Homeಕರ್ನಾಟಕಹೆಸರು, ವಿಳಾಸ ಏನೂ ಇಲ್ಲದೆ 1.25 ಲಕ್ಷ ವಲಸೆ ಕಟ್ಟಡ ಕಾರ್ಮಿಕರಿಗೆ ತಲಾ 5,000 ರೂ...

ಹೆಸರು, ವಿಳಾಸ ಏನೂ ಇಲ್ಲದೆ 1.25 ಲಕ್ಷ ವಲಸೆ ಕಟ್ಟಡ ಕಾರ್ಮಿಕರಿಗೆ ತಲಾ 5,000 ರೂ ಹಂಚಿದ ಕರ್ನಾಟಕ ಸರ್ಕಾರ!: ಹೇಗೆ?

- Advertisement -
- Advertisement -

ಕೊರೊನಾ ವೈರಸ್ ಲಾಕ್‌ಡೌನ್ ಮಧ್ಯೆ ಸಾಮೂಹಿಕ ವಲಸೆ ಹೋಗುವುದನ್ನು ತಡೆಯಲು  1.25 ಲಕ್ಷ ವಲಸೆ ಕಟ್ಟಡ ಕಾರ್ಮಿಕರಿಗೆ ತಲಾ 5,000 ರೂ.ಗಳನ್ನು ವಿತರಿಸಲಾಗಿದೆ ಎಂದು ಕರ್ನಾಟಕ ಸರ್ಕಾರ ಹೇಳಿದೆ. ಹೆಸರುಗಳು, ವಿಳಾಸಗಳು ಅಥವಾ ಅವರು ವಾಸಿಸುತ್ತಿದ್ದ ಜಿಲ್ಲೆಗಳಂತಹ ಮೂಲಭೂತ ಸಂಪರ್ಕ ವಿವರಗಳು ಇಲ್ಲದೇ ಹೇಗೆ ಹಣ ವಿತರಣೆ ಮಾಡಿದ್ದೀರಿ ಎಂದು ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಅಧ್ಯಕ್ಷ ಎಚ್‌.ಕೆ ಪಾಟೀಲ್‌ ಪ್ರಶ್ನಿಸಿದ್ದಾರೆ.

ಸರಿಯಾದ ವಿಳಾಸಗಳಿಲ್ಲದೆ 1.25 ಲಕ್ಷ ಕಾರ್ಮಿಕರಿಗೆ ತಲಾ 5,000 ರೂಗಳನ್ನು ಹೇಗೆ ನೀಡಲಾಯಿತು? ಎಂದು ಸರ್ಕಾರವನ್ನು ಪ್ರಶ್ನಿಸಿದ್ದು, ಈ ವಿಷಯದ ಬಗ್ಗೆ 15 ದಿನಗಳಲ್ಲಿ ಉತ್ತರಿಸುವಂತೆ ರಾಜ್ಯದ ಸಾರ್ವಜನಿಕ ಲೆಕ್ಕಪತ್ರ ಸಮಿತಿ (ಪಿಎಸಿ)ಯು ಕಾರ್ಮಿಕ ಕಾರ್ಯದರ್ಶಿಗೆ ಸೂಚಿಸಿದೆ.

“ಇದು ನನಗೆ ಸಂಪೂರ್ಣ ಆಶ್ಚರ್ಯ ಉಂಟುಮಾಡಿದೆ. ಈ ಫಲಾನುಭವಿಗಳ ಜಿಲ್ಲೆಗಳ ಹೆಸರುಗಳು ಸಹ ತಿಳಿದುಬಂದಿಲ್ಲ. ಹಾಗಿದ್ದಮೇಲೆ ಅಷ್ಟೊಂದು ದೊಡ್ಡ ಹಣವನ್ನು ಹೇಗೆ ವಿತರಿಸಲಾಯಿತು? ಇಲ್ಲೇನೋ ನಡೆಯುತ್ತಿದೆ ಎಂದು ಸಮಿತಿ ಭಾವಿಸಿದೆ” ಎಂದು ಪಿಎಸಿ ಅಧ್ಯಕ್ಷ ಎಚ್.‌ಕೆ ಪಾಟೀಲ್ ಹೇಳಿದ್ದಾರೆ.

