Homeನಿಜವೋ ಸುಳ್ಳೋಫ್ಯಾಕ್ಟ್ ಚೆಕ್: ಎಐಎಂಐಎಂ ಸದಸ್ಯರು ಭಾರತದ ಧ್ವಜಗಳನ್ನು ಸುಟ್ಟರೆ? ವಾಸ್ತವವೇನು?

ಫ್ಯಾಕ್ಟ್ ಚೆಕ್: ಎಐಎಂಐಎಂ ಸದಸ್ಯರು ಭಾರತದ ಧ್ವಜಗಳನ್ನು ಸುಟ್ಟರೆ? ವಾಸ್ತವವೇನು?

- Advertisement -
- Advertisement -

ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲೀಮೀನ್ (ಎಐಎಂಐಎಂ) ಬ್ಯಾನರ್ ಮುಂದೆ ಇಬ್ಬರು ಮುಸ್ಲಿಮರು ಧ್ವಜಗಳನ್ನು ಸುಡುವ ಮೂರು ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಅದರಲ್ಲಿ “ಉತ್ತರ ಪ್ರದೇಶದ ಎಐಎಂಐಎಂ ಪ್ರತಾಪಘಡದ ಸದಸ್ಯರು ಕೇಸರಿ ಧ್ವಜಗಳನ್ನು ಸುಟ್ಟುಹಾಕಿದರು” ಎಂದು ಬರೆಯಲಾಗಿದೆ.

ವೈರಲಾದ ಸಂದೇಶವನ್ನು ಹಲವಾರು ಜನರು ಟ್ವಿಟ್ಟರ್‌ನಲ್ಲಿ ಹಂಚಿ “ಇದು ಪ್ರತಾಪಗಡದ ಎಐಎಂಐಎಂನ ಎಂ.ಡಿ. ಸಲೀಮ್ ಅನ್ಸಾರಿ, ಅವರು ಕೇಸರಿ ಧ್ವಜವನ್ನು ಸಾರ್ವಜನಿಕವಾಗಿ ಸುಡುತ್ತಿದ್ದಾರೆ. ಇಂತವರು ಗಲಭೆಗೆ ಕಾರಣರಾಗುತ್ತಾರೆ” ಎಂದು ಯುಪಿ ಪೊಲೀಸರಿಗೆ ಆಪಾದಿತ ಘಟನೆಯ ಬಗ್ಗೆ ಎಚ್ಚರಿಕೆ ನೀಡಿದ್ದಾರೆ.

ಕೆಲವು ಫೇಸ್‌ಬುಕ್ ಬಳಕೆದಾರರು ಘಟನೆಯ ಮತ್ತೊಂದು ಚಿತ್ರವನ್ನು ಹಂಚಿಕೊಂಡು, “ಭಾರತದ ರಾಷ್ಟ್ರಧ್ವಜವನ್ನು ಸುಟ್ಟುಹಾಕುತ್ತಿದ್ದಾರೆ” ಎಂದು ಹೇಳಿಕೊಂಡಿದ್ದಾರೆ. ಚಿತ್ರದ ಹಿನ್ನಲೆಯಲ್ಲಿ ‘ಇಂಡಿಯಾ ಮುರ್ದಾಬಾದ್’ ಎಂದು ಬರೆದ ಪೋಸ್ಟರ್ ಕಂಡುಬರುತ್ತಿದೆ.

ಫ್ಯಾಕ್ಟ್-ಚೆಕ್

ಈ ವೈರಲ್ ಚಿತ್ರವನ್ನು ಜೂನ್ 14 ರಂದು ಪರ್ವಾನ ಮಲಿಕ್ ಜಿಯಾ ಎಂಬವರು ಪೋಸ್ಟ್ ಮಾಡಿದ್ದಾರೆ. ಪೋಸ್ಟ್‌ನಲ್ಲಿ, “ಭಾರತೀಯ ಭೂಪ್ರದೇಶವನ್ನು ತಮ್ಮದೆಂದು ಘೋಷಿಸಿದ ನೇಪಾಳದ ವಿರುದ್ದ ನೇಪಾಳದ ಧ್ವಜವನ್ನು ಸುಟ್ಟು ಎಐಐಎಂ ಸದಸ್ಯರು ಪ್ರತಿಭಟಿಸಿದರು” ಎಂದು ಜಿಯಾ ಬರೆದಿದ್ದರು. ಈ ಪೋಸ್ಟ್ ಪ್ರಕಾರ ವೈರಲ್ ಚಿತ್ರದಲ್ಲಿರುವವರ ಹೆಸರು ಸಲೀಮ್ ಅಹ್ಮದ್ ಅನ್ಸಾರಿ ಮತ್ತು ಇಸ್ರಾರ್ ಅಹ್ಮದ್.

