Homeಮುಖಪುಟ9 ಶಾಸಕರ ಬಂಡಾಯ: ಮಣಿಪುರದಲ್ಲಿ ಬಿಜೆಪಿ ಸರ್ಕಾರ ಪತನಕ್ಕೆ ಕ್ಷಣಗಣನೆ!

9 ಶಾಸಕರ ಬಂಡಾಯ: ಮಣಿಪುರದಲ್ಲಿ ಬಿಜೆಪಿ ಸರ್ಕಾರ ಪತನಕ್ಕೆ ಕ್ಷಣಗಣನೆ!

ಮಣಿಪುರದಲ್ಲಿ ರಾಜ್ಯಸಭೆ ಚುನಾವಣೆ ಗೆಲ್ಲಲು ಹೊರಟಿದ್ದ ಬಿಜೆಪಿ ಪಕ್ಷಕ್ಕೆ ಈಗ ಸರ್ಕಾರ ಉಳಿಸಿಕೊಳ್ಳುವುದೇ ದುಸ್ತರವಾಗಿದೆ.

- Advertisement -
- Advertisement -

ಆಪರೇಷನ್ ಕಮಲದ ಮೂಲಕ ಮಣಿಪುರದಲ್ಲಿ ಅಧಿಕಾರಕ್ಕೆ ಬಂದಿದ್ದ ಬಿಜೆಪಿ ಈಗ ಹಲವು ಕಾರಣಗಳಿಗಾಗಿ ಅಧಿಕಾರ ಕಳೆದುಕೊಳ್ಳುವತ್ತ ಸಾಗಿದೆ. ಮಣಿಪುರ ರಾಜ್ಯಸಭಾ ಚುನಾವಣೆ ಗೆಲ್ಲಲು ಹೊರಟಿದ್ದ ಅದಕ್ಕೆ ಈಗ ಸರ್ಕಾರವನ್ನು ಉಳಿಸಿಕೊಳ್ಳುವುದೇ ದುಸ್ತರವಾಗಿದೆ.

ಮಣಿಪುರದ ಬಿಜೆಪಿ ನೇತೃತ್ವದ ಬಿರೆನ್ ಸಿಂಗ್ ಸರ್ಕಾರದಿಂದ ಕನಿಷ್ಠ ಒಂಬತ್ತು ಶಾಸಕರು ಬೆಂಬಲ ಹಿಂತೆಗೆದುಕೊಳ್ಳಲು ನಿರ್ಧರಿಸಿದ್ದಾರೆ. ಇದರಿಂದ ಬಿಜೆಪಿ ಸರ್ಕಾರವು ರಾಜ್ಯ ವಿಧಾನಸಭೆಯಲ್ಲಿ ಬಹುಮತವನ್ನು ಕಳೆದುಕೊಳ್ಳಲಿದೆ ಎಂದು ರಾಜ್ಯ ಕಾಂಗ್ರೆಸ್ ಮೂಲಗಳು ತಿಳಿಸಿವೆ. ಇದು ಜೂನ್ 19 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಮುನ್ನ ಬಿಜೆಪಿಗೆ ದೊಡ್ಡ ತೊಂದರೆಯಾಗಲಿದೆ.

ಬೆಂಬಲ ಹಿಂತೆಗೆದುಕೊಳ್ಳಲು ನಿರ್ಧರಿಸಿದ ಒಂಬತ್ತು ಶಾಸಕರಲ್ಲಿ ಕಾನ್ರಾಡ್ ಸಾಂಗ್ಮಾ ನೇತೃತ್ವದ ರಾಷ್ಟ್ರೀಯ ಪೀಪಲ್ಸ್ ಪಾರ್ಟಿ ಅಥವಾ ಎನ್‌ಪಿಪಿಯಿಂದ ನಾಲ್ವರು ಸೇರಿದ್ದಾರೆ. ಅವರಲ್ಲಿ ಉಪಮುಖ್ಯಮಂತ್ರಿ ವೈ ಜಾಯ್‌ಕುಮಾರ್ ಸಿಂಗ್, ಕ್ಯಾಬಿನೆಟ್ ಮಂತ್ರಿಗಳಾದ ಎನ್ ಕಾಯಿಸಿ, ಎಲ್ ಜಯಂತ ಕುಮಾರ್ ಸಿಂಗ್ ಮತ್ತು ಲೆಟ್‌ಪಾವೊ ಹಾಕಿಪ್ ಅವರು ಸಚಿವ ಸ್ಥಾನಗಳಿಗೆ ರಾಜೀನಾಮೆ ನೀಡಿ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಹಿಂತೆಗೆದುಕೊಂಡಿದ್ದಾರೆ.

