Homeಕರ್ನಾಟಕಹೆಸರು, ವಿಳಾಸ ಏನೂ ಇಲ್ಲದೆ 1.25 ಲಕ್ಷ ವಲಸೆ ಕಟ್ಟಡ ಕಾರ್ಮಿಕರಿಗೆ ತಲಾ 5,000 ರೂ...

ಹೆಸರು, ವಿಳಾಸ ಏನೂ ಇಲ್ಲದೆ 1.25 ಲಕ್ಷ ವಲಸೆ ಕಟ್ಟಡ ಕಾರ್ಮಿಕರಿಗೆ ತಲಾ 5,000 ರೂ ಹಂಚಿದ ಕರ್ನಾಟಕ ಸರ್ಕಾರ!: ಹೇಗೆ?

- Advertisement -
- Advertisement -

ಕೊರೊನಾ ವೈರಸ್ ಲಾಕ್‌ಡೌನ್ ಮಧ್ಯೆ ಸಾಮೂಹಿಕ ವಲಸೆ ಹೋಗುವುದನ್ನು ತಡೆಯಲು  1.25 ಲಕ್ಷ ವಲಸೆ ಕಟ್ಟಡ ಕಾರ್ಮಿಕರಿಗೆ ತಲಾ 5,000 ರೂ.ಗಳನ್ನು ವಿತರಿಸಲಾಗಿದೆ ಎಂದು ಕರ್ನಾಟಕ ಸರ್ಕಾರ ಹೇಳಿದೆ. ಹೆಸರುಗಳು, ವಿಳಾಸಗಳು ಅಥವಾ ಅವರು ವಾಸಿಸುತ್ತಿದ್ದ ಜಿಲ್ಲೆಗಳಂತಹ ಮೂಲಭೂತ ಸಂಪರ್ಕ ವಿವರಗಳು ಇಲ್ಲದೇ ಹೇಗೆ ಹಣ ವಿತರಣೆ ಮಾಡಿದ್ದೀರಿ ಎಂದು ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಅಧ್ಯಕ್ಷ ಎಚ್‌.ಕೆ ಪಾಟೀಲ್‌ ಪ್ರಶ್ನಿಸಿದ್ದಾರೆ.

ಸರಿಯಾದ ವಿಳಾಸಗಳಿಲ್ಲದೆ 1.25 ಲಕ್ಷ ಕಾರ್ಮಿಕರಿಗೆ ತಲಾ 5,000 ರೂಗಳನ್ನು ಹೇಗೆ ನೀಡಲಾಯಿತು? ಎಂದು ಸರ್ಕಾರವನ್ನು ಪ್ರಶ್ನಿಸಿದ್ದು, ಈ ವಿಷಯದ ಬಗ್ಗೆ 15 ದಿನಗಳಲ್ಲಿ ಉತ್ತರಿಸುವಂತೆ ರಾಜ್ಯದ ಸಾರ್ವಜನಿಕ ಲೆಕ್ಕಪತ್ರ ಸಮಿತಿ (ಪಿಎಸಿ)ಯು ಕಾರ್ಮಿಕ ಕಾರ್ಯದರ್ಶಿಗೆ ಸೂಚಿಸಿದೆ.

“ಇದು ನನಗೆ ಸಂಪೂರ್ಣ ಆಶ್ಚರ್ಯ ಉಂಟುಮಾಡಿದೆ. ಈ ಫಲಾನುಭವಿಗಳ ಜಿಲ್ಲೆಗಳ ಹೆಸರುಗಳು ಸಹ ತಿಳಿದುಬಂದಿಲ್ಲ. ಹಾಗಿದ್ದಮೇಲೆ ಅಷ್ಟೊಂದು ದೊಡ್ಡ ಹಣವನ್ನು ಹೇಗೆ ವಿತರಿಸಲಾಯಿತು? ಇಲ್ಲೇನೋ ನಡೆಯುತ್ತಿದೆ ಎಂದು ಸಮಿತಿ ಭಾವಿಸಿದೆ” ಎಂದು ಪಿಎಸಿ ಅಧ್ಯಕ್ಷ ಎಚ್.‌ಕೆ ಪಾಟೀಲ್ ಹೇಳಿದ್ದಾರೆ.

