Homeಕರ್ನಾಟಕಕೊರೊನಾ ಕಾಲದಲ್ಲಿಯೂ ಬಡ್ಡಿಗೆ ಬಡ್ಡಿ ಸೇರಿಸಿ ಹಣ ವಸೂಲಿ: ಮುತ್ತೂಟ್ ಫೈನಾನ್ಸ್‌ನಿಂದ ಗ್ರಾಹಕರಿಗೆ ಕಿರುಕುಳ ಆರೋಪ

ಕೊರೊನಾ ಕಾಲದಲ್ಲಿಯೂ ಬಡ್ಡಿಗೆ ಬಡ್ಡಿ ಸೇರಿಸಿ ಹಣ ವಸೂಲಿ: ಮುತ್ತೂಟ್ ಫೈನಾನ್ಸ್‌ನಿಂದ ಗ್ರಾಹಕರಿಗೆ ಕಿರುಕುಳ ಆರೋಪ

- Advertisement -
- Advertisement -

ಕೊರೊನಾ ಸಂಕಷ್ಟದ ಕಾಲದಲ್ಲೂ ಮುತ್ತೂಟ್ ಫೈನಾನ್ಸ್ ಗ್ರಾಹಕರಿಂದ ಬಡ್ಡಿಗೆ ಬಡ್ಡಿ ಸೇರಿಸಿ ವಸೂಲಿಯಲ್ಲಿ ತೊಡಗಿದೆ. ಜನ ಸಂಕಷ್ಟದಲ್ಲಿದ್ದು ಸೆಪ್ಟೆಂಬರ್ ತಿಂಗಳವರೆಗೆ ಕಂತುಗಳನ್ನು ಕಟ್ಟಬಾರದು ಎಂದು ಆರ್.ಬಿ.ಐ  ಸೂಚನೆ ನೀಡಿರುವ ನಡುವೆಯೂ ಮುತ್ತೂಟ್ ಫೈನಾನ್ಸ್ ಸಾಲ ವಸೂಲಿಗೆ ಕಿರುಕುಳ ನೀಡುತ್ತಿದೆ ಎಂದು ಗ್ರಾಹಕರು ಆರೋಪಿಸಿದ್ದಾರೆ.

ಈಗ ಕೊರೊನಾ ಲಾಕ್ ಡೌನ್ ಸಡಿಲಿಕೆಯಾಗಿದೆ ಆದರೂ ಸಾಲದ ಕಂತುಗಳನ್ನು ಗ್ರಾಹಕರು ಸ್ವಯಂಪ್ರೇರಿತರಾಗಿ ಕಟ್ಟಬಹುದೇ ಹೊರತು ಯಾವುದೇ ಬ್ಯಾಂಕ್, ಸಹಕಾರಿ ಬ್ಯಾಂಕುಗಳು ಮತ್ತು ಪೈನಾನ್ಸ್ ಗಳು ಸಾಲವನ್ನು ಬಲವಂತವಾಗಿ ವಸೂಲಿ ಮಾಡುವಂತಿಲ್ಲ. ಇದು ಆರ್.ಬಿ.ಐ ನಿಯಮ. ಆದರು ಆರ್.ಬಿ.ಐ ಸೂಚನೆಯನ್ನು ಮುತ್ತೂಟ್ ಫೈನಾನ್ಸ್ ಉಲ್ಲಂಘಿಸಿ ಗ್ರಾಹಕರಿಂದ ಡಬಲ್ ಬಡ್ಡಿ ವಸೂಲಿ ಮಾಡುತ್ತಿದೆ.

ಮುತ್ತೂಟ್ ಫೈನಾನ್ಸ್ ನಿಂದ ಸಾವಿರಗಳಿಂದ ಹಿಡಿದು ಲಕ್ಷ ರೂಗಳವರೆಗೆ ಚಿನ್ನಾಭರಣಗಳ ಮೇಲೆ ಗ್ರಾಹಕರು ಸಾಲ ತೆಗೆದುಕೊಂಡಿದ್ದಾರೆ. ಹೀಗಾಗಿ ಒಂದು ಲಕ್ಷ ಸಾಲ ಪಡೆದಿದ್ದರೆ ಈಗ ಮುತ್ತೂಟ್ ಫೈನಾನ್ಸ್ 2 ಲಕ್ಷ ರೂ ವಸೂಲಿ ಮಾಡುತ್ತಿದೆ ಎಂದು ನೊಂದ ಗ್ರಾಹಕರು ಆರೋಪಿಸಿದ್ದು ಖಾಸಗಿ ಫೈನಾನ್ಸ್ ಗಳ ಕಿರುಕುಳಕ್ಕೆ ಸ್ಪಷ್ಟ ನಿದರ್ಶನವಾಗಿದೆ.

