Homeಅಂತರಾಷ್ಟ್ರೀಯ7 ವರ್ಷಗಳಲ್ಲಿ ಭಾರತ ದುಪ್ಪಟ್ಟು ಭೂಪ್ರದೇಶವನ್ನು ಕಳೆದುಕೊಂಡಿತೇ?

7 ವರ್ಷಗಳಲ್ಲಿ ಭಾರತ ದುಪ್ಪಟ್ಟು ಭೂಪ್ರದೇಶವನ್ನು ಕಳೆದುಕೊಂಡಿತೇ?

- Advertisement -
- Advertisement -

ದಿನ ಬೆಳಗಾದರೆ ನಮ್ಮ ಕನ್ನಡ ಟಿ.ವಿ. ಚಾನೆಲ್‌ಗಳು ನರೇಂದ್ರ ಮೋದಿಯ ಗುಣಗಾನ ಮಾಡುತ್ತ ಚೀನಾವನ್ನು ಬಗ್ಗು ಬಡಿಯುವ ಧೀರ, ಶೂರ ಎಂಬೆಲ್ಲ ಉಪಮೆಗಳನ್ನು ಬಳಸುತ್ತಿರುವ ಈ ಪ್ರಸ್ತುತ ಸಂದರ್ಭದಲ್ಲಿ ಜೂನ್ 21ರ The Week ನಿಯತ ಕಾಲಿಕೆಯ ಒಂದು ಲೇಖನ ಓದುಗರನ್ನು ಬೆಚ್ಚಿಬೀಳುಸುತ್ತಿದೆ. ಗಾಲ್ವಾನ್ ನದಿ ಕಣಿವೆ ಮತ್ತು ಪಾನ್‌ಗಾಂಗ್ ಸರೋವರದ ಪ್ರದೇಶದೊಳಗಡೆಗೆ ಚೀನಾದ PLA (People Libration Army) ನುಗ್ಗಿ ಭಾರತದ ಸುಮಾರು 60 ಚ.ಕಿ.ಮೀ. ಪ್ರದೇಶ ಆಕ್ರಮಿಸಿಕೊಂಡಿದೆ ಎಂದು ಮಾಜಿ ಲೆಫ್ಟಿನೆಂಟ್ ಜನರಲ್ ಹೆಚ್.ಎಸ್. ಪನಾಗ್ ಹೇಳಿರುವರು. ಅಂತೆಯೇ ಮಾಜಿ ವಿದೇಶಾಂಗ ಕಾರ್‍ಯದರ್ಶಿ ಶ್ಯಾಮ್‌ಸರಣ್ ಹೇಳಿಕೆಯಂತೆ 2013ರ ವೇಳೆಗೆ ಭಾರತ, ಚೀನಾಕ್ಕೆ ಕಳೆದುಕೊಂಡ ತನ್ನ ಭೂಪ್ರದೇಶ ಸುಮಾರು 640 ಚ.ಕಿ.ಮೀ. ಈಗಿದು 1300 ಚ.ಕಿ.ಮೀ.ನಷ್ಟಾಗಿದೆ ಎನ್ನುತ್ತಾರೆ ಶ್ಯಾಮ್‌ಸರಣ್.

