Homeಮುಖಪುಟಕಟ್ಟೆಪುರಾಣ: ಮೋದಿಗೆ ಬುದ್ದಿಲ್ಲ, ಶಾಗೆ ತಲಿಲ್ಲ. ಅದ್ಕೆ ಇಂತ ಕಾನೂನು!

ಕಟ್ಟೆಪುರಾಣ: ಮೋದಿಗೆ ಬುದ್ದಿಲ್ಲ, ಶಾಗೆ ತಲಿಲ್ಲ. ಅದ್ಕೆ ಇಂತ ಕಾನೂನು!

- Advertisement -
- Advertisement -

ಉಗ್ರ ಚಿಂತಾಕ್ರಾಂತನಾಗಿ ಕುಳಿತಿದ್ದುದನ್ನು ಗಮನಿಸಿದ ಜುಮ್ಮಿ.

ಅದ್ಯಾಕ್ಲ ಹೆಂಡತಿ ಸತ್ತೋನಂಗೆ ತಲೆಮ್ಯಾಲೆ ಕೈ ಹೊತ್ತಗಂಡು ಕುಂತಿದ್ದಿ ಎಂದಳು.

ಹೇಳಿದ್ರೆ ನಿನಿಗೆ ಅರ್ಥಾಗದಿಲ್ಲ ಕಣೆ ಎಂದ.

ವಾಟಿಸ್ಸೆ ಬಂದ ಅವುನ್ನೇ ಕೇಳ್ತಿನಿ ಬುಡು.

ಗುಡಮಾನಿಂಗು ಕಣಕ್ಕ.

ಗೂಡೆ ಮಾರಮ್ಮನೂ ಬ್ಯಾಡ ಕ್ವಾಟೆ ಮಾರಮ್ಮನೂ ಬ್ಯಾಡ. ಈ ಉಗ್ರಿ ಊದಿಕಂಡು ಕುಂತವುನೆ. ಯಾಕ್ಲ ಅಂದ್ರೆ, ಹೇಳದ್ರೆ ನಿನಿಗೆ ಗೊತ್ತಾಗದಿಲ್ಲ ಅಂತನೆ ಅದೇನಾಗ್ಯದೆ ನೀನಾರ ಹೇಳ್ಳ ವಾಟಿಸ್ಸೆ.

ಏನಾಗ್ಯದೆ ಅಂತ ಇವತ್ತೇಳಿದ್ರೆ ಗೊತ್ತಾಗದಿಲ್ಲ ಕಣಕ್ಕ ಬಿಜೆಪಿಗಳು ಅಧಿಕಾರಕ್ಕೆ ಬಂದಾಗ್ಲೆ ಸುರುವಾಗ್ಯದೆ. ಈಗ ವರ್ಕು ಪಾಸ್ಟಾಗ್ಯದೆ ಅಷ್ಟೇ ಕಣಕ್ಕ.

ಅದೇನು ವರಕಲಾ.

ಅದೇನವ್ವ ಅಂದ್ರೆ ಬಿಜೆಪಿಗಳು ದೇಶನೆ ಸರ್ವನಾಶ ಮಾಡಕ್ಕೆ ವಂಟಿದ್ರಲ್ಲಕ್ಕ. ಈಗ ರೈತರನೇ ಮುಗಸೋ ಕಾನೂನು ತತ್ತಾ ಅವುರೆ.

ಅದೇನು ಅಂತ ಕಾನೂನು.

ಅದೇನವ್ವ ಅಂದ್ರೆ ರೈತೆಲ್ಲದೋರು ಭೂಮಿಕೊಳ್ಳಂಗಿರಲಿಲ್ಲ. ಈಗ ಬಂದೂ ನಮ್ಮ ಭೂಮಿ ಕೊಳ್ಳಬವುದಂತೆ ಅಂತ ಕಾನೂನು ಬತ್ತಾ ಅದೆ.

ರೈತರಲ್ಲದೊರು ಅಂದ್ರೆ ಅದ್ಯಾರ್ಲ.

