Homeಕರ್ನಾಟಕಕೊರೊನಾ ಕಾಲದಲ್ಲಿಯೂ ಬಡ್ಡಿಗೆ ಬಡ್ಡಿ ಸೇರಿಸಿ ಹಣ ವಸೂಲಿ: ಮುತ್ತೂಟ್ ಫೈನಾನ್ಸ್‌ನಿಂದ ಗ್ರಾಹಕರಿಗೆ ಕಿರುಕುಳ ಆರೋಪ

ಕೊರೊನಾ ಕಾಲದಲ್ಲಿಯೂ ಬಡ್ಡಿಗೆ ಬಡ್ಡಿ ಸೇರಿಸಿ ಹಣ ವಸೂಲಿ: ಮುತ್ತೂಟ್ ಫೈನಾನ್ಸ್‌ನಿಂದ ಗ್ರಾಹಕರಿಗೆ ಕಿರುಕುಳ ಆರೋಪ

- Advertisement -
- Advertisement -

ಕೊರೊನಾ ಸಂಕಷ್ಟದ ಕಾಲದಲ್ಲೂ ಮುತ್ತೂಟ್ ಫೈನಾನ್ಸ್ ಗ್ರಾಹಕರಿಂದ ಬಡ್ಡಿಗೆ ಬಡ್ಡಿ ಸೇರಿಸಿ ವಸೂಲಿಯಲ್ಲಿ ತೊಡಗಿದೆ. ಜನ ಸಂಕಷ್ಟದಲ್ಲಿದ್ದು ಸೆಪ್ಟೆಂಬರ್ ತಿಂಗಳವರೆಗೆ ಕಂತುಗಳನ್ನು ಕಟ್ಟಬಾರದು ಎಂದು ಆರ್.ಬಿ.ಐ  ಸೂಚನೆ ನೀಡಿರುವ ನಡುವೆಯೂ ಮುತ್ತೂಟ್ ಫೈನಾನ್ಸ್ ಸಾಲ ವಸೂಲಿಗೆ ಕಿರುಕುಳ ನೀಡುತ್ತಿದೆ ಎಂದು ಗ್ರಾಹಕರು ಆರೋಪಿಸಿದ್ದಾರೆ.

ಈಗ ಕೊರೊನಾ ಲಾಕ್ ಡೌನ್ ಸಡಿಲಿಕೆಯಾಗಿದೆ ಆದರೂ ಸಾಲದ ಕಂತುಗಳನ್ನು ಗ್ರಾಹಕರು ಸ್ವಯಂಪ್ರೇರಿತರಾಗಿ ಕಟ್ಟಬಹುದೇ ಹೊರತು ಯಾವುದೇ ಬ್ಯಾಂಕ್, ಸಹಕಾರಿ ಬ್ಯಾಂಕುಗಳು ಮತ್ತು ಪೈನಾನ್ಸ್ ಗಳು ಸಾಲವನ್ನು ಬಲವಂತವಾಗಿ ವಸೂಲಿ ಮಾಡುವಂತಿಲ್ಲ. ಇದು ಆರ್.ಬಿ.ಐ ನಿಯಮ. ಆದರು ಆರ್.ಬಿ.ಐ ಸೂಚನೆಯನ್ನು ಮುತ್ತೂಟ್ ಫೈನಾನ್ಸ್ ಉಲ್ಲಂಘಿಸಿ ಗ್ರಾಹಕರಿಂದ ಡಬಲ್ ಬಡ್ಡಿ ವಸೂಲಿ ಮಾಡುತ್ತಿದೆ.

ಮುತ್ತೂಟ್ ಫೈನಾನ್ಸ್ ನಿಂದ ಸಾವಿರಗಳಿಂದ ಹಿಡಿದು ಲಕ್ಷ ರೂಗಳವರೆಗೆ ಚಿನ್ನಾಭರಣಗಳ ಮೇಲೆ ಗ್ರಾಹಕರು ಸಾಲ ತೆಗೆದುಕೊಂಡಿದ್ದಾರೆ. ಹೀಗಾಗಿ ಒಂದು ಲಕ್ಷ ಸಾಲ ಪಡೆದಿದ್ದರೆ ಈಗ ಮುತ್ತೂಟ್ ಫೈನಾನ್ಸ್ 2 ಲಕ್ಷ ರೂ ವಸೂಲಿ ಮಾಡುತ್ತಿದೆ ಎಂದು ನೊಂದ ಗ್ರಾಹಕರು ಆರೋಪಿಸಿದ್ದು ಖಾಸಗಿ ಫೈನಾನ್ಸ್ ಗಳ ಕಿರುಕುಳಕ್ಕೆ ಸ್ಪಷ್ಟ ನಿದರ್ಶನವಾಗಿದೆ.

