Homeಕರ್ನಾಟಕಕೊರೊನಾ ಕಾಲದಲ್ಲಿಯೂ ಬಡ್ಡಿಗೆ ಬಡ್ಡಿ ಸೇರಿಸಿ ಹಣ ವಸೂಲಿ: ಮುತ್ತೂಟ್ ಫೈನಾನ್ಸ್‌ನಿಂದ ಗ್ರಾಹಕರಿಗೆ ಕಿರುಕುಳ ಆರೋಪ

ಕೊರೊನಾ ಕಾಲದಲ್ಲಿಯೂ ಬಡ್ಡಿಗೆ ಬಡ್ಡಿ ಸೇರಿಸಿ ಹಣ ವಸೂಲಿ: ಮುತ್ತೂಟ್ ಫೈನಾನ್ಸ್‌ನಿಂದ ಗ್ರಾಹಕರಿಗೆ ಕಿರುಕುಳ ಆರೋಪ

- Advertisement -
- Advertisement -

ಕೊರೊನಾ ಸಂಕಷ್ಟದ ಕಾಲದಲ್ಲೂ ಮುತ್ತೂಟ್ ಫೈನಾನ್ಸ್ ಗ್ರಾಹಕರಿಂದ ಬಡ್ಡಿಗೆ ಬಡ್ಡಿ ಸೇರಿಸಿ ವಸೂಲಿಯಲ್ಲಿ ತೊಡಗಿದೆ. ಜನ ಸಂಕಷ್ಟದಲ್ಲಿದ್ದು ಸೆಪ್ಟೆಂಬರ್ ತಿಂಗಳವರೆಗೆ ಕಂತುಗಳನ್ನು ಕಟ್ಟಬಾರದು ಎಂದು ಆರ್.ಬಿ.ಐ  ಸೂಚನೆ ನೀಡಿರುವ ನಡುವೆಯೂ ಮುತ್ತೂಟ್ ಫೈನಾನ್ಸ್ ಸಾಲ ವಸೂಲಿಗೆ ಕಿರುಕುಳ ನೀಡುತ್ತಿದೆ ಎಂದು ಗ್ರಾಹಕರು ಆರೋಪಿಸಿದ್ದಾರೆ.

ಈಗ ಕೊರೊನಾ ಲಾಕ್ ಡೌನ್ ಸಡಿಲಿಕೆಯಾಗಿದೆ ಆದರೂ ಸಾಲದ ಕಂತುಗಳನ್ನು ಗ್ರಾಹಕರು ಸ್ವಯಂಪ್ರೇರಿತರಾಗಿ ಕಟ್ಟಬಹುದೇ ಹೊರತು ಯಾವುದೇ ಬ್ಯಾಂಕ್, ಸಹಕಾರಿ ಬ್ಯಾಂಕುಗಳು ಮತ್ತು ಪೈನಾನ್ಸ್ ಗಳು ಸಾಲವನ್ನು ಬಲವಂತವಾಗಿ ವಸೂಲಿ ಮಾಡುವಂತಿಲ್ಲ. ಇದು ಆರ್.ಬಿ.ಐ ನಿಯಮ. ಆದರು ಆರ್.ಬಿ.ಐ ಸೂಚನೆಯನ್ನು ಮುತ್ತೂಟ್ ಫೈನಾನ್ಸ್ ಉಲ್ಲಂಘಿಸಿ ಗ್ರಾಹಕರಿಂದ ಡಬಲ್ ಬಡ್ಡಿ ವಸೂಲಿ ಮಾಡುತ್ತಿದೆ.

ಮುತ್ತೂಟ್ ಫೈನಾನ್ಸ್ ನಿಂದ ಸಾವಿರಗಳಿಂದ ಹಿಡಿದು ಲಕ್ಷ ರೂಗಳವರೆಗೆ ಚಿನ್ನಾಭರಣಗಳ ಮೇಲೆ ಗ್ರಾಹಕರು ಸಾಲ ತೆಗೆದುಕೊಂಡಿದ್ದಾರೆ. ಹೀಗಾಗಿ ಒಂದು ಲಕ್ಷ ಸಾಲ ಪಡೆದಿದ್ದರೆ ಈಗ ಮುತ್ತೂಟ್ ಫೈನಾನ್ಸ್ 2 ಲಕ್ಷ ರೂ ವಸೂಲಿ ಮಾಡುತ್ತಿದೆ ಎಂದು ನೊಂದ ಗ್ರಾಹಕರು ಆರೋಪಿಸಿದ್ದು ಖಾಸಗಿ ಫೈನಾನ್ಸ್ ಗಳ ಕಿರುಕುಳಕ್ಕೆ ಸ್ಪಷ್ಟ ನಿದರ್ಶನವಾಗಿದೆ.