ದೇಸದಲ್ಲಿ ಪ್ಯಾಗುಟ್ರಿ ಮಡಗಿರೊ ಸಾವುಕಾರ್ರ್‍ಅವುರೆ, ಮಾರವಾಡಿಗಳವುರೆ, ಐಎಎಸ್, ಐಪಿಎಸ್ ಅಧಿಕಾರಿಗಳವುರೆ, ಬಿಜೆಪಿಗಳವುರೆ. ಅವರಿಗ್ಯಲ್ಲ ಭೂಮಿ ಬೇಕಾದ್ರೆ ಬಂದು ಕೇಳಿದಷ್ಟು ದುಡ್ಡು ಕೊಟ್ಟು ತಗತರೆ.

ತಗಂಡೇನು ಮಾಡ್ಯರೂ.

ಗೆಣಸು ಬ್ಯಳಿತರೆ, ಕಡ್ಳೆಕಾಯಿ ಬ್ಯಳಿತರೆ, ರಾಗಿ ಬ್ಯಳಿತರೆ.

ಸರಿಯಾಗೇಳ್ಳ ಅಣಕ ವಡಿಬ್ಯಾಡ.

ಏನು ಮಾಡ್ತರೆ ಗೊತ್ತೇನಕ್ಕಾ. ಈ ಉಗ್ರಿ ನಾನು ನೀನು ಸೀರಪ್ಪನಂಥೋರು ಮಾರಿಕತ್ತೀವಿ ಅನ್ನು. ಟೋಟ್ಲು ೨೦ ಯಕರೆ ಆಯ್ತು ಅನ್ನು. ಅದಕ್ಯಲ್ಲ ತಂತಿಬೇಲಿ ಹಾಕ್ತನೆ. ಅಮ್ಯಾಲೆ ಬಂದು ಟೀಕ್ ಮರನೋ, ಸಾಗುವಾನಿ ಮರನೋ ನೆಟ್ಟು ಒಂದು ಪಾರಂ ಹೌಸ್ ಮಾಡಿ, ಒಬ್ಬ ವಾಚ್ ಮ್ಯಾನ್ ಇಟ್ಟು ವಂಟೋಯ್ತನೆ. ಇಲ್ಲ ಹಾಳು ಬುಡ್ತನೆ.

ಅಂಗೆ ಮಾಡ್ತರೇನ್ಲ.

ನಮ್ಮೂರಿಗೂ ಬೆಂಗಳೂರಿಗೂ ಕಾರಲ್ಲಿ ಒಂದೂವರೆಗಂಟೆ ಜರ್ನಿ. ಅಲ್ಲಿಂದ ಬಂದು ಇಲ್ಲಿ ಪಾರ್ಟಿ ಮಾಡಿಕಂಡು, ನಾಟಿಕೋಳಿ ತಿಂದು, ಯಾರಾದ್ರು ಲೇಡಿ ಸಿಕ್ಕಿದ್ರೆ ರಾತ್ರಿ ಅವುಳ ಜೊತೆ ಇದ್ದು, ವಂಟೋಯ್ತರೆ ಕಣಕ್ಕ.

ಥೂ ಅವುರ ಮನಿಯಾಳಾಗ ಅಂಥೋರ ಸೇರುಸಬಾರ್ದು ಕಂಡ್ಳ ಇಲ್ಲೀ.

ಅಂಗಂತ ಎಡೂರಪ್ಪನಿಗೇಳು.

ಅವುನ ಕಾಲಾಗ್ಲೆ ಅತ್ತಮುಂದಾಗ್ಯವೆ ಅವುನಿಗೇನೇಳ್ತಿಯೊ ಎಂದ ಉಗ್ರಿ ಸಿಟ್ಟಿನಿಂದ.

ಇದರಲ್ಲವುಂದೇನು ತೆಪ್ಪಿಲ್ಲ ಕಣೋ. ಮೋದಿ ಶಾಗಳು ಹೇಳಿದ್ದ ಮಾಡ್ತ ಅವುನೆ.

ಅವುರ್‍ಯಾಕ್ಲ ಅಂಗೆ ಮಾಡ್ತ ಅವುರೆ.

