Homeಕರ್ನಾಟಕಹೆಸರು, ವಿಳಾಸ ಏನೂ ಇಲ್ಲದೆ 1.25 ಲಕ್ಷ ವಲಸೆ ಕಟ್ಟಡ ಕಾರ್ಮಿಕರಿಗೆ ತಲಾ 5,000 ರೂ...

ಹೆಸರು, ವಿಳಾಸ ಏನೂ ಇಲ್ಲದೆ 1.25 ಲಕ್ಷ ವಲಸೆ ಕಟ್ಟಡ ಕಾರ್ಮಿಕರಿಗೆ ತಲಾ 5,000 ರೂ ಹಂಚಿದ ಕರ್ನಾಟಕ ಸರ್ಕಾರ!: ಹೇಗೆ?

- Advertisement -
- Advertisement -

ಕೊರೊನಾ ವೈರಸ್ ಲಾಕ್‌ಡೌನ್ ಮಧ್ಯೆ ಸಾಮೂಹಿಕ ವಲಸೆ ಹೋಗುವುದನ್ನು ತಡೆಯಲು  1.25 ಲಕ್ಷ ವಲಸೆ ಕಟ್ಟಡ ಕಾರ್ಮಿಕರಿಗೆ ತಲಾ 5,000 ರೂ.ಗಳನ್ನು ವಿತರಿಸಲಾಗಿದೆ ಎಂದು ಕರ್ನಾಟಕ ಸರ್ಕಾರ ಹೇಳಿದೆ. ಹೆಸರುಗಳು, ವಿಳಾಸಗಳು ಅಥವಾ ಅವರು ವಾಸಿಸುತ್ತಿದ್ದ ಜಿಲ್ಲೆಗಳಂತಹ ಮೂಲಭೂತ ಸಂಪರ್ಕ ವಿವರಗಳು ಇಲ್ಲದೇ ಹೇಗೆ ಹಣ ವಿತರಣೆ ಮಾಡಿದ್ದೀರಿ ಎಂದು ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಅಧ್ಯಕ್ಷ ಎಚ್‌.ಕೆ ಪಾಟೀಲ್‌ ಪ್ರಶ್ನಿಸಿದ್ದಾರೆ.

ಸರಿಯಾದ ವಿಳಾಸಗಳಿಲ್ಲದೆ 1.25 ಲಕ್ಷ ಕಾರ್ಮಿಕರಿಗೆ ತಲಾ 5,000 ರೂಗಳನ್ನು ಹೇಗೆ ನೀಡಲಾಯಿತು? ಎಂದು ಸರ್ಕಾರವನ್ನು ಪ್ರಶ್ನಿಸಿದ್ದು, ಈ ವಿಷಯದ ಬಗ್ಗೆ 15 ದಿನಗಳಲ್ಲಿ ಉತ್ತರಿಸುವಂತೆ ರಾಜ್ಯದ ಸಾರ್ವಜನಿಕ ಲೆಕ್ಕಪತ್ರ ಸಮಿತಿ (ಪಿಎಸಿ)ಯು ಕಾರ್ಮಿಕ ಕಾರ್ಯದರ್ಶಿಗೆ ಸೂಚಿಸಿದೆ.

“ಇದು ನನಗೆ ಸಂಪೂರ್ಣ ಆಶ್ಚರ್ಯ ಉಂಟುಮಾಡಿದೆ. ಈ ಫಲಾನುಭವಿಗಳ ಜಿಲ್ಲೆಗಳ ಹೆಸರುಗಳು ಸಹ ತಿಳಿದುಬಂದಿಲ್ಲ. ಹಾಗಿದ್ದಮೇಲೆ ಅಷ್ಟೊಂದು ದೊಡ್ಡ ಹಣವನ್ನು ಹೇಗೆ ವಿತರಿಸಲಾಯಿತು? ಇಲ್ಲೇನೋ ನಡೆಯುತ್ತಿದೆ ಎಂದು ಸಮಿತಿ ಭಾವಿಸಿದೆ” ಎಂದು ಪಿಎಸಿ ಅಧ್ಯಕ್ಷ ಎಚ್.‌ಕೆ ಪಾಟೀಲ್ ಹೇಳಿದ್ದಾರೆ.

