Homeಕರ್ನಾಟಕಹೆಸರು, ವಿಳಾಸ ಏನೂ ಇಲ್ಲದೆ 1.25 ಲಕ್ಷ ವಲಸೆ ಕಟ್ಟಡ ಕಾರ್ಮಿಕರಿಗೆ ತಲಾ 5,000 ರೂ...

ಹೆಸರು, ವಿಳಾಸ ಏನೂ ಇಲ್ಲದೆ 1.25 ಲಕ್ಷ ವಲಸೆ ಕಟ್ಟಡ ಕಾರ್ಮಿಕರಿಗೆ ತಲಾ 5,000 ರೂ ಹಂಚಿದ ಕರ್ನಾಟಕ ಸರ್ಕಾರ!: ಹೇಗೆ?

- Advertisement -
- Advertisement -

ಕೊರೊನಾ ವೈರಸ್ ಲಾಕ್‌ಡೌನ್ ಮಧ್ಯೆ ಸಾಮೂಹಿಕ ವಲಸೆ ಹೋಗುವುದನ್ನು ತಡೆಯಲು  1.25 ಲಕ್ಷ ವಲಸೆ ಕಟ್ಟಡ ಕಾರ್ಮಿಕರಿಗೆ ತಲಾ 5,000 ರೂ.ಗಳನ್ನು ವಿತರಿಸಲಾಗಿದೆ ಎಂದು ಕರ್ನಾಟಕ ಸರ್ಕಾರ ಹೇಳಿದೆ. ಹೆಸರುಗಳು, ವಿಳಾಸಗಳು ಅಥವಾ ಅವರು ವಾಸಿಸುತ್ತಿದ್ದ ಜಿಲ್ಲೆಗಳಂತಹ ಮೂಲಭೂತ ಸಂಪರ್ಕ ವಿವರಗಳು ಇಲ್ಲದೇ ಹೇಗೆ ಹಣ ವಿತರಣೆ ಮಾಡಿದ್ದೀರಿ ಎಂದು ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಅಧ್ಯಕ್ಷ ಎಚ್‌.ಕೆ ಪಾಟೀಲ್‌ ಪ್ರಶ್ನಿಸಿದ್ದಾರೆ.

ಸರಿಯಾದ ವಿಳಾಸಗಳಿಲ್ಲದೆ 1.25 ಲಕ್ಷ ಕಾರ್ಮಿಕರಿಗೆ ತಲಾ 5,000 ರೂಗಳನ್ನು ಹೇಗೆ ನೀಡಲಾಯಿತು? ಎಂದು ಸರ್ಕಾರವನ್ನು ಪ್ರಶ್ನಿಸಿದ್ದು, ಈ ವಿಷಯದ ಬಗ್ಗೆ 15 ದಿನಗಳಲ್ಲಿ ಉತ್ತರಿಸುವಂತೆ ರಾಜ್ಯದ ಸಾರ್ವಜನಿಕ ಲೆಕ್ಕಪತ್ರ ಸಮಿತಿ (ಪಿಎಸಿ)ಯು ಕಾರ್ಮಿಕ ಕಾರ್ಯದರ್ಶಿಗೆ ಸೂಚಿಸಿದೆ.

“ಇದು ನನಗೆ ಸಂಪೂರ್ಣ ಆಶ್ಚರ್ಯ ಉಂಟುಮಾಡಿದೆ. ಈ ಫಲಾನುಭವಿಗಳ ಜಿಲ್ಲೆಗಳ ಹೆಸರುಗಳು ಸಹ ತಿಳಿದುಬಂದಿಲ್ಲ. ಹಾಗಿದ್ದಮೇಲೆ ಅಷ್ಟೊಂದು ದೊಡ್ಡ ಹಣವನ್ನು ಹೇಗೆ ವಿತರಿಸಲಾಯಿತು? ಇಲ್ಲೇನೋ ನಡೆಯುತ್ತಿದೆ ಎಂದು ಸಮಿತಿ ಭಾವಿಸಿದೆ” ಎಂದು ಪಿಎಸಿ ಅಧ್ಯಕ್ಷ ಎಚ್.‌ಕೆ ಪಾಟೀಲ್ ಹೇಳಿದ್ದಾರೆ.