ಮೂವರು ಬಿಜೆಪಿ ಶಾಸಕರು, ಒಬ್ಬ ತೃಣಮೂಲ ಕಾಂಗ್ರೆಸ್ ಶಾಸಕ ಟಿ.ರಬಿಂದ್ರೊ ಸಿಂಗ್ ಮತ್ತು ಸ್ವತಂತ್ರ ಶಾಸಕ ಶಹಾಬುದ್ದೀನ್ ಕೂಡ ಬಿಜೆಪಿಗೆ ನೀಡಿದ ಬೆಂಬಲವನ್ನು ಹಿಂತೆಗೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

2017 ರಲ್ಲಿ ಬಿಜೆಪಿಗೆ ಪಕ್ಷಾಂತರವಾದ ಏಳು ಕಾಂಗ್ರೆಸ್ ಶಾಸಕರು ವಿಧಾನಸಭೆ ಪ್ರವೇಶಿಸಬಾರದೆಂದು ಮಣಿಪುರ ಹೈಕೋರ್ಟ್ ತೀರ್ಪು ನೀಡಿದ ಹಿನ್ನೆಲೆಯಲ್ಲಿ ಸರ್ಕಾರದಲ್ಲಿ ಹಠಾತ್ ಅಸ್ಥಿರತೆ ಉಂಟಾಗಿದೆ. ರಾಜ್ಯಸಭಾ ಚುನಾವಣೆಯಲ್ಲಿ ಅವರಿಗೆ ಮತ ಚಲಾಯಿಸಲು ಸಾಧ್ಯವಾಗುವುದಿಲ್ಲ ಎನ್ನಲಾಗಿದೆ.

ಈ ಹಿಂದೆ ಕಾಂಗ್ರೆಸ್ ಶಾಸಕ ಥ.ಶ್ಯಾಮ್‌ಕುಮಾರ್ ಸಿಂಗ್ ಬಿಜೆಪಿ ನೇತೃತ್ವದ ಸರ್ಕಾರವನ್ನು ಬೆಂಬಲಿಸಿ ಕ್ಯಾಬಿನೆಟ್ ಸಚಿವರಾಗಿ ಆಯ್ಕೆಯಾದಾಗ ಅವರನ್ನು ಅನರ್ಹಗೊಳಿಸಲಾಯಿತು. ಇತರ ಏಳು ಕಾಂಗ್ರೆಸ್ ಶಾಸಕರ ಅನರ್ಹತೆ ಅರ್ಜಿಯು ಸ್ಪೀಕರ್ ಖೇಮ್‌ಚಂದ್ ಸಿಂಗ್ ಅವರ ನ್ಯಾಯಮಂಡಳಿಯಲ್ಲಿದೆ.