ತುಮಕೂರಿನ ಕಾಲ್ ಟ್ಯಾಕ್ಸ್ ಸಮೀಪ ಗುಬ್ಬಿ ರಸ್ತೆಯಲ್ಲಿ ಮುತ್ತೋಟ್ ಫೈನಾನ್ಸ್ ಶಾಖೆ ಇದೆ. ಇದರಲ್ಲಿ ಸುಮಾರು 500 ಮಂದಿ ಗ್ರಾಹಕರು ಚಿನ್ನದ ಮೇಲೆ ಸಾಲ ಪಡೆದಿದ್ದಾರೆ. ಎಲ್ಲರಿಗೂ ನೋಟಿಸ್ ನೀಡಿರುವ ಮುತ್ತೋಟ್ ಫೈನಾನ್ಸ್ ಸಾಲ ನೀಡುವಂತೆ ಕಿರುಕುಳ ನೀಡಲು ಆರಂಭಿಸಿದ್ದು ಗ್ರಾಹಕರು ಇಕ್ಕಟ್ಟಿಗೆ ಸಿಲುಕು ವಂತೆ ಮಾಢಿದೆ.

ಗ್ರಾಹಕರಿಗೆ ಶಾಪವಾದ ಮುತ್ತೂಟ್ ಫೈನಾನ್ಸ್

ಕೊರೊನಾ ಕಾಲದಲ್ಲಿಯೂ ಬಡ್ಡಿಗೆ ಬಡ್ಡಿ ಸೇರಿಸಿ ಹಣ ವಸೂಲಿ: ‌ನಿಂದ ಗ್ರಾಹಕರಿಗೆ ಕಿರುಕುಳ ಆರೋಪ. ನಾನುಗೌರಿ.ಕಾಂ ಜೊತೆ ಮಾಹಿತಿ ಹಂಚಿಕೊಂಡ ಗ್ರಾಹಕ ರವಿಕುಮಾರ್..

Posted by Naanu Gauri on Sunday, June 21, 2020

ಗ್ರಾಹಕ ರವಿಕುಮಾರ್ ನಾನುಗೌರಿ.ಕಾಂ ಜೊತೆ ಮಾಹಿತಿ ಹಂಚಿಕೊಂಡರು. ನಾನು ಒಡವೆ ಇಟ್ಟು 50 ಸಾವಿರ ಸಾಲ ಪಡೆದಿದ್ದೇನೆ. ಪ್ರತಿ ತಿಂಗಳು 500 ರೂಪಾಯಿ ಬಡ್ಡಿ ಬರುತ್ತದೆ. ಕೊರೊನಾ ಸಂಕಷ್ಟದ ಕಾರಣಕ್ಕೆ ಕಳೆದ ಮೂರು ತಿಂಗಳಿಂದ ಬಡ್ಡಿ ಕಟ್ಟಿಲ್ಲ. ಈಗ ಮೂರು ತಿಂಗಳಿಗೆ 1500 ರೂ ಬಡ್ಡಿ ಬಂದಿದೆ. ಮುತ್ತೂಟ್ ಫೈನಾನ್ಸ್ ಕಚೇರಿಗೆ ಹೋಗಿ ಕೇಳಿದರೆ 3800 ರೂ ಬಡ್ಡಿ ಕಟ್ಟಬೇಕು ಎಂದು ಹೇಳುತ್ತಿದ್ದಾರೆ. ಯಾಕೆ ಎರಡುಪಟ್ಟು ಬಡ್ಡಿ ಹಾಕಿದ್ದೀರ ಅಂದ್ರ ಮ್ಯಾನೇಜರ್ ಕೇಳಿ ಅನ್ನುತ್ತಾರೆ. ನಾನು ಮೂರು ತಿಂಗಳ 1500 ರೂ ಬಡ್ಡಿಯನ್ನು ಕಟ್ಟುತ್ತೇನೆ. ಬಡ್ಡಿ ಮೇಲಿನ ಬಡ್ಡಿಯನ್ನು ಕಟ್ಟಲಾರೆ ಎಂದು ನೊಂದು ನುಡಿದರು.

