Homeಮುಖಪುಟವರವರ ರಾವ್‌ರನ್ನು ಆಸ್ಪತ್ರೆಗೆ ಸೇರಿಸಿ: 14 ಸಂಸದರಿಂದ ಮಹಾರಾಷ್ಟ್ರ ಸಿಎಂಗೆ ಪತ್ರ

ವರವರ ರಾವ್‌ರನ್ನು ಆಸ್ಪತ್ರೆಗೆ ಸೇರಿಸಿ: 14 ಸಂಸದರಿಂದ ಮಹಾರಾಷ್ಟ್ರ ಸಿಎಂಗೆ ಪತ್ರ

- Advertisement -
- Advertisement -

ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಬಂಧನಕ್ಕೊಳಗಾದ 81 ವರ್ಷದ ಕವಿ ವರವರ ರಾವ್ ಅವರ ಆರೋಗ್ಯದ ಬಗ್ಗೆ ಗಂಭೀರ ಕಳವಳ ವ್ಯಕ್ತಪಡಿಸಿ ದೇಶದ 14 ಸಂಸದರು ಜೂನ್ 19 ರಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಪತ್ರ ಬರೆದಿದ್ದಾರೆ. ಅರ್ಜಿಯಲ್ಲಿ ವರವರ ರಾವ್ ಮತ್ತು ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ಜಿ.ಎನ್. ಸಾಯಿಬಾಬ ಅವರಿಗೆ ವೈದ್ಯಕೀಯ ಚಿಕಿತ್ಸೆ ನೀಡಲು ಕೇಳಿಕೊಳ್ಳಲಾಗಿದೆ.

ಸಿಪಿಐ(ಎಂ), ಕಾಂಗ್ರೆಸ್, ಡಿಎಂಕೆ, ವಿಸಿಕೆ, ಸಿಪಿಐ ಮತ್ತು ಆರ್‌ಜೆಡಿ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಹದಿನಾಲ್ಕು ಸಂಸದರು, ಜೈಲುಗಳಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇವರಿಬ್ಬರಿಗೆ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಕೋರಿದ್ದಾರೆ.

ವರವರ ರಾವ್ ಅವರನ್ನು ನವೀ ಮುಂಬಯಿಯ ತಾಲೋಜ ಕೇಂದ್ರ ಕಾರಾಗೃಹದಲ್ಲಿ ಬಂಧಿಸಲಾಗಿದ್ದು, ಭೀಮಾ ಕೋರೆಗಾಂವ್ ಹಿಂಸಾಚಾರದಲ್ಲಿ ಭಾಗಿಯಾಗಿದ್ದಕ್ಕಾಗಿ ಹಾಗೂ ಪ್ರಧಾನಿ ಮೋದಿಯನ್ನು ಹತ್ಯೆ ನಡೆಸಲು ಸಂಚು ರೂಪಿಸಿದ್ದಾರೆ ಎಂದು ಆರೋಪಿಸಿ ಅವರನ್ನು ಆಗಸ್ಟ್ 28, 2018 ರಂದು ಬಂಧಿಸಲಾಯಿತು.

ಸಂಸದರು ತಮ್ಮ ಪತ್ರದಲ್ಲಿ, 81 ವರ್ಷ ವಯಸ್ಸಿನ ವರವರ ರಾವ್ ಪ್ರತಿದಿನ ವಾಂತಿ ಮಾಡಿಕೊಳ್ಳುತ್ತಿದ್ದಾರೆ, ಅವರ ಆರೋಗ್ಯ ಸರಿಯಿಲ್ಲ. ರಾವ್ ಹೃದಯ ರೋಗಿಯಾಗಿದ್ದರಿಂದ ಅವರ ಆರೋಗ್ಯದ ಮೇಲೆ ಹಾನಿಕಾರಕ ಪರಿಣಾಮ ಬೀರುವ ಎಲೆಕ್ಟ್ರೋಲೈಟ್ ಅಡಚಣೆಯನ್ನು ಅವರ ಆರೋಗ್ಯ ವರದಿಗಳು ಉಲ್ಲೇಖಿಸಿವೆ ಎಂದು ಸಂಸದರು ಉಲ್ಲೇಖಿಸಿದ್ದಾರೆ. ಅವನ ಕರುಳಿನ ಹುಣ್ಣುಗಳಿಗೆ ತುರ್ತು ಪರೀಕ್ಷೆಯ ಅಗತ್ಯವಿದ್ದು, ಆರು ತಿಂಗಳುಗಳಾಗಿಯೂ ಅದನ್ನು ನಡೆಸಲಾಗಿಲ್ಲ ಎಂದು ಪತ್ರದಲ್ಲಿ ಆತಂಕ ವ್ಯಕ್ತಪಡಿಸಲಾಗಿದೆ.

