Homeಕರ್ನಾಟಕಹೆಸರು, ವಿಳಾಸ ಏನೂ ಇಲ್ಲದೆ 1.25 ಲಕ್ಷ ವಲಸೆ ಕಟ್ಟಡ ಕಾರ್ಮಿಕರಿಗೆ ತಲಾ 5,000 ರೂ...

ಹೆಸರು, ವಿಳಾಸ ಏನೂ ಇಲ್ಲದೆ 1.25 ಲಕ್ಷ ವಲಸೆ ಕಟ್ಟಡ ಕಾರ್ಮಿಕರಿಗೆ ತಲಾ 5,000 ರೂ ಹಂಚಿದ ಕರ್ನಾಟಕ ಸರ್ಕಾರ!: ಹೇಗೆ?

- Advertisement -
- Advertisement -

ಕೊರೊನಾ ವೈರಸ್ ಲಾಕ್‌ಡೌನ್ ಮಧ್ಯೆ ಸಾಮೂಹಿಕ ವಲಸೆ ಹೋಗುವುದನ್ನು ತಡೆಯಲು  1.25 ಲಕ್ಷ ವಲಸೆ ಕಟ್ಟಡ ಕಾರ್ಮಿಕರಿಗೆ ತಲಾ 5,000 ರೂ.ಗಳನ್ನು ವಿತರಿಸಲಾಗಿದೆ ಎಂದು ಕರ್ನಾಟಕ ಸರ್ಕಾರ ಹೇಳಿದೆ. ಹೆಸರುಗಳು, ವಿಳಾಸಗಳು ಅಥವಾ ಅವರು ವಾಸಿಸುತ್ತಿದ್ದ ಜಿಲ್ಲೆಗಳಂತಹ ಮೂಲಭೂತ ಸಂಪರ್ಕ ವಿವರಗಳು ಇಲ್ಲದೇ ಹೇಗೆ ಹಣ ವಿತರಣೆ ಮಾಡಿದ್ದೀರಿ ಎಂದು ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಅಧ್ಯಕ್ಷ ಎಚ್‌.ಕೆ ಪಾಟೀಲ್‌ ಪ್ರಶ್ನಿಸಿದ್ದಾರೆ.

ಸರಿಯಾದ ವಿಳಾಸಗಳಿಲ್ಲದೆ 1.25 ಲಕ್ಷ ಕಾರ್ಮಿಕರಿಗೆ ತಲಾ 5,000 ರೂಗಳನ್ನು ಹೇಗೆ ನೀಡಲಾಯಿತು? ಎಂದು ಸರ್ಕಾರವನ್ನು ಪ್ರಶ್ನಿಸಿದ್ದು, ಈ ವಿಷಯದ ಬಗ್ಗೆ 15 ದಿನಗಳಲ್ಲಿ ಉತ್ತರಿಸುವಂತೆ ರಾಜ್ಯದ ಸಾರ್ವಜನಿಕ ಲೆಕ್ಕಪತ್ರ ಸಮಿತಿ (ಪಿಎಸಿ)ಯು ಕಾರ್ಮಿಕ ಕಾರ್ಯದರ್ಶಿಗೆ ಸೂಚಿಸಿದೆ.

“ಇದು ನನಗೆ ಸಂಪೂರ್ಣ ಆಶ್ಚರ್ಯ ಉಂಟುಮಾಡಿದೆ. ಈ ಫಲಾನುಭವಿಗಳ ಜಿಲ್ಲೆಗಳ ಹೆಸರುಗಳು ಸಹ ತಿಳಿದುಬಂದಿಲ್ಲ. ಹಾಗಿದ್ದಮೇಲೆ ಅಷ್ಟೊಂದು ದೊಡ್ಡ ಹಣವನ್ನು ಹೇಗೆ ವಿತರಿಸಲಾಯಿತು? ಇಲ್ಲೇನೋ ನಡೆಯುತ್ತಿದೆ ಎಂದು ಸಮಿತಿ ಭಾವಿಸಿದೆ” ಎಂದು ಪಿಎಸಿ ಅಧ್ಯಕ್ಷ ಎಚ್.‌ಕೆ ಪಾಟೀಲ್ ಹೇಳಿದ್ದಾರೆ.

