Homeಅಂತರಾಷ್ಟ್ರೀಯ7 ವರ್ಷಗಳಲ್ಲಿ ಭಾರತ ದುಪ್ಪಟ್ಟು ಭೂಪ್ರದೇಶವನ್ನು ಕಳೆದುಕೊಂಡಿತೇ?

7 ವರ್ಷಗಳಲ್ಲಿ ಭಾರತ ದುಪ್ಪಟ್ಟು ಭೂಪ್ರದೇಶವನ್ನು ಕಳೆದುಕೊಂಡಿತೇ?

- Advertisement -
- Advertisement -

ದಿನ ಬೆಳಗಾದರೆ ನಮ್ಮ ಕನ್ನಡ ಟಿ.ವಿ. ಚಾನೆಲ್‌ಗಳು ನರೇಂದ್ರ ಮೋದಿಯ ಗುಣಗಾನ ಮಾಡುತ್ತ ಚೀನಾವನ್ನು ಬಗ್ಗು ಬಡಿಯುವ ಧೀರ, ಶೂರ ಎಂಬೆಲ್ಲ ಉಪಮೆಗಳನ್ನು ಬಳಸುತ್ತಿರುವ ಈ ಪ್ರಸ್ತುತ ಸಂದರ್ಭದಲ್ಲಿ ಜೂನ್ 21ರ The Week ನಿಯತ ಕಾಲಿಕೆಯ ಒಂದು ಲೇಖನ ಓದುಗರನ್ನು ಬೆಚ್ಚಿಬೀಳುಸುತ್ತಿದೆ. ಗಾಲ್ವಾನ್ ನದಿ ಕಣಿವೆ ಮತ್ತು ಪಾನ್‌ಗಾಂಗ್ ಸರೋವರದ ಪ್ರದೇಶದೊಳಗಡೆಗೆ ಚೀನಾದ PLA (People Libration Army) ನುಗ್ಗಿ ಭಾರತದ ಸುಮಾರು 60 ಚ.ಕಿ.ಮೀ. ಪ್ರದೇಶ ಆಕ್ರಮಿಸಿಕೊಂಡಿದೆ ಎಂದು ಮಾಜಿ ಲೆಫ್ಟಿನೆಂಟ್ ಜನರಲ್ ಹೆಚ್.ಎಸ್. ಪನಾಗ್ ಹೇಳಿರುವರು. ಅಂತೆಯೇ ಮಾಜಿ ವಿದೇಶಾಂಗ ಕಾರ್‍ಯದರ್ಶಿ ಶ್ಯಾಮ್‌ಸರಣ್ ಹೇಳಿಕೆಯಂತೆ 2013ರ ವೇಳೆಗೆ ಭಾರತ, ಚೀನಾಕ್ಕೆ ಕಳೆದುಕೊಂಡ ತನ್ನ ಭೂಪ್ರದೇಶ ಸುಮಾರು 640 ಚ.ಕಿ.ಮೀ. ಈಗಿದು 1300 ಚ.ಕಿ.ಮೀ.ನಷ್ಟಾಗಿದೆ ಎನ್ನುತ್ತಾರೆ ಶ್ಯಾಮ್‌ಸರಣ್.

