Homeಮುಖಪುಟಐಡಿಸಿ ಸರ್ವೇ: ಭಾರತಕ್ಕೆ ರಫ್ತಾದ 3.25 ಕೋಟಿ ಸ್ಮಾರ್ಟ್‌ಫೋನ್‌ಗಳಲ್ಲಿ 76% ಚೀನಾದವು!

ಐಡಿಸಿ ಸರ್ವೇ: ಭಾರತಕ್ಕೆ ರಫ್ತಾದ 3.25 ಕೋಟಿ ಸ್ಮಾರ್ಟ್‌ಫೋನ್‌ಗಳಲ್ಲಿ 76% ಚೀನಾದವು!

ಭಾರತವು ಬೇರೆ ಯಾವುದೇ ದೇಶಗಳಿಗಿಂತ ಹೆಚ್ಚು ಚೀನೀ ಸ್ಮಾರ್ಟ್‌ಫೋನ್ ಬ್ರಾಂಡ್‌ಗಳಿಂದ ಕೂಡಿದೆ. ಇದರರ್ಥ ಭಾರತೀಯರು ಚೀನೀ ಬ್ರಾಂಡ್ ಖರೀದಿಸುವ ಸಾಧ್ಯತೆಗಳು ಹೆಚ್ಚು ಎಂದು ಸಮೀಕ್ಷೆ ತಿಳಿಸಿದೆ.

- Advertisement -
- Advertisement -

ಮಾರುಕಟ್ಟೆ ಸಂಶೋಧನಾ ಸಂಸ್ಥೆ ಐಡಿಸಿ ನಡೆಸಿದ ಸರ್ವೇ ಪ್ರಕಾರ, ಮಾರ್ಚ್ 2020ಕ್ಕೆ ಕೊನೆಗೊಂಡ ತ್ರೈಮಾಸಿಕದಲ್ಲಿ ಭಾರತಕ್ಕೆ ರವಾನೆಯಾದ 3.25 ಕೋಟಿ ಸ್ಮಾರ್ಟ್‌ಫೋನ್‌ಗಳಲ್ಲಿ ಸುಮಾರು 76 ಪ್ರತಿಶತವು ಚೀನಾದ ಬ್ರಾಂಡ್‌ಗಳಾಗಿವೆ ಎಂದು ದಿ ಪ್ರಿಂಟ್ ವರದಿ ಮಾಡಿದೆ.

ಅದೇ ಐಡಿಸಿ ದತ್ತಾಂಶವು ಭಾರತದ ಐದು ಉನ್ನತ ಸ್ಮಾರ್ಟ್‌ಫೋನ್ ಬ್ರಾಂಡ್‌ಗಳಲ್ಲಿ ನಾಲ್ಕು ಚೀನಾದವು ಎಂದು ತೋರಿಸಿದೆ.

ಚೀನಾದ ಬ್ರಾಂಡ್ ಶಿಯೋಮಿ ಭಾರತದಲ್ಲಿ ಅತಿ ಹೆಚ್ಚು ಮಾರುಕಟ್ಟೆ ಪಾಲನ್ನು ಹೊಂದಿದ್ದು, ನಂತರದ ಸ್ಥಾನದಲ್ಲಿ ವಿವೊ ಇದೆ. ಮೂರನೆಯ ಸ್ಥಾನದಲ್ಲಿ ಚೀನಾದ್ದು ಅಲ್ಲದ ಸ್ಯಾಮ್‌ಸಂಗ್ ಇದ್ದರೆ ನಂತರದ ಸ್ಥಾನದಲ್ಲಿ ಮತ್ತೆ ಚೀನಾದ ರಿಯಲ್‌ಮೆ ಮತ್ತು ಒಪ್ಪೊ ಇವೆ.

ಭಾರತದ 10 ಜನರಲ್ಲಿ 4 ಭಾರತೀಯರು ಮಾತ್ರ ಚೀನೀ ಫೋನ್ ಖರೀದಿಸುವುದಿಲ್ಲ ಎಂದು ಗಾಲ್ವಾನ್ ಘರ್ಷಣೆಗೆ ಮುನ್ನ ನಡೆಸಿದ ಕೌಂಟರ್‌ಪಾಯಿಂಟ್ ರಿಸರ್ಚ್‌ ಸಮೀಕ್ಷೆಯಲ್ಲಿ ಕಂಡುಬಂದಿದೆ.

ಒಂದು ತಿಂಗಳ ಹಿಂದೆ ಲಡಾಖ್ ಗಡಿಯಲ್ಲಿ ಉದ್ವಿಗ್ನತೆ ಪ್ರಾರಂಭವಾದಾಗಿನಿಂದ ಚೀನಾ ವಿರೋಧಿ ಭಾವನೆ ಬೆಳೆಯುತ್ತಿರುವುದರಿಂದ, ಭಾರತದಲ್ಲಿ ‘ಮೇಡ್ ಇನ್ ಚೀನಾ’ ಉತ್ಪನ್ನಗಳನ್ನು ಬಹಿಷ್ಕರಿಸುವ ಕರೆ ಬಂದಿದೆ. ಆದಾಗ್ಯೂ, ಮಾರುಕಟ್ಟೆ ಸಂಶೋಧನಾ ಸಂಸ್ಥೆಯ ಇತ್ತೀಚಿನ ಸಮೀಕ್ಷೆಯ ಪ್ರಕಾರ ಬಹಳಷ್ಟು ಜನರು ತಾವು ಕೊಳ್ಳುವ ಸಾಮಾಗ್ರಿಗಳು ಯಾವ ದೇಶದ್ದು ಎಂಬುದಕ್ಕೆ ಗಮನ ನೀಡುವುದಿಲ್ಲ ಎಂದು ಹೇಳಲಾಗಿದೆ.