ಮೇ ತಿಂಗಳಲ್ಲಿ ಆರ್ಥಿಕತೆಯ ಕುಸಿತ ತಡೆಯಲು ಕೇಂದ್ರವು ಲಾಕ್‌ಡೌನ್ ನಿಯಮಗಳನ್ನು ಸಡಿಲಿಸಿದ ನಂತರ, ಕರ್ನಾಟಕದ ಬಿ.ಎಸ್ ಯಡಿಯೂರಪ್ಪ ನೇತೃಥ್ವದ ಸರ್ಕಾರವು ವಿಶೇಷ ರೈಲುಗಳನ್ನು ರದ್ದುಗೊಳಿಸಿತು. ಇಲ್ಲಿರುವ ವಲಸೆ ಕಾರ್ಮಿಕರು ಹೋಗಿಬಿಟ್ಟರೆ ಎಂಬ ಭಯ ಅವರಿಗಿತ್ತು. ಆದರೆ ಇದನ್ನು ವಿರೋಧ ಪಕ್ಷ ಕಾಂಗ್ರೆಸ್ ಟೀಕಿಸಿತ್ತು. ಕಾರ್ಮಿಕರನ್ನು ಸೆರೆಯಾಳುಗಳ ರೀತಿಯಲ್ಲಿ ಬಂಧನಲ್ಲಿ ಇರಿಸಿಕೊಳ್ಳುವುದು ಸರಿಯಲ್ಲ ಎಂದು ಅದು ಅಭಿಪ್ರಾಯಪಟ್ಟಿತ್ತು.

ಇಂತಹ ಸಮಯದಲ್ಲಿ ವಲಸೆ ಕಾರ್ಮಿಕರು ತಮ್ಮೂರಿಗೆ ತೆರಳದೆ ಇಲ್ಲಿಯೇ ಉಳಿದುಕೊಳ್ಳಬೇಕೆಂದು ಮುಖ್ಯಮಂತ್ರಿ ಯಡಿಯೂರಪ್ಪನವರು ಮನವಿ ಮಾಡಿದ್ದರು. ಅಲ್ಲದೇ 1,600 ಕೋಟಿ ರೂ.ಗಳ ಪರಿಹಾರ ಪ್ಯಾಕೇಜ್ ಘೋಷಿಸಿದ್ದರು. ಇದರಲ್ಲಿ ವಲಸೆ ನಿರ್ಮಾಣ ಕಾರ್ಮಿಕರಿಗೆ ತಲಾ 5000 ರೂ ನೀಡುವುದು ಸಹ ಸೇರಿತ್ತು.

ಈ ಪ್ಯಾಕೇಜ್ ಅಡಿಯಲ್ಲಿ, “ನೋಂದಾಯಿತ” ಕಾರ್ಮಿಕರಿಗೆ ಅವರು ಮೊದಲು ಪಡೆದ 2,000 ರೂಗಳಿಗೆ ಹೆಚ್ಚುವರಿಯಾಗಿ 3,000 ರೂ. ರಾಜ್ಯ ಸರ್ಕಾರದ ವತಿಯಿಂದ ನೀಡಲಾಗುವುದು ಎಂದು ಘೋಷಿಸಲಾಗಿತ್ತು. ಅಂಕಿಅಂಶಗಳ ಪ್ರಕಾರ ಕರ್ನಾಟಕದಲ್ಲಿ ಸುಮಾರು 15.8 ಲಕ್ಷ “ನೋಂದಾಯಿತ” ಕಟ್ಟಡ ಕಾರ್ಮಿಕರಿದ್ದಾರೆ. ಅದರಲ್ಲಿ 1.25 ಲಕ್ಷ ವಲಸೆ ಕಟ್ಟಡ ಕಾರ್ಮಿಕರಿಗೆ ಸರ್ಕಾರದ ವತಿಯಿಂದ ತಲಾ 5000 ತಲುಪಿಸಲಾಗಿದೆ ಎಂದು ಸರ್ಕಾರ ಹೇಳಿಕೊಂಡಿದೆ.

ಸಾರ್ವಜನಿಕ ಲೆಕ್ಕಪತ್ರ ಸಮಿತಿಯು ಇದನ್ನು ಪ್ರಶ್ನಿಸಿದೆ. ಇದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 43,000 ಕಾರ್ಮಿಕರು ಮತ್ತು ಬೀದರ್ ಜಿಲ್ಲೆಯಲ್ಲಿ 66,000 ಕಾರ್ಮಿಕರು ನೋಂದಾಯಿಸಲಾಗಿದೆ ಎಂದು ತೋರಿಸುತ್ತದೆ. ಅತಿ ಹೆಚ್ಚು ನಿರ್ಮಾಣ ಕೆಲಸಗಳು ನಡೆಯುವ ಬೆಂಗಳೂರಿನಲ್ಲಿ ಬೀದರ್ ಮತ್ತು ಇತರ ಅನೇಕ ಸ್ಥಳಗಳಿಗಿಂತ ಅತ್ಯಂತ ಕಡಿಮೆ ಕಾರ್ಮಿಕರು ಇರಲು ಹೇಗೆ ಸಾರ್ಧಯ? ಎಂದು ಎಚ್‌.ಕೆ ಪಾಟೀಲ್ ಪ್ರಶ್ನಿಸಿದ್ದಾರೆ.