ಮೇ ತಿಂಗಳಲ್ಲಿ ಆರ್ಥಿಕತೆಯ ಕುಸಿತ ತಡೆಯಲು ಕೇಂದ್ರವು ಲಾಕ್‌ಡೌನ್ ನಿಯಮಗಳನ್ನು ಸಡಿಲಿಸಿದ ನಂತರ, ಕರ್ನಾಟಕದ ಬಿ.ಎಸ್ ಯಡಿಯೂರಪ್ಪ ನೇತೃಥ್ವದ ಸರ್ಕಾರವು ವಿಶೇಷ ರೈಲುಗಳನ್ನು ರದ್ದುಗೊಳಿಸಿತು. ಇಲ್ಲಿರುವ ವಲಸೆ ಕಾರ್ಮಿಕರು ಹೋಗಿಬಿಟ್ಟರೆ ಎಂಬ ಭಯ ಅವರಿಗಿತ್ತು. ಆದರೆ ಇದನ್ನು ವಿರೋಧ ಪಕ್ಷ ಕಾಂಗ್ರೆಸ್ ಟೀಕಿಸಿತ್ತು. ಕಾರ್ಮಿಕರನ್ನು ಸೆರೆಯಾಳುಗಳ ರೀತಿಯಲ್ಲಿ ಬಂಧನಲ್ಲಿ ಇರಿಸಿಕೊಳ್ಳುವುದು ಸರಿಯಲ್ಲ ಎಂದು ಅದು ಅಭಿಪ್ರಾಯಪಟ್ಟಿತ್ತು.

ಇಂತಹ ಸಮಯದಲ್ಲಿ ವಲಸೆ ಕಾರ್ಮಿಕರು ತಮ್ಮೂರಿಗೆ ತೆರಳದೆ ಇಲ್ಲಿಯೇ ಉಳಿದುಕೊಳ್ಳಬೇಕೆಂದು ಮುಖ್ಯಮಂತ್ರಿ ಯಡಿಯೂರಪ್ಪನವರು ಮನವಿ ಮಾಡಿದ್ದರು. ಅಲ್ಲದೇ 1,600 ಕೋಟಿ ರೂ.ಗಳ ಪರಿಹಾರ ಪ್ಯಾಕೇಜ್ ಘೋಷಿಸಿದ್ದರು. ಇದರಲ್ಲಿ ವಲಸೆ ನಿರ್ಮಾಣ ಕಾರ್ಮಿಕರಿಗೆ ತಲಾ 5000 ರೂ ನೀಡುವುದು ಸಹ ಸೇರಿತ್ತು.

ಈ ಪ್ಯಾಕೇಜ್ ಅಡಿಯಲ್ಲಿ, “ನೋಂದಾಯಿತ” ಕಾರ್ಮಿಕರಿಗೆ ಅವರು ಮೊದಲು ಪಡೆದ 2,000 ರೂಗಳಿಗೆ ಹೆಚ್ಚುವರಿಯಾಗಿ 3,000 ರೂ. ರಾಜ್ಯ ಸರ್ಕಾರದ ವತಿಯಿಂದ ನೀಡಲಾಗುವುದು ಎಂದು ಘೋಷಿಸಲಾಗಿತ್ತು. ಅಂಕಿಅಂಶಗಳ ಪ್ರಕಾರ ಕರ್ನಾಟಕದಲ್ಲಿ ಸುಮಾರು 15.8 ಲಕ್ಷ “ನೋಂದಾಯಿತ” ಕಟ್ಟಡ ಕಾರ್ಮಿಕರಿದ್ದಾರೆ. ಅದರಲ್ಲಿ 1.25 ಲಕ್ಷ ವಲಸೆ ಕಟ್ಟಡ ಕಾರ್ಮಿಕರಿಗೆ ಸರ್ಕಾರದ ವತಿಯಿಂದ ತಲಾ 5000 ತಲುಪಿಸಲಾಗಿದೆ ಎಂದು ಸರ್ಕಾರ ಹೇಳಿಕೊಂಡಿದೆ.

ಸಾರ್ವಜನಿಕ ಲೆಕ್ಕಪತ್ರ ಸಮಿತಿಯು ಇದನ್ನು ಪ್ರಶ್ನಿಸಿದೆ. ಇದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 43,000 ಕಾರ್ಮಿಕರು ಮತ್ತು ಬೀದರ್ ಜಿಲ್ಲೆಯಲ್ಲಿ 66,000 ಕಾರ್ಮಿಕರು ನೋಂದಾಯಿಸಲಾಗಿದೆ ಎಂದು ತೋರಿಸುತ್ತದೆ. ಅತಿ ಹೆಚ್ಚು ನಿರ್ಮಾಣ ಕೆಲಸಗಳು ನಡೆಯುವ ಬೆಂಗಳೂರಿನಲ್ಲಿ ಬೀದರ್ ಮತ್ತು ಇತರ ಅನೇಕ ಸ್ಥಳಗಳಿಗಿಂತ ಅತ್ಯಂತ ಕಡಿಮೆ ಕಾರ್ಮಿಕರು ಇರಲು ಹೇಗೆ ಸಾರ್ಧಯ? ಎಂದು ಎಚ್‌.ಕೆ ಪಾಟೀಲ್ ಪ್ರಶ್ನಿಸಿದ್ದಾರೆ.