ಭಾರತದಲ್ಲಿ ಪ್ರತಿಕ್ರಿಯಿಸಿದ 10 ಜನರಲ್ಲಿ ನಾಲ್ವರು ಚೀನೀ ಸ್ಮಾರ್ಟ್‌ಫೋನ್‌ಗಳನ್ನು ಖರೀದಿಸದಿರಲು ಬಲವಾದ ಅಭಿಪ್ರಾಯಗಳನ್ನು ಹೊಂದಿದ್ದರೆ, ಹೆಚ್ಚಿನವರು ತಮ್ಮ ನಿರ್ಧಾರದ ಬಗ್ಗೆ ಖಚಿತವಾಗಿರಲಿಲ್ಲ ಎಂದು ಕೌಂಟರ್ಪಾಯಿಂಟ್ ರಿಸರ್ಚ್‌ನ ಹಿರಿಯ ವಿಶ್ಲೇಷಕ ಪಾವೆಲ್ ನಯಾ ತಿಳಿಸಿದ್ದಾರೆ.

ಭಾರತವು ಬೇರೆ ಯಾವುದೇ ದೇಶಗಳಿಗಿಂತ ಹೆಚ್ಚು ಚೀನೀ ಸ್ಮಾರ್ಟ್‌ಫೋನ್ ಬ್ರಾಂಡ್‌ಗಳಿಂದ ಕೂಡಿದೆ. ಇದರರ್ಥ ಭಾರತೀಯರು ಚೀನೀ ಬ್ರಾಂಡ್ ಖರೀದಿಸುವ ಸಾಧ್ಯತೆಗಳು ಹೆಚ್ಚು ಎಂದು ಸರ್ವೇ ತಿಳಿಸಿದೆ.

ಶಿಯೋಮಿ ಸ್ಮಾರ್ಟ್‌ಫೋನ್‌ಗಳು ಹೆಚ್ಚು ಮಾರಾಟವಾಗುತ್ತಿದ್ದರೆ, ನಂತರದ ಸ್ಥಾನದಲ್ಲಿ ಸ್ಯಾಮ್‌ಸಂಗ್, ಒನ್‌ಪ್ಲಸ್ ಮತ್ತು ಆಪಲ್ ಫೋನ್‌ಗಳಿವೆ ಎಂದು ಯಾಂತ್ರಾ ಸಹ-ಸಂಸ್ಥಾಪಕ ಮತ್ತು ಸಿಇಒ ಜಯಂತ್ ಜಾ ತಿಳಿಸಿದ್ದಾರೆ.

ಗಾಲ್ವಾನ್ ಕಣಿವೆಯಲ್ಲಿ ನಡೆದ ಹಿಂಸಾತ್ಮಕ ಮುಖಾಮುಖಿಯಲ್ಲಿ 20 ಭಾರತೀಯ ಸೈನಿಕರು ಸಾವನ್ನಪ್ಪಿದ ಕಳೆದ ಸೋಮವಾರದ ಮೊದಲು, ಮೇ ಮಧ್ಯ ಮತ್ತು ಜೂನ್ ಮೊದಲ ವಾರದ ನಡುವೆ ಈ ಸಮೀಕ್ಷೆಯನ್ನು ನಡೆಸಲಾಯಿತು ಎನ್ನಲಾಗಿದೆ.

ಕಂಪನಿಯು ತನ್ನ ಹೇಳಿಕೆಯಲ್ಲಿ “ಭಾರತ-ಚೀನಾ ಗಡಿಯಲ್ಲಿನ ಇತ್ತೀಚಿನ ಸಂಘರ್ಷವು ಈ [ಗ್ರಾಹಕ] ನಡವಳಿಕೆಯನ್ನು ರೂಪಿಸುವಲ್ಲಿ ಆಳವಾದ ಪಾತ್ರವನ್ನು ವಹಿಸುತ್ತದೆ ಎಂದು ನಾವು ನಂಬುತ್ತೇವೆ” ಎಂದು ಹೇಳಿದೆ.

“ಫಲಿತಾಂಶವು ಸಮೀಕ್ಷೆಯ ಸಮಯದಲ್ಲಿ ಪ್ರತಿಕ್ರಿಯಿಸಿದವರ ಅಭಿಪ್ರಾಯವನ್ನು ತೋರಿಸುತ್ತಿದೆ. ಆದರೆ ಬಜೆಟ್, ಬೆಲೆ, ಪರ್ಯಾಯ ಉತ್ಪನ್ನಗಳ ಲಭ್ಯತೆ ಮತ್ತು ಇತರ ಸಾಮಾಜಿಕ ಮತ್ತು ಆರ್ಥಿಕ ಡೈನಾಮಿಕ್ಸ್ ಸೇರಿದಂತೆ ಹಲವು ಅಂಶಗಳಿಂದ ನಿಜವಾದ ಖರೀದಿ ನಿರ್ಧಾರವನ್ನು ನಿರ್ಧರಿಸಲಾಗುತ್ತದೆ” ಎಂದು ಸಂಸ್ಥೆ ತಿಳಿಸಿದೆ.


ಇದನ್ನೂ ಓದಿ: ಇದ್ದಕ್ಕಿದ್ದಂತೆ ಸಾಧ್ಯವಿಲ್ಲ: ’ಬಾಯ್ಕಾಟ್ ಚೀನಾ’ ಅಭಿಯಾನಕ್ಕೆ ಕ್ರೀಡಾ ಕ್ಷೇತ್ರದ ವಿರೋಧವೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...