COVID-19 ವೈರಸ್ ಹರಡಿದ ಆರಂಭಿಕ ದಿನಗಳಲ್ಲಿನ ಅಂಕಿ ಅಂಶಗಳನ್ನು ನೀಡಲಾಗಿದೆ. ಸರ್ಕಾರವು “ಸಾಧ್ಯವಾದಷ್ಟು ಉತ್ತಮ ಅಭ್ಯಾಸ”ವನ್ನು ಅಳವಡಿಸಿಕೊಂಡಿದೆ ಎಂದು ಕರ್ನಾಟಕದ ಉಪಮುಖ್ಯಮಂತ್ರಿ ಸಿ.ಎನ್.ಅಶ್ವತ್ ನಾರಾಯಣ್ ಉತ್ತರಿಸಿದ್ದಾರೆ. ಇನ್ನೂ, ಅನುಮಾನವಿದ್ದರೆ, ನಾವು ಯಾವಾಗಲೂ ತನಿಖೆಗೆ ಸಿದ್ದರಿದ್ದೇವೆ” ಎಂದು ಅವರು ಹೇಳಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಕಟ್ಟಡ ಕಾರ್ಮಿಕರನ್ನು ಸಂಘಟಿಸುತ್ತಿರುವ ಸಿಐಟಿಯು ಬೆಂಗಳೂರು ದಕ್ಷಿಣ ಕಾರ್ಯದರ್ಶಿ ಉಮೇಶ್ ರವರನ್ನು ಮಾತನಾಡಿಸಿತು. ಅವರು “ಈ ಹಿಂದೆ ಸರ್ಕಾರ ಕಟ್ಟಡ ಕಾರ್ಮಿಕರಿಗೆ ಬಿಬಿಎಂಪಿ ಮೂಲಕ ರೇಷನ್ ಕಿಟ್ ಕೊಟ್ಟಿದ್ದೇವೆ ಎಂದು ಘೋಷಿಸಿಕೊಂಡಿತ್ತು. ನಾವು ಆರ್‌ಟಿಐ ಮೂಲಕ ಅರ್ಜಿ ಹಾಕಿ ಎಷ್ಟು ಜನಕ್ಕೆ ನೀಡಿದ್ದೀರಿ ಎಂದು ಮಾಹಿತಿ ಕೇಳಿದರೆ ಬಿಬಿಎಂಪಿ ನಮ್ಮ ಬಳಿ ಯಾವುದೇ ದಾಖಲೆಗಳಿಲ್ಲ ಎಂದು ಹೇಳಿದೆ. ಈಗ ಕಟ್ಟಡ ಕಾರ್ಮಿಕರಿಗೆ ತಲಾ 5000 ಕೊಟ್ಟಿರುವುದಾಗಿ ಸರ್ಕಾರ ಹೇಳಿಕೊಂಡಿದೆ. ಆದರೆ ನಮ್ಮ ಸುತ್ತಲಿನ ಕಾರ್ಮಿಕರಿಗೆ ಕೇವಲ 2000 ತಲುಪಿದೆಯೇ ಹೊರತು ಉಳಿದ 3000 ತಲುಪಿಲ್ಲ. ಲಾಕ್‌ಡೌನ್‌ನಿಂದ ಅತಿ ಹೆಚ್ಚಿನ ತೊಂದರೆಗೊಳಗಾದ ಈ ಅಸಂಘಟಿತ ಕಾರ್ಮಿಕರ ಹೆಸರಿನಲ್ಲಿ ಸರ್ಕಾರ ಮೋಸ ಮಾಡುವುದನ್ನು ಬಿಟ್ಟು ಅಧಿಕೃತ ದಾಖಲೆಗಳನ್ನು ಮುಂದಿಡಬೇಕು. ಇಲ್ಲದಿದ್ದರೆ ಸರ್ಕಾರ ಅಪರಾಧಿ ಸ್ಥಾನದಲ್ಲಿ ನಿಲ್ಲಬೇಕಾಗುತ್ತದೆ” ಎಂದಿದ್ದಾರೆ.


ಇದನ್ನೂ ಓದಿ: ವರ್ಣಭೇದ ನೀತಿ, ಫೇರ್‌ನೆಸ್ ಕ್ರೀಮ್‌ಗಳು, ಮತ್ತು ಬ್ಲಾಕ್ ಲೈವ್ಸ್‌ ಮ್ಯಾಟರ್‌ ಎನ್ನುವ ನಟಿಯರು! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...