Homeಮುಖಪುಟತುರುವೇಕೆರೆಯಲ್ಲಿ ದಲಿತ ಮುಖಂಡನ ಸಂಶಯಾಸ್ಪದ ಸಾವು - ಪೊಲೀಸ್ ವೈಫಲ್ಯವೆಂದ ಪಿಯುಸಿಎಲ್ ಸತ್ಯಶೋಧನ ಸಮಿತಿ

ತುರುವೇಕೆರೆಯಲ್ಲಿ ದಲಿತ ಮುಖಂಡನ ಸಂಶಯಾಸ್ಪದ ಸಾವು – ಪೊಲೀಸ್ ವೈಫಲ್ಯವೆಂದ ಪಿಯುಸಿಎಲ್ ಸತ್ಯಶೋಧನ ಸಮಿತಿ

ಘಟನೆ ಸಂಭವಿಸಿ ಮೂರು ತಿಂಗಳು ಕಳೆದಿದ್ದರೂ ಫೋರೆನ್ಸಿಕ್ ವರದಿ ಬಂದಿಲ್ಲ. ಅರೋಪಿಗಳನ್ನು ಬಂಧಿಸಿಲ್ಲ. ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಅವರನ್ನು ಪತ್ತೆ ಹಚ್ಚು ಕಾರ್ಯಕ್ಕೂ ಕೈಹಾಕಿಲ್ಲ.

- Advertisement -
- Advertisement -

ನಿವೃತ್ತ ಗ್ರಾಮ ಸಹಾಯಕ ಹಾಗೂ ಸಾಮಾಜಿಕ ಕಾರ್ಯಕರ್ತರಾಗಿ ಕೆಲಸ ಮಾಡುತ್ತಿದ್ದ ದಲಿತ ಮುಖಂಡರಾದ ತುರುವೇಕೆರೆಯ ಕೆಂಪಯ್ಯ ಅವರ ಸಂಶಯಾಸ್ಪದ ಸಾವು ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಮೇಲ್ನೋಟಕ್ಕೆ ಇದೊಂದು ಸಹಜ ಸಾವು ಎಂದು ದಾಖಲಿಸಿರುವ ತುರುವೇಕೆರೆ ಪೊಲೀಸರು ಇಡೀ ಪ್ರಕರಣವನ್ನು ಮುಚ್ಚಿಹಾಕುವ ಯತ್ನ ನಡೆಸಿದ್ದರು. ಸಾರ್ವಜನಿಕ ಒತ್ತಡ ಹೆಚ್ಚಿದಂತೆ ಐಪಿಸಿ 302ರ ಸೇರಿ ಹಲವು ಸೆಕ್ಷನ್ ಗಳಡಿ ಪ್ರಕರಣ ದಾಖಲಿಸಿ ಮತ್ತೊಂದು ಎಫ್ಐಆರ್ ದಾಖಲಿಸಲಾಗಿದೆ. ಈ ಪ್ರಕರಣ ಪೊಲೀಸ್ ವೈಫಲ್ಯಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ಪಿಯುಸಿಎಲ್ ನೇತೃತ್ವದ ಸತ್ಯಶೋಧನ ಸಮಿತಿ ಆರೋಪಿಸಿದೆ.

ಬೆಂಗಳೂರಿನ ಶಿವಮಣಿ, ಬಸವರಾಧ್ಯ, ಪಿಯುಸಿಎಲ್ ಜಿಲ್ಲಾಧ್ಯಕ್ಷ ಕೆ.ದೊರೈರಾಜ್, ಸ್ಲಂ ಜನಾಂದೋಲನದ ಸಂಚಾಲಕ ಎ.ನರಸಿಂಹಮೂರ್ತಿ, ಕಾರ್ಮಿಕ ಮುಖಂಡ ಎನ್.ಕೆ.ಸುಬ್ರಮಣ್ಯ, ಸ್ಥಳೀಯ ದಲಿತ ಮುಖಂಡ ಕುಂದುರು ತಿಮ್ಮಯ್ಯ ಅವರಿದ್ದ ಸತ್ಯಶೋಧನಾ ಸಮಿತಿ ಜೂನ್ 17ರಂದು ಗಿರಿಯನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಮೃತ ವ್ಯಕ್ತಿ ಕುಟುಂಬದವರಿಂದ ಮಾಹಿತಿ ಕಲೆಹಾಕಿತು. ಗ್ರಾಮಸ್ಥರ ಅಭಿಪ್ರಾಯವನ್ನು ಸಂಗ್ರಹಿಸಿತು.
ಕೆಂಪಯ್ಯ ನಿವೃತ್ತರಾದ ಮೇಲೆ ಸಾರ್ವಜನಿಕ ಸ್ವತ್ತು ಉಳಿಸುವ ಕೈಂಕರ್ಯ ಕೈಗೊಂಡಿದ್ದರು. ಒಳ್ಳೆಯವರಾದ ಅವರ ಸಾವು ಸಂಶಯಾಸ್ಪದವಾಗಿದೆ ಎಂದು ಗ್ರಾಮಸ್ಥರು ಅಭಿಪ್ರಾಯಪಟ್ಟರು ಎಂದು ಶೋಧನಾ ಸಮಿತಿ ತಿಳಿಸಿದೆ.