ತುಮಕೂರಿನ ಕಾಲ್ ಟ್ಯಾಕ್ಸ್ ಸಮೀಪ ಗುಬ್ಬಿ ರಸ್ತೆಯಲ್ಲಿ ಮುತ್ತೋಟ್ ಫೈನಾನ್ಸ್ ಶಾಖೆ ಇದೆ. ಇದರಲ್ಲಿ ಸುಮಾರು 500 ಮಂದಿ ಗ್ರಾಹಕರು ಚಿನ್ನದ ಮೇಲೆ ಸಾಲ ಪಡೆದಿದ್ದಾರೆ. ಎಲ್ಲರಿಗೂ ನೋಟಿಸ್ ನೀಡಿರುವ ಮುತ್ತೋಟ್ ಫೈನಾನ್ಸ್ ಸಾಲ ನೀಡುವಂತೆ ಕಿರುಕುಳ ನೀಡಲು ಆರಂಭಿಸಿದ್ದು ಗ್ರಾಹಕರು ಇಕ್ಕಟ್ಟಿಗೆ ಸಿಲುಕು ವಂತೆ ಮಾಢಿದೆ.

ಗ್ರಾಹಕರಿಗೆ ಶಾಪವಾದ ಮುತ್ತೂಟ್ ಫೈನಾನ್ಸ್

ಕೊರೊನಾ ಕಾಲದಲ್ಲಿಯೂ ಬಡ್ಡಿಗೆ ಬಡ್ಡಿ ಸೇರಿಸಿ ಹಣ ವಸೂಲಿ: ‌ನಿಂದ ಗ್ರಾಹಕರಿಗೆ ಕಿರುಕುಳ ಆರೋಪ. ನಾನುಗೌರಿ.ಕಾಂ ಜೊತೆ ಮಾಹಿತಿ ಹಂಚಿಕೊಂಡ ಗ್ರಾಹಕ ರವಿಕುಮಾರ್..

Posted by Naanu Gauri on Sunday, June 21, 2020

ಗ್ರಾಹಕ ರವಿಕುಮಾರ್ ನಾನುಗೌರಿ.ಕಾಂ ಜೊತೆ ಮಾಹಿತಿ ಹಂಚಿಕೊಂಡರು. ನಾನು ಒಡವೆ ಇಟ್ಟು 50 ಸಾವಿರ ಸಾಲ ಪಡೆದಿದ್ದೇನೆ. ಪ್ರತಿ ತಿಂಗಳು 500 ರೂಪಾಯಿ ಬಡ್ಡಿ ಬರುತ್ತದೆ. ಕೊರೊನಾ ಸಂಕಷ್ಟದ ಕಾರಣಕ್ಕೆ ಕಳೆದ ಮೂರು ತಿಂಗಳಿಂದ ಬಡ್ಡಿ ಕಟ್ಟಿಲ್ಲ. ಈಗ ಮೂರು ತಿಂಗಳಿಗೆ 1500 ರೂ ಬಡ್ಡಿ ಬಂದಿದೆ. ಮುತ್ತೂಟ್ ಫೈನಾನ್ಸ್ ಕಚೇರಿಗೆ ಹೋಗಿ ಕೇಳಿದರೆ 3800 ರೂ ಬಡ್ಡಿ ಕಟ್ಟಬೇಕು ಎಂದು ಹೇಳುತ್ತಿದ್ದಾರೆ. ಯಾಕೆ ಎರಡುಪಟ್ಟು ಬಡ್ಡಿ ಹಾಕಿದ್ದೀರ ಅಂದ್ರ ಮ್ಯಾನೇಜರ್ ಕೇಳಿ ಅನ್ನುತ್ತಾರೆ. ನಾನು ಮೂರು ತಿಂಗಳ 1500 ರೂ ಬಡ್ಡಿಯನ್ನು ಕಟ್ಟುತ್ತೇನೆ. ಬಡ್ಡಿ ಮೇಲಿನ ಬಡ್ಡಿಯನ್ನು ಕಟ್ಟಲಾರೆ ಎಂದು ನೊಂದು ನುಡಿದರು.

