Homeಅಂತರಾಷ್ಟ್ರೀಯಭಾರತ-ಚೀನಾ ಗಡಿ ಬಿಕ್ಕಟ್ಟಿಗೆ ಕಾರಣಗಳೇನು? ಈಗಲಾದರೂ ಮೌನ ಮುರಿಯುವರೆ ಮೋದಿ?

ಭಾರತ-ಚೀನಾ ಗಡಿ ಬಿಕ್ಕಟ್ಟಿಗೆ ಕಾರಣಗಳೇನು? ಈಗಲಾದರೂ ಮೌನ ಮುರಿಯುವರೆ ಮೋದಿ?

- Advertisement -
- Advertisement -

ಚೀನಾ ಕಳೆದ ಮೇ ತಿಂಗಳಿನಿಂದ ಲಡಾಕ್‌ನ ಗಾಲ್ವನ್ ಕಣಿವೆ ಮತ್ತು ಪೋಂಗೊಂಗ್ ತ್ಸೋ ಕೆರೆಯ ಪ್ರದೇಶವನ್ನು ಒತ್ತುವರಿ ಮಾಡಿ ವಾಸ್ತವ್ಯ ಹೂಡಿದೆ ಎಂಬ ವರದಿಗಳು ಕೇಳುತ್ತಾ ಬಂದಿದ್ದೇವೆ. ಈಗ ಭಾರತ ತನ್ನ ಸೇನಾಧಿಕಾರಿಯನ್ನು ಸೇರಿದಂತೆ 20 ಯೋಧರನ್ನು ಈ ಗಡಿ ಸಂಘರ್ಷದಲ್ಲಿ ಕಳೆದುಕೊಂಡಿದೆ. ಚೀನಾ ಸೈನ್ಯದ ಸಾವು ನಷ್ಟ ಇನ್ನೂ ವರದಿಯಾಗಿಲ್ಲ. ಈ ಸಂಘರ್ಷದ ಸಾವುಗಳಿಗೆ ಮುಖ್ಯ ಕಾರಣ ತಿಳಿದು ಬಂದಿಲ್ಲವಾದರೂ, 70ರ ದಶಕದ ನಂತರ ಇದೇ ಮೊದಲ ಬಾರಿ 3488 ಕಿ.ಮೀ ಉದ್ದಗಲ ಇರುವ ಚೀನಾ ಗಡಿ ರೇಖೆಯಲ್ಲಿ ಪರಿಸ್ಥಿತಿ ಬಿಗಡಾಯಿಸಿದೆ.

ನಮ್ಮ ಮಾಧ್ಯಮಗಳು ಏನು ಹೇಳುತ್ತಿವೆ ಎಂಬುದು ಎಲ್ಲರಿಗೂ ಗೊತ್ತಿದೆ. ಚೀನಾದ ಮಾಧ್ಯಮಗಳ ಪ್ರಕಾರ ಭಾರತವು ಸಂಧಾನಕ್ಕೆ ಒಪ್ಪಿಯೂ ಕೂಡ ಸೋಮವಾರದಂದು ಎರಡು ಕಡೆ ಅಕ್ರಮ ಪ್ರವೇಶ ಮಾಡಲು ಯತ್ನಿಸಿದಾಗ ಈ ಸಂಘರ್ಷ ಆಗಿದೆ ಮತ್ತು ಅದಕ್ಕೆ ಭಾರತದ ಆಕ್ರಮಣಕಾರಿ ವರ್ತನೆಯೇ ಕಾರಣವಂತೆ. ಪ್ರಸ್ತುತ ಪರಿಸ್ಥಿತಿಯನ್ನು ಬಗೆಹರಿಸಲು ಎರಡೂ ಕಡೆಯ ಹಿರಿಯ ಸೇನಾಧಿಕಾರಿಗಳು ಸಂಧಾನದ ಮಾತುಕತೆಯಲ್ಲಿ ತೊಡಗಿದ್ದಾರೆ.

