Homeಮುಖಪುಟರಾಜ್ಯಸಭಾ ಚುನಾವಣೆ: ಪಿಪಿಇ ಕಿಟ್‌ ಧರಿಸಿ ಮತ ಚಲಾಯಿಸಿದ ಮಧ್ಯಪ್ರದೇಶ ಕಾಂಗ್ರೆಸ್‌ ಶಾಸಕ! ಕಾರಣ?

ರಾಜ್ಯಸಭಾ ಚುನಾವಣೆ: ಪಿಪಿಇ ಕಿಟ್‌ ಧರಿಸಿ ಮತ ಚಲಾಯಿಸಿದ ಮಧ್ಯಪ್ರದೇಶ ಕಾಂಗ್ರೆಸ್‌ ಶಾಸಕ! ಕಾರಣ?

- Advertisement -
- Advertisement -

ಇಂದು ನಡೆಯುತ್ತಿರುವ 24 ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಮಧ್ಯಪ್ರದೇಶದ ಕಾಂಗ್ರೆಸ್‌ ಶಾಸಕರಾದ ಕುನಾಲ್ ಚೌಧರಿಯವರು ಕೊರೊನಾ ಸೋಂಕಿತರಾದ ಕಾರಣದಿಂದ ಭೋಪಾಲ್‌ನಲ್ಲಿ ಪಿಪಿಇ ಕಿಟ್‌ ಧರಿಸಿ ಮತ ಚಲಾಯಿಸುವ ಮೂಲಕ ಗಮನ ಸೆಳೆದಿದ್ದಾರೆ.

ಇತ್ತೀಚೆಗೆ ನಡೆದ ಕೊರೊನಾ ಪರೀಕ್ಷೆಯಲ್ಲಿ ಚೌಧರಿಯವರು ಸಾಂಕ್ರಾಮಿಕ COVID-19 ಪಾಸಿಟಿವ್‌ ಆಗಿದ್ದರು.

ಕನಿಷ್ಠ 205 ಶಾಸಕರು ಈಗಾಗಲೇ ಮತ ಚಲಾಯಿಸಿದ ನಂತರ ಅವರ ಮತದಾನದ ಸರದಿ ಬಂದಿತು. ಮುಡಿಯಿಂದ ಅಡಿವರೆಗೂ ವೈಯಕ್ತಿಕ ರಕ್ಷಣಾ ಸಾಧನಗಳನ್ನು (ಪಿಪಿಇ ಸೂಟ್) ತೊಟ್ಟಿದ್ದ ಅವರು ಕೈಯಲ್ಲಿ ಮೊಬೈಲ್ ಫೋನ್ ಹಿಡಿದುಕೊಂಡು ಮತದಾನದ ಕೋಣೆಗೆ ಕಾಲಿಟ್ಟರು.

ವೈರಸ್ ಉಸಿರಾಟದ ಹನಿಗಳಿಂದ ಹರಡುತ್ತದೆ ಎಂದು ಭಾವಿಸಿರುವ ಹಲವರು ಚೌಧರಿಯವರಿಂದ ಅಂತರ ಕಾಯ್ದುಕೊಂಡಿದ್ದರು.

ಶಾಸಕರು ಜೂನ್ 6 ರಂದು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಜೂನ್‌ 10ರಂದು ಪರೀಕ್ಷೆಗೆ ಒಳಗಾದರು ಮತ್ತು ಕೊರೊನಾ ಪಾಸಿಟಿವ ವರದಿ ಜೂನ್ 12 ರಂದು ಬಂದಿತು ಎಂದು ವರದಿಯಾಗಿದೆ.