ಮೇ ತಿಂಗಳಲ್ಲಿ ಆರ್ಥಿಕತೆಯ ಕುಸಿತ ತಡೆಯಲು ಕೇಂದ್ರವು ಲಾಕ್‌ಡೌನ್ ನಿಯಮಗಳನ್ನು ಸಡಿಲಿಸಿದ ನಂತರ, ಕರ್ನಾಟಕದ ಬಿ.ಎಸ್ ಯಡಿಯೂರಪ್ಪ ನೇತೃಥ್ವದ ಸರ್ಕಾರವು ವಿಶೇಷ ರೈಲುಗಳನ್ನು ರದ್ದುಗೊಳಿಸಿತು. ಇಲ್ಲಿರುವ ವಲಸೆ ಕಾರ್ಮಿಕರು ಹೋಗಿಬಿಟ್ಟರೆ ಎಂಬ ಭಯ ಅವರಿಗಿತ್ತು. ಆದರೆ ಇದನ್ನು ವಿರೋಧ ಪಕ್ಷ ಕಾಂಗ್ರೆಸ್ ಟೀಕಿಸಿತ್ತು. ಕಾರ್ಮಿಕರನ್ನು ಸೆರೆಯಾಳುಗಳ ರೀತಿಯಲ್ಲಿ ಬಂಧನಲ್ಲಿ ಇರಿಸಿಕೊಳ್ಳುವುದು ಸರಿಯಲ್ಲ ಎಂದು ಅದು ಅಭಿಪ್ರಾಯಪಟ್ಟಿತ್ತು.

ಇಂತಹ ಸಮಯದಲ್ಲಿ ವಲಸೆ ಕಾರ್ಮಿಕರು ತಮ್ಮೂರಿಗೆ ತೆರಳದೆ ಇಲ್ಲಿಯೇ ಉಳಿದುಕೊಳ್ಳಬೇಕೆಂದು ಮುಖ್ಯಮಂತ್ರಿ ಯಡಿಯೂರಪ್ಪನವರು ಮನವಿ ಮಾಡಿದ್ದರು. ಅಲ್ಲದೇ 1,600 ಕೋಟಿ ರೂ.ಗಳ ಪರಿಹಾರ ಪ್ಯಾಕೇಜ್ ಘೋಷಿಸಿದ್ದರು. ಇದರಲ್ಲಿ ವಲಸೆ ನಿರ್ಮಾಣ ಕಾರ್ಮಿಕರಿಗೆ ತಲಾ 5000 ರೂ ನೀಡುವುದು ಸಹ ಸೇರಿತ್ತು.

ಈ ಪ್ಯಾಕೇಜ್ ಅಡಿಯಲ್ಲಿ, “ನೋಂದಾಯಿತ” ಕಾರ್ಮಿಕರಿಗೆ ಅವರು ಮೊದಲು ಪಡೆದ 2,000 ರೂಗಳಿಗೆ ಹೆಚ್ಚುವರಿಯಾಗಿ 3,000 ರೂ. ರಾಜ್ಯ ಸರ್ಕಾರದ ವತಿಯಿಂದ ನೀಡಲಾಗುವುದು ಎಂದು ಘೋಷಿಸಲಾಗಿತ್ತು. ಅಂಕಿಅಂಶಗಳ ಪ್ರಕಾರ ಕರ್ನಾಟಕದಲ್ಲಿ ಸುಮಾರು 15.8 ಲಕ್ಷ “ನೋಂದಾಯಿತ” ಕಟ್ಟಡ ಕಾರ್ಮಿಕರಿದ್ದಾರೆ. ಅದರಲ್ಲಿ 1.25 ಲಕ್ಷ ವಲಸೆ ಕಟ್ಟಡ ಕಾರ್ಮಿಕರಿಗೆ ಸರ್ಕಾರದ ವತಿಯಿಂದ ತಲಾ 5000 ತಲುಪಿಸಲಾಗಿದೆ ಎಂದು ಸರ್ಕಾರ ಹೇಳಿಕೊಂಡಿದೆ.

ಸಾರ್ವಜನಿಕ ಲೆಕ್ಕಪತ್ರ ಸಮಿತಿಯು ಇದನ್ನು ಪ್ರಶ್ನಿಸಿದೆ. ಇದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 43,000 ಕಾರ್ಮಿಕರು ಮತ್ತು ಬೀದರ್ ಜಿಲ್ಲೆಯಲ್ಲಿ 66,000 ಕಾರ್ಮಿಕರು ನೋಂದಾಯಿಸಲಾಗಿದೆ ಎಂದು ತೋರಿಸುತ್ತದೆ. ಅತಿ ಹೆಚ್ಚು ನಿರ್ಮಾಣ ಕೆಲಸಗಳು ನಡೆಯುವ ಬೆಂಗಳೂರಿನಲ್ಲಿ ಬೀದರ್ ಮತ್ತು ಇತರ ಅನೇಕ ಸ್ಥಳಗಳಿಗಿಂತ ಅತ್ಯಂತ ಕಡಿಮೆ ಕಾರ್ಮಿಕರು ಇರಲು ಹೇಗೆ ಸಾರ್ಧಯ? ಎಂದು ಎಚ್‌.ಕೆ ಪಾಟೀಲ್ ಪ್ರಶ್ನಿಸಿದ್ದಾರೆ.