ತುಮಕೂರಿನ ಕಾಲ್ ಟ್ಯಾಕ್ಸ್ ಸಮೀಪ ಗುಬ್ಬಿ ರಸ್ತೆಯಲ್ಲಿ ಮುತ್ತೋಟ್ ಫೈನಾನ್ಸ್ ಶಾಖೆ ಇದೆ. ಇದರಲ್ಲಿ ಸುಮಾರು 500 ಮಂದಿ ಗ್ರಾಹಕರು ಚಿನ್ನದ ಮೇಲೆ ಸಾಲ ಪಡೆದಿದ್ದಾರೆ. ಎಲ್ಲರಿಗೂ ನೋಟಿಸ್ ನೀಡಿರುವ ಮುತ್ತೋಟ್ ಫೈನಾನ್ಸ್ ಸಾಲ ನೀಡುವಂತೆ ಕಿರುಕುಳ ನೀಡಲು ಆರಂಭಿಸಿದ್ದು ಗ್ರಾಹಕರು ಇಕ್ಕಟ್ಟಿಗೆ ಸಿಲುಕು ವಂತೆ ಮಾಢಿದೆ.

ಗ್ರಾಹಕರಿಗೆ ಶಾಪವಾದ ಮುತ್ತೂಟ್ ಫೈನಾನ್ಸ್

ಕೊರೊನಾ ಕಾಲದಲ್ಲಿಯೂ ಬಡ್ಡಿಗೆ ಬಡ್ಡಿ ಸೇರಿಸಿ ಹಣ ವಸೂಲಿ: ‌ನಿಂದ ಗ್ರಾಹಕರಿಗೆ ಕಿರುಕುಳ ಆರೋಪ. ನಾನುಗೌರಿ.ಕಾಂ ಜೊತೆ ಮಾಹಿತಿ ಹಂಚಿಕೊಂಡ ಗ್ರಾಹಕ ರವಿಕುಮಾರ್..

Posted by Naanu Gauri on Sunday, June 21, 2020

ಗ್ರಾಹಕ ರವಿಕುಮಾರ್ ನಾನುಗೌರಿ.ಕಾಂ ಜೊತೆ ಮಾಹಿತಿ ಹಂಚಿಕೊಂಡರು. ನಾನು ಒಡವೆ ಇಟ್ಟು 50 ಸಾವಿರ ಸಾಲ ಪಡೆದಿದ್ದೇನೆ. ಪ್ರತಿ ತಿಂಗಳು 500 ರೂಪಾಯಿ ಬಡ್ಡಿ ಬರುತ್ತದೆ. ಕೊರೊನಾ ಸಂಕಷ್ಟದ ಕಾರಣಕ್ಕೆ ಕಳೆದ ಮೂರು ತಿಂಗಳಿಂದ ಬಡ್ಡಿ ಕಟ್ಟಿಲ್ಲ. ಈಗ ಮೂರು ತಿಂಗಳಿಗೆ 1500 ರೂ ಬಡ್ಡಿ ಬಂದಿದೆ. ಮುತ್ತೂಟ್ ಫೈನಾನ್ಸ್ ಕಚೇರಿಗೆ ಹೋಗಿ ಕೇಳಿದರೆ 3800 ರೂ ಬಡ್ಡಿ ಕಟ್ಟಬೇಕು ಎಂದು ಹೇಳುತ್ತಿದ್ದಾರೆ. ಯಾಕೆ ಎರಡುಪಟ್ಟು ಬಡ್ಡಿ ಹಾಕಿದ್ದೀರ ಅಂದ್ರ ಮ್ಯಾನೇಜರ್ ಕೇಳಿ ಅನ್ನುತ್ತಾರೆ. ನಾನು ಮೂರು ತಿಂಗಳ 1500 ರೂ ಬಡ್ಡಿಯನ್ನು ಕಟ್ಟುತ್ತೇನೆ. ಬಡ್ಡಿ ಮೇಲಿನ ಬಡ್ಡಿಯನ್ನು ಕಟ್ಟಲಾರೆ ಎಂದು ನೊಂದು ನುಡಿದರು.