2017 ರ ವಿಧಾನಸಭಾ ಚುನಾವಣೆಯಲ್ಲಿ, 60 ಸದಸ್ಯ ಬಲದ ಮಣಿಪುರ ವಿಧಾನಸಭೆಯಲ್ಲಿ 28 ಸ್ಥಾನಗಳೊಂದಿಗೆ ಕಾಂಗ್ರೆಸ್ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತು. ಬಿಜೆಪಿಗೆ 21 ಸ್ಥಾನಗಳು ದೊರೆತಿವೆ. ಆದರೆ ನಾಲ್ಕು ಎನ್‌ಪಿಪಿ, ನಾಲ್ಕು ಎನ್‌ಪಿಎಫ್, ಒಂದು ಎಲ್‌ಜೆಪಿ, ಒಂದು ಟಿಎಂಸಿ, ಒಬ್ಬ ಸ್ವತಂತ್ರ ಸದಸ್ಯ ಮತ್ತು ಕಾಂಗ್ರೆಸ್‌ನ ಬಂಡಾಯ ಅಭ್ಯರ್ಥಿಯ ಬೆಂಬಲ ಪಡೆಯುವ ಮೂಲಕ ಬಿಜೆಪಿ ಸರ್ಕಾರ ರಚಿಸಲು ಸಾಧ್ಯವಾಯಿತು. ಬಿರೆನ್ ಸಿಂಗ್ ಸರ್ಕಾರ ರಚನೆಯ ನಂತರ ಇತರ ಏಳು ಕಾಂಗ್ರೆಸ್ ಶಾಸಕರು ಸಹ ಸರ್ಕಾರಕ್ಕೆ ಬೆಂಬಲ ನೀಡಿದ್ದರು.

ಶ್ಯಾಮ್‌ಕುಮಾರ್ ಸಿಂಗ್ ಮತ್ತು ಇತರ ಏಳು ಕಾಂಗ್ರೆಸ್ ಶಾಸಕರು ವಿಧಾನಸಭೆಗೆ ಪ್ರವೇಶಿಸುವುದನ್ನು ನಿರ್ಬಂಧಿಸಿದ ನಂತರ ವಿಧಾನಸಭೆಯ ಬಲಾಬಲ 52 ಕ್ಕೆ ಕುಸಿದಿದೆ.

ಬಿಜೆಪಿಗೆ ಸದ್ಯಕ್ಕೆ 23 ಸದಸ್ಯರ ಬಲವನ್ನು ಹೊಂದಿದೆ. ಅದರಲ್ಲಿ 18 ಬಿಜೆಪಿ ಶಾಸಕರು, ನಾಲ್ಕು ಎನ್‌ಪಿಎಫ್ ಮತ್ತು ಒಬ್ಬ 1 ಎಲ್‌ಜೆಪಿ ಸದಸ್ಯ ಸೇರಿದ್ದಾರೆ.

ಕಾಂಗ್ರೆಸ್ ತನ್ನದೇ ಆದ 20 ಶಾಸಕರನ್ನು ಹೊಂದಿದೆ. ಒಬ್ಬ ಸದಸ್ಯನನ್ನು ಅನರ್ಹಗೊಳಿಸಲಾಗಿದೆ ಮತ್ತು ಏಳು ಪಕ್ಷಾಂತರಿಗಳನ್ನು ನಿರ್ಬಂಧಿಸಲಾಗಿದೆ. ಬಿರೆನ್ ಸಿಂಗ್ ಸರ್ಕಾರದಿಂದ ಬೆಂಬಲವನ್ನು ಹಿಂತೆಗೆದುಕೊಂಡ ಒಂಬತ್ತು ಶಾಸಕರ ಬೆಂಬಲ ಸಿಕ್ಕರೆ, ಕಾಂಗ್ರೆಸ್ 29 ಶಾಸಕರ ಬೆಂಬಲವನ್ನು ಪಡೆಯುವ ಮೂಲಕ ರಾಜ್ಯಸಭಾ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಬಿಜೆಪಿ ಪಾಲಿಗೆ ಮುಳುವಾಗಲಿದೆ.


ಇದನ್ನೂ ಓದಿ: ಆಪರೇಷನ್ ಕಮಲಕ್ಕೆ ಮುಖಭಂಗ: ಮಣಿಪುರದ ಏಳು ಶಾಸಕರನ್ನು ವಿಧಾನ ಸಭೆ ಪ್ರವೇಶಿಸದಂತೆ ಹೈಕೋರ್ಟ್ ತೀರ್ಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...