ತುಮಕೂರು ಜಿಲ್ಲೆಯ ತುರುವೇಕೆರೆಯ ಗಿರಿಯ್ಯನಹಳ್ಳಿಯ ಕೆಂಪಯ್ಯ(58) ಮಾಸ್ತಿಗೊಂಡನಹಳ್ಳಿ ಗ್ರಾಮ ಪಂಚಾಯ್ತಿಯ ಗ್ರಾಮ ಸೇವಕರಾಗಿ ಕೆಲಸ ನಿರ್ವಹಿಸಿ ಇತ್ತೀಚೆಗಷ್ಟೇ ನಿವೃತ್ತರಾಗಿದ್ದರು. ಸಾಮಾನ್ಯರಿಗೆ ನೆರವು ನೀಡುತ್ತಿದ್ದರು. ಸಾರ್ವಜನಿಕ ಆಸ್ತಿಗಳನ್ನು ಉಳಿಸುವ ಕೆಲಸದಲ್ಲಿ ನಿರತರಾಗಿದ್ದರು. ಗ್ರಾಮದ ಗೋಮಾಳದಲ್ಲಿ ಮಣ್ಣುಕ್ವಾರಿ ಕೆಲಸ ಮಾಡುತ್ತಿದ್ದವರ ಬಗ್ಗೆ ತಹಶೀಲ್ದಾರ್ ಅವರಿಗೆ ದೂರು ಸಹ ನೀಡಿದ್ದರು.

ಈ ಹಿನ್ನೆಲೆಯಲ್ಲಿ ತುರುವೇಕೆರೆ ತಹಶೀಲ್ದಾರ್ ಗ್ರಾಮ ಲೆಕ್ಕಾಧಿಕಾರಿ ಮೂಲಕ ಮಣ್ಣುಗಣಿಗಾರಿಕೆ ನಡೆಸುತ್ತಿದ್ದ ಮಹೇಶ್, ದರ್ಶನ್ ಮೊದಲಾದವರಿಗೆ ಎಚ್ಚರಿಕೆ ನೀಡಿದ್ದರು. ಇದಾದ ಕೆಲವು ದಿನಗಳಲ್ಲಿ ಅಂದರೆ ಏಪ್ರಿಲ್ 14 ರಂದು ಅಂಬೇಡ್ಕರ್ ಜಯಂತಿಯಂದೇ ಕೆಂಪಯ್ಯ ಗ್ರಾಮಕ್ಕೆ ಸಮೀಪದ ತೋಟದಲ್ಲಿರುವ ತೊಟ್ಟಿಯ ಬಳಿ ಶಂಕಾಸ್ಪದವಾಗಿ ಮೃತಪಟ್ಟಿದ್ದರು. ಪೊಲೀಸರು ಇದು ಸಹಜ ಸಾವು. ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಯುಡಿಆರ್ ದಾಖಲಿಸಿ ಕೈತೊಳೆದುಕೊಂಡಿದ್ದರು.

ಕೆಂಪಯ್ಯ ಪುತ್ರಿ ಘಟನೆ ಸಂಬಂಧ ಜಿಲ್ಲಾಧಿಕಾರಿ ರಾಕೇಶ್ ಕುಮಾರ್, ಡಿಐಜಿ ಕಮಲ್ ಪಂಥ್ ಅವರಿಗೆ ಪತ್ರ ಬರೆದು ನಮ್ಮ ತಂದೆಯದು ಅಸಹಜ ಸಾವಲ್ಲ. ಈ ಸಾವಿನ ಬಗ್ಗೆ ಶಂಕೆಯಿದೆ. ತನಿಖೆ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ದಲಿತ ಸಂಘಟನೆಗಳಿಂದಲೂ ಒತ್ತಡ ಬಂದ ಹಿನ್ನೆಲೆಯಲ್ಲಿ ಪೊಲೀಸರು ಮತ್ತೊಂದು ಎಫ್ಐಆರ್ ದಾಖಲಿಸಿದ್ದಾರೆ.