COVID-19 ವೈರಸ್ ಹರಡಿದ ಆರಂಭಿಕ ದಿನಗಳಲ್ಲಿನ ಅಂಕಿ ಅಂಶಗಳನ್ನು ನೀಡಲಾಗಿದೆ. ಸರ್ಕಾರವು “ಸಾಧ್ಯವಾದಷ್ಟು ಉತ್ತಮ ಅಭ್ಯಾಸ”ವನ್ನು ಅಳವಡಿಸಿಕೊಂಡಿದೆ ಎಂದು ಕರ್ನಾಟಕದ ಉಪಮುಖ್ಯಮಂತ್ರಿ ಸಿ.ಎನ್.ಅಶ್ವತ್ ನಾರಾಯಣ್ ಉತ್ತರಿಸಿದ್ದಾರೆ. ಇನ್ನೂ, ಅನುಮಾನವಿದ್ದರೆ, ನಾವು ಯಾವಾಗಲೂ ತನಿಖೆಗೆ ಸಿದ್ದರಿದ್ದೇವೆ” ಎಂದು ಅವರು ಹೇಳಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಕಟ್ಟಡ ಕಾರ್ಮಿಕರನ್ನು ಸಂಘಟಿಸುತ್ತಿರುವ ಸಿಐಟಿಯು ಬೆಂಗಳೂರು ದಕ್ಷಿಣ ಕಾರ್ಯದರ್ಶಿ ಉಮೇಶ್ ರವರನ್ನು ಮಾತನಾಡಿಸಿತು. ಅವರು “ಈ ಹಿಂದೆ ಸರ್ಕಾರ ಕಟ್ಟಡ ಕಾರ್ಮಿಕರಿಗೆ ಬಿಬಿಎಂಪಿ ಮೂಲಕ ರೇಷನ್ ಕಿಟ್ ಕೊಟ್ಟಿದ್ದೇವೆ ಎಂದು ಘೋಷಿಸಿಕೊಂಡಿತ್ತು. ನಾವು ಆರ್‌ಟಿಐ ಮೂಲಕ ಅರ್ಜಿ ಹಾಕಿ ಎಷ್ಟು ಜನಕ್ಕೆ ನೀಡಿದ್ದೀರಿ ಎಂದು ಮಾಹಿತಿ ಕೇಳಿದರೆ ಬಿಬಿಎಂಪಿ ನಮ್ಮ ಬಳಿ ಯಾವುದೇ ದಾಖಲೆಗಳಿಲ್ಲ ಎಂದು ಹೇಳಿದೆ. ಈಗ ಕಟ್ಟಡ ಕಾರ್ಮಿಕರಿಗೆ ತಲಾ 5000 ಕೊಟ್ಟಿರುವುದಾಗಿ ಸರ್ಕಾರ ಹೇಳಿಕೊಂಡಿದೆ. ಆದರೆ ನಮ್ಮ ಸುತ್ತಲಿನ ಕಾರ್ಮಿಕರಿಗೆ ಕೇವಲ 2000 ತಲುಪಿದೆಯೇ ಹೊರತು ಉಳಿದ 3000 ತಲುಪಿಲ್ಲ. ಲಾಕ್‌ಡೌನ್‌ನಿಂದ ಅತಿ ಹೆಚ್ಚಿನ ತೊಂದರೆಗೊಳಗಾದ ಈ ಅಸಂಘಟಿತ ಕಾರ್ಮಿಕರ ಹೆಸರಿನಲ್ಲಿ ಸರ್ಕಾರ ಮೋಸ ಮಾಡುವುದನ್ನು ಬಿಟ್ಟು ಅಧಿಕೃತ ದಾಖಲೆಗಳನ್ನು ಮುಂದಿಡಬೇಕು. ಇಲ್ಲದಿದ್ದರೆ ಸರ್ಕಾರ ಅಪರಾಧಿ ಸ್ಥಾನದಲ್ಲಿ ನಿಲ್ಲಬೇಕಾಗುತ್ತದೆ” ಎಂದಿದ್ದಾರೆ.


ಇದನ್ನೂ ಓದಿ: ವರ್ಣಭೇದ ನೀತಿ, ಫೇರ್‌ನೆಸ್ ಕ್ರೀಮ್‌ಗಳು, ಮತ್ತು ಬ್ಲಾಕ್ ಲೈವ್ಸ್‌ ಮ್ಯಾಟರ್‌ ಎನ್ನುವ ನಟಿಯರು! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...