ಚೀನಾ ಈಗ ಲಡಾಕ್‌ನ ಮೂರು ಜಾಗಗಳಲ್ಲಿ ಬೀಡು ಬಿಟ್ಟು ರಸ್ತೆ, ಮೂಲ ಸೌಕರ್ಯ ಕಾಮಗಾರಿಯಲ್ಲಿ ತೊಡಗಿದೆ ಹಾಗೂ ಟಿಬೆಟ್ ಪ್ರಾಂತ್ಯದಲ್ಲಿನ ಗಾರಿ ಗುನ್ಸ ವಿಮಾನ ನಿಲ್ದಾಣವನ್ನು ನವೀಕರಿಸುತ್ತಿದೆ. 60 ಕಿಲೋಮೀಟರ್ ಚದುರದಷ್ಟು ಒತ್ತುವರಿ ಗಾಲ್ವನ್ ಕಣಿವೆಯಲ್ಲೇ ಮಾಡಿದೆ. ಪೋಂಗೊಂಗ್ ತ್ಸೋ ಸರೋವರದಲ್ಲಿ ಚೀನಾ ಸೇನೆ ತನ್ನ ಬೋಟ್‌ಗಳಿಂದ ಗಸ್ತು ಸುತ್ತುತ್ತಿದ್ದು ಆರು ಜಾಗಗಳಲ್ಲಿ ತನ್ನ ಆರ್ಟಿಲರಿ ಗನ್‌ಗಳನ್ನು ನಿಯೋಜಿಸಿದೆ. ಸಿಕ್ಕಿಂನ ನಕುಲ ಪ್ರದೇಶದಲ್ಲೂ ಚೀನಾ ಸೈನ್ಯದ ಇದೆ ರೀತಿಯ ನುಸುಳುವಿಕೆ ವರದಿಯಾಗಿದೆ. ಕಳವಳಕಾರಿ ಅಂಶವೆಂದರೆ ಗಾಲ್ವನ್ ಕಣಿವೆಯ ಎರಡು ಕಡೆಯ ಎತ್ತರದ ಪರ್ವತಗಳನ್ನು ಆಕ್ರಮಿಸಿಕೊಂಡಿರುವ ಚೀನಾ ಈಗ ಲಡಾಕ್‌ಗೆ ಸಂಪರ್ಕ ಕಲ್ಪಿಸುವ ದರ್ಬುಕ್-ಶ್ಯೋಕ್-ದೌಲತ್ ಬೆಗ್ ಒಳ್ದಿ ಹೆದ್ದಾರಿಯನ್ನು ನಿಯಂತ್ರಣ ಸುಲಭವಾಗಿ ಮಾಡಬಹುದಾಗಿದೆ.

ಕಳೆದ 2017ರಲ್ಲಿ ಭೂತಾನ್, ಭಾರತ ಮತ್ತು ಚೀನಾ ಗಡಿಯ ಬಳಿಯ ಧೊಕ್ಲೊಮ್ ಎತ್ತರದ ಪ್ರದೇಶದಲ್ಲಿ ಚೀನಾ ಈಗ ಮಿಲಿಟರಿ ಔಟ್‌ಪೋಸ್ಟ್ ಮಾಡಿ, ವಿಮಾನ ಏರುದಾರಿಯನ್ನು ನಿರ್ಮಿಸಿಕೊಂಡಿದೆ. ಭಾರತದ ಕಡೆಯಿಂದ ಸಿನಿಮೀಯ ರೀತಿಯಲ್ಲಿ ಉಡಾಫೆ ಹೇಳಿಕೆಗಳನ್ನು ಕೊಡುವುದನ್ನು ಬಿಟ್ಟರೆ, ಈ ಬಿಕ್ಕಟ್ಟಿನ ಸ್ವರೂಪ ಮತ್ತು ಗಂಭೀರತೆ ಕಾಣುತ್ತಿಲ್ಲ. ಗೃಹ ಸಚಿವ ಅಮಿತ್ ಶಾ ನಮ್ಮ ಒಂದು ಇಂಚು ಪ್ರದೇಶ ಯಾರಿಗೂ ಹೋಗುವುದಿಲ್ಲ ಎಂದು ಟ್ವೀಟ್ ಮಾಡಿದರೆ, ಗಡ್ಕರಿ ನಮಗೆ ಚೀನಾ ಪಾಕಿಸ್ತಾನದ ಜಾಗ ಬೇಡ ನಮಗೆ ಶಾಂತಿ ಬೇಕು ಎನ್ನುತ್ತಾರೆ. ಭಾರತದ ಯಾವುದೇ ಪ್ರಧಾನಿ ಕೈಗೊಳ್ಳದಷ್ಟು ಚೀನಾ ಪ್ರವಾಸ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಈವರೆಗೂ ಆಗಿರುವ ಘಟನೆಗಳಿಗೆ ಯಾವುದೇ ಪ್ರತಿಕ್ರಿಯೆ ಕೊಟ್ಟಿಲ್ಲ.

