Homeಅಂತರಾಷ್ಟ್ರೀಯಗಾಲ್ವನ್ ಕಣಿವೆ ನಮ್ಮದು, ಭಾರತ ಅತಿಕ್ರಮಣ ಮಾಡಿದೆ : ಚೀನಾ ಪುನರುಚ್ಚಾರ

ಗಾಲ್ವನ್ ಕಣಿವೆ ನಮ್ಮದು, ಭಾರತ ಅತಿಕ್ರಮಣ ಮಾಡಿದೆ : ಚೀನಾ ಪುನರುಚ್ಚಾರ

- Advertisement -
- Advertisement -

ಗಾಲ್ವನ್ ಕಣಿವೆಯು ಚೀನಾ-ಭಾರತ ಗಡಿಯ ವಾಸ್ತವಿಕ ನಿಯಂತ್ರಣ ರೇಖೆಯ ಚೀನಾದ ಪಶ್ಚಿಮ ಭಾಗದಲ್ಲಿದ್ದು ಅದು ನಮ್ಮದು ಎಂದು ಚೀನ ವಿದೇಶಾಂಗ ಸಚಿವಾಲಯದ ವಕ್ತಾರ ಜಾವೋ ಲಿಜಿಯಾನ್ ಹೇಳಿದ್ದಾರೆ.

ಈ ಹಿಂದೆ ಪೀಪಲ್ಸ್ ಲಿಬರೇಶನ್ ಆರ್ಮಿಯ ವೆಸ್ಟರ್ನ್ ಥಿಯೇಟರ್ ಕಮಾಂಡ್‌ನ ವಕ್ತಾರರು ಸಹ ಇದೇ ಹಕ್ಕು ಮಂಡಿಸಿದ್ದರು. ಅಮೆರಿಕ, ಇಂಗ್ಲೆಂಡ್, ಫ್ರಾನ್ಸ್, ಜರ್ಮನಿ, ಜಪಾನ್ ಮತ್ತು ಮಾಲ್ಡೀವ್ಸ್ ಸೇರಿದಂತೆ ಹಲವು ದೇಶಗಳ 20 ಭಾರತೀಯ ಸೈನಿಕರ ಹತ್ಯೆಗೆ ಸಂತಾಪ ಸೂಚಿಸಿ ಹೇಳಿಕೆ ನೀಡಿದ ನಂತರ ಚೀನಾದ ಪ್ರತಿಕ್ರಿಯೆ ಬಂದಿದೆ.

ಈ ಕುರಿತು ಹೇಳಿಕೆ ನೀಡಿರುವ ಅವರು ಹಲವು ವರ್ಷಗಳಿಂದ ಚೀನಾ ಪಡೆಗಳು ಈ ಪ್ರದೇಶದಲ್ಲಿ ಗಸ್ತು ತಿರುಗುತ್ತಿವೆ ಮತ್ತು ಕರ್ತವ್ಯ ನಿರ್ವಹಿಸುತ್ತಿವೆ. ಆದರೆ 2020ರ ಏಪ್ರಿಲ್ ತಿಂಗಳಿಂದ ಭಾರತೀಯ ಪಡೆಗಳು ಗಾಲ್ವನ್ ಕಣಿವೆಯ ವಾಸ್ತವಿಕ ನಿಯಂತ್ರಣ ರೇಖೆಯಲ್ಲಿ ಏಕಪಕ್ಷೀಯವಾಗಿ ಮತ್ತು ನಿರಂತರವಾಗಿ ರಸ್ತೆಗಳು, ಸೇತುವೆಗಳು ಇತರೆ ಸೌಲಭ್ಯಗಳನ್ನು ನಿರ್ಮಿಸಿವೆ ಎಂದು ಲಿಜಿಯಾನ್ ಆರೋಪಿಸಿದ್ದಾರೆ.

ಭಾರತವು ವಾಸ್ತವಿಕ ನಿಯಂತ್ರಣ ರೇಖೆ ದಾಟಲು ಮತ್ತು ಪ್ರಚೋದನೆಗೆ ಮತ್ತಷ್ಟು ಕುಮ್ಮಕ್ಕು ನೀಡಿದೆ. ಮೇ 6ರಂದು ಬೆಳಗ್ಗೆ  ಮತ್ತು ರಾತ್ರಿ ಸಮಯದಲ್ಲಿ ವಾಸ್ತವಿಕ ನಿಯಂತ್ರಣ ರೇಖೆ ದಾಟಿ ಚೀನಾದ ಭೂಪ್ರದೇಶಕ್ಕೆ ಅತಿಕ್ರಮಣ ಮಾಡಿರುವ ಭಾರತದ ಗಡಿ ಭದ್ರತಾ ಪಡೆಗಳು ಕೋಟೆ ಮತ್ತು ಬ್ಯಾರಿಕೇಡ್ ಗಳನ್ನು ನಿರ್ಮಿಸಿವೆ ಎಂದಿದ್ದಾರೆ.

ಇದು ಚೀನಾ ಯೋಧರು ಗಸ್ತು ತಿರುಗಲು ಅಡ್ಡಿಯಾಗಿದೆ. ನಿಯಂತ್ರಣ ಮತ್ತು ನಿರ್ವಹಣೆಯ ಯಥಾಸ್ಥಿತಿಯನ್ನು ಏಕಪಕ್ಷೀಯವಾಗಿ ಬದಲಾಯಿಸುವ ಪ್ರಯತ್ನದಲ್ಲಿ ಭಾರತೀಯ ಪಡೆಗಳು ಉದ್ದೇಶಪೂರಕವಾಗಿ ಪ್ರಚೋದನೆ ಮಾಡಿದರು ಎಂದು ಆರೋಪಿಸಿದ್ದಾರೆ.

ಹಾಂಗ್ ಕಾಂಗ್ ಮತ್ತು ಭಾರತ ಸೇರಿದಂತೆ ಹಲವು ಸ್ಥಳಗಳಲ್ಲಿ ಚೀನಿಯರು ಇತ್ತೀಚೆಗೆ ಕೈಗೊಂಡ ಹಲವಾರು ಕ್ರಮಗಳು “ನಿಜವಾಗಿಯೂ ರಚನಾತ್ಮಕವಾಗಿಲ್ಲ” ಎಂದು ಪೂರ್ವ ಏಷ್ಯಾ ಮತ್ತು ಪೆಸಿಫಿಕ್ ವ್ಯವಹಾರಗಳ ಯುಎಸ್ ಸಹಾಯಕ ಕಾರ್ಯದರ್ಶಿ ಡೇವಿಡ್ ಸ್ಟಿಲ್ವೆಲ್ ಹೇಳಿದ್ದಾರೆ.


ಇದನ್ನೂ ಓದಿ: ಚೀನಾ ಯಾವುದೇ ಭಾರತೀಯ ಭೂಪ್ರದೇಶ ವಶಪಡಿಸಿಕೊಂಡಿಲ್ಲ, ಗಡಿಯೊಳಗೆ ಕಾಲಿಟ್ಟಿಲ್ಲ: ನರೇಂದ್ರ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...