Homeಅಂತರಾಷ್ಟ್ರೀಯಭಾರತ-ಚೀನಾ ಗಡಿ ಬಿಕ್ಕಟ್ಟಿಗೆ ಕಾರಣಗಳೇನು? ಈಗಲಾದರೂ ಮೌನ ಮುರಿಯುವರೆ ಮೋದಿ?

ಭಾರತ-ಚೀನಾ ಗಡಿ ಬಿಕ್ಕಟ್ಟಿಗೆ ಕಾರಣಗಳೇನು? ಈಗಲಾದರೂ ಮೌನ ಮುರಿಯುವರೆ ಮೋದಿ?

- Advertisement -
- Advertisement -

ಚೀನಾ ಕಳೆದ ಮೇ ತಿಂಗಳಿನಿಂದ ಲಡಾಕ್‌ನ ಗಾಲ್ವನ್ ಕಣಿವೆ ಮತ್ತು ಪೋಂಗೊಂಗ್ ತ್ಸೋ ಕೆರೆಯ ಪ್ರದೇಶವನ್ನು ಒತ್ತುವರಿ ಮಾಡಿ ವಾಸ್ತವ್ಯ ಹೂಡಿದೆ ಎಂಬ ವರದಿಗಳು ಕೇಳುತ್ತಾ ಬಂದಿದ್ದೇವೆ. ಈಗ ಭಾರತ ತನ್ನ ಸೇನಾಧಿಕಾರಿಯನ್ನು ಸೇರಿದಂತೆ 20 ಯೋಧರನ್ನು ಈ ಗಡಿ ಸಂಘರ್ಷದಲ್ಲಿ ಕಳೆದುಕೊಂಡಿದೆ. ಚೀನಾ ಸೈನ್ಯದ ಸಾವು ನಷ್ಟ ಇನ್ನೂ ವರದಿಯಾಗಿಲ್ಲ. ಈ ಸಂಘರ್ಷದ ಸಾವುಗಳಿಗೆ ಮುಖ್ಯ ಕಾರಣ ತಿಳಿದು ಬಂದಿಲ್ಲವಾದರೂ, 70ರ ದಶಕದ ನಂತರ ಇದೇ ಮೊದಲ ಬಾರಿ 3488 ಕಿ.ಮೀ ಉದ್ದಗಲ ಇರುವ ಚೀನಾ ಗಡಿ ರೇಖೆಯಲ್ಲಿ ಪರಿಸ್ಥಿತಿ ಬಿಗಡಾಯಿಸಿದೆ.

ನಮ್ಮ ಮಾಧ್ಯಮಗಳು ಏನು ಹೇಳುತ್ತಿವೆ ಎಂಬುದು ಎಲ್ಲರಿಗೂ ಗೊತ್ತಿದೆ. ಚೀನಾದ ಮಾಧ್ಯಮಗಳ ಪ್ರಕಾರ ಭಾರತವು ಸಂಧಾನಕ್ಕೆ ಒಪ್ಪಿಯೂ ಕೂಡ ಸೋಮವಾರದಂದು ಎರಡು ಕಡೆ ಅಕ್ರಮ ಪ್ರವೇಶ ಮಾಡಲು ಯತ್ನಿಸಿದಾಗ ಈ ಸಂಘರ್ಷ ಆಗಿದೆ ಮತ್ತು ಅದಕ್ಕೆ ಭಾರತದ ಆಕ್ರಮಣಕಾರಿ ವರ್ತನೆಯೇ ಕಾರಣವಂತೆ. ಪ್ರಸ್ತುತ ಪರಿಸ್ಥಿತಿಯನ್ನು ಬಗೆಹರಿಸಲು ಎರಡೂ ಕಡೆಯ ಹಿರಿಯ ಸೇನಾಧಿಕಾರಿಗಳು ಸಂಧಾನದ ಮಾತುಕತೆಯಲ್ಲಿ ತೊಡಗಿದ್ದಾರೆ.