ಅಲ್ಲದೆ, ವೈರಲಾಗುತ್ತಿರುವ ಈ ಚಿತ್ರಕ್ಕೆ ಪ್ರತಾಪ್‌ಗಡದ ಪೊಲೀಸರು “ವಿವೇಕ್ 21 ಶುಕ್ಲಾ” ಎಂಬವರಿಗೆ ಪ್ರತಿಕ್ರಿಯಿಸಿ “ಮೇಲೆ ತಿಳಿಸಿದ ಪ್ರಕರಣದಲ್ಲಿ ಪ್ರದರ್ಶಿಸಲಾದ ಧ್ವಜ ನೇಪಾಳದದ್ದಾಗಿದ್ದು, ಭಾರತದ ಭೂಪ್ರದೇಶಗಳನ್ನು ತಮ್ಮ ಭೂಮಿ ಎಂದು ಘೋಷಿಸಿದ ನೇಪಾಳದ ಸಂಸತ್ತಿನ ವಿರುದ್ದ ಎಐಐಎಂ ಪಕ್ಷದ ಪ್ರತಾಪಗಡದ ಸದಸ್ಯರು ನೇಪಾಳದ ಧ್ವಜಗಳನ್ನು ಸುಟ್ಟುಹಾಕಿ ಪ್ರತಿಭಟಿಸಿದರು” ಎಂದು ಬರೆದಿದ್ದಾರೆ.

 

ಲಿಪುಲೆಖ್, ಕಾಲಾಪಾನಿ ಮತ್ತು ಲಿಂಪಿಯಾಡುರಾ ಪ್ರದೇಶಗಳನ್ನು ಒಳಗೊಂಡ ಹೊಸ ನಕ್ಷೆಯನ್ನು ನೇಪಾಳದ ಸಂಸತ್ತಿನಲ್ಲಿ ಇತ್ತೀಚೆಗೆ ಅಂಗೀಕರಿಸಲಾಗಿದೆ.

ಪ್ರತಾಪ್‌‌ಗಡದ ಪೊಲೀಸರು ಹಂಚಿಕೊಂಡ ಕ್ಲಿಪಿಂಗ್‌ನಲ್ಲಿ ಧ್ವಜವೂ ನೇಪಾಳದ್ದು ಎಂದು ಸ್ಪಷ್ಟವಾಗಿ ಕಾಣಬಹುದಾಗಿದೆ.

ಟ್ವಿಟ್ಟರ್‌ ಬಳಕೆದಾರರಾದ @ಅಸ್ಲಿ_ಶಿವಾನಿ ಎಂಬವರ ಟ್ವೀಟ್‌ಗೆ ಪ್ರತಿಕ್ರಿಯೆಯಾಗಿ, ಪ್ರತಾಪಗಡ ಪೊಲೀಸರು ವೈರಲ್ ವೀಡಿಯೊದಲ್ಲಿರುವ ಪುರುಷರೊಬ್ಬರ ವೀಡಿಯೊ ಸ್ಪಷ್ಟೀಕರಣವನ್ನು ಅಪ್‌ಲೋಡ್ ಮಾಡಿದ್ದಾರೆ. ಅದರಲ್ಲಿ ಅವರು ಹೇಳಿದಂತೆ “ಈ ಪ್ರತಿಭಟನೆಯ ಕುರಿತು ಗೌರವಾನ್ವಿತ ಅಧ್ಯಕ್ಷ ಮತ್ತು ಜಿಲ್ಲಾಧಿಕಾರಿಗೆ ತಿಳಿಸಿದ್ದೇನೆ ಹಾಗೂ ನಾನು ನೇಪಾಳ ವಿರುದ್ಧ ಪ್ರತಿಭಟಿಸಿದ್ದೇನೆ. ಧಾರ್ಮಿಕ ಭಾವನೆಗಳನ್ನು ನೋಯಿಸುವ ಉದ್ದೇಶದಿಂದ ಈ ಕೃತ್ಯ ಮಾಡಲಾಗಿದೆ ಎಂದು ಯಾರಾದರೂ ಭಾವಿಸಿದರೆ, ನಾನು ಕ್ಷಮೆಯಾಚಿಸುತ್ತೇನೆ” ಎಂದು ಹೇಳಿದ್ದಾರೆ.

ಇದಲ್ಲದೆ, ‘ನೇಪಾಳ ಮುರ್ದಾಬಾದ್’ ಎನ್ನುವ ಪೋಸ್ಟರ್‌ನೊಂದಿಗೆ ವೈರಲ್ ಚಿತ್ರಗಳಲ್ಲಿ ಎಐಐಎಂ ನ ಬ್ಯಾನರ್ ಅನ್ನು ಸ್ಪಷ್ಟವಾಗಿ ನೋಡಬಹುದಾಗಿದೆ.

ಜೂನ್ 18 ರಂದು ಯೂಟ್ಯೂಬ್ ಚಾನೆಲ್ ಓಸೋಕಿಂಗ್ ಒ’ಟಿವಿ ಅಪ್‌ಲೋಡ್ ಮಾಡಿದ ವೀಡಿಯೊದಲ್ಲಿ ಘಟನೆಯನ್ನು ಕಾಣಬಹುದಾಗಿದೆ.

ಆದ್ದರಿಂದ ಕೆಳಗಿನ ಚಿತ್ರದಲ್ಲಿ ಕಾಣುತ್ತಿರುವಂತೆ ವೈರಲಾಗುತ್ತಿರುವ ಚಿತ್ರ ನಕಲಿಯಾಗಿದ್ದು ಅದನ್ನು ತಿದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಡುತ್ತಿದ್ದಾರೆ. 


ಓದಿ: ಈ ಚಿತ್ರ ಭಾರತ-ಚೀನಾ ಘರ್ಷಣೆಯಲ್ಲಿ ಗಾಯಗೊಂಡ ಭಾರತೀಯ ಯೋಧನದ್ದೇ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...