗಳು ಏನು ಹೇಳುತ್ತಿವೆ ಎಂಬುದು ಎಲ್ಲರಿಗೂ ಗೊತ್ತಿದೆ. ಚೀನಾದ ಮಾಧ್ಯಮಗಳ ಪ್ರಕಾರ ಭಾರತವು ಸಂಧಾನಕ್ಕೆ ಒಪ್ಪಿಯೂ ಕೂಡ ಸೋಮವಾರದಂದು ಎರಡು ಕಡೆ ಅಕ್ರಮ ಪ್ರವೇಶ ಮಾಡಲು ಯತ್ನಿಸಿದಾಗ ಈ ಸಂಘರ್ಷ ಆಗಿದೆ ಮತ್ತು ಅದಕ್ಕೆ ಭಾರತದ ಆಕ್ರಮಣಕಾರಿ ವರ್ತನೆಯೇ ಕಾರಣವಂತೆ. ಪ್ರಸ್ತುತ ಪರಿಸ್ಥಿತಿಯನ್ನು ಬಗೆಹರಿಸಲು ಎರಡೂ ಕಡೆಯ ಹಿರಿಯ ಸೇನಾಧಿಕಾರಿಗಳು ಸಂಧಾನದ ಮಾತುಕತೆಯಲ್ಲಿ ತೊಡಗಿದ್ದಾರೆ.

ಚೀನಾ ಈಗ ಲಡಾಕ್‌ನ ಮೂರು ಜಾಗಗಳಲ್ಲಿ ಬೀಡು ಬಿಟ್ಟು ರಸ್ತೆ, ಮೂಲ ಸೌಕರ್ಯ ಕಾಮಗಾರಿಯಲ್ಲಿ ತೊಡಗಿದೆ ಹಾಗೂ ಟಿಬೆಟ್ ಪ್ರಾಂತ್ಯದಲ್ಲಿನ ಗಾರಿ ಗುನ್ಸ ವಿಮಾನ ನಿಲ್ದಾಣವನ್ನು ನವೀಕರಿಸುತ್ತಿದೆ. 60 ಕಿಲೋಮೀಟರ್ ಚದುರದಷ್ಟು ಒತ್ತುವರಿ ಗಾಲ್ವನ್ ಕಣಿವೆಯಲ್ಲೇ ಮಾಡಿದೆ. ಪೋಂಗೊಂಗ್ ತ್ಸೋ ಸರೋವರದಲ್ಲಿ ಚೀನಾ ಸೇನೆ ತನ್ನ ಬೋಟ್‌ಗಳಿಂದ ಗಸ್ತು ಸುತ್ತುತ್ತಿದ್ದು ಆರು ಜಾಗಗಳಲ್ಲಿ ತನ್ನ ಆರ್ಟಿಲರಿ ಗನ್‌ಗಳನ್ನು ನಿಯೋಜಿಸಿದೆ. ಸಿಕ್ಕಿಂನ ನಕುಲ ಪ್ರದೇಶದಲ್ಲೂ ಚೀನಾ ಸೈನ್ಯದ ಇದೆ ರೀತಿಯ ನುಸುಳುವಿಕೆ ವರದಿಯಾಗಿದೆ. ಕಳವಳಕಾರಿ ಅಂಶವೆಂದರೆ ಗಾಲ್ವನ್ ಕಣಿವೆಯ ಎರಡು ಕಡೆಯ ಎತ್ತರದ ಪರ್ವತಗಳನ್ನು ಆಕ್ರಮಿಸಿಕೊಂಡಿರುವ ಚೀನಾ ಈಗ ಲಡಾಕ್‌ಗೆ ಸಂಪರ್ಕ ಕಲ್ಪಿಸುವ ದರ್ಬುಕ್-ಶ್ಯೋಕ್-ದೌಲತ್ ಬೆಗ್ ಒಳ್ದಿ ಹೆದ್ದಾರಿಯನ್ನು ನಿಯಂತ್ರಣ ಸುಲಭವಾಗಿ ಮಾಡಬಹುದಾಗಿದೆ.