ಚೀನಾ ಈಗ ಲಡಾಕ್‌ನ ಮೂರು ಜಾಗಗಳಲ್ಲಿ ಬೀಡು ಬಿಟ್ಟು ರಸ್ತೆ, ಮೂಲ ಸೌಕರ್ಯ ಕಾಮಗಾರಿಯಲ್ಲಿ ತೊಡಗಿದೆ ಹಾಗೂ ಟಿಬೆಟ್ ಪ್ರಾಂತ್ಯದಲ್ಲಿನ ಗಾರಿ ಗುನ್ಸ ವಿಮಾನ ನಿಲ್ದಾಣವನ್ನು ನವೀಕರಿಸುತ್ತಿದೆ. 60 ಕಿಲೋಮೀಟರ್ ಚದುರದಷ್ಟು ಒತ್ತುವರಿ ಗಾಲ್ವನ್ ಕಣಿವೆಯಲ್ಲೇ ಮಾಡಿದೆ. ಪೋಂಗೊಂಗ್ ತ್ಸೋ ಸರೋವರದಲ್ಲಿ ಚೀನಾ ಸೇನೆ ತನ್ನ ಬೋಟ್‌ಗಳಿಂದ ಗಸ್ತು ಸುತ್ತುತ್ತಿದ್ದು ಆರು ಜಾಗಗಳಲ್ಲಿ ತನ್ನ ಆರ್ಟಿಲರಿ ಗನ್‌ಗಳನ್ನು ನಿಯೋಜಿಸಿದೆ. ಸಿಕ್ಕಿಂನ ನಕುಲ ಪ್ರದೇಶದಲ್ಲೂ ಚೀನಾ ಸೈನ್ಯದ ಇದೆ ರೀತಿಯ ನುಸುಳುವಿಕೆ ವರದಿಯಾಗಿದೆ. ಕಳವಳಕಾರಿ ಅಂಶವೆಂದರೆ ಗಾಲ್ವನ್ ಕಣಿವೆಯ ಎರಡು ಕಡೆಯ ಎತ್ತರದ ಪರ್ವತಗಳನ್ನು ಆಕ್ರಮಿಸಿಕೊಂಡಿರುವ ಚೀನಾ ಈಗ ಲಡಾಕ್‌ಗೆ ಸಂಪರ್ಕ ಕಲ್ಪಿಸುವ ದರ್ಬುಕ್-ಶ್ಯೋಕ್-ದೌಲತ್ ಬೆಗ್ ಒಳ್ದಿ ಹೆದ್ದಾರಿಯನ್ನು ನಿಯಂತ್ರಣ ಸುಲಭವಾಗಿ ಮಾಡಬಹುದಾಗಿದೆ.

ಕಳೆದ 2017ರಲ್ಲಿ ಭೂತಾನ್, ಭಾರತ ಮತ್ತು ಚೀನಾ ಗಡಿಯ ಬಳಿಯ ಧೊಕ್ಲೊಮ್ ಎತ್ತರದ ಪ್ರದೇಶದಲ್ಲಿ ಚೀನಾ ಈಗ ಮಿಲಿಟರಿ ಔಟ್‌ಪೋಸ್ಟ್ ಮಾಡಿ, ವಿಮಾನ ಏರುದಾರಿಯನ್ನು ನಿರ್ಮಿಸಿಕೊಂಡಿದೆ. ಭಾರತದ ಕಡೆಯಿಂದ ಸಿನಿಮೀಯ ರೀತಿಯಲ್ಲಿ ಉಡಾಫೆ ಹೇಳಿಕೆಗಳನ್ನು ಕೊಡುವುದನ್ನು ಬಿಟ್ಟರೆ, ಈ ಬಿಕ್ಕಟ್ಟಿನ ಸ್ವರೂಪ ಮತ್ತು ಗಂಭೀರತೆ ಕಾಣುತ್ತಿಲ್ಲ. ಗೃಹ ಸಚಿವ ಅಮಿತ್ ಶಾ ನಮ್ಮ ಒಂದು ಇಂಚು ಪ್ರದೇಶ ಯಾರಿಗೂ ಹೋಗುವುದಿಲ್ಲ ಎಂದು ಟ್ವೀಟ್ ಮಾಡಿದರೆ, ಗಡ್ಕರಿ ನಮಗೆ ಚೀನಾ ಪಾಕಿಸ್ತಾನದ ಜಾಗ ಬೇಡ ನಮಗೆ ಶಾಂತಿ ಬೇಕು ಎನ್ನುತ್ತಾರೆ. ಭಾರತದ ಯಾವುದೇ ಪ್ರಧಾನಿ ಕೈಗೊಳ್ಳದಷ್ಟು ಚೀನಾ ಪ್ರವಾಸ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಈವರೆಗೂ ಆಗಿರುವ ಘಟನೆಗಳಿಗೆ ಯಾವುದೇ ಪ್ರತಿಕ್ರಿಯೆ ಕೊಟ್ಟಿಲ್ಲ.