ಮೇ ತಿಂಗಳಲ್ಲಿ ಆರ್ಥಿಕತೆಯ ಕುಸಿತ ತಡೆಯಲು ಕೇಂದ್ರವು ಲಾಕ್‌ಡೌನ್ ನಿಯಮಗಳನ್ನು ಸಡಿಲಿಸಿದ ನಂತರ, ಕರ್ನಾಟಕದ ಬಿ.ಎಸ್ ಯಡಿಯೂರಪ್ಪ ನೇತೃಥ್ವದ ಸರ್ಕಾರವು ವಿಶೇಷ ರೈಲುಗಳನ್ನು ರದ್ದುಗೊಳಿಸಿತು. ಇಲ್ಲಿರುವ ವಲಸೆ ಕಾರ್ಮಿಕರು ಹೋಗಿಬಿಟ್ಟರೆ ಎಂಬ ಭಯ ಅವರಿಗಿತ್ತು. ಆದರೆ ಇದನ್ನು ವಿರೋಧ ಪಕ್ಷ ಕಾಂಗ್ರೆಸ್ ಟೀಕಿಸಿತ್ತು. ಕಾರ್ಮಿಕರನ್ನು ಸೆರೆಯಾಳುಗಳ ರೀತಿಯಲ್ಲಿ ಬಂಧನಲ್ಲಿ ಇರಿಸಿಕೊಳ್ಳುವುದು ಸರಿಯಲ್ಲ ಎಂದು ಅದು ಅಭಿಪ್ರಾಯಪಟ್ಟಿತ್ತು.

ಇಂತಹ ಸಮಯದಲ್ಲಿ ವಲಸೆ ಕಾರ್ಮಿಕರು ತಮ್ಮೂರಿಗೆ ತೆರಳದೆ ಇಲ್ಲಿಯೇ ಉಳಿದುಕೊಳ್ಳಬೇಕೆಂದು ಮುಖ್ಯಮಂತ್ರಿ ಯಡಿಯೂರಪ್ಪನವರು ಮನವಿ ಮಾಡಿದ್ದರು. ಅಲ್ಲದೇ 1,600 ಕೋಟಿ ರೂ.ಗಳ ಪರಿಹಾರ ಪ್ಯಾಕೇಜ್ ಘೋಷಿಸಿದ್ದರು. ಇದರಲ್ಲಿ ವಲಸೆ ನಿರ್ಮಾಣ ಕಾರ್ಮಿಕರಿಗೆ ತಲಾ 5000 ರೂ ನೀಡುವುದು ಸಹ ಸೇರಿತ್ತು.

ಈ ಪ್ಯಾಕೇಜ್ ಅಡಿಯಲ್ಲಿ, “ನೋಂದಾಯಿತ” ಕಾರ್ಮಿಕರಿಗೆ ಅವರು ಮೊದಲು ಪಡೆದ 2,000 ರೂಗಳಿಗೆ ಹೆಚ್ಚುವರಿಯಾಗಿ 3,000 ರೂ. ರಾಜ್ಯ ಸರ್ಕಾರದ ವತಿಯಿಂದ ನೀಡಲಾಗುವುದು ಎಂದು ಘೋಷಿಸಲಾಗಿತ್ತು. ಅಂಕಿಅಂಶಗಳ ಪ್ರಕಾರ ಕರ್ನಾಟಕದಲ್ಲಿ ಸುಮಾರು 15.8 ಲಕ್ಷ “ನೋಂದಾಯಿತ” ಕಟ್ಟಡ ಕಾರ್ಮಿಕರಿದ್ದಾರೆ. ಅದರಲ್ಲಿ 1.25 ಲಕ್ಷ ವಲಸೆ ಕಟ್ಟಡ ಕಾರ್ಮಿಕರಿಗೆ ಸರ್ಕಾರದ ವತಿಯಿಂದ ತಲಾ 5000 ತಲುಪಿಸಲಾಗಿದೆ ಎಂದು ಸರ್ಕಾರ ಹೇಳಿಕೊಂಡಿದೆ.

ಸಾರ್ವಜನಿಕ ಲೆಕ್ಕಪತ್ರ ಸಮಿತಿಯು ಇದನ್ನು ಪ್ರಶ್ನಿಸಿದೆ. ಇದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 43,000 ಕಾರ್ಮಿಕರು ಮತ್ತು ಬೀದರ್ ಜಿಲ್ಲೆಯಲ್ಲಿ 66,000 ಕಾರ್ಮಿಕರು ನೋಂದಾಯಿಸಲಾಗಿದೆ ಎಂದು ತೋರಿಸುತ್ತದೆ. ಅತಿ ಹೆಚ್ಚು ನಿರ್ಮಾಣ ಕೆಲಸಗಳು ನಡೆಯುವ ಬೆಂಗಳೂರಿನಲ್ಲಿ ಬೀದರ್ ಮತ್ತು ಇತರ ಅನೇಕ ಸ್ಥಳಗಳಿಗಿಂತ ಅತ್ಯಂತ ಕಡಿಮೆ ಕಾರ್ಮಿಕರು ಇರಲು ಹೇಗೆ ಸಾರ್ಧಯ? ಎಂದು ಎಚ್‌.ಕೆ ಪಾಟೀಲ್ ಪ್ರಶ್ನಿಸಿದ್ದಾರೆ.