ಮೇ ತಿಂಗಳಲ್ಲಿ ಆರ್ಥಿಕತೆಯ ಕುಸಿತ ತಡೆಯಲು ಕೇಂದ್ರವು ಲಾಕ್‌ಡೌನ್ ನಿಯಮಗಳನ್ನು ಸಡಿಲಿಸಿದ ನಂತರ, ಕರ್ನಾಟಕದ ಬಿ.ಎಸ್ ಯಡಿಯೂರಪ್ಪ ನೇತೃಥ್ವದ ಸರ್ಕಾರವು ವಿಶೇಷ ರೈಲುಗಳನ್ನು ರದ್ದುಗೊಳಿಸಿತು. ಇಲ್ಲಿರುವ ವಲಸೆ ಕಾರ್ಮಿಕರು ಹೋಗಿಬಿಟ್ಟರೆ ಎಂಬ ಭಯ ಅವರಿಗಿತ್ತು. ಆದರೆ ಇದನ್ನು ವಿರೋಧ ಪಕ್ಷ ಕಾಂಗ್ರೆಸ್ ಟೀಕಿಸಿತ್ತು. ಕಾರ್ಮಿಕರನ್ನು ಸೆರೆಯಾಳುಗಳ ರೀತಿಯಲ್ಲಿ ಬಂಧನಲ್ಲಿ ಇರಿಸಿಕೊಳ್ಳುವುದು ಸರಿಯಲ್ಲ ಎಂದು ಅದು ಅಭಿಪ್ರಾಯಪಟ್ಟಿತ್ತು.

ಇಂತಹ ಸಮಯದಲ್ಲಿ ವಲಸೆ ಕಾರ್ಮಿಕರು ತಮ್ಮೂರಿಗೆ ತೆರಳದೆ ಇಲ್ಲಿಯೇ ಉಳಿದುಕೊಳ್ಳಬೇಕೆಂದು ಮುಖ್ಯಮಂತ್ರಿ ಯಡಿಯೂರಪ್ಪನವರು ಮನವಿ ಮಾಡಿದ್ದರು. ಅಲ್ಲದೇ 1,600 ಕೋಟಿ ರೂ.ಗಳ ಪರಿಹಾರ ಪ್ಯಾಕೇಜ್ ಘೋಷಿಸಿದ್ದರು. ಇದರಲ್ಲಿ ವಲಸೆ ನಿರ್ಮಾಣ ಕಾರ್ಮಿಕರಿಗೆ ತಲಾ 5000 ರೂ ನೀಡುವುದು ಸಹ ಸೇರಿತ್ತು.

ಈ ಪ್ಯಾಕೇಜ್ ಅಡಿಯಲ್ಲಿ, “ನೋಂದಾಯಿತ” ಕಾರ್ಮಿಕರಿಗೆ ಅವರು ಮೊದಲು ಪಡೆದ 2,000 ರೂಗಳಿಗೆ ಹೆಚ್ಚುವರಿಯಾಗಿ 3,000 ರೂ. ರಾಜ್ಯ ಸರ್ಕಾರದ ವತಿಯಿಂದ ನೀಡಲಾಗುವುದು ಎಂದು ಘೋಷಿಸಲಾಗಿತ್ತು. ಅಂಕಿಅಂಶಗಳ ಪ್ರಕಾರ ಕರ್ನಾಟಕದಲ್ಲಿ ಸುಮಾರು 15.8 ಲಕ್ಷ “ನೋಂದಾಯಿತ” ಕಟ್ಟಡ ಕಾರ್ಮಿಕರಿದ್ದಾರೆ. ಅದರಲ್ಲಿ 1.25 ಲಕ್ಷ ವಲಸೆ ಕಟ್ಟಡ ಕಾರ್ಮಿಕರಿಗೆ ಸರ್ಕಾರದ ವತಿಯಿಂದ ತಲಾ 5000 ತಲುಪಿಸಲಾಗಿದೆ ಎಂದು ಸರ್ಕಾರ ಹೇಳಿಕೊಂಡಿದೆ.

ಸಾರ್ವಜನಿಕ ಲೆಕ್ಕಪತ್ರ ಸಮಿತಿಯು ಇದನ್ನು ಪ್ರಶ್ನಿಸಿದೆ. ಇದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 43,000 ಕಾರ್ಮಿಕರು ಮತ್ತು ಬೀದರ್ ಜಿಲ್ಲೆಯಲ್ಲಿ 66,000 ಕಾರ್ಮಿಕರು ನೋಂದಾಯಿಸಲಾಗಿದೆ ಎಂದು ತೋರಿಸುತ್ತದೆ. ಅತಿ ಹೆಚ್ಚು ನಿರ್ಮಾಣ ಕೆಲಸಗಳು ನಡೆಯುವ ಬೆಂಗಳೂರಿನಲ್ಲಿ ಬೀದರ್ ಮತ್ತು ಇತರ ಅನೇಕ ಸ್ಥಳಗಳಿಗಿಂತ ಅತ್ಯಂತ ಕಡಿಮೆ ಕಾರ್ಮಿಕರು ಇರಲು ಹೇಗೆ ಸಾರ್ಧಯ? ಎಂದು ಎಚ್‌.ಕೆ ಪಾಟೀಲ್ ಪ್ರಶ್ನಿಸಿದ್ದಾರೆ.