ಕೊರೊನಾ ಬಂದು ಜನರನ್ನು ಕಂಗೆಡಿಸಿದೆ. ಯಾವುದೇ ವ್ಯಾಪಾರವಿಲ್ಲ. ನಾನು ಬೀದಿಬದಿ ವ್ಯಾಪಾರಿ. ಕಳೆದ ಮೂರು ತಿಂಗಳಿಂದ ವ್ಯಾಪಾರ ನಡೆಸಲು ಆಗಿಲ್ಲ. ಈಗ ಲಾಕ್ ಡೌನ್ ಸಡಿಲಿಕೆಯಾಗಿದೆ. ವ್ಯಾಪಾರ ನಡೆಯುತ್ತಿಲ್ಲ. ಮನೆ ಬಾಡಿಗೆ ಕಟ್ಟಲು ಸಾಧ್ಯವಾಗುತ್ತಿಲ್ಲ. ಇದರ ನಡುವೆ ಫೈನಾನ್ಸ್ ನವರು ಸಾಲ ನೀಡುವಂತೆ ಕಿರುಕುಳ ನೀಡುತ್ತಿದ್ದಾರೆ. ಕೈಗೆ ಕೆಲವಿಲ್ಲ. ಜೇಬಿನಲ್ಲಿ ಹಣವಿಲ್ಲ. ಎಲ್ಲಿಂದ ತಂದು ಕಟ್ಟುವುದು. ಸೆಪ್ಟಂಬರ್ ವರೆಗೆ ಕಂತು ಕಟ್ಟದಿದ್ದರೂ ನಡೆಯುತ್ತೆ ಎಂದು ಹೇಳಲಾಗುತ್ತಿದೆ. ಇಲ್ಲಿ ನೋಡಿದರೆ ಮೂರು ತಿಂಗಳ ಬಡ್ಡಿಯನ್ನು ಒಂದೇ ಬಾರಿಗೆ ಕಟ್ಟಬೇಕೆಂದರೆ ಹೇಗೆ ಸಾಧ್ಯ ಎನ್ನುತ್ತಾರೆ ಚಂದ್ರಪ್ಪ.

ಗ್ರಾಹಕರು ಸ್ವಯಂ ಪ್ರೇರಿತರಾಗಿ ಬಡ್ಡಿ ಕಟ್ಟಲು ಮುಂದಾದರೂ ಈಗ ತೊಂದರೆ ಅನುಭವಿಸುವಂತಹ ಪರಿಸ್ಥಿತಿ ಉದ್ಭವಿಸಿದೆ. ಎರಡು ಪಟ್ಟು ಬಡ್ಡಿ ಕಟ್ಟಲು ಸಾಧ್ಯವಾಗದೆ ಗ್ರಾಹಕರು ತಲೆ ಮೇಲೆ ಕೈಹೊತ್ತು ಕುಳಿತುಕೊಳ್ಳುವಂತಾಗಿದೆ. ಬಡ್ಡಿ ಕಟ್ಟದವರಿಗೆ ನೋಟೀಸ್ ನೀಡಲಾಗುತ್ತಿದೆ. ಇದರಿಂದ ಗ್ರಾಹಕರು ಸಂಕಟದಲ್ಲಿ ಮುಳುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಮತ್ತೊಂದು ಕಡೆ ಸ್ತ್ರೀಶಕ್ತಿ ಸಂಘಗಳು ಮತ್ತು ಮಹಿಳಾ ಸ್ವಸಹಾಯ ಸಂಘಗಳು ಮೈಕ್ರೋ ಫೈನಾನ್ಸ್ ನಿಂದ ಸಾಲ ತೆಗೆದುಕೊಂಡಿದ್ದು, ಸಾಲಗಾರರು ನಿತ್ಯವು ಮನೆ ಬಾಗಿಲಿಗೆ ಬಂದು ಸಾಲ ಕಟ್ಟುವಂತೆ ತೊಂದರೆ ನೀಡುತ್ತಿದ್ದಾರೆ ಎಂದು ಹೆಸರು ಹೇಳಲು ಇಚ್ಚಿಸದ ಮಹಿಳೆಯೊಬ್ಬರು ಆರೋಪಿಸಿದ್ದಾರೆ.

ಮುತ್ತೋಟ್ ಫೈನಾನ್ಸ್ ಮತ್ತು ಮೈಕ್ರೋ ಫೈನಾನ್ಸ್ ನವರು ಕಷ್ಟ ಕಾಲದಲ್ಲಿ ಸಾಲ ಕಟ್ಟುವಂತೆ ಕಿರುಕುಳ ನೀಡುತ್ತಿರುವುದರಿಂದ ಗ್ರಾಹಕರು ಹೋರಾಟಕ್ಕೆ ಮುಂದಾಗಿದ್ದಾರೆ. ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲು ಸಿದ್ದತೆ ನಡೆಸಿದ್ದಾರೆ.


ಇದನ್ನೂ ಓದಿ : ದುಡ್ಡು ಕಟ್ಟಲಾಗದಿದ್ದರೆ ಸತ್ತೋಗಿ; ಕೊರೊನಾ ಸಮಯದಲ್ಲೂ ರಕ್ತ ಹೀರುತ್ತಿರುವ ಫೈನಾನ್ಸ್‌ಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...