“ಪೂರ್ಣ ಮುನ್ನೆಚ್ಚರಿಕೆಯೊಂದಿಗೆ ಪಿಪಿಇ ಕಿಟ್ ಧರಿಸಿ ನಾನು ಮಧ್ಯಾಹ್ನ 12.45ರ ಸುಮಾರಿಗೆ ಆಂಬ್ಯುಲೆನ್ಸ್‌ನಲ್ಲಿ ವಿಧಾನಸಭೆಯನ್ನು ತಲುಪಿದೆ. ಅಧಿಕಾರಿಗಳು ಸಹ ಪಿಪಿಇ ಕಿಟ್ ಧರಿಸಿದ್ದರು. ಅವರು ಸ್ವಲ್ಪ ಭಯಭೀತರಾಗಿದ್ದಾರೆಂದು ನಾನು ಭಾವಿಸಿದ್ದೆ. ಅದು ಸಹಜ. ನಾನು ನನ್ನ ಪಕ್ಷದ ಅಭ್ಯರ್ಥಿಗೆ ಮತ ಚಲಾಯಿಸಿ ಮರಳಿ ಬಂದೆ” ಎಂದು ಶಾಸಕರು ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಕೊರೊನಾ ವೈರಸ್ ಸೋಂಕಿಗೆ ಒಳಗಾದ ವ್ಯಕ್ತಿಗೆ ಹೊರಗೆ ಬಂದು ಮತ ಚಲಾಯಿಸಲು ಚುನಾವಣಾ ಆಯೋಗ ಹೇಗೆ ಅವಕಾಶ ನೀಡಿದೆ ಎಂದು ಬಿಜೆಪಿ ಮುಖಂಡ ಹಿತೇಶ್ ಬಾಜ್ಪೈ ಪ್ರಶ್ನಿಸಿದ್ದಾರೆ. “ಕರೋನಾ ಸೋಂಕು ಇರುವ ಶಾಸಕರಿಗೆ ವಿಧಾನಸಭೆಯ ಆವರಣಕ್ಕೆ ಪ್ರವೇಶಿಸಲು ಚುನಾವಣಾ ಆಯೋಗವು ಅನುಮತಿ ನೀಡುವುದು ಸಾಂಕ್ರಾಮಿಕ ನಿಯಂತ್ರಣ ನಿಯಮಗಳ ಉಲ್ಲಂಘನೆಯಾಗಿದೆ” ಎಂದು ಬಾಜ್ಪೈ ಟ್ವೀಟ್ ಮಾಡಿದ್ದಾರೆ.

ಇದಕ್ಕೆ ಉತ್ತರಿಸಿದ ಕಾಂಗ್ರೆಸ್ ಶಾಸಕ”ಪಂಚಾಯತ್ ಚುನಾವಣೆಯಲ್ಲಿ ಸಹ ಗೆಲ್ಲಲು ಸಾಧ್ಯವಾಗದ ಜನರು ನನ್ನನ್ನು ಪ್ರಶ್ನಿಸುತ್ತಿದ್ದಾರೆ. ಅವರು ಸರ್ಕಾರವನ್ನು ನಡೆಸುತ್ತಿರುವ ತಮ್ಮ ಪಕ್ಷದ ಮುಖಂಡರಿಗೆ ಪ್ರಶ್ನೆ ಕೇಳಬೇಕು” ಎಂದಿದ್ದಾರೆ.

ಗುಜರಾತ್, ಆಂಧ್ರಪ್ರದೇಶ ಮತ್ತು ಕರ್ನಾಟಕದಿಂದ ತಲಾ ನಾಲ್ಕು ಸ್ಥಾನಗಳು, ಮಧ್ಯಪ್ರದೇಶ ಮತ್ತು ರಾಜಸ್ಥಾನದಿಂದ ತಲಾ ಮೂರು, ಜಾರ್ಖಂಡ್‌ನಿಂದ ತಲಾ ಎರಡು ಮತ್ತು ಈಶಾನ್ಯ ರಾಜ್ಯಗಳಾದ ಮೇಘಾಲಯ ಮತ್ತು ಮಣಿಪುರ, ಅರುಣಾಚಲ ಪ್ರದೇಶ ಮತ್ತು ಮಿಜೋರಾಂನಿಂದ ತಲಾ ಒಂದು ಸ್ಥಾನಗಳಿಗೆ ಇಂದು ಚುನಾವಣೆ ನಡೆಯುತ್ತಿದೆ. ಬೆಳಿಗ್ಗೆ 9 ಗಂಟೆಗೆ ಮತದಾನ ಪ್ರಾರಂಭವಾಯಿತು. ಸಂಜೆಯ ವೇಳೆಗೆ ಫಲಿತಾಂಶ ಪ್ರಕಟವಾಗಲಿದ್ದು ಗುಜರಾತ್‌ನಲ್ಲಿ ಒಂದು ಸ್ಥಾನ, ರಾಜಸ್ಥಾನದಲ್ಲಿ ಒಂದು ಮತ್ತು ಮಧ್ಯಪ್ರದೇಶದ ಒಂದು ಸ್ಥಾನದ ಮೇಲೆ ಕಠಿಣ ಹೋರಾಟ ನಡೆಯುತ್ತಿದೆ.


ಇದನ್ನೂ ಓದಿ: ಎಂಎಲ್‌ಸಿ ಚುನಾವಣೆಗೆ ಆಸ್ತಿವಿವರ ಘೋಷಣೆ: ಎಂಟಿಬಿ ನಾಗರಾಜ್ ಆಸ್ತಿಯಲ್ಲಾದ ಹೆಚ್ಚಳವೆಷ್ಟು ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...