2019ರ ಆಗಸ್ಟ್ ತಿಂಗಳಿನಲ್ಲಿ ಭಾರತ ಏಕಪಕ್ಷೀಯವಾಗಿ ಸಂವಿಧಾನದ ಆರ್ಟಿಕಲ್ 370 ರದ್ದುಗೊಳಿಸಿ ಲಡಾಖ್‌ ಅನ್ನು ಕೇಂದ್ರಾಡಳಿತ ಪ್ರದೇಶ ಮಾಡಲಾಗಿತ್ತು. ಆಕ್ಸೈ ಚಿನ್ ಮತ್ತು ಪಾಕ್ ಆಕ್ರಮಿತ ಕಾಶ್ಮೀರ ನಮ್ಮದು ಮತ್ತು ಅದನ್ನು ಪಡೆಯುತ್ತೇವೆ ಎಂದು ಹೇಳಿತ್ತು. ಈ ಏಕಪಕ್ಷೀಯ ನಿರ್ಧಾರಗಳಿಂದ ಚೀನಾ ಕೆರಳಿತ್ತು. ಅದನ್ನು ಸಂಧಾನದ ಮೂಲಕ ಇತ್ಯರ್ಥ ಮಾಡಿಕೊಳ್ಳುವ ಸಲುವಾಗಿ ಮೋದಿಯ ಚೀನಾ ಪ್ರವಾಸದ ವೂವಾನ್ ಸ್ಪಿರಿಟ್‌ನ ಮುಂದುವರೆದು ಭಾಗವಾಗಿ ಚೆನ್ನೈ ಕನೆಕ್ಟ್ ಮಾಡಿ ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ನ್ನು ಮಹಾಬಲಿಪುರಂಗೆ ಕರೆಸಿ ಮಾತುಕತೆ ನಡೆಸಲಾಗಿತ್ತು. ಆ ಮಾತುಕತೆಗಳ ಸಾರಾಂಶವೇ ಯಾವುದೇ ಗಡಿ ವಿವಾದಗಳನ್ನು ಏಕಪಕ್ಷೀಯವಾಗಿ ನಿರ್ಧರಿಸದೇ ಪರಸ್ಪರ ಮಾತುಕತೆ ಮೂಲಕ ಇತ್ಯರ್ಥ ಮಾಡಿಕೊಳ್ಳುವುದಾಗಿತ್ತು. ಆದರೆ ಈವರೆಗೂ ಕೇಂದ್ರ ಸರ್ಕಾರ ಚೀನಾ ಗಡಿ ವಿವಾದದ ವಿಚಾರವಾಗಿ ಯಾವುದೇ ಸ್ಪಷ್ಟ ಸಂದೇಶ ಕೊಟ್ಟಿಲ್ಲ. ಚೀನಾದೊಂದಿಗಿನ ಭಾರತದ ಸಂಬಂಧ ಏನು? ಭಾರತ ಚೀನಾ ಸಮಸ್ಯೆಗಳೇನು? ಅದರ ಪರಿಹಾರ ಹೇಗೆ ಕಂಡುಕೊಳ್ಳುವುದು. ಭಾರತ ಮತ್ತು ಚೀನಾದ ಸಮನ್ವಯ ಗುರಿಯೇನು? ಈವರೆಗೂ ವಿರೋಧ ಪಕ್ಷದವರನ್ನು ಟೀಕಿಸುವುದನ್ನು ಬಿಟ್ಟು, ಚುನಾವಣಾ ಪ್ರಚಾರದಲ್ಲಿ ಭಾಷಣ ಬಿಟ್ಟು ಒಂದು ಸಣ್ಣ ಪ್ರೆಸ್ ಕಾನ್ಫರೆನ್ಸ್ ಕೂಡ ಮಾಡದ ಪ್ರಧಾನಿಯವರಿಂದ ಉತ್ತರ ಪಡೆಯುವುದು ಹೇಗೆ?

ಪ್ರಪಂಚದ ಮೇಲೆ ಅಧಿಪತ್ಯ ಸಾಧಿಸಲು ಹೊರಟಿರುವ ಚೀನಾದ ಆಕ್ರಮಣಕಾರಿ ನೀತಿಯನ್ನು ಭಾರತ ಒಗ್ಗಟ್ಟಾಗಿ ಎದುರಿಸಲೇಬೇಕಿದೆ. ಅಂತಹ ಒಗ್ಗಟ್ಟನ್ನು ಖಾತರಿಪಡಿಸುವ ಜವಾಬ್ದಾರಿ ಒಕ್ಕೂಟ ಸರ್ಕಾರದ್ದಾಗಿದೆ. ಏಕೆಂದರೆ ಎಲ್ಲಕ್ಕೂ ಇನ್ಯಾರನ್ನೋ ದೂರುತ್ತಾ, ಸತ್ಯಸಂಗತಿಗಳನ್ನು ಮುಚ್ಚಿಡುವ ಅದರ ರೀತಿಯು ಆತಂಕವನ್ನು ಹೆಚ್ಚಿಸುತ್ತಾ ಹೋಗುತ್ತಿದೆ.

(ಲೇಖಕರು ಸಾಮಾಜಿಕ ಕಾರ್ಯಕರ್ತರು. ಅಭಿಪ್ರಾಯಗಳು ವೈಯಕ್ತಿಕವಾದವುಗಳು)


ಇದನ್ನೂ ಓದಿ: ಗಡಿಯಲ್ಲಿ ಸೈನಿಕರ ಸಾವು: ಆಳುವವರ ಮೌನ ಜನದ್ರೋಹ ಮಾತ್ರವಲ್ಲ, ದೇಶದ್ರೋಹವೂ ಹೌದು – ಸಿದ್ದರಾಮಯ್ಯ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...