Homeಮುಖಪುಟರಾಜ್ಯಸಭಾ ಚುನಾವಣೆ: ಪಿಪಿಇ ಕಿಟ್‌ ಧರಿಸಿ ಮತ ಚಲಾಯಿಸಿದ ಮಧ್ಯಪ್ರದೇಶ ಕಾಂಗ್ರೆಸ್‌ ಶಾಸಕ! ಕಾರಣ?

ರಾಜ್ಯಸಭಾ ಚುನಾವಣೆ: ಪಿಪಿಇ ಕಿಟ್‌ ಧರಿಸಿ ಮತ ಚಲಾಯಿಸಿದ ಮಧ್ಯಪ್ರದೇಶ ಕಾಂಗ್ರೆಸ್‌ ಶಾಸಕ! ಕಾರಣ?

- Advertisement -
- Advertisement -

ಇಂದು ನಡೆಯುತ್ತಿರುವ 24 ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಮಧ್ಯಪ್ರದೇಶದ ಕಾಂಗ್ರೆಸ್‌ ಶಾಸಕರಾದ ಕುನಾಲ್ ಚೌಧರಿಯವರು ಕೊರೊನಾ ಸೋಂಕಿತರಾದ ಕಾರಣದಿಂದ ಭೋಪಾಲ್‌ನಲ್ಲಿ ಪಿಪಿಇ ಕಿಟ್‌ ಧರಿಸಿ ಮತ ಚಲಾಯಿಸುವ ಮೂಲಕ ಗಮನ ಸೆಳೆದಿದ್ದಾರೆ.

ಇತ್ತೀಚೆಗೆ ನಡೆದ ಕೊರೊನಾ ಪರೀಕ್ಷೆಯಲ್ಲಿ ಚೌಧರಿಯವರು ಸಾಂಕ್ರಾಮಿಕ COVID-19 ಪಾಸಿಟಿವ್‌ ಆಗಿದ್ದರು.

ಕನಿಷ್ಠ 205 ಶಾಸಕರು ಈಗಾಗಲೇ ಮತ ಚಲಾಯಿಸಿದ ನಂತರ ಅವರ ಮತದಾನದ ಸರದಿ ಬಂದಿತು. ಮುಡಿಯಿಂದ ಅಡಿವರೆಗೂ ವೈಯಕ್ತಿಕ ರಕ್ಷಣಾ ಸಾಧನಗಳನ್ನು (ಪಿಪಿಇ ಸೂಟ್) ತೊಟ್ಟಿದ್ದ ಅವರು ಕೈಯಲ್ಲಿ ಮೊಬೈಲ್ ಫೋನ್ ಹಿಡಿದುಕೊಂಡು ಮತದಾನದ ಕೋಣೆಗೆ ಕಾಲಿಟ್ಟರು.

ವೈರಸ್ ಉಸಿರಾಟದ ಹನಿಗಳಿಂದ ಹರಡುತ್ತದೆ ಎಂದು ಭಾವಿಸಿರುವ ಹಲವರು ಚೌಧರಿಯವರಿಂದ ಅಂತರ ಕಾಯ್ದುಕೊಂಡಿದ್ದರು.

ಶಾಸಕರು ಜೂನ್ 6 ರಂದು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಜೂನ್‌ 10ರಂದು ಪರೀಕ್ಷೆಗೆ ಒಳಗಾದರು ಮತ್ತು ಕೊರೊನಾ ಪಾಸಿಟಿವ ವರದಿ ಜೂನ್ 12 ರಂದು ಬಂದಿತು ಎಂದು ವರದಿಯಾಗಿದೆ.