ಇದು ಭಾರತ ಸರ್ಕಾರಕ್ಕೆ ಹಾಗೂ ಭಾರತೀಯ ಸೇನೆಗೆ ನಿಬ್ಬೆರಗುಗೊಳಿಸುವ ಸಂಗತಿ. ಉಪಗ್ರಹಗಳ ಮೂಲಕ ಭೂಚಿತ್ರಣದ ದೃಶ್ಯ ನಮ್ಮ ಬೆರಳ ತುದಿಯಲ್ಲೇ ಲಭ್ಯವಿರುವ ಸಂದರ್ಭದಲ್ಲಿ! ಹೀಗೇಕಾಯಿತು ಎಂಬುದೇ ನಿಗೂಢ. ಕನ್ನಡ ಟಿ.ವಿ. ಮಾಧ್ಯಮಗಳ ಬಹು ಆಪ್ತಮಿತ್ರ ನಮ್ಮ ನರೇಂದ್ರ ಮೋದಿಯವರು 2019 ಅಕ್ಟೋಬರ್ 11,12ರಂದು ಚೀನಾದ ಅಧ್ಯಕ್ಷರನ್ನು ತಮಿಳುನಾಡಿನ ಮಮ್ಮಲಪುರಂಗೆ ಆಹ್ವಾನಿಸಿ ಬಹುಪಚಾರದ ಮಾತುಕತೆ ಆಡಿದ ಸಂದರ್ಭದಲ್ಲಿ ಆತ ಭಾರತ ಸದರಿ ಕಣಿವೆಯಲ್ಲಿ ಕೈಗೊಂಡಿದ್ದ ಮೂಲಭೂತ ವ್ಯವಸ್ಥೆಗಳ ಬಗ್ಗೆ ಆಕ್ಷೇಪಣೆ ಎತ್ತಿದ್ದು, ಓದುಗರಿಗೆ ನೆನಪಿರಬಹುದು. ಸಿಯಾಚಿನ್ ನಿರ್ಗಲ್ಲು ತಲುಪಲು ಸೇನಾ ಸರಬರಾಜಿಗೆ ಅನುಕೂಲವಾಗಲೆಂದು ಭಾರತ, ದೌಲತ್ ಬೇಗ್ ಓಲ್ಡಿ ಮತ್ತು ದುರ್ಬುಕ್‌ಗಳಲ್ಲಿ ರಸ್ತೆ ನಿರ್ಮಾಣ ಹಾಗೂ ಶೈಯೋಕ್ ನದಿಗೆ ಸೇತುವೆ ನಿರ್ಮಿಸಿದ್ದು ಚೀನಾದ ಕಣ್ಣು ಕುಕ್ಕಿಸಿತು.

ಈಗೇನು ಚೀನಾ ಬಂದಿಳಿದಿದೆಯೋ ಆ ಪ್ರದೇಶಕ್ಕೆ ಅವರಿಗಿಂತ ಮುಂಚೆ ಪೂರ್ವಭಾವಿಯಾಗಿ ಬೇಸಿಗೆ ಆರಂಭಕ್ಕೂ ಮುನ್ನ ಬೇಕಾದ ಮಿಲಿಟರಿ ಸಲಕರಣೆಗಳೊಂದಿಗೆ ಹೋಗಿ ತಲುಪಲು ಭಾರತಕ್ಕೆ ಆರು ತಿಂಗಳ ಕಾಲಾವಕಾಶ ಲಭ್ಯವಿತ್ತು. ಆದರೆ ಅದು ಆಯಿತೆ? ಚೀನಾದ ಆಕ್ರಮಣಕ್ಕೆ ಎದುರಾಡುವ ಸಾಮರ್ಥ್ಯ ಇಂಡಿಯಾಕ್ಕೆ…?