ಇದು ಭಾರತ ಸರ್ಕಾರಕ್ಕೆ ಹಾಗೂ ಭಾರತೀಯ ಸೇನೆಗೆ ನಿಬ್ಬೆರಗುಗೊಳಿಸುವ ಸಂಗತಿ. ಉಪಗ್ರಹಗಳ ಮೂಲಕ ಭೂಚಿತ್ರಣದ ದೃಶ್ಯ ನಮ್ಮ ಬೆರಳ ತುದಿಯಲ್ಲೇ ಲಭ್ಯವಿರುವ ಸಂದರ್ಭದಲ್ಲಿ! ಹೀಗೇಕಾಯಿತು ಎಂಬುದೇ ನಿಗೂಢ. ಕನ್ನಡ ಟಿ.ವಿ. ಮಾಧ್ಯಮಗಳ ಬಹು ಆಪ್ತಮಿತ್ರ ನಮ್ಮ ನರೇಂದ್ರ ಮೋದಿಯವರು 2019 ಅಕ್ಟೋಬರ್ 11,12ರಂದು ಚೀನಾದ ಅಧ್ಯಕ್ಷರನ್ನು ತಮಿಳುನಾಡಿನ ಮಮ್ಮಲಪುರಂಗೆ ಆಹ್ವಾನಿಸಿ ಬಹುಪಚಾರದ ಮಾತುಕತೆ ಆಡಿದ ಸಂದರ್ಭದಲ್ಲಿ ಆತ ಭಾರತ ಸದರಿ ಕಣಿವೆಯಲ್ಲಿ ಕೈಗೊಂಡಿದ್ದ ಮೂಲಭೂತ ವ್ಯವಸ್ಥೆಗಳ ಬಗ್ಗೆ ಆಕ್ಷೇಪಣೆ ಎತ್ತಿದ್ದು, ಓದುಗರಿಗೆ ನೆನಪಿರಬಹುದು. ಸಿಯಾಚಿನ್ ನಿರ್ಗಲ್ಲು ತಲುಪಲು ಸೇನಾ ಸರಬರಾಜಿಗೆ ಅನುಕೂಲವಾಗಲೆಂದು ಭಾರತ, ದೌಲತ್ ಬೇಗ್ ಓಲ್ಡಿ ಮತ್ತು ದುರ್ಬುಕ್‌ಗಳಲ್ಲಿ ರಸ್ತೆ ನಿರ್ಮಾಣ ಹಾಗೂ ಶೈಯೋಕ್ ನದಿಗೆ ಸೇತುವೆ ನಿರ್ಮಿಸಿದ್ದು ಚೀನಾದ ಕಣ್ಣು ಕುಕ್ಕಿಸಿತು.

ಈಗೇನು ಚೀನಾ ಬಂದಿಳಿದಿದೆಯೋ ಆ ಪ್ರದೇಶಕ್ಕೆ ಅವರಿಗಿಂತ ಮುಂಚೆ ಪೂರ್ವಭಾವಿಯಾಗಿ ಬೇಸಿಗೆ ಆರಂಭಕ್ಕೂ ಮುನ್ನ ಬೇಕಾದ ಮಿಲಿಟರಿ ಸಲಕರಣೆಗಳೊಂದಿಗೆ ಹೋಗಿ ತಲುಪಲು ಭಾರತಕ್ಕೆ ಆರು ತಿಂಗಳ ಕಾಲಾವಕಾಶ ಲಭ್ಯವಿತ್ತು. ಆದರೆ ಅದು ಆಯಿತೆ? ಚೀನಾದ ಆಕ್ರಮಣಕ್ಕೆ ಎದುರಾಡುವ ಸಾಮರ್ಥ್ಯ ಇಂಡಿಯಾಕ್ಕೆ…?