ಸಣ್ಣದೊಂದು ತೊಟ್ಟಿಯ ಬಳಿ ಕೆಂಪಯ್ಯ ಮೃತಪಟ್ಟಿದ್ದಾರೆ. ಚಿಕ್ಕ ಮಗು ಬಿದ್ದರೂ ಸಾಯಲು ಸಾಧ್ಯವಿಲ್ಲ ಅಂಥ ತೊಟ್ಟಿ ಅದು. ಕೆಂಪಯ್ಯನವರ ಹಿಂದಲೆಗೆ ತೀವ್ರ ಪೆಟ್ಟು ಬಿದ್ದಿದೆ. ಬೆನ್ನು ಮೇಲೆ ತರಚಿದ ಗಾಯಗಳಾಗಿವೆ. ಪ್ರಾಥಮಿಕ ತನಿಖೆಯನ್ನು ನಡೆಸಿಲ್ಲ. ಕುಟುಂಬದವರ ಅಭಿಪ್ರಾಯವನ್ನು ಪರಿಗಣನೆಗೆ ತೆಗೆದುಕೊಂಡಿಲ್ಲ. ಹೇಳಿಕೆ ಪಡೆಯಲು ಅವಕಾಶ ಕೊಟ್ಟಿಲ್ಲ. ಇಲ್ಲಿ ಪೊಲೀಸ್ ವೈಫಲ್ಯ ಎದ್ದು ಕಾಣುತ್ತದೆ. ಕೆಂಪಯ್ಯ ಕುಟುಂಬದಲ್ಲಿ ಪತ್ನಿ, ಮೂವರು ಹೆಣ್ಣು ಮಕ್ಕಳು ಮತ್ತು ಒರ್ವ ಪುತ್ರ ಇದ್ದು ಮಣ್ಣುಗಣಿಗಾರಿಕೆ ನಡೆಸುತ್ತಿದ್ದವರು ಜೀವಬೆದರಿಕೆ ಹಾಕಿದ್ದಾರೆ. ಹಾಗಾಗಿ ಆ ದಲಿತ ಕುಟುಂಬಕ್ಕೆ ರಕ್ಷಣೆ ನೀಡಬೇಕು. ಇಡೀ ಪ್ರಕರಣವನ್ನು ತನಿಖೆಗೆ ಒಳಪಡಿಸಬೇಕು ಎಂದು ಸತ್ಯಶೋಧನ ತಂಡದ ಸದಸ್ಯರು ಆಗ್ರಹಿಸಿದ್ದಾರೆ.

ಘಟನೆ ಸಂಭವಿಸಿ ಮೂರು ತಿಂಗಳು ಕಳೆದಿದ್ದರೂ ಫೋರೆನ್ಸಿಕ್ ವರದಿ ಬಂದಿಲ್ಲ. ಅರೋಪಿಗಳನ್ನು ಬಂಧಿಸಿಲ್ಲ. ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಅವರನ್ನು ಪತ್ತೆ ಹಚ್ಚು ಕಾರ್ಯಕ್ಕೂ ಕೈಹಾಕಿಲ್ಲ. ಕುಟುಂಬ ಭಯದಲ್ಲಿದೆ. ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದರೂ ಜಿಲ್ಲಾಡಳಿತ ಮೌನವಹಿಸಿದೆ ಎಂದು ಸತ್ಯಶೋಧನ ತಂಡ ಆರೋಪಿಸಿದೆ.


ಇದನ್ನೂ ಓದಿ: ತುಮಕೂರಿನ ಮಧುಗಿರಿಯಲ್ಲಿ ಘಟನೆ :ಕೊಳವೆ ಬಾವಿ ತೋಡಿಸಿದ್ದಕ್ಕೆ ದಲಿತ ವ್ಯಕ್ತಿಯ ಕೈ ಕಾಲು ಮುರಿದ ಗ್ರಾ.ಪಂ ಅಧ್ಯಕ್ಷ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...