ಕಳೆದ 2017ರಲ್ಲಿ ಭೂತಾನ್, ಭಾರತ ಮತ್ತು ಚೀನಾ ಗಡಿಯ ಬಳಿಯ ಧೊಕ್ಲೊಮ್ ಎತ್ತರದ ಪ್ರದೇಶದಲ್ಲಿ ಚೀನಾ ಈಗ ಮಿಲಿಟರಿ ಔಟ್‌ಪೋಸ್ಟ್ ಮಾಡಿ, ವಿಮಾನ ಏರುದಾರಿಯನ್ನು ನಿರ್ಮಿಸಿಕೊಂಡಿದೆ. ಭಾರತದ ಕಡೆಯಿಂದ ಸಿನಿಮೀಯ ರೀತಿಯಲ್ಲಿ ಉಡಾಫೆ ಹೇಳಿಕೆಗಳನ್ನು ಕೊಡುವುದನ್ನು ಬಿಟ್ಟರೆ, ಈ ಬಿಕ್ಕಟ್ಟಿನ ಸ್ವರೂಪ ಮತ್ತು ಗಂಭೀರತೆ ಕಾಣುತ್ತಿಲ್ಲ. ಗೃಹ ಸಚಿವ ಅಮಿತ್ ಶಾ ನಮ್ಮ ಒಂದು ಇಂಚು ಪ್ರದೇಶ ಯಾರಿಗೂ ಹೋಗುವುದಿಲ್ಲ ಎಂದು ಟ್ವೀಟ್ ಮಾಡಿದರೆ, ಗಡ್ಕರಿ ನಮಗೆ ಚೀನಾ ಪಾಕಿಸ್ತಾನದ ಜಾಗ ಬೇಡ ನಮಗೆ ಶಾಂತಿ ಬೇಕು ಎನ್ನುತ್ತಾರೆ. ಭಾರತದ ಯಾವುದೇ ಪ್ರಧಾನಿ ಕೈಗೊಳ್ಳದಷ್ಟು ಚೀನಾ ಪ್ರವಾಸ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಈವರೆಗೂ ಆಗಿರುವ ಘಟನೆಗಳಿಗೆ ಯಾವುದೇ ಪ್ರತಿಕ್ರಿಯೆ ಕೊಟ್ಟಿಲ್ಲ.

