Homeಅಂತರಾಷ್ಟ್ರೀಯಗಾಲ್ವನ್ ಕಣಿವೆ ನಮ್ಮದು, ಭಾರತ ಅತಿಕ್ರಮಣ ಮಾಡಿದೆ : ಚೀನಾ ಪುನರುಚ್ಚಾರ

ಗಾಲ್ವನ್ ಕಣಿವೆ ನಮ್ಮದು, ಭಾರತ ಅತಿಕ್ರಮಣ ಮಾಡಿದೆ : ಚೀನಾ ಪುನರುಚ್ಚಾರ

- Advertisement -
- Advertisement -

ಗಾಲ್ವನ್ ಕಣಿವೆಯು ಚೀನಾ-ಭಾರತ ಗಡಿಯ ವಾಸ್ತವಿಕ ನಿಯಂತ್ರಣ ರೇಖೆಯ ಚೀನಾದ ಪಶ್ಚಿಮ ಭಾಗದಲ್ಲಿದ್ದು ಅದು ನಮ್ಮದು ಎಂದು ಚೀನ ವಿದೇಶಾಂಗ ಸಚಿವಾಲಯದ ವಕ್ತಾರ ಜಾವೋ ಲಿಜಿಯಾನ್ ಹೇಳಿದ್ದಾರೆ.

ಈ ಹಿಂದೆ ಪೀಪಲ್ಸ್ ಲಿಬರೇಶನ್ ಆರ್ಮಿಯ ವೆಸ್ಟರ್ನ್ ಥಿಯೇಟರ್ ಕಮಾಂಡ್‌ನ ವಕ್ತಾರರು ಸಹ ಇದೇ ಹಕ್ಕು ಮಂಡಿಸಿದ್ದರು. ಅಮೆರಿಕ, ಇಂಗ್ಲೆಂಡ್, ಫ್ರಾನ್ಸ್, ಜರ್ಮನಿ, ಜಪಾನ್ ಮತ್ತು ಮಾಲ್ಡೀವ್ಸ್ ಸೇರಿದಂತೆ ಹಲವು ದೇಶಗಳ 20 ಭಾರತೀಯ ಸೈನಿಕರ ಹತ್ಯೆಗೆ ಸಂತಾಪ ಸೂಚಿಸಿ ಹೇಳಿಕೆ ನೀಡಿದ ನಂತರ ಚೀನಾದ ಪ್ರತಿಕ್ರಿಯೆ ಬಂದಿದೆ.

ಈ ಕುರಿತು ಹೇಳಿಕೆ ನೀಡಿರುವ ಅವರು ಹಲವು ವರ್ಷಗಳಿಂದ ಚೀನಾ ಪಡೆಗಳು ಈ ಪ್ರದೇಶದಲ್ಲಿ ಗಸ್ತು ತಿರುಗುತ್ತಿವೆ ಮತ್ತು ಕರ್ತವ್ಯ ನಿರ್ವಹಿಸುತ್ತಿವೆ. ಆದರೆ 2020ರ ಏಪ್ರಿಲ್ ತಿಂಗಳಿಂದ ಭಾರತೀಯ ಪಡೆಗಳು ಗಾಲ್ವನ್ ಕಣಿವೆಯ ವಾಸ್ತವಿಕ ನಿಯಂತ್ರಣ ರೇಖೆಯಲ್ಲಿ ಏಕಪಕ್ಷೀಯವಾಗಿ ಮತ್ತು ನಿರಂತರವಾಗಿ ರಸ್ತೆಗಳು, ಸೇತುವೆಗಳು ಇತರೆ ಸೌಲಭ್ಯಗಳನ್ನು ನಿರ್ಮಿಸಿವೆ ಎಂದು ಲಿಜಿಯಾನ್ ಆರೋಪಿಸಿದ್ದಾರೆ.

ಭಾರತವು ವಾಸ್ತವಿಕ ನಿಯಂತ್ರಣ ರೇಖೆ ದಾಟಲು ಮತ್ತು ಪ್ರಚೋದನೆಗೆ ಮತ್ತಷ್ಟು ಕುಮ್ಮಕ್ಕು ನೀಡಿದೆ. ಮೇ 6ರಂದು ಬೆಳಗ್ಗೆ  ಮತ್ತು ರಾತ್ರಿ ಸಮಯದಲ್ಲಿ ವಾಸ್ತವಿಕ ನಿಯಂತ್ರಣ ರೇಖೆ ದಾಟಿ ಚೀನಾದ ಭೂಪ್ರದೇಶಕ್ಕೆ ಅತಿಕ್ರಮಣ ಮಾಡಿರುವ ಭಾರತದ ಗಡಿ ಭದ್ರತಾ ಪಡೆಗಳು ಕೋಟೆ ಮತ್ತು ಬ್ಯಾರಿಕೇಡ್ ಗಳನ್ನು ನಿರ್ಮಿಸಿವೆ ಎಂದಿದ್ದಾರೆ.

ಇದು ಚೀನಾ ಯೋಧರು ಗಸ್ತು ತಿರುಗಲು ಅಡ್ಡಿಯಾಗಿದೆ. ನಿಯಂತ್ರಣ ಮತ್ತು ನಿರ್ವಹಣೆಯ ಯಥಾಸ್ಥಿತಿಯನ್ನು ಏಕಪಕ್ಷೀಯವಾಗಿ ಬದಲಾಯಿಸುವ ಪ್ರಯತ್ನದಲ್ಲಿ ಭಾರತೀಯ ಪಡೆಗಳು ಉದ್ದೇಶಪೂರಕವಾಗಿ ಪ್ರಚೋದನೆ ಮಾಡಿದರು ಎಂದು ಆರೋಪಿಸಿದ್ದಾರೆ.

ಹಾಂಗ್ ಕಾಂಗ್ ಮತ್ತು ಭಾರತ ಸೇರಿದಂತೆ ಹಲವು ಸ್ಥಳಗಳಲ್ಲಿ ಚೀನಿಯರು ಇತ್ತೀಚೆಗೆ ಕೈಗೊಂಡ ಹಲವಾರು ಕ್ರಮಗಳು “ನಿಜವಾಗಿಯೂ ರಚನಾತ್ಮಕವಾಗಿಲ್ಲ” ಎಂದು ಪೂರ್ವ ಏಷ್ಯಾ ಮತ್ತು ಪೆಸಿಫಿಕ್ ವ್ಯವಹಾರಗಳ ಯುಎಸ್ ಸಹಾಯಕ ಕಾರ್ಯದರ್ಶಿ ಡೇವಿಡ್ ಸ್ಟಿಲ್ವೆಲ್ ಹೇಳಿದ್ದಾರೆ.


ಇದನ್ನೂ ಓದಿ: ಚೀನಾ ಯಾವುದೇ ಭಾರತೀಯ ಭೂಪ್ರದೇಶ ವಶಪಡಿಸಿಕೊಂಡಿಲ್ಲ, ಗಡಿಯೊಳಗೆ ಕಾಲಿಟ್ಟಿಲ್ಲ: ನರೇಂದ್ರ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...