“ಅವರ ಆರೋಗ್ಯ ಇಂತಹ ದುಸ್ಥಿತಿಯಲ್ಲಿರುರುವುದರಿಂದ, ಅವರನ್ನು ಆಸ್ಪತ್ರೆಗೆ ವರ್ಗಾಯಿಸಲು ನಾವು ನಿಮ್ಮನ್ನು ಒತ್ತಾಯಿಸುತ್ತೇವೆ. ಜೈಲಿನಲ್ಲಿ ಪ್ರಸ್ತುತ ಒದಗಿಸಲಾದ ಆರೈಕೆ ಸ್ವೀಕಾರಾರ್ಹವಲ್ಲ. ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸುವ ಮೂಲಕ ಅಗತ್ಯ ಮತ್ತು ತುರ್ತು ವೈದ್ಯಕೀಯ ಚಿಕಿತ್ಸೆ ನೀಡುವಂತೆ ನಾವು ನಿಮ್ಮನ್ನು ವಿನಂತಿಸುತ್ತೇವೆ ”ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಪಿಆರ್ ನಟರಾಜನ್ (ಸಿಪಿಐ (ಎಂ), ಕೆಕೆ ರಾಗೇಶ್ (ಸಿಪಿಐ (ಎಂ)), ಕೆ ಸುಬ್ಬರಾಯಣ್ (ಸಿಪಿಐ), ಉತ್ತಮ ಕುಮಾರ್ ರೆಡ್ಡಿ (ಕಾಂಗ್ರೆಸ್), ಕೋಮತಿ ರೆಡ್ಡಿ ವೆಂಕಟ್ ರೆಡ್ಡಿ (ಕಾಂಗ್ರೆಸ್), ಮನೋಜ್ ಜಾ (ಆರ್‌ಜೆಡಿ), ಡಿ ರವಿಕುಮಾರ್ (ವಿಸಿಕೆ), ಥೋಲ್ ತಿರುಮಾವಾಲವನ್ (ವಿಸಿಕೆ), ಎ ರೇವಂತ್ ರೆಡ್ಡಿ (ಕಾಂಗ್ರೆಸ್), ಸುಮತಿ ತಮಿಳತಿ ತಂಗಪಾಂಡಿಯನ್ (ಡಿಎಂಕೆ), ತಿರುಚಿ ಶಿವ (ಡಿಎಂಕೆ), ಕನಿಮೋಜಿ (ಡಿಎಂಕೆ) ಮತ್ತು ಎಸ್ ವೆಂಕಟೇಶನ್ (ಸಿಪಿಐ) ) ಮೊದಲಾದ ಸಂಸದರು ಮಹಾರಾಷ್ಟ್ರ ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ.