ಕೊರೊನಾ ಬಂದು ಜನರನ್ನು ಕಂಗೆಡಿಸಿದೆ. ಯಾವುದೇ ವ್ಯಾಪಾರವಿಲ್ಲ. ನಾನು ಬೀದಿಬದಿ ವ್ಯಾಪಾರಿ. ಕಳೆದ ಮೂರು ತಿಂಗಳಿಂದ ವ್ಯಾಪಾರ ನಡೆಸಲು ಆಗಿಲ್ಲ. ಈಗ ಲಾಕ್ ಡೌನ್ ಸಡಿಲಿಕೆಯಾಗಿದೆ. ವ್ಯಾಪಾರ ನಡೆಯುತ್ತಿಲ್ಲ. ಮನೆ ಬಾಡಿಗೆ ಕಟ್ಟಲು ಸಾಧ್ಯವಾಗುತ್ತಿಲ್ಲ. ಇದರ ನಡುವೆ ಫೈನಾನ್ಸ್ ನವರು ಸಾಲ ನೀಡುವಂತೆ ಕಿರುಕುಳ ನೀಡುತ್ತಿದ್ದಾರೆ. ಕೈಗೆ ಕೆಲವಿಲ್ಲ. ಜೇಬಿನಲ್ಲಿ ಹಣವಿಲ್ಲ. ಎಲ್ಲಿಂದ ತಂದು ಕಟ್ಟುವುದು. ಸೆಪ್ಟಂಬರ್ ವರೆಗೆ ಕಂತು ಕಟ್ಟದಿದ್ದರೂ ನಡೆಯುತ್ತೆ ಎಂದು ಹೇಳಲಾಗುತ್ತಿದೆ. ಇಲ್ಲಿ ನೋಡಿದರೆ ಮೂರು ತಿಂಗಳ ಬಡ್ಡಿಯನ್ನು ಒಂದೇ ಬಾರಿಗೆ ಕಟ್ಟಬೇಕೆಂದರೆ ಹೇಗೆ ಸಾಧ್ಯ ಎನ್ನುತ್ತಾರೆ ಚಂದ್ರಪ್ಪ.

ಗ್ರಾಹಕರು ಸ್ವಯಂ ಪ್ರೇರಿತರಾಗಿ ಬಡ್ಡಿ ಕಟ್ಟಲು ಮುಂದಾದರೂ ಈಗ ತೊಂದರೆ ಅನುಭವಿಸುವಂತಹ ಪರಿಸ್ಥಿತಿ ಉದ್ಭವಿಸಿದೆ. ಎರಡು ಪಟ್ಟು ಬಡ್ಡಿ ಕಟ್ಟಲು ಸಾಧ್ಯವಾಗದೆ ಗ್ರಾಹಕರು ತಲೆ ಮೇಲೆ ಕೈಹೊತ್ತು ಕುಳಿತುಕೊಳ್ಳುವಂತಾಗಿದೆ. ಬಡ್ಡಿ ಕಟ್ಟದವರಿಗೆ ನೋಟೀಸ್ ನೀಡಲಾಗುತ್ತಿದೆ. ಇದರಿಂದ ಗ್ರಾಹಕರು ಸಂಕಟದಲ್ಲಿ ಮುಳುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಮತ್ತೊಂದು ಕಡೆ ಸ್ತ್ರೀಶಕ್ತಿ ಸಂಘಗಳು ಮತ್ತು ಮಹಿಳಾ ಸ್ವಸಹಾಯ ಸಂಘಗಳು ಮೈಕ್ರೋ ಫೈನಾನ್ಸ್ ನಿಂದ ಸಾಲ ತೆಗೆದುಕೊಂಡಿದ್ದು, ಸಾಲಗಾರರು ನಿತ್ಯವು ಮನೆ ಬಾಗಿಲಿಗೆ ಬಂದು ಸಾಲ ಕಟ್ಟುವಂತೆ ತೊಂದರೆ ನೀಡುತ್ತಿದ್ದಾರೆ ಎಂದು ಹೆಸರು ಹೇಳಲು ಇಚ್ಚಿಸದ ಮಹಿಳೆಯೊಬ್ಬರು ಆರೋಪಿಸಿದ್ದಾರೆ.

ಮುತ್ತೋಟ್ ಫೈನಾನ್ಸ್ ಮತ್ತು ಮೈಕ್ರೋ ಫೈನಾನ್ಸ್ ನವರು ಕಷ್ಟ ಕಾಲದಲ್ಲಿ ಸಾಲ ಕಟ್ಟುವಂತೆ ಕಿರುಕುಳ ನೀಡುತ್ತಿರುವುದರಿಂದ ಗ್ರಾಹಕರು ಹೋರಾಟಕ್ಕೆ ಮುಂದಾಗಿದ್ದಾರೆ. ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲು ಸಿದ್ದತೆ ನಡೆಸಿದ್ದಾರೆ.


ಇದನ್ನೂ ಓದಿ : ದುಡ್ಡು ಕಟ್ಟಲಾಗದಿದ್ದರೆ ಸತ್ತೋಗಿ; ಕೊರೊನಾ ಸಮಯದಲ್ಲೂ ರಕ್ತ ಹೀರುತ್ತಿರುವ ಫೈನಾನ್ಸ್‌ಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...