COVID-19 ವೈರಸ್ ಹರಡಿದ ಆರಂಭಿಕ ದಿನಗಳಲ್ಲಿನ ಅಂಕಿ ಅಂಶಗಳನ್ನು ನೀಡಲಾಗಿದೆ. ಸರ್ಕಾರವು “ಸಾಧ್ಯವಾದಷ್ಟು ಉತ್ತಮ ಅಭ್ಯಾಸ”ವನ್ನು ಅಳವಡಿಸಿಕೊಂಡಿದೆ ಎಂದು ಕರ್ನಾಟಕದ ಉಪಮುಖ್ಯಮಂತ್ರಿ ಸಿ.ಎನ್.ಅಶ್ವತ್ ನಾರಾಯಣ್ ಉತ್ತರಿಸಿದ್ದಾರೆ. ಇನ್ನೂ, ಅನುಮಾನವಿದ್ದರೆ, ನಾವು ಯಾವಾಗಲೂ ತನಿಖೆಗೆ ಸಿದ್ದರಿದ್ದೇವೆ” ಎಂದು ಅವರು ಹೇಳಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಕಟ್ಟಡ ಕಾರ್ಮಿಕರನ್ನು ಸಂಘಟಿಸುತ್ತಿರುವ ಸಿಐಟಿಯು ಬೆಂಗಳೂರು ದಕ್ಷಿಣ ಕಾರ್ಯದರ್ಶಿ ಉಮೇಶ್ ರವರನ್ನು ಮಾತನಾಡಿಸಿತು. ಅವರು “ಈ ಹಿಂದೆ ಸರ್ಕಾರ ಕಟ್ಟಡ ಕಾರ್ಮಿಕರಿಗೆ ಬಿಬಿಎಂಪಿ ಮೂಲಕ ರೇಷನ್ ಕಿಟ್ ಕೊಟ್ಟಿದ್ದೇವೆ ಎಂದು ಘೋಷಿಸಿಕೊಂಡಿತ್ತು. ನಾವು ಆರ್‌ಟಿಐ ಮೂಲಕ ಅರ್ಜಿ ಹಾಕಿ ಎಷ್ಟು ಜನಕ್ಕೆ ನೀಡಿದ್ದೀರಿ ಎಂದು ಮಾಹಿತಿ ಕೇಳಿದರೆ ಬಿಬಿಎಂಪಿ ನಮ್ಮ ಬಳಿ ಯಾವುದೇ ದಾಖಲೆಗಳಿಲ್ಲ ಎಂದು ಹೇಳಿದೆ. ಈಗ ಕಟ್ಟಡ ಕಾರ್ಮಿಕರಿಗೆ ತಲಾ 5000 ಕೊಟ್ಟಿರುವುದಾಗಿ ಸರ್ಕಾರ ಹೇಳಿಕೊಂಡಿದೆ. ಆದರೆ ನಮ್ಮ ಸುತ್ತಲಿನ ಕಾರ್ಮಿಕರಿಗೆ ಕೇವಲ 2000 ತಲುಪಿದೆಯೇ ಹೊರತು ಉಳಿದ 3000 ತಲುಪಿಲ್ಲ. ಲಾಕ್‌ಡೌನ್‌ನಿಂದ ಅತಿ ಹೆಚ್ಚಿನ ತೊಂದರೆಗೊಳಗಾದ ಈ ಅಸಂಘಟಿತ ಕಾರ್ಮಿಕರ ಹೆಸರಿನಲ್ಲಿ ಸರ್ಕಾರ ಮೋಸ ಮಾಡುವುದನ್ನು ಬಿಟ್ಟು ಅಧಿಕೃತ ದಾಖಲೆಗಳನ್ನು ಮುಂದಿಡಬೇಕು. ಇಲ್ಲದಿದ್ದರೆ ಸರ್ಕಾರ ಅಪರಾಧಿ ಸ್ಥಾನದಲ್ಲಿ ನಿಲ್ಲಬೇಕಾಗುತ್ತದೆ” ಎಂದಿದ್ದಾರೆ.


ಇದನ್ನೂ ಓದಿ: ವರ್ಣಭೇದ ನೀತಿ, ಫೇರ್‌ನೆಸ್ ಕ್ರೀಮ್‌ಗಳು, ಮತ್ತು ಬ್ಲಾಕ್ ಲೈವ್ಸ್‌ ಮ್ಯಾಟರ್‌ ಎನ್ನುವ ನಟಿಯರು! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...