2019ರ ಆಗಸ್ಟ್ ತಿಂಗಳಿನಲ್ಲಿ ಭಾರತ ಏಕಪಕ್ಷೀಯವಾಗಿ ಸಂವಿಧಾನದ ಆರ್ಟಿಕಲ್ 370 ರದ್ದುಗೊಳಿಸಿ ಲಡಾಖ್‌ ಅನ್ನು ಕೇಂದ್ರಾಡಳಿತ ಪ್ರದೇಶ ಮಾಡಲಾಗಿತ್ತು. ಆಕ್ಸೈ ಚಿನ್ ಮತ್ತು ಪಾಕ್ ಆಕ್ರಮಿತ ಕಾಶ್ಮೀರ ನಮ್ಮದು ಮತ್ತು ಅದನ್ನು ಪಡೆಯುತ್ತೇವೆ ಎಂದು ಹೇಳಿತ್ತು. ಈ ಏಕಪಕ್ಷೀಯ ನಿರ್ಧಾರಗಳಿಂದ ಚೀನಾ ಕೆರಳಿತ್ತು. ಅದನ್ನು ಸಂಧಾನದ ಮೂಲಕ ಇತ್ಯರ್ಥ ಮಾಡಿಕೊಳ್ಳುವ ಸಲುವಾಗಿ ಮೋದಿಯ ಚೀನಾ ಪ್ರವಾಸದ ವೂವಾನ್ ಸ್ಪಿರಿಟ್‌ನ ಮುಂದುವರೆದು ಭಾಗವಾಗಿ ಚೆನ್ನೈ ಕನೆಕ್ಟ್ ಮಾಡಿ ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ನ್ನು ಮಹಾಬಲಿಪುರಂಗೆ ಕರೆಸಿ ಮಾತುಕತೆ ನಡೆಸಲಾಗಿತ್ತು. ಆ ಮಾತುಕತೆಗಳ ಸಾರಾಂಶವೇ ಯಾವುದೇ ಗಡಿ ವಿವಾದಗಳನ್ನು ಏಕಪಕ್ಷೀಯವಾಗಿ ನಿರ್ಧರಿಸದೇ ಪರಸ್ಪರ ಮಾತುಕತೆ ಮೂಲಕ ಇತ್ಯರ್ಥ ಮಾಡಿಕೊಳ್ಳುವುದಾಗಿತ್ತು. ಆದರೆ ಈವರೆಗೂ ಕೇಂದ್ರ ಸರ್ಕಾರ ಚೀನಾ ಗಡಿ ವಿವಾದದ ವಿಚಾರವಾಗಿ ಯಾವುದೇ ಸ್ಪಷ್ಟ ಸಂದೇಶ ಕೊಟ್ಟಿಲ್ಲ. ಚೀನಾದೊಂದಿಗಿನ ಭಾರತದ ಸಂಬಂಧ ಏನು? ಭಾರತ ಚೀನಾ ಸಮಸ್ಯೆಗಳೇನು? ಅದರ ಪರಿಹಾರ ಹೇಗೆ ಕಂಡುಕೊಳ್ಳುವುದು. ಭಾರತ ಮತ್ತು ಚೀನಾದ ಸಮನ್ವಯ ಗುರಿಯೇನು? ಈವರೆಗೂ ವಿರೋಧ ಪಕ್ಷದವರನ್ನು ಟೀಕಿಸುವುದನ್ನು ಬಿಟ್ಟು, ಚುನಾವಣಾ ಪ್ರಚಾರದಲ್ಲಿ ಭಾಷಣ ಬಿಟ್ಟು ಒಂದು ಸಣ್ಣ ಪ್ರೆಸ್ ಕಾನ್ಫರೆನ್ಸ್ ಕೂಡ ಮಾಡದ ಪ್ರಧಾನಿಯವರಿಂದ ಉತ್ತರ ಪಡೆಯುವುದು ಹೇಗೆ?

ಪ್ರಪಂಚದ ಮೇಲೆ ಅಧಿಪತ್ಯ ಸಾಧಿಸಲು ಹೊರಟಿರುವ ಚೀನಾದ ಆಕ್ರಮಣಕಾರಿ ನೀತಿಯನ್ನು ಭಾರತ ಒಗ್ಗಟ್ಟಾಗಿ ಎದುರಿಸಲೇಬೇಕಿದೆ. ಅಂತಹ ಒಗ್ಗಟ್ಟನ್ನು ಖಾತರಿಪಡಿಸುವ ಜವಾಬ್ದಾರಿ ಒಕ್ಕೂಟ ಸರ್ಕಾರದ್ದಾಗಿದೆ. ಏಕೆಂದರೆ ಎಲ್ಲಕ್ಕೂ ಇನ್ಯಾರನ್ನೋ ದೂರುತ್ತಾ, ಸತ್ಯಸಂಗತಿಗಳನ್ನು ಮುಚ್ಚಿಡುವ ಅದರ ರೀತಿಯು ಆತಂಕವನ್ನು ಹೆಚ್ಚಿಸುತ್ತಾ ಹೋಗುತ್ತಿದೆ.

(ಲೇಖಕರು ಸಾಮಾಜಿಕ ಕಾರ್ಯಕರ್ತರು. ಅಭಿಪ್ರಾಯಗಳು ವೈಯಕ್ತಿಕವಾದವುಗಳು)


ಇದನ್ನೂ ಓದಿ: ಗಡಿಯಲ್ಲಿ ಸೈನಿಕರ ಸಾವು: ಆಳುವವರ ಮೌನ ಜನದ್ರೋಹ ಮಾತ್ರವಲ್ಲ, ದೇಶದ್ರೋಹವೂ ಹೌದು – ಸಿದ್ದರಾಮಯ್ಯ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....