Homeಮುಖಪುಟಲಾಕ್‌ಡೌನ್‌ನಿಂದಾಗಿ ಮಕ್ಕಳಿಗೆ ಸಿಗುತ್ತಿಲ್ಲ ಪೌಷ್ಠಿಕ ಆಹಾರ: ಅಂಗನವಾಡಿ, ಬಿಸಿಯೂಟ ನೌಕರರ ಗೋಳು ಕೇಳುವವರಿಲ್ಲ

ಲಾಕ್‌ಡೌನ್‌ನಿಂದಾಗಿ ಮಕ್ಕಳಿಗೆ ಸಿಗುತ್ತಿಲ್ಲ ಪೌಷ್ಠಿಕ ಆಹಾರ: ಅಂಗನವಾಡಿ, ಬಿಸಿಯೂಟ ನೌಕರರ ಗೋಳು ಕೇಳುವವರಿಲ್ಲ

- Advertisement -
- Advertisement -

ಮಾರ್ಚ್ 24  ರಂದು ಭಾರತದಾದ್ಯಂತ ಘೋಷಿಸಲ್ಪಟ್ಟ ಯಾವುದೇ ಪೂರ್ವ ನಿರ್ಧರಿತವಲ್ಲದ ಲಾಕ್‌ಡೌನ್‌ನಿಂದಾಗಿ, ವಿಶ್ವದ ಎರಡು ದೊಡ್ಡ ಮಕ್ಕಳ ಪೋಷಣೆ ಕಾರ್ಯಕ್ರಮಗಳಾದ ಇಂಟಿಗ್ರೇಟೆಡ್ ಚೈಲ್ಡ್ ಡೆವಲಪ್ಮೆಂಟ್ ಸ್ಕೀಮ್(ಐಸಿಡಿಎಸ್) ಮತ್ತು ವಿಡ್‌ ಡೆ ಮೀಲ್ (ಅಕ್ಷರ ದಾಸೋಹ) ದಂತಹ ಕಾರ್ಯಕ್ರಮವು ಮಾರ್ಚ್ ಮತ್ತು ಏಪ್ರಿಲ್ ತಿಂಗಳಲ್ಲಿ ತೀವ್ರ ಹಿನ್ನಡೆಯನ್ನು ಅನುಭವಿಸಿವೆ.

ಪ್ರಸ್ತುತ 1 ರಿಂದ 8 ತರಗತಿಗಳಲ್ಲಿ ಕಲಿಯುತ್ತಿರುವ ಅಂದಾಜು 12 ಕೋಟಿ ಮಕ್ಕಳಿಗೆ ಆಹಾರವನ್ನು ನೀಡುತ್ತಿರುವ ಮಧ್ಯಾಹ್ನದ ಊಟದ ಕಾರ್ಯಕ್ರಮದ ಆಹಾರ ಧಾನ್ಯಗಳು ಲಾಕ್‌ಡೌನ್‌ನಿಂದಾಗಿ 335 ಟನ್‌ಗಳಿಂದ ಕೇವಲ 109 ಟನ್‌ಗಳಿಗೆ ಕುಸಿದಿದೆ. ಇದು ಕಳೆದ ವರ್ಷ ಇದೇ ಅವಧಿಗಿಂತ ಮೂರನೇ ಒಂದು ಭಾಗದಷ್ಟು ಕಡಿಮೆಯಾಗಿದೆ.

ಐಸಿಡಿಎಸ್ ಅಡಿಯಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ನಡೆಸುತ್ತಿರುವ ಪೌಷ್ಠಿಕಾಂಶ ಕಾರ್ಯಕ್ರಮದ ಆಹಾರ ಧಾನ್ಯದ ಸೇವನೆಯು ಕಳೆದ ವರ್ಷ ಮಾರ್ಚ್ ಮತ್ತು ಏಪ್ರಿಲ್ 238,000 ಟನ್‌ಗಳಿದಿದ್ದು, ಈ ವರ್ಷ 97,000 ಟನ್‌ಗಳಿಗೆ ಇಳಿದಿದೆ. ಈ ಅಂಗನವಾಡಿ ಕೇಂದ್ರಗಳು 0-6 ವರ್ಷದೊಳಗಿನ ಸುಮಾರು 14 ಕೋಟಿ ಮಕ್ಕಳಿಗೆ ಆಹಾರವನ್ನು ನೀಡುತ್ತವೆ ಎಂದು ಅಂದಾಜಿಸಲಾಗಿದೆ.

ಅಷ್ಟೇ ಅಲ್ಲದೆ, ಮಧ್ಯಾಹ್ನ ಊಟವು ಗರ್ಭಿಣಿಯರಿಗೆ, ಹಾಲುಣಿಸುವ ತಾಯಂದಿರಿಗೆ ಹಾಗೂ ಹದಿಹರೆಯದ ಹುಡುಗಿಯರಿಗೆ ಪೂರಕ ಪೌಷ್ಠಿಕಾಂಶವನ್ನು ಒದಗಿಸುತ್ತದೆ.

ಈ ಮಾಹಿತಿಯೂ ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯ ಮಾಸಿಕ ಬುಲೆಟಿನ್‌ ನಲ್ಲಿ ಕಾಣಬಹುದಾಗಿದೆ.