ಕೇವಲ ಸಹಿಸಿಕೊಂಡು ಹೋಗುವ ಚಿತ್ತವುಳ್ಳ ಭಾರತ ಸರ್ಕಾರ ರಾಜತಾಂತ್ರಿಕತೆಯನ್ನಷ್ಟೇ ನಂಬಿ ಕುಳಿತಿದೆ. ನಮ್ಮ ಸೇನೆಗೆ ಶತೃವಿನ ಮೇಲೆ ಆಕ್ರಮಣವೆಸಗುವ ಮನೋಭಾವವಾಗಲಿ, ಯುದ್ಧೋಪ ಸಾಧನಗಳಾಗಲಿ, ಸಹಿಷ್ಣುತೆಯಾಗಲಿ ಇಲ್ಲ. ಈ ಸ್ಥಿತಿ ಚೀನಿಯರಿಗೆ ವರದಾನವೆನಿಸಿದ್ದು ಅದು ನಿರ್ಧಯತೆಯಿಂದ ವಾಸ್ತವಿಕ ಗಡಿ ರೇಖೆಯನ್ನು ದಿನದಿಂದ ದಿನಕ್ಕೆ ಭಾರತದ ಒಳಕ್ಕೆ ತಳ್ಳುತ್ತ ಬಂದಿದೆ. ಚೀನಾದ ದುರಾಸೆಗೆ, ಅದರ ಹೊಸ ಹೊಸ ವಾಸ್ತವಿಕ ಗಡಿರೇಖೆಗೆ, ಭಾರತ ಆಸ್ಪದವೀಯ್ಯುತ್ತಿದೆ. ಇದು ಚೀನಾದ ರಾಜಕೀಯ ನೀತಿಯೂ ಹೌದು! ತಮ್ಮ ದುರ್ಬುದ್ಧಿ ಸಮರ್ಥಿಸಿಕೊಳ್ಳಲು ಚೀನಾ ಪ್ರತಿಸಲವು ಮಾತುಕತೆಯ ದಿನಾಂಕವನ್ನು ಮುಂದು ಮುಂದಕ್ಕೆ ತಳ್ಳುತ್ತಾ ಮತ್ತಷ್ಟು ಭಾರತ ಭೂಭಾಗಕ್ಕೆ ಬೇಲಿ ಹಾಕುತ್ತ ಬರುತ್ತಿದೆ. ಭಾರತವೂ ಈ ಹಗ್ಗ ಜಗ್ಗಾಟಕ್ಕೆ ಬಲಿಯಾಗುತ್ತಿದ್ದು ಪ್ರತಿ ಮಾತುಕತೆಯ ನಂತರ ‘ಭಾರತ-ಚೀನಾ ಗಡಿ ಮಾತುಕತೆ ಫಲಪ್ರದ’ವೆಂದು ಹೇಳುತ್ತ ತನ್ನ ನೂರಾರು ಚ.ಕಿ.ಮೀ. ಭೂಪ್ರದೇಶವನ್ನು ನಿಷ್ಕರುಣೆ ಚೀನಾಕ್ಕೆ ಬಿಟ್ಟುಕೊಡುತ್ತ ಬಂದಿದೆ. ಈ ವಂಚನೆಯನ್ನು ಆದಷ್ಟು ಬೇಗ ಪ್ರಸ್ತುತ ಮೋದಿ ಸರ್ಕಾರ ಅರ್ಥ ಮಾಡಿಕೊಂಡರೆ ಒಳಿತು. ಈಗಲಾದರೂ ಭಾರತ ಸಕಲ ಯುದ್ಧೋಪಕರಣಗಳನ್ನು ವಾಸ್ತವಿಕ ಗಡಿರೇಖೆಯಲ್ಲಿ ಶಾಶ್ವತವಾಗಿರುವಂತೆ ಸ್ಥಾಪಿಸಿ ಚೀನಾಕ್ಕೆ ಬುದ್ಧಿ ಕಲಿಸುವ ಸದಾವಕಾಶ ಎದುರಾಗಿದೆ.

-ಸೊಂದಲಗೆರೆ ಲಕ್ಷ್ಮೀಪತಿ

(ಲೇಖಕರು ಬರಹಗಾರರು. ಅಭಿಪ್ರಾಯಗಳು ವೈಯಕ್ತಿಕವಾದವುಗಳು)


ಇದನ್ನೂ ಓದಿ: ಮಾತುಕತೆ ನಂತರ ಚೀನೀ ಸೈನ್ಯದಿಂದ 4 ಅಧಿಕಾರಿಗಳು ಸೇರಿ 10 ಸೈನಿಕರ ಬಿಡುಗಡೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...