COVID-19 ವೈರಸ್ ಹರಡಿದ ಆರಂಭಿಕ ದಿನಗಳಲ್ಲಿನ ಅಂಕಿ ಅಂಶಗಳನ್ನು ನೀಡಲಾಗಿದೆ. ಸರ್ಕಾರವು “ಸಾಧ್ಯವಾದಷ್ಟು ಉತ್ತಮ ಅಭ್ಯಾಸ”ವನ್ನು ಅಳವಡಿಸಿಕೊಂಡಿದೆ ಎಂದು ಕರ್ನಾಟಕದ ಉಪಮುಖ್ಯಮಂತ್ರಿ ಸಿ.ಎನ್.ಅಶ್ವತ್ ನಾರಾಯಣ್ ಉತ್ತರಿಸಿದ್ದಾರೆ. ಇನ್ನೂ, ಅನುಮಾನವಿದ್ದರೆ, ನಾವು ಯಾವಾಗಲೂ ತನಿಖೆಗೆ ಸಿದ್ದರಿದ್ದೇವೆ” ಎಂದು ಅವರು ಹೇಳಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಕಟ್ಟಡ ಕಾರ್ಮಿಕರನ್ನು ಸಂಘಟಿಸುತ್ತಿರುವ ಸಿಐಟಿಯು ಬೆಂಗಳೂರು ದಕ್ಷಿಣ ಕಾರ್ಯದರ್ಶಿ ಉಮೇಶ್ ರವರನ್ನು ಮಾತನಾಡಿಸಿತು. ಅವರು “ಈ ಹಿಂದೆ ಸರ್ಕಾರ ಕಟ್ಟಡ ಕಾರ್ಮಿಕರಿಗೆ ಬಿಬಿಎಂಪಿ ಮೂಲಕ ರೇಷನ್ ಕಿಟ್ ಕೊಟ್ಟಿದ್ದೇವೆ ಎಂದು ಘೋಷಿಸಿಕೊಂಡಿತ್ತು. ನಾವು ಆರ್‌ಟಿಐ ಮೂಲಕ ಅರ್ಜಿ ಹಾಕಿ ಎಷ್ಟು ಜನಕ್ಕೆ ನೀಡಿದ್ದೀರಿ ಎಂದು ಮಾಹಿತಿ ಕೇಳಿದರೆ ಬಿಬಿಎಂಪಿ ನಮ್ಮ ಬಳಿ ಯಾವುದೇ ದಾಖಲೆಗಳಿಲ್ಲ ಎಂದು ಹೇಳಿದೆ. ಈಗ ಕಟ್ಟಡ ಕಾರ್ಮಿಕರಿಗೆ ತಲಾ 5000 ಕೊಟ್ಟಿರುವುದಾಗಿ ಸರ್ಕಾರ ಹೇಳಿಕೊಂಡಿದೆ. ಆದರೆ ನಮ್ಮ ಸುತ್ತಲಿನ ಕಾರ್ಮಿಕರಿಗೆ ಕೇವಲ 2000 ತಲುಪಿದೆಯೇ ಹೊರತು ಉಳಿದ 3000 ತಲುಪಿಲ್ಲ. ಲಾಕ್‌ಡೌನ್‌ನಿಂದ ಅತಿ ಹೆಚ್ಚಿನ ತೊಂದರೆಗೊಳಗಾದ ಈ ಅಸಂಘಟಿತ ಕಾರ್ಮಿಕರ ಹೆಸರಿನಲ್ಲಿ ಸರ್ಕಾರ ಮೋಸ ಮಾಡುವುದನ್ನು ಬಿಟ್ಟು ಅಧಿಕೃತ ದಾಖಲೆಗಳನ್ನು ಮುಂದಿಡಬೇಕು. ಇಲ್ಲದಿದ್ದರೆ ಸರ್ಕಾರ ಅಪರಾಧಿ ಸ್ಥಾನದಲ್ಲಿ ನಿಲ್ಲಬೇಕಾಗುತ್ತದೆ” ಎಂದಿದ್ದಾರೆ.


ಇದನ್ನೂ ಓದಿ: ವರ್ಣಭೇದ ನೀತಿ, ಫೇರ್‌ನೆಸ್ ಕ್ರೀಮ್‌ಗಳು, ಮತ್ತು ಬ್ಲಾಕ್ ಲೈವ್ಸ್‌ ಮ್ಯಾಟರ್‌ ಎನ್ನುವ ನಟಿಯರು! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...