Homeಮುಖಪುಟಕಟ್ಟೆಪುರಾಣ: ಮೋದಿಗೆ ಬುದ್ದಿಲ್ಲ, ಶಾಗೆ ತಲಿಲ್ಲ. ಅದ್ಕೆ ಇಂತ ಕಾನೂನು!

ಕಟ್ಟೆಪುರಾಣ: ಮೋದಿಗೆ ಬುದ್ದಿಲ್ಲ, ಶಾಗೆ ತಲಿಲ್ಲ. ಅದ್ಕೆ ಇಂತ ಕಾನೂನು!

- Advertisement -
- Advertisement -

ಉಗ್ರ ಚಿಂತಾಕ್ರಾಂತನಾಗಿ ಕುಳಿತಿದ್ದುದನ್ನು ಗಮನಿಸಿದ ಜುಮ್ಮಿ.

ಅದ್ಯಾಕ್ಲ ಹೆಂಡತಿ ಸತ್ತೋನಂಗೆ ತಲೆಮ್ಯಾಲೆ ಕೈ ಹೊತ್ತಗಂಡು ಕುಂತಿದ್ದಿ ಎಂದಳು.

ಹೇಳಿದ್ರೆ ನಿನಿಗೆ ಅರ್ಥಾಗದಿಲ್ಲ ಕಣೆ ಎಂದ.

ವಾಟಿಸ್ಸೆ ಬಂದ ಅವುನ್ನೇ ಕೇಳ್ತಿನಿ ಬುಡು.

ಗುಡಮಾನಿಂಗು ಕಣಕ್ಕ.

ಗೂಡೆ ಮಾರಮ್ಮನೂ ಬ್ಯಾಡ ಕ್ವಾಟೆ ಮಾರಮ್ಮನೂ ಬ್ಯಾಡ. ಈ ಉಗ್ರಿ ಊದಿಕಂಡು ಕುಂತವುನೆ. ಯಾಕ್ಲ ಅಂದ್ರೆ, ಹೇಳದ್ರೆ ನಿನಿಗೆ ಗೊತ್ತಾಗದಿಲ್ಲ ಅಂತನೆ ಅದೇನಾಗ್ಯದೆ ನೀನಾರ ಹೇಳ್ಳ ವಾಟಿಸ್ಸೆ.

ಏನಾಗ್ಯದೆ ಅಂತ ಇವತ್ತೇಳಿದ್ರೆ ಗೊತ್ತಾಗದಿಲ್ಲ ಕಣಕ್ಕ ಬಿಜೆಪಿಗಳು ಅಧಿಕಾರಕ್ಕೆ ಬಂದಾಗ್ಲೆ ಸುರುವಾಗ್ಯದೆ. ಈಗ ವರ್ಕು ಪಾಸ್ಟಾಗ್ಯದೆ ಅಷ್ಟೇ ಕಣಕ್ಕ.

ಅದೇನು ವರಕಲಾ.

ಅದೇನವ್ವ ಅಂದ್ರೆ ಬಿಜೆಪಿಗಳು ದೇಶನೆ ಸರ್ವನಾಶ ಮಾಡಕ್ಕೆ ವಂಟಿದ್ರಲ್ಲಕ್ಕ. ಈಗ ರೈತರನೇ ಮುಗಸೋ ಕಾನೂನು ತತ್ತಾ ಅವುರೆ.

ಅದೇನು ಅಂತ ಕಾನೂನು.

ಅದೇನವ್ವ ಅಂದ್ರೆ ರೈತೆಲ್ಲದೋರು ಭೂಮಿಕೊಳ್ಳಂಗಿರಲಿಲ್ಲ. ಈಗ ಬಂದೂ ನಮ್ಮ ಭೂಮಿ ಕೊಳ್ಳಬವುದಂತೆ ಅಂತ ಕಾನೂನು ಬತ್ತಾ ಅದೆ.

ರೈತರಲ್ಲದೊರು ಅಂದ್ರೆ ಅದ್ಯಾರ್ಲ.