ರಾಷ್ಟ್ರೀಯ ಕುಟುಂಬ ಮತ್ತು ಆರೋಗ್ಯ ಸಮೀಕ್ಷೆಯಲ್ಲಿ (ಎನ್‌ಎಫ್‌ಹೆಚ್‌ಎಸ್) ವರದಿಯಾದಂತೆ, ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನವರಲ್ಲಿ ಮೂರನೇ ಒಂದು ಭಾಗದಷ್ಟು ಜನರು ಕಡಿಮೆ ತೂಕ ಹೊಂದಿದ್ದಾರೆ ಮತ್ತು ಅವರಲ್ಲಿ ಅರ್ಧಕ್ಕಿಂತ ಹೆಚ್ಚು ಜನರು ರಕ್ತಹೀನತೆಯಿಂದ ಬಳಲುತ್ತಿದ್ದಾರೆ.

ಪ್ರಸ್ತುತ ಮಕ್ಕಳಿಗೆ ಪೌಷ್ಠಿಕಾಂಶ ಆಹಾರ ಸಿಗುತ್ತಿಲ್ಲವಾದ್ದರಿಂದ ಭವಿಷ್ಯದಲ್ಲಿ ಮಾನಸಿಕ ಮತ್ತು ದೈಹಿಕ ಬೆಳವಣಿಗೆಗೆ ಬಹಳ ಗಂಭೀರ ಪರಿಣಾಮಗಳನ್ನು ಉಂಟುಮಾಡುತ್ತದೆ ಎನ್ನಲಾಗಿದೆ.

ಯಾಕೆ ಹೀಗಾಯಿತು?

ಯಾವುದೆ ಪೂರ್ವನಿರ್ಧರಿವಲ್ಲದೆ ದೇಶದಾದ್ಯಂತ ಘೋಷಿಸಲಾದ ಲಾಕ್‌ಡೌನ್‌ನಿಂದಾಗಿ ಈ ಮಕ್ಕಳ ಕಾರ್ಯಕ್ರಮಗಳಿಗಾಗಿ ಯೋಜಿಸಿದ್ದ ಆಹಾರ ಧಾನ್ಯಗಳು ರೈಲ್ವೇ ಹಾಗೂ ರಸ್ತೆ ಮೂಲಕ ಗೊತ್ತು ಪಡಿಸಿದ ಸ್ಥಳಗಳಿಗೆ ಸಾಗಿಸಲು ಸಾಧ್ಯವಾಗಲಿಲ್ಲ. ಅಲ್ಲದೆ ಈ ಕಾರ್ಯಕ್ರಮಗಳನ್ನು ಹೇಗೆ ಜಾರಿಗೆ ತರಬೇಕು ಎಂಬುದರ ಕುರಿತು ಕೇಂದ್ರ ಸರ್ಕಾರವು ಯಾವುದೇ ಸ್ಪಷ್ಟ ನಿರ್ದೇಶನಗಳನ್ನು ನೀಡಿಲ್ಲ, ಇದರಿಂದಾಗಿ ನೌಕರರು ಮತ್ತು ಲಕ್ಷಾಂತರ ಮಕ್ಕಳು ತತ್ತರಿಸಿದ್ದಾರೆ.

ಅಷ್ಟೇ ಅಲ್ಲದೆ, ಈ ಎರಡು ದೊಡ್ಡ ಕಾರ್ಯಕ್ರಮಗಳಲ್ಲಿ ಕಾರ್ಮಿಕರಾಗಿ ದುಡಿಯುತ್ತಿರುವ 25 ಲಕ್ಷಕ್ಕೂ ಹೆಚ್ಚು ಅಂಗನವಾಡಿ ಕಾರ್ಮಿಕರು ಮತ್ತು ಸಹಾಯಕಿಯರು ಹಾಗೂ 29 ಲಕ್ಷಕ್ಕೂ ಹೆಚ್ಚು ಅಡುಗೆಯವರು / ಸಹಾಯಕರು ಅಕ್ಷರಶಃ ನಿರ್ಲಕ್ಷ್ಯಕ್ಕೆ ಒಳಗಾಗಿದ್ದಾರೆ.

ಅವರಲ್ಲಿ ಹೆಚ್ಚಿನವರು ಸಾಂಕ್ರಾಮಿಕ ಸಂಬಂಧಿತ ಕಾರ್ಯಗಳಲ್ಲಿ ರಕ್ಷಣಾತ್ಮಕ ಸಾಧನಗಳಿಲ್ಲದೆ ಕೆಲಸ ಮಾಡಿದ್ದಾರೆ. ಅನೇಕರು ತಮಗೆ ಸಿಗುವ ಅಲ್ಪ ವೇತನವನ್ನು ಪಡೆದಿಲ್ಲ ಹಾಗೂ ಈ ಕಠಿಣ ಪರಿಸ್ಥಿತಿಗಳಲ್ಲಿ ಅವರ  ಬದುಕು ತುಂಬಾ ಕಷ್ಟಕರವಾಗಿದೆ.


ಓದಿ: ಹೆಸರು, ವಿಳಾಸ ಏನೂ ಇಲ್ಲದೆ 1.25 ಲಕ್ಷ ವಲಸೆ ಕಟ್ಟಡ ಕಾರ್ಮಿಕರಿಗೆ ತಲಾ 5,000 ರೂ ಹಂಚಿದ ಕರ್ನಾಟಕ ಸರ್ಕಾರ!: ಹೇಗೆ?


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...