“ಪೂರ್ಣ ಮುನ್ನೆಚ್ಚರಿಕೆಯೊಂದಿಗೆ ಪಿಪಿಇ ಕಿಟ್ ಧರಿಸಿ ನಾನು ಮಧ್ಯಾಹ್ನ 12.45ರ ಸುಮಾರಿಗೆ ಆಂಬ್ಯುಲೆನ್ಸ್‌ನಲ್ಲಿ ವಿಧಾನಸಭೆಯನ್ನು ತಲುಪಿದೆ. ಅಧಿಕಾರಿಗಳು ಸಹ ಪಿಪಿಇ ಕಿಟ್ ಧರಿಸಿದ್ದರು. ಅವರು ಸ್ವಲ್ಪ ಭಯಭೀತರಾಗಿದ್ದಾರೆಂದು ನಾನು ಭಾವಿಸಿದ್ದೆ. ಅದು ಸಹಜ. ನಾನು ನನ್ನ ಪಕ್ಷದ ಅಭ್ಯರ್ಥಿಗೆ ಮತ ಚಲಾಯಿಸಿ ಮರಳಿ ಬಂದೆ” ಎಂದು ಶಾಸಕರು ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಕೊರೊನಾ ವೈರಸ್ ಸೋಂಕಿಗೆ ಒಳಗಾದ ವ್ಯಕ್ತಿಗೆ ಹೊರಗೆ ಬಂದು ಮತ ಚಲಾಯಿಸಲು ಚುನಾವಣಾ ಆಯೋಗ ಹೇಗೆ ಅವಕಾಶ ನೀಡಿದೆ ಎಂದು ಬಿಜೆಪಿ ಮುಖಂಡ ಹಿತೇಶ್ ಬಾಜ್ಪೈ ಪ್ರಶ್ನಿಸಿದ್ದಾರೆ. “ಕರೋನಾ ಸೋಂಕು ಇರುವ ಶಾಸಕರಿಗೆ ವಿಧಾನಸಭೆಯ ಆವರಣಕ್ಕೆ ಪ್ರವೇಶಿಸಲು ಚುನಾವಣಾ ಆಯೋಗವು ಅನುಮತಿ ನೀಡುವುದು ಸಾಂಕ್ರಾಮಿಕ ನಿಯಂತ್ರಣ ನಿಯಮಗಳ ಉಲ್ಲಂಘನೆಯಾಗಿದೆ” ಎಂದು ಬಾಜ್ಪೈ ಟ್ವೀಟ್ ಮಾಡಿದ್ದಾರೆ.

ಇದಕ್ಕೆ ಉತ್ತರಿಸಿದ ಕಾಂಗ್ರೆಸ್ ಶಾಸಕ”ಪಂಚಾಯತ್ ಚುನಾವಣೆಯಲ್ಲಿ ಸಹ ಗೆಲ್ಲಲು ಸಾಧ್ಯವಾಗದ ಜನರು ನನ್ನನ್ನು ಪ್ರಶ್ನಿಸುತ್ತಿದ್ದಾರೆ. ಅವರು ಸರ್ಕಾರವನ್ನು ನಡೆಸುತ್ತಿರುವ ತಮ್ಮ ಪಕ್ಷದ ಮುಖಂಡರಿಗೆ ಪ್ರಶ್ನೆ ಕೇಳಬೇಕು” ಎಂದಿದ್ದಾರೆ.

ಗುಜರಾತ್, ಆಂಧ್ರಪ್ರದೇಶ ಮತ್ತು ಕರ್ನಾಟಕದಿಂದ ತಲಾ ನಾಲ್ಕು ಸ್ಥಾನಗಳು, ಮಧ್ಯಪ್ರದೇಶ ಮತ್ತು ರಾಜಸ್ಥಾನದಿಂದ ತಲಾ ಮೂರು, ಜಾರ್ಖಂಡ್‌ನಿಂದ ತಲಾ ಎರಡು ಮತ್ತು ಈಶಾನ್ಯ ರಾಜ್ಯಗಳಾದ ಮೇಘಾಲಯ ಮತ್ತು ಮಣಿಪುರ, ಅರುಣಾಚಲ ಪ್ರದೇಶ ಮತ್ತು ಮಿಜೋರಾಂನಿಂದ ತಲಾ ಒಂದು ಸ್ಥಾನಗಳಿಗೆ ಇಂದು ಚುನಾವಣೆ ನಡೆಯುತ್ತಿದೆ. ಬೆಳಿಗ್ಗೆ 9 ಗಂಟೆಗೆ ಮತದಾನ ಪ್ರಾರಂಭವಾಯಿತು. ಸಂಜೆಯ ವೇಳೆಗೆ ಫಲಿತಾಂಶ ಪ್ರಕಟವಾಗಲಿದ್ದು ಗುಜರಾತ್‌ನಲ್ಲಿ ಒಂದು ಸ್ಥಾನ, ರಾಜಸ್ಥಾನದಲ್ಲಿ ಒಂದು ಮತ್ತು ಮಧ್ಯಪ್ರದೇಶದ ಒಂದು ಸ್ಥಾನದ ಮೇಲೆ ಕಠಿಣ ಹೋರಾಟ ನಡೆಯುತ್ತಿದೆ.


ಇದನ್ನೂ ಓದಿ: ಎಂಎಲ್‌ಸಿ ಚುನಾವಣೆಗೆ ಆಸ್ತಿವಿವರ ಘೋಷಣೆ: ಎಂಟಿಬಿ ನಾಗರಾಜ್ ಆಸ್ತಿಯಲ್ಲಾದ ಹೆಚ್ಚಳವೆಷ್ಟು ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...