ಕೊರೊನಾ ಬಂದು ಜನರನ್ನು ಕಂಗೆಡಿಸಿದೆ. ಯಾವುದೇ ವ್ಯಾಪಾರವಿಲ್ಲ. ನಾನು ಬೀದಿಬದಿ ವ್ಯಾಪಾರಿ. ಕಳೆದ ಮೂರು ತಿಂಗಳಿಂದ ವ್ಯಾಪಾರ ನಡೆಸಲು ಆಗಿಲ್ಲ. ಈಗ ಲಾಕ್ ಡೌನ್ ಸಡಿಲಿಕೆಯಾಗಿದೆ. ವ್ಯಾಪಾರ ನಡೆಯುತ್ತಿಲ್ಲ. ಮನೆ ಬಾಡಿಗೆ ಕಟ್ಟಲು ಸಾಧ್ಯವಾಗುತ್ತಿಲ್ಲ. ಇದರ ನಡುವೆ ಫೈನಾನ್ಸ್ ನವರು ಸಾಲ ನೀಡುವಂತೆ ಕಿರುಕುಳ ನೀಡುತ್ತಿದ್ದಾರೆ. ಕೈಗೆ ಕೆಲವಿಲ್ಲ. ಜೇಬಿನಲ್ಲಿ ಹಣವಿಲ್ಲ. ಎಲ್ಲಿಂದ ತಂದು ಕಟ್ಟುವುದು. ಸೆಪ್ಟಂಬರ್ ವರೆಗೆ ಕಂತು ಕಟ್ಟದಿದ್ದರೂ ನಡೆಯುತ್ತೆ ಎಂದು ಹೇಳಲಾಗುತ್ತಿದೆ. ಇಲ್ಲಿ ನೋಡಿದರೆ ಮೂರು ತಿಂಗಳ ಬಡ್ಡಿಯನ್ನು ಒಂದೇ ಬಾರಿಗೆ ಕಟ್ಟಬೇಕೆಂದರೆ ಹೇಗೆ ಸಾಧ್ಯ ಎನ್ನುತ್ತಾರೆ ಚಂದ್ರಪ್ಪ.

ಗ್ರಾಹಕರು ಸ್ವಯಂ ಪ್ರೇರಿತರಾಗಿ ಬಡ್ಡಿ ಕಟ್ಟಲು ಮುಂದಾದರೂ ಈಗ ತೊಂದರೆ ಅನುಭವಿಸುವಂತಹ ಪರಿಸ್ಥಿತಿ ಉದ್ಭವಿಸಿದೆ. ಎರಡು ಪಟ್ಟು ಬಡ್ಡಿ ಕಟ್ಟಲು ಸಾಧ್ಯವಾಗದೆ ಗ್ರಾಹಕರು ತಲೆ ಮೇಲೆ ಕೈಹೊತ್ತು ಕುಳಿತುಕೊಳ್ಳುವಂತಾಗಿದೆ. ಬಡ್ಡಿ ಕಟ್ಟದವರಿಗೆ ನೋಟೀಸ್ ನೀಡಲಾಗುತ್ತಿದೆ. ಇದರಿಂದ ಗ್ರಾಹಕರು ಸಂಕಟದಲ್ಲಿ ಮುಳುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಮತ್ತೊಂದು ಕಡೆ ಸ್ತ್ರೀಶಕ್ತಿ ಸಂಘಗಳು ಮತ್ತು ಮಹಿಳಾ ಸ್ವಸಹಾಯ ಸಂಘಗಳು ಮೈಕ್ರೋ ಫೈನಾನ್ಸ್ ನಿಂದ ಸಾಲ ತೆಗೆದುಕೊಂಡಿದ್ದು, ಸಾಲಗಾರರು ನಿತ್ಯವು ಮನೆ ಬಾಗಿಲಿಗೆ ಬಂದು ಸಾಲ ಕಟ್ಟುವಂತೆ ತೊಂದರೆ ನೀಡುತ್ತಿದ್ದಾರೆ ಎಂದು ಹೆಸರು ಹೇಳಲು ಇಚ್ಚಿಸದ ಮಹಿಳೆಯೊಬ್ಬರು ಆರೋಪಿಸಿದ್ದಾರೆ.

ಮುತ್ತೋಟ್ ಫೈನಾನ್ಸ್ ಮತ್ತು ಮೈಕ್ರೋ ಫೈನಾನ್ಸ್ ನವರು ಕಷ್ಟ ಕಾಲದಲ್ಲಿ ಸಾಲ ಕಟ್ಟುವಂತೆ ಕಿರುಕುಳ ನೀಡುತ್ತಿರುವುದರಿಂದ ಗ್ರಾಹಕರು ಹೋರಾಟಕ್ಕೆ ಮುಂದಾಗಿದ್ದಾರೆ. ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲು ಸಿದ್ದತೆ ನಡೆಸಿದ್ದಾರೆ.


ಇದನ್ನೂ ಓದಿ : ದುಡ್ಡು ಕಟ್ಟಲಾಗದಿದ್ದರೆ ಸತ್ತೋಗಿ; ಕೊರೊನಾ ಸಮಯದಲ್ಲೂ ರಕ್ತ ಹೀರುತ್ತಿರುವ ಫೈನಾನ್ಸ್‌ಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...