ದೇಸದಲ್ಲಿ ಪ್ಯಾಗುಟ್ರಿ ಮಡಗಿರೊ ಸಾವುಕಾರ್ರ್‍ಅವುರೆ, ಮಾರವಾಡಿಗಳವುರೆ, ಐಎಎಸ್, ಐಪಿಎಸ್ ಅಧಿಕಾರಿಗಳವುರೆ, ಬಿಜೆಪಿಗಳವುರೆ. ಅವರಿಗ್ಯಲ್ಲ ಭೂಮಿ ಬೇಕಾದ್ರೆ ಬಂದು ಕೇಳಿದಷ್ಟು ದುಡ್ಡು ಕೊಟ್ಟು ತಗತರೆ.

ತಗಂಡೇನು ಮಾಡ್ಯರೂ.

ಗೆಣಸು ಬ್ಯಳಿತರೆ, ಕಡ್ಳೆಕಾಯಿ ಬ್ಯಳಿತರೆ, ರಾಗಿ ಬ್ಯಳಿತರೆ.

ಸರಿಯಾಗೇಳ್ಳ ಅಣಕ ವಡಿಬ್ಯಾಡ.

ಏನು ಮಾಡ್ತರೆ ಗೊತ್ತೇನಕ್ಕಾ. ಈ ಉಗ್ರಿ ನಾನು ನೀನು ಸೀರಪ್ಪನಂಥೋರು ಮಾರಿಕತ್ತೀವಿ ಅನ್ನು. ಟೋಟ್ಲು ೨೦ ಯಕರೆ ಆಯ್ತು ಅನ್ನು. ಅದಕ್ಯಲ್ಲ ತಂತಿಬೇಲಿ ಹಾಕ್ತನೆ. ಅಮ್ಯಾಲೆ ಬಂದು ಟೀಕ್ ಮರನೋ, ಸಾಗುವಾನಿ ಮರನೋ ನೆಟ್ಟು ಒಂದು ಪಾರಂ ಹೌಸ್ ಮಾಡಿ, ಒಬ್ಬ ವಾಚ್ ಮ್ಯಾನ್ ಇಟ್ಟು ವಂಟೋಯ್ತನೆ. ಇಲ್ಲ ಹಾಳು ಬುಡ್ತನೆ.

ಅಂಗೆ ಮಾಡ್ತರೇನ್ಲ.

ನಮ್ಮೂರಿಗೂ ಬೆಂಗಳೂರಿಗೂ ಕಾರಲ್ಲಿ ಒಂದೂವರೆಗಂಟೆ ಜರ್ನಿ. ಅಲ್ಲಿಂದ ಬಂದು ಇಲ್ಲಿ ಪಾರ್ಟಿ ಮಾಡಿಕಂಡು, ನಾಟಿಕೋಳಿ ತಿಂದು, ಯಾರಾದ್ರು ಲೇಡಿ ಸಿಕ್ಕಿದ್ರೆ ರಾತ್ರಿ ಅವುಳ ಜೊತೆ ಇದ್ದು, ವಂಟೋಯ್ತರೆ ಕಣಕ್ಕ.

ಥೂ ಅವುರ ಮನಿಯಾಳಾಗ ಅಂಥೋರ ಸೇರುಸಬಾರ್ದು ಕಂಡ್ಳ ಇಲ್ಲೀ.

ಅಂಗಂತ ಎಡೂರಪ್ಪನಿಗೇಳು.

ಅವುನ ಕಾಲಾಗ್ಲೆ ಅತ್ತಮುಂದಾಗ್ಯವೆ ಅವುನಿಗೇನೇಳ್ತಿಯೊ ಎಂದ ಉಗ್ರಿ ಸಿಟ್ಟಿನಿಂದ.

ಇದರಲ್ಲವುಂದೇನು ತೆಪ್ಪಿಲ್ಲ ಕಣೋ. ಮೋದಿ ಶಾಗಳು ಹೇಳಿದ್ದ ಮಾಡ್ತ ಅವುನೆ.

ಅವುರ್‍ಯಾಕ್ಲ ಅಂಗೆ ಮಾಡ್ತ ಅವುರೆ.