ಕೇವಲ ಸಹಿಸಿಕೊಂಡು ಹೋಗುವ ಚಿತ್ತವುಳ್ಳ ಭಾರತ ಸರ್ಕಾರ ರಾಜತಾಂತ್ರಿಕತೆಯನ್ನಷ್ಟೇ ನಂಬಿ ಕುಳಿತಿದೆ. ನಮ್ಮ ಸೇನೆಗೆ ಶತೃವಿನ ಮೇಲೆ ಆಕ್ರಮಣವೆಸಗುವ ಮನೋಭಾವವಾಗಲಿ, ಯುದ್ಧೋಪ ಸಾಧನಗಳಾಗಲಿ, ಸಹಿಷ್ಣುತೆಯಾಗಲಿ ಇಲ್ಲ. ಈ ಸ್ಥಿತಿ ಚೀನಿಯರಿಗೆ ವರದಾನವೆನಿಸಿದ್ದು ಅದು ನಿರ್ಧಯತೆಯಿಂದ ವಾಸ್ತವಿಕ ಗಡಿ ರೇಖೆಯನ್ನು ದಿನದಿಂದ ದಿನಕ್ಕೆ ಭಾರತದ ಒಳಕ್ಕೆ ತಳ್ಳುತ್ತ ಬಂದಿದೆ. ಚೀನಾದ ದುರಾಸೆಗೆ, ಅದರ ಹೊಸ ಹೊಸ ವಾಸ್ತವಿಕ ಗಡಿರೇಖೆಗೆ, ಭಾರತ ಆಸ್ಪದವೀಯ್ಯುತ್ತಿದೆ. ಇದು ಚೀನಾದ ರಾಜಕೀಯ ನೀತಿಯೂ ಹೌದು! ತಮ್ಮ ದುರ್ಬುದ್ಧಿ ಸಮರ್ಥಿಸಿಕೊಳ್ಳಲು ಚೀನಾ ಪ್ರತಿಸಲವು ಮಾತುಕತೆಯ ದಿನಾಂಕವನ್ನು ಮುಂದು ಮುಂದಕ್ಕೆ ತಳ್ಳುತ್ತಾ ಮತ್ತಷ್ಟು ಭಾರತ ಭೂಭಾಗಕ್ಕೆ ಬೇಲಿ ಹಾಕುತ್ತ ಬರುತ್ತಿದೆ. ಭಾರತವೂ ಈ ಹಗ್ಗ ಜಗ್ಗಾಟಕ್ಕೆ ಬಲಿಯಾಗುತ್ತಿದ್ದು ಪ್ರತಿ ಮಾತುಕತೆಯ ನಂತರ ‘ಭಾರತ-ಚೀನಾ ಗಡಿ ಮಾತುಕತೆ ಫಲಪ್ರದ’ವೆಂದು ಹೇಳುತ್ತ ತನ್ನ ನೂರಾರು ಚ.ಕಿ.ಮೀ. ಭೂಪ್ರದೇಶವನ್ನು ನಿಷ್ಕರುಣೆ ಚೀನಾಕ್ಕೆ ಬಿಟ್ಟುಕೊಡುತ್ತ ಬಂದಿದೆ. ಈ ವಂಚನೆಯನ್ನು ಆದಷ್ಟು ಬೇಗ ಪ್ರಸ್ತುತ ಮೋದಿ ಸರ್ಕಾರ ಅರ್ಥ ಮಾಡಿಕೊಂಡರೆ ಒಳಿತು. ಈಗಲಾದರೂ ಭಾರತ ಸಕಲ ಯುದ್ಧೋಪಕರಣಗಳನ್ನು ವಾಸ್ತವಿಕ ಗಡಿರೇಖೆಯಲ್ಲಿ ಶಾಶ್ವತವಾಗಿರುವಂತೆ ಸ್ಥಾಪಿಸಿ ಚೀನಾಕ್ಕೆ ಬುದ್ಧಿ ಕಲಿಸುವ ಸದಾವಕಾಶ ಎದುರಾಗಿದೆ.

-ಸೊಂದಲಗೆರೆ ಲಕ್ಷ್ಮೀಪತಿ

(ಲೇಖಕರು ಬರಹಗಾರರು. ಅಭಿಪ್ರಾಯಗಳು ವೈಯಕ್ತಿಕವಾದವುಗಳು)


ಇದನ್ನೂ ಓದಿ: ಮಾತುಕತೆ ನಂತರ ಚೀನೀ ಸೈನ್ಯದಿಂದ 4 ಅಧಿಕಾರಿಗಳು ಸೇರಿ 10 ಸೈನಿಕರ ಬಿಡುಗಡೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...