ಅವುರು ಮಾರವಾಡಿಗಳ ರಾಜ್ಯ ಗುಜರಾತಿಂದ ಬಂದೋರು ಕಣ್ಣಕ್ಕ. ಯಾವುದೇ ವಿಷಯ ತಗಂಡ್ರೂ ಮಾರವಾಡಿಗಳ ತರ ಲಾಭ-ನಷ್ಟ ನೋಡ್ತರೆ. ಅದ್ಕೆ ರೈತರು ಬೇಸಾಯದಲ್ಲಿ ನಷ್ಟ ಮಾಡಿಕತ್ತಾ ಅವುರೆ ಅಂದ್ರೇ, ಅಂಗರೆ ಮಾರಿಬುಡಿ, ಕೈತುಂಬಾ ದುಡ್ಡು ಸಿಗತದೆ ಅರಾಮಾಗಿರಿ ಅಂತರೆ.

ಅಲ್ಲಾ ಕಂಡ್ಳ, ಜಮೀನ ನಾವ್ಯಾವತ್ತು ಲಾಭ ನಷ್ಟದಲ್ಲಿ ನೋಡಿದ್ದವೀ. ಅದರ ಜ್ವತೆ ಬುದುಕ್ತಯಿದ್ದೀವಿ. ಬೇಜಾರಾದ್ರೆ ವಲ್ತಕ್ಕೋಯ್ತಿವಿ. ದನ ಮೇಸ್ತಿವಿ, ಯಮ್ಮೆ ಮೇಸ್ತಿವಿ, ಆಡುಕುರಿ ಮೇಸ್ತಿವಿ. ಅವುನ್ಯಲ್ಲ ಮೇಸಕ್ಕೆ ಜಮೀನು ಬ್ಯಾಡವೇ?

ಬೇಕವ್ವ. ಅದು ಮೋದಿಶಾಗೆ ಹೊಳಿಬೇಕಲ್ಲ. ಮೋದಿಗೆ ಬುದ್ದಿಲ್ಲ. ಶಾಗೆ ತಲಿಲ್ಲ. ಅದ್ಕೆ ಇಂತ ಮನಿಯಾಳ ಕಾನೂನು ತಂದು ಇಡೀ ದೇಶದ ರೈತರು ದಿಕ್ಕು ದೆಸೆಯಿಲ್ದೆ ನ್ಯಲೆ ಕಳಕಂಡು ಅಲಿಯಂಗೆ ಮಾಡ್ತ ಅವುರೆ.

ಇದ ತಡಿಯಕ್ಕಾಗದಿಲವೆ.

ತಡಿಬೇಕಾದ್ರೆ, ರೈತದು ಬೀದಿಗೆ ಬರಬೇಕು. ಚಳುವಳಿ ಮಾಡಬೇಕು. ಆದ್ರೆ ಕರೊನ ಬಂದು ಹಟಕಾಯಿಸಿಗಂಡದೆ. ಅಂಗಾಗಿ ಯಾರೂ ಬೀದಿಗ ಬರಂಗಿಲ್ಲ. ಅದ್ಕೆ, ಇದೇ ಸರಿಯಾದ ಟೈಮು ಅಂತ, ಬಿಜೆಪಿಗಳು ಯೋಚನೆ ಮಾಡಿ, ಎಪಿಎಂಸಿ ಕತೆ ಮುಗಿಸಿದ್ರು. ಈಗ ರೈತರ ಕತೆ ಮುಗುಸ್ತ ಅವುರೆ.

ಅಂಗಾದ್ರೆ ಗತಿಯೇನ್ಲಾ.

ಗತಿ ಇನ್ನೇನು, ಈಗಾಗ್ಲೆ ಬೆಂಗಳೂರಿಂದ ಕುಬೇರ್ರು ಬಂದು ಜಮೀನ ಹುಡುಕ್ತ ಇದ್ದರಂತೆ. ಇನ್ನುಮುಂದೆ ರೈತರೆಲ್ಲ ಹೋಗಿ ಕೃಷಿ ಕಾರ್ಮಿಕರಾಯ್ತರೆ, ಅಷ್ಟೇಯ.

ಅಯ್ಯೋ ಅವುರ ಮನಿಯಾಳಾಗ ಹೋಗು. ಇವುರ ಸೊಲ್ಲು ಯಾವತ್ತಡಗತದ್ಲ.

  • ಬಿ.ಚಂದ್ರೇಗೌಡ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...