90% ವಿಕಲಾಂಗತೆ ಹೊಂದಿರುವ ಡಾ. ಜಿ.ಎನ್. ಸಾಯಿಬಾಬ ಅವರ ಆರೋಗ್ಯ ಕೂಡಾ ದುರ್ಬಲವಾಗಿದ್ದು ಅವರಿಗೆ ಕೂಡಾ ಚಿಕಿತ್ಸೆಯನ್ನು ನೀಡುವಂತೆ ಕೇಳಿಕೊಳ್ಳಲು ಈ ಅವಕಾಶವನ್ನು ಬಳಸಿಕೊಳ್ಳುತ್ತಿದ್ದೇವೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಭೀಮಾ ಕೋರೆಗಾಂವ್ ಹಿಂಸಾಚಾರಕ್ಕೆ ಪ್ರಚೋಧಿಸಿದ್ದಾರೆಂದು ಬಂಧನಕ್ಕೊಳಗಾಗಿ ಜೈಲಿನಲ್ಲಿರುವ 11 ಮಾನವ ಹಕ್ಕುಗಳ ಕಾರ್ಯಕರ್ತರಲ್ಲಿ ಕವಿ ಮತ್ತು ಬರಹಗಾರ ವರವರ ರಾವ್ ಕೂಡಾ ಸೇರಿದ್ದಾರೆ. ಇದಲ್ಲದೆ ಸುಧಾ ಭರದ್ವಾಜ್, ಶೋಮಾ ಸೇನ್, ಆನಂದ್ ತೇಲ್ಟುಂಬ್ಡೆ, ಗೌತಮ್ ನವಲಖಾ, ಅರುಣ್ ಫೆರೀರಾ, ವೆರ್ನಾನ್ ಗೊನ್ಸಾಲ್ವೆಸ್, ಸುರೇಂದ್ರ ಗ್ಯಾಡ್ಲಿಂಗ್, ಮಹೇಶ್ ರೌತ್, ಸುಧೀರ್ ಧವಾಲೆ ಮತ್ತು ರೋನಾ ವಿಲ್ಸನ್ ಇತರರು ಕೂಡಾ ಈ ಪಟ್ಟಿಯಲ್ಲಿ ಸೇರಿದ್ದಾರೆ.

ಈ ಪತ್ರವಲ್ಲದೆ ಜೂನ್ 16 ರಂದು ಚಲನಚಿತ್ರ ನಟರಾದ ಸೌಮಿತ್ರ ಚಟರ್ಜಿ, ಅಡೂರ್‌ ಗೋಪಾಲಕೃಷ್ಣನ್, ನಸೀರುದ್ದೀನ್ ಷಾ ಮತ್ತು ಅಪರ್ಣ ಸೇನ್ ಸೇರಿದಂತೆ 500 ಗಣ್ಯರು ಬಂಧನನಕ್ಕೊಳಗಾದ ಸಾಮಾಜಿಕ ಕಾರ್ಯಕರ್ತರನ್ನು ಬಿಡುಗಡೆ ಮಾಡಬೇಕು ಎಂದು ಪತ್ರ ಬರೆಯಲಾಗಿತ್ತು.

ಅಲ್ಲದೆ ಮೇ 28 ರಂದು ವರವರ ರಾವ್ ಅವರನ್ನು ಸರ್ಕಾರಿ ನಿಯಂತ್ರಿತ ಜೆಜೆ ಆಸ್ಪತ್ರೆಗೆ ದಾಖಲಿಸಿದ ನಂತರ ಅವರ ಪತ್ನಿ ಮೇ 30 ರಂದು ಅವರನ್ನು ಜಾಮೀನಿನ ಮೇಲೆ ತಕ್ಷಣ ಬಿಡುಗಡೆ ಮಾಡಬೇಕು ಎಂದು ಬೇಡಿಕೆ ಇಟ್ಟಿದ್ದರು. ಆಸ್ಪತ್ರೆಯ ಮೂಲಗಳ ಪ್ರಕಾರ ರಾವ್ ಅವರು ತನಗೆ ತಲೆತಿರುಗುತ್ತಿದೆ ಎಂದು ಹೇಳಿದ್ದರು ಹಾಗೂ ಸ್ವಲ್ಪ ಸಮಯದ ವರೆಗೆ ಅವರು ಮೂರ್ಚೆ ಹೋಗಿದ್ದರು ಎನ್ನಲಾಗಿತ್ತು. ಆದರೂ ಅವರನ್ನು ಕೇವಲ ಮೂರು ದಿನಗಳಷ್ಟೇ ಇಡಲಾಗಿತ್ತು.


ಓದಿ: ಸಫೂರಾ ಝರ್ಗರ್‌ ಸೇರಿದಂತೆ ಸಾಮಾಜಿಕ ಕಾರ್ಯಕರ್ತರ ಬಿಡುಗಡೆಗೆ 500 ಗಣ್ಯರ ಪತ್ರ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...