COVID-19 ವೈರಸ್ ಹರಡಿದ ಆರಂಭಿಕ ದಿನಗಳಲ್ಲಿನ ಅಂಕಿ ಅಂಶಗಳನ್ನು ನೀಡಲಾಗಿದೆ. ಸರ್ಕಾರವು “ಸಾಧ್ಯವಾದಷ್ಟು ಉತ್ತಮ ಅಭ್ಯಾಸ”ವನ್ನು ಅಳವಡಿಸಿಕೊಂಡಿದೆ ಎಂದು ಕರ್ನಾಟಕದ ಉಪಮುಖ್ಯಮಂತ್ರಿ ಸಿ.ಎನ್.ಅಶ್ವತ್ ನಾರಾಯಣ್ ಉತ್ತರಿಸಿದ್ದಾರೆ. ಇನ್ನೂ, ಅನುಮಾನವಿದ್ದರೆ, ನಾವು ಯಾವಾಗಲೂ ತನಿಖೆಗೆ ಸಿದ್ದರಿದ್ದೇವೆ” ಎಂದು ಅವರು ಹೇಳಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಕಟ್ಟಡ ಕಾರ್ಮಿಕರನ್ನು ಸಂಘಟಿಸುತ್ತಿರುವ ಸಿಐಟಿಯು ಬೆಂಗಳೂರು ದಕ್ಷಿಣ ಕಾರ್ಯದರ್ಶಿ ಉಮೇಶ್ ರವರನ್ನು ಮಾತನಾಡಿಸಿತು. ಅವರು “ಈ ಹಿಂದೆ ಸರ್ಕಾರ ಕಟ್ಟಡ ಕಾರ್ಮಿಕರಿಗೆ ಬಿಬಿಎಂಪಿ ಮೂಲಕ ರೇಷನ್ ಕಿಟ್ ಕೊಟ್ಟಿದ್ದೇವೆ ಎಂದು ಘೋಷಿಸಿಕೊಂಡಿತ್ತು. ನಾವು ಆರ್‌ಟಿಐ ಮೂಲಕ ಅರ್ಜಿ ಹಾಕಿ ಎಷ್ಟು ಜನಕ್ಕೆ ನೀಡಿದ್ದೀರಿ ಎಂದು ಮಾಹಿತಿ ಕೇಳಿದರೆ ಬಿಬಿಎಂಪಿ ನಮ್ಮ ಬಳಿ ಯಾವುದೇ ದಾಖಲೆಗಳಿಲ್ಲ ಎಂದು ಹೇಳಿದೆ. ಈಗ ಕಟ್ಟಡ ಕಾರ್ಮಿಕರಿಗೆ ತಲಾ 5000 ಕೊಟ್ಟಿರುವುದಾಗಿ ಸರ್ಕಾರ ಹೇಳಿಕೊಂಡಿದೆ. ಆದರೆ ನಮ್ಮ ಸುತ್ತಲಿನ ಕಾರ್ಮಿಕರಿಗೆ ಕೇವಲ 2000 ತಲುಪಿದೆಯೇ ಹೊರತು ಉಳಿದ 3000 ತಲುಪಿಲ್ಲ. ಲಾಕ್‌ಡೌನ್‌ನಿಂದ ಅತಿ ಹೆಚ್ಚಿನ ತೊಂದರೆಗೊಳಗಾದ ಈ ಅಸಂಘಟಿತ ಕಾರ್ಮಿಕರ ಹೆಸರಿನಲ್ಲಿ ಸರ್ಕಾರ ಮೋಸ ಮಾಡುವುದನ್ನು ಬಿಟ್ಟು ಅಧಿಕೃತ ದಾಖಲೆಗಳನ್ನು ಮುಂದಿಡಬೇಕು. ಇಲ್ಲದಿದ್ದರೆ ಸರ್ಕಾರ ಅಪರಾಧಿ ಸ್ಥಾನದಲ್ಲಿ ನಿಲ್ಲಬೇಕಾಗುತ್ತದೆ” ಎಂದಿದ್ದಾರೆ.


ಇದನ್ನೂ ಓದಿ: ವರ್ಣಭೇದ ನೀತಿ, ಫೇರ್‌ನೆಸ್ ಕ್ರೀಮ್‌ಗಳು, ಮತ್ತು ಬ್ಲಾಕ್ ಲೈವ್ಸ್‌ ಮ್ಯಾಟರ್‌ ಎನ್ನುವ ನಟಿಯರು! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...