ಅವುರು ಮಾರವಾಡಿಗಳ ರಾಜ್ಯ ಗುಜರಾತಿಂದ ಬಂದೋರು ಕಣ್ಣಕ್ಕ. ಯಾವುದೇ ವಿಷಯ ತಗಂಡ್ರೂ ಮಾರವಾಡಿಗಳ ತರ ಲಾಭ-ನಷ್ಟ ನೋಡ್ತರೆ. ಅದ್ಕೆ ರೈತರು ಬೇಸಾಯದಲ್ಲಿ ನಷ್ಟ ಮಾಡಿಕತ್ತಾ ಅವುರೆ ಅಂದ್ರೇ, ಅಂಗರೆ ಮಾರಿಬುಡಿ, ಕೈತುಂಬಾ ದುಡ್ಡು ಸಿಗತದೆ ಅರಾಮಾಗಿರಿ ಅಂತರೆ.

ಅಲ್ಲಾ ಕಂಡ್ಳ, ಜಮೀನ ನಾವ್ಯಾವತ್ತು ಲಾಭ ನಷ್ಟದಲ್ಲಿ ನೋಡಿದ್ದವೀ. ಅದರ ಜ್ವತೆ ಬುದುಕ್ತಯಿದ್ದೀವಿ. ಬೇಜಾರಾದ್ರೆ ವಲ್ತಕ್ಕೋಯ್ತಿವಿ. ದನ ಮೇಸ್ತಿವಿ, ಯಮ್ಮೆ ಮೇಸ್ತಿವಿ, ಆಡುಕುರಿ ಮೇಸ್ತಿವಿ. ಅವುನ್ಯಲ್ಲ ಮೇಸಕ್ಕೆ ಜಮೀನು ಬ್ಯಾಡವೇ?

ಬೇಕವ್ವ. ಅದು ಮೋದಿಶಾಗೆ ಹೊಳಿಬೇಕಲ್ಲ. ಮೋದಿಗೆ ಬುದ್ದಿಲ್ಲ. ಶಾಗೆ ತಲಿಲ್ಲ. ಅದ್ಕೆ ಇಂತ ಮನಿಯಾಳ ಕಾನೂನು ತಂದು ಇಡೀ ದೇಶದ ರೈತರು ದಿಕ್ಕು ದೆಸೆಯಿಲ್ದೆ ನ್ಯಲೆ ಕಳಕಂಡು ಅಲಿಯಂಗೆ ಮಾಡ್ತ ಅವುರೆ.

ಇದ ತಡಿಯಕ್ಕಾಗದಿಲವೆ.

ತಡಿಬೇಕಾದ್ರೆ, ರೈತದು ಬೀದಿಗೆ ಬರಬೇಕು. ಚಳುವಳಿ ಮಾಡಬೇಕು. ಆದ್ರೆ ಕರೊನ ಬಂದು ಹಟಕಾಯಿಸಿಗಂಡದೆ. ಅಂಗಾಗಿ ಯಾರೂ ಬೀದಿಗ ಬರಂಗಿಲ್ಲ. ಅದ್ಕೆ, ಇದೇ ಸರಿಯಾದ ಟೈಮು ಅಂತ, ಬಿಜೆಪಿಗಳು ಯೋಚನೆ ಮಾಡಿ, ಎಪಿಎಂಸಿ ಕತೆ ಮುಗಿಸಿದ್ರು. ಈಗ ರೈತರ ಕತೆ ಮುಗುಸ್ತ ಅವುರೆ.

ಅಂಗಾದ್ರೆ ಗತಿಯೇನ್ಲಾ.

ಗತಿ ಇನ್ನೇನು, ಈಗಾಗ್ಲೆ ಬೆಂಗಳೂರಿಂದ ಕುಬೇರ್ರು ಬಂದು ಜಮೀನ ಹುಡುಕ್ತ ಇದ್ದರಂತೆ. ಇನ್ನುಮುಂದೆ ರೈತರೆಲ್ಲ ಹೋಗಿ ಕೃಷಿ ಕಾರ್ಮಿಕರಾಯ್ತರೆ, ಅಷ್ಟೇಯ.

ಅಯ್ಯೋ ಅವುರ ಮನಿಯಾಳಾಗ ಹೋಗು. ಇವುರ ಸೊಲ್ಲು ಯಾವತ್ತಡಗತದ್ಲ.

  • ಬಿ.ಚಂದ್ರೇಗೌಡ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...