2019ರ ಆಗಸ್ಟ್ ತಿಂಗಳಿನಲ್ಲಿ ಭಾರತ ಏಕಪಕ್ಷೀಯವಾಗಿ ಸಂವಿಧಾನದ ಆರ್ಟಿಕಲ್ 370 ರದ್ದುಗೊಳಿಸಿ ಲಡಾಖ್‌ ಅನ್ನು ಕೇಂದ್ರಾಡಳಿತ ಪ್ರದೇಶ ಮಾಡಲಾಗಿತ್ತು. ಆಕ್ಸೈ ಚಿನ್ ಮತ್ತು ಪಾಕ್ ಆಕ್ರಮಿತ ಕಾಶ್ಮೀರ ನಮ್ಮದು ಮತ್ತು ಅದನ್ನು ಪಡೆಯುತ್ತೇವೆ ಎಂದು ಹೇಳಿತ್ತು. ಈ ಏಕಪಕ್ಷೀಯ ನಿರ್ಧಾರಗಳಿಂದ ಚೀನಾ ಕೆರಳಿತ್ತು. ಅದನ್ನು ಸಂಧಾನದ ಮೂಲಕ ಇತ್ಯರ್ಥ ಮಾಡಿಕೊಳ್ಳುವ ಸಲುವಾಗಿ ಮೋದಿಯ ಚೀನಾ ಪ್ರವಾಸದ ವೂವಾನ್ ಸ್ಪಿರಿಟ್‌ನ ಮುಂದುವರೆದು ಭಾಗವಾಗಿ ಚೆನ್ನೈ ಕನೆಕ್ಟ್ ಮಾಡಿ ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ನ್ನು ಮಹಾಬಲಿಪುರಂಗೆ ಕರೆಸಿ ಮಾತುಕತೆ ನಡೆಸಲಾಗಿತ್ತು. ಆ ಮಾತುಕತೆಗಳ ಸಾರಾಂಶವೇ ಯಾವುದೇ ಗಡಿ ವಿವಾದಗಳನ್ನು ಏಕಪಕ್ಷೀಯವಾಗಿ ನಿರ್ಧರಿಸದೇ ಪರಸ್ಪರ ಮಾತುಕತೆ ಮೂಲಕ ಇತ್ಯರ್ಥ ಮಾಡಿಕೊಳ್ಳುವುದಾಗಿತ್ತು. ಆದರೆ ಈವರೆಗೂ ಕೇಂದ್ರ ಸರ್ಕಾರ ಚೀನಾ ಗಡಿ ವಿವಾದದ ವಿಚಾರವಾಗಿ ಯಾವುದೇ ಸ್ಪಷ್ಟ ಸಂದೇಶ ಕೊಟ್ಟಿಲ್ಲ. ಚೀನಾದೊಂದಿಗಿನ ಭಾರತದ ಸಂಬಂಧ ಏನು? ಭಾರತ ಚೀನಾ ಸಮಸ್ಯೆಗಳೇನು? ಅದರ ಪರಿಹಾರ ಹೇಗೆ ಕಂಡುಕೊಳ್ಳುವುದು. ಭಾರತ ಮತ್ತು ಚೀನಾದ ಸಮನ್ವಯ ಗುರಿಯೇನು? ಈವರೆಗೂ ವಿರೋಧ ಪಕ್ಷದವರನ್ನು ಟೀಕಿಸುವುದನ್ನು ಬಿಟ್ಟು, ಚುನಾವಣಾ ಪ್ರಚಾರದಲ್ಲಿ ಭಾಷಣ ಬಿಟ್ಟು ಒಂದು ಸಣ್ಣ ಪ್ರೆಸ್ ಕಾನ್ಫರೆನ್ಸ್ ಕೂಡ ಮಾಡದ ಪ್ರಧಾನಿಯವರಿಂದ ಉತ್ತರ ಪಡೆಯುವುದು ಹೇಗೆ?

ಪ್ರಪಂಚದ ಮೇಲೆ ಅಧಿಪತ್ಯ ಸಾಧಿಸಲು ಹೊರಟಿರುವ ಚೀನಾದ ಆಕ್ರಮಣಕಾರಿ ನೀತಿಯನ್ನು ಭಾರತ ಒಗ್ಗಟ್ಟಾಗಿ ಎದುರಿಸಲೇಬೇಕಿದೆ. ಅಂತಹ ಒಗ್ಗಟ್ಟನ್ನು ಖಾತರಿಪಡಿಸುವ ಜವಾಬ್ದಾರಿ ಒಕ್ಕೂಟ ಸರ್ಕಾರದ್ದಾಗಿದೆ. ಏಕೆಂದರೆ ಎಲ್ಲಕ್ಕೂ ಇನ್ಯಾರನ್ನೋ ದೂರುತ್ತಾ, ಸತ್ಯಸಂಗತಿಗಳನ್ನು ಮುಚ್ಚಿಡುವ ಅದರ ರೀತಿಯು ಆತಂಕವನ್ನು ಹೆಚ್ಚಿಸುತ್ತಾ ಹೋಗುತ್ತಿದೆ.

(ಲೇಖಕರು ಸಾಮಾಜಿಕ ಕಾರ್ಯಕರ್ತರು. ಅಭಿಪ್ರಾಯಗಳು ವೈಯಕ್ತಿಕವಾದವುಗಳು)


ಇದನ್ನೂ ಓದಿ: ಗಡಿಯಲ್ಲಿ ಸೈನಿಕರ ಸಾವು: ಆಳುವವರ ಮೌನ ಜನದ್ರೋಹ ಮಾತ್ರವಲ್ಲ, ದೇಶದ್ರೋಹವೂ ಹೌದು – ಸಿದ